ಕುಂದಾಪುರ: ದಕ್ಷಿಣಕನ್ನಡ ಜಿಲ್ಲಾ ಪದ್ಮಶಾಲಿ ಸಮಾಜ ಸೇವಾಕೂಟ (ರಿ.) ಬೆಂಗಳೂರು ಇದರ ರಜತ ಮಹೋತ್ಸವ ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಜ್ಯೋತಿಷಿ ಹಾಗೂ ವಾಸ್ತುತಜ್ಞ ಬಸವರಾಜ್ ಶೆಟ್ಟಿಗಾರ್ರವರನ್ನು ರಜತ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಗೋಪಾಲ್ಕೃಷ್ಣ ಕೊಂಚಾಡಿಯವರು ಸನ್ಮಾನಿಸಿ ಗೌರವಿಸಿದರು. ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ಪದ್ಮಶಾಲಿ ಸಮಾಜ ಸೇವಾ ಕೂಟದ ಅಧ್ಯಕ್ಷರಾದ ಮಾಧವ ಶೆಟ್ಟಿಗಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಧಾನಸೌಧದ ಮಾಜಿ ವರದಿಗಾರ ರಘು ಶೆಟ್ಟಿಗಾರ್ ದಕ್ಷಿಣ ಕನ್ನಡ ಜಿಲ್ಲಾ ಪದ್ಮಶಾಲಿ ಮಹಾಸಭದ ಅಧ್ಯಕ್ಷ ಪುರದಂದ ಡಿ. ಶೆಟ್ಟಿಗಾರ್, ಮುಂಬೈಯ ಪದ್ಮಶಾಲಿ ಸಂಘದ ದಯಾನಂದ ಶೆಟ್ಟಿಗಾರ್, ದುಬೈಯ ಪದ್ಮಶಾಲಿ ಸಮುದಾಯದ ರವಿ ಶೆಟ್ಟಿಗಾರ್, ಕರ್ನಾಟಕ ರಾಜ್ಯ ಪದ್ಮಶಾಲಿ ಸಂಘದ ಅಧ್ಯಕ್ಷ ಕೆ.ಎನ್.ಕೃಷ್ಣಮೂರ್ತಿ, ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯವಾದಿ ವೆಂಕಟೇಶ್ವರ್, ಕಲ್ಲಿಕೋಟೆ ಮಲಬಾರ್ ಕಣ್ಣಿನ ಆಸ್ಪತ್ರೆ ಸಂಶೋಧನ ಕೇಂದ್ರದ ಡಾ| ಚಂದ್ರಶೇಖರ್, ಮಣಿಪಾಲ್ ಮೆಡಿಕಲ್ ಕಾಲೇಜಿನ ಡಾ| ವಸುಧಾದೇವಿ, ಮಹಾರಾಷ್ಟ್ರದ ಹೈಸ್ಕೂಲಿನ ಪ್ರಾಚಾರ್ಯರಾದ ಶ್ರೀಮತಿ ಸರೋಜಾ ಎಸ್. ಶೆಟ್ಟಿಗಾರ್…
Author: ಸುನಿಲ್ ಹೆಚ್. ಜಿ. ಬೈಂದೂರು
ಗಂಗೊಳ್ಳಿ: ಉಡುಪಿ ಜಿಲ್ಲಾ ಪಂಚಾಯತ್ ಉಡುಪಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಕುಂದಾಪುರ ಹಾಗೂ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಸಹಕಾರದೊಂದಿಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಜರಗಿದ ಉಡುಪಿ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಮತ್ತು ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆ ತಂಡ ಹಾಗೂ ಬಾಲಕಿಯರ ವಿಭಾಗದಲ್ಲಿ ಉಡುಪಿ ಶಿರ್ವದ ಡಾನ್ ಬಾಸ್ಕೋ ಶಾಲೆಯ ತಂಡ ಪ್ರಥಮ ಸ್ಥಾನ ಪಡೆದು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದೆ. ಇತ್ತೀಚಿಗೆ ನಡೆದ ಸಮಾರೋಪ ಸಮಾರಂಭದಲ್ಲಿ ಶಾಲೆಯ ಶಿಕ್ಷಕ-ರಕ್ಷಕ ಸಮಿತಿಯ ಉಪಾಧ್ಯಕ್ಷ ಶಿವಾನಂದ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಸ್.ಮಧುಕರ, ಕುಂದಾಪುರ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ದತ್ತಾತ್ರೇಯ ನಾಯಕ್, ಉಡುಪಿ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ…
ಕುಂದಾಪುರ: ತಾಲೂಕಿನ ಮಾವಿನಕಟ್ಟೆ ಜಂಕ್ಷನ್ ಬಳಿ ಅಕ್ರಮವಾಗಿ ಜಾನುವಾರುಗಳನ್ನು ಕೊಂದು ಮಾಂಸ ಮಾಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಕುಂದಾಪುರ ಪೊಲೀಸರು, ಗೋ ಮಾಂಸ ಹಾಗೂ ಒಂದು ಕರುವನ್ನು ವಶಪಡಿಸಕೊಂಡಿದ್ದು, ಸ್ಥಳದಲ್ಲಿದ್ದ ಆರೋಪಿಗಳು ಪರಾರಿಯಾಗಿದ್ದಾರೆ. ಮಾವಿನಕಟ್ಟೆ ಜಂಕ್ಷನ್ ಬಳಿ ಅಕ್ರಮ ಗೊಮಾಂಸ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಕುಂದಾಪುರ ಪೊಲೀಸ್ ವೃತ್ತ ನಿರೀಕ್ಷಕ ದಿವಾಕರ್ ನೇತೃತ್ವದ ತಂಡ ದಾಳಿ ನಡೆಸಿತ್ತು. ಪೊಲೀಸರು ಬರುತ್ತಿದ್ದಾರೆಂಬ ಮಾಹಿತಿ ದೊರೆತ ಕೂಡಲೇ ಶಂಕಿತ ಆರೋಪಿಗಳಾದ ರಶೀದ್ ಹಾಗೂ ಇತರ ಇಬ್ಬರು ಪರಾರಿಯಾಗಿದ್ದಾರೆ. ಮಾಂಸಕ್ಕಾಗಿ ತಯಾರಿಸಿದ್ದ ಒಂದು ಕ್ವಿಂಟಾಲಿಗೂ ಅಧಿಧಿಕ ಗೋ ಮಾಂಸ, ಒಂದು ಜೀವಂತ ಕರು ಹಾಗೂ ಮೊಬೈಲ್, ಚೂರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಪ್ರದೇಶ ಖಾಯಂ ಕಸಾಯಿಖಾನೆಯಾಗಿರದೇ ಗೋ ಮಾಂಸ ತಯಾರಿಕೆಗಾಗಿ ತಾತ್ಕಾಲಿಕವಾಗಿ ನಿರ್ಮಿಸಿದ ಅಡ್ಡೆಯಾಗಿತ್ತು ಎನ್ನಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ ಪೊಲೀಸರು ಏಕಾಏಕಿ ದಾಳಿ ನಡೆಸಿದ್ದರಿಂದ ಸ್ವಲ್ಪ ಸಮಯ ಬಿಗು ವಾತಾವರಣ ಕಂಡು ಬಂದು ಪರಿಸ್ಥಿತಿ ವಿಕೋಪಕ್ಕೆ ತಿರುಗಿತ್ತು. ಅಲ್ಲಿ ಜಮಾಯಿಸಿದ…
ಬೈಂದೂರು: ಸ್ಕೌಟ್ಸ್ ಮತ್ತು ಗೈಡ್ಸ್ನಂತಹ ಸೇವಾ ಸಂಸ್ಥೆಗಳೊಂದಿಗೆ ವಿದ್ಯಾರ್ಥಿಗಳು ಹೆಚ್ಚು ತೊಡಗಿಸಿಕೊಳ್ಳುವ ಮೂಲಕ ದೇಶ ಕಟ್ಟುವ ಕೆಲಸವನ್ನು ಮಾಡಬೇಕಿದೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಉಡುಪಿ ಜಿಲ್ಲಾ ಸಂಸ್ಥೆ ಹಾಗೂ ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ಎರಡು ದಿನಗಳ ರೋವರ್ ರೇಂಜರ್ ಚಾರಣ ಶಿಬಿರ ಹಾಗೂ ವಹಮಹೋತ್ಸವನ್ನು ಉದ್ಘಾಟಿಸಿ ಮಾತನಾಡಿದರು. ಉಜ್ವಲ ಭವಿಷ್ಯವನ್ನು ಪಡೆದು ಉತ್ತಮ ನಾಗರೀಕರಾಗಿ ಬದುಕಬೇಕಾದರೇ ವಿದ್ಯಾರ್ಥಿ ದೆಸೆಯಿಂದಲೇ ಸೇವಾ ಮನೋಭಾವವನ್ನು ಮೈಗೂಡಿಕೊಳ್ಳಬೇಕಿದೆ. ಸಿಕ್ಕ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಸಮಾಜವನ್ನೂ ಉತ್ತಮ ಮಾರ್ಗದಲ್ಲಿ ಕೊಂಡೊಯ್ಯಬೇಕಿದೆ ಎಂದವರು ಹೇಳಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಬಿ. ಎ. ಮೇಳಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ಸದಸ್ಯ ರಾಜು ಪೂಜಾರಿ, ಭಾರತ್ ಸೌಟ್ಸ್ ಮತ್ತು ಗೌಡ್ಸ್ನ ಕರ್ನಾಟಕ ರಾಜ್ಯ ಉಪಾಧ್ಯಕ್ಷೆ ಶಾಂತ ವಿ. ಎಸ್.…
ಕುಂದಾಪುರ: ಮಕ್ಕಳಿಗೆ, ಸಾರ್ವಜನಿಕರಿಗೆ ಸ್ಪರ್ಧೆ, ಪ್ರತಿಭಾ ಪ್ರದರ್ಶನಗಳು, ಮನರಂಜನಾ ಕಾರ್ಯಕ್ರಮಗಳಿಂಧಾಗಿ ಜೇಸಿ ಸಪ್ತಾಹವೆಂದರೇ ಕುಂದಾಪುರದಲ್ಲಿ ಹಬ್ಬ ಎಂಬ ವಾತಾವರಣ ನಿರ್ಮಾಣವಾಗುತ್ತದೆ. ಜೇಸಿ ಸಂಸ್ಥೆಯಲ್ಲಿ ತರಬೇತಿ ಪಡೆದವರು ಎಲ್ಲ ರಂಗದಲ್ಲಿಯೂ ಸಲ್ಲುವ ಜೊತೆಗೆ ಉತ್ತಮ ನಾಗರಿಕರಾಗಿ ಮೂಡಿ ಬರುತ್ತಾರೆ ಎಂದು ಪ್ಲೆಸೆಂಟ್ ವ್ಯವಸ್ಥಾಪಕ ನಿರ್ದೇಶಕ ಅಬ್ದುಲ್ ಬಶೀರ್ ಕೋಟ ಹೇಳಿದರು. ಅವರು ಜೇಸಿಐ ಕುಂದಾಪುರ ಸಿಟಿ ಆಶ್ರಯದಲ್ಲಿ ಕುಂದಾಪುರದ ರೋಟರಿ ಲಕ್ಷ್ಮೀನರಸಿಂಹ ಕಲಾಮಂದಿರದಲ್ಲಿ ಜೇಸಿ ಸಪ್ತಾಹದ ೬ನೇ ದಿನದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಜೇಸಿಐ ಕುಂದಾಪುರ ಸಿಟಿ ಅಧ್ಯಕ್ಷ ಚಂದ್ರಕಾಂತ ವಹಿಸಿದ್ದರು. ಕುಂದಾಪುರದ ಖ್ಯಾತ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ಡಾ| ಮಧುಮಯೂರಿ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಕುಂದಾಪುರ ವಿಧಾನ ಸಭಾ ಕ್ಷೇತ್ರ ಅಧ್ಯಕ್ಷ ರಾಜೇಶ್ ಕಾವೇರಿ, ಎಲ್ಐಸಿ ಅಭಿವೃದ್ಧಿ ಅಧಿಕಾರಿ ಎಚ್. ಎಸ್. ಹತ್ವಾರ್, ಕುಂದಾಪುರ ಸ. ಪ. ಪೂ. ಕಾಲೇಜಿನ ಪ್ರಾಂಶುಪಾಲ ಸುಬ್ರಹ್ಮಣ್ಯ ಜೋಶಿ, ಜೇಸಿಐ ಕುಂದಾಪುರ ಸಿಟಿ ಸಲಹೆಗಾರರಾದ ಪುರುಷೋತ್ತಮ…
ಗ೦ಗೊಳ್ಳಿ : ಇ೦ದಿನ ಕಾಲದಲ್ಲಿ ಮಕ್ಕಳ ಬಗೆಗೆ ಹೆಚ್ಚಿನ ನಿಗಾ ಅಗತ್ಯ. ಮಕ್ಕಳು ನಮ್ಮ ನಡೆನುಡಿಗಳನ್ನು ಅನುಸರಿಸುವುದರಿ೦ದ ನಮ್ಮ ನಡತೆಯ ಬಗೆಗೆ ಹೆಚ್ಚಿನ ಗಮನವನ್ನು ಹರಿಸಬೇಕು ಎ೦ದು ಗ೦ಗೊಳ್ಳಿ ಗ್ರಾಮ ಪ೦ಚಾಯತ ಉಪಾಧ್ಯಕ್ಷ ಮಹೇಶ್ ರಾಜ್ ಅಭಿಪ್ರಾಯ ಪಟ್ಟರು. ಅವರು ಮೇಲ್ ಗ೦ಗೊಳ್ಳಿಯ ಶಾಲಾವಠಾರದಲ್ಲಿ ನಡೆದ ಗ೦ಗೊಳ್ಳಿಯ ಡಾ.ಬಿ.ಆರ್ ಅ೦ಬೇಡ್ಕರ್ ಯುವಕ ಮ೦ಡಲ (ರಿ),ಅಮೃತಾ ಯುವತಿ ಮ೦ಡಲ ಮತ್ತು ಅರ್ಚನಾ ಮಹಿಳಾ ಮ೦ಡಲ ಮೇಲ್ ಗ೦ಗೊಳ್ಳಿ ಮತ್ತು ಪ೦ಚಗ೦ಗಾವಳಿ ಸೌಹಾರ್ದ ಕ್ರೆಡಿಟ್ ಕೊ ಅಪರೇಟಿವ್ ಲಿ. ಗ೦ಗೊಳ್ಳಿ ಇವರ ಸ೦ಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ನ ಜನ್ಮಾಷ್ಠಮಿ ಪ್ರಯುಕ್ತ ನಡೆದ ಐದನೇ ವರುಷದ ಮುದ್ದು ಕೃಷ್ಣ ವೇಷ ಸ್ಪರ್ಧೆಯ ಸಭಾ ಕಾರ್ಯಕ್ರಮದಲ್ಲಿ ಸಮಾರ೦ಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಪ೦ಚಗ೦ಗಾವಳಿ ಸೌಹಾರ್ದ ಕ್ರೆಡಿಟ್ ಕೊ ಅಪರೇಟಿವ್ ಲಿ.ನ ಅಧ್ಯಕ್ಷ ರಾಜು ದೇವಾಡಿಗ ತ್ರಾಸಿ ಉಪಸ್ಥಿತರಿದ್ದರು.ನಿವೃತ್ತ ಪೋಟ್ ಕನ್ಸ್ರ್ವೇಟರ್ ಮೋನಪ್ಪ ಆದ್ಯಪಾಡಿ ಬಹುಮಾನಗಳನ್ನು ವಿತರಿಸಿದರು.ತೀರ್ಪುಗಾರರಾದ ನಾರಾಯಣ್ ನಾಯ್ಕ್ ,ಆನ೦ದ ಜಿ.ಮತ್ತು ರಾಜ ಉಪಸ್ಥಿತರಿದ್ದರು.…
ಕೋಟ: ಕಳೆದ 10 ವರ್ಷಗಳಿಂದ ಗಾಂಧಿ ಜಯಂತಿಯನ್ನು ಆಚರಿಸಿಕೊಂಡು ಬರುತ್ತಿರುವ ಬಹುಮಖಿ ಸಾಲಿಗ್ರಾಮ ಸಂಸ್ಥೆಯ ಈ ಬಾರಿ ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರದಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ಕಡೂರು ಕ್ಷೇತ್ರದ ಶಾಸಕ ವೈ.ಎಸ್.ವಿ.ದತ್ತಾ ಅವರನ್ನು ಮುಖ್ಯ ಭಾಷಣಕಾರರಾಗಿ ಆಗಮಿಸುತ್ತಿದ್ದು, ಸಂಸದೀಯ ಪ್ರಜಾಪ್ರಭತ್ವ – ವರ್ತಮಾನ ಪ್ರಸ್ತುತತೆ ಎಂಬ ವಿಷಯವಾಗಿ ಅವರು ಉಪನ್ಯಾಸ ನೀಡಲಿದ್ದಾರೆ ಎಂದು ಡಾ. ಕೃಷ್ಣ ಕಾಂಚನ್ ತಿಳಿಸಿದರು. ಅವರು ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಪ್ಠಿಯಲ್ಲಿ ಮಾತನಾಡುತ್ತಾ, ಪ್ರತಿ ವರ್ಷವು ಗಣ್ಯರನ್ನು ಆಮಂತ್ರಿಸಿ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸುವ ಪರಿಪಾಠ ನಮ್ಮ ಸಂಸ್ಥೆಯದ್ದಾಗಿದೆ. ಅಲ್ಲದೇ ಸಭಾ ಕಾರ್ಯಕ್ರಮದ ಬಳಿಕ ಯಕ್ಷಗಾನ, ಯಕ್ಷಗಾನ ತಾಳ ಮದ್ದಳೆ ಕಾರ್ಯಕ್ರಮವನ್ನು ೧೦ ವರ್ಷಗಳಿಂದ ಆಯೋಜಿಸುತ್ತಾ ಬಂದಿದ್ದೇವೆ. ಈ ಬಾರಿಯ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಕೋಟ ಶ್ರೀ ಅಮೃತೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಆನಂದ ಸಿ.ಕುಂದರ್ ಮೊದಲಾವರು ಉಪಸ್ಥಿತರಿರಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಸಾಗರದ ಸಾಕೇತ ಕಲಾವಿದರಿಂದ ರಾಮ…
ಬೈಂದೂರು: ಇಲ್ಲಿಗೆ ಸಮೀಪದ ನಾಗೂರು ಎಡಮಾವಿನ ಹೊಳೆ ತಿರುವಿನಲ್ಲಿ ರಾತ್ರಿ ಸಂಭವಿಸಿದ ಬೈಕ್ ಮತ್ತು ಇನ್ಸುಲೇಟರ್ ವ್ಯಾನ್ ನಡುವಿನ ಭೀಕರ ಅಪಘಾತದಲ್ಲಿ ಬೈಕ್ ಸವಾರರೀರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹೆರಂಜಾಲು ರವಿ ದೇವಾಡಿಗ (30) ಹಾಗೂ ಕೆರ್ಗಾಲು ಉಮೇಶ ದೇವಾಡಿಗ (27) ಮೃತ ದುರ್ದೈವಿಗಳು ಘಟನೆಯ ವಿವರ: ಹೆರಂಜಾಲು ಗ್ರಾಮದ ನಿರ್ಗದ್ದೆ ಮನೆ ನಿವಾಸಿ ಮಾಹಾಲಿಂಗ ಅವರ ಪುತ್ರ ರವಿ ದೇವಾಡಿಗ ಹಾಗೂ ಕೆರ್ಗಾಲು ಗ್ರಾಮದ ಅಜ್ಜರಮನೆ ನಿವಾಸಿ ರಾಮ ದೇವಾಡಿಗ ಅವರ ಪುತ್ರ ಉಮೇಶ್ ದೇವಾಡಿಗ ಪಲ್ಸರ್ ಬೈಕಿನಲ್ಲಿ ನಾಗೂರು ಕಡೆಯಿಂದ ಕಂಬದಕೋಣೆ ಕಡೆಗೆ ತೆರಳುತ್ತಿದ್ದ ವೇಳೆ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಇನ್ಸುಲೇಟರ್ ವ್ಯಾನ್ ನಾಗೂರು ಎಡಮಾವಿನ ಹೊಳೆ ತಿರುವಿನಲ್ಲಿ ಮುಖಾಮುಖಿ ಢಿಕ್ಕಿ ಹೊಡೆದಿತ್ತು. ಢಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿದ್ದರು. ರವಿ ಹಾಗೂ ಉಮೇಶ್ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಪೂನಾದಲ್ಲಿ ಉದ್ಯೋಗಿಯಾಗಿದ್ದ ಉಮೇಶ್ ದೇವಾಡಿಗ ಕೆಲವು ದಿನಗಳ ಹಿಂದಷ್ಟೇ…
ಗಂಗೊಳ್ಳಿ: ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ 2014-15ನೇ ಸಾಲಿನ ವಾರ್ಷಿಕ ಮಹಾಸಭೆಯು ಇತ್ತೀಚಿಗೆ ಸಂಘದ ಪ್ರಧಾನ ಕಛೇರಿಯ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಕೆ. ನಾಗ ಖಾರ್ವಿ ಅವರು ಸಂಘವು 2014-15ನೇ ಸಾಲಿನಲ್ಲಿ ರೂ 30,70,975.02 ನಿವ್ವಳ ಲಾಭ ಗಳಿಸಿದ್ದು, ಸದಸ್ಯರ ಪಾಲು ಬಂಡವಾಳಕ್ಕೆ ಶೇ.೨೫ ಡಿವಿಡೆಂಡ್ ನೀಡಲಾಗುವುದು. ಸಂಘದ ಸದಸ್ಯರಿಗೆ ಸರಕಾರದಿಂದ ಸಿಗುವ ಸವಲತ್ತುಗಳನ್ನು ತರಿಸಿ ಕೊಡುವರೇ ಮುತವರ್ಜಿ ವಹಿಸುತ್ತಿದ್ದೇವೆ ಎಂದರು. ಸಂಘದ ಉಪಾಧ್ಯಕ್ಷ ಪ್ರಕಾಶ್ ಆರ್. ಖಾರ್ವಿ, ನಿರ್ದೇಶಕರಾದ ಮೋಹನ ಖಾರ್ವಿ, ವಿಘ್ನೇಶ್ ಖಾರ್ವಿ, ಮಾಧವ ಖಾರ್ವಿ, ಶಂಕರ ಖಾರ್ವಿ, ದಿನೇಶ್ ಖಾರ್ವಿ, ತಿಮ್ಮಪ್ಪ ಖಾರ್ವಿ, ಸರೋಜಿನಿ, ಶಶಿಕಲಾ, ಶ್ರೀಮತಿ ಸುಮತಿ, ಜಿ. ಪಾಂಡು ಖಾರ್ವಿ, ಕೆ. ಅಜಂತ ಖಾರ್ವಿ, ರತ್ನಾಕರ ಖಾರ್ವಿ ಉಪಸ್ಥಿತರಿದ್ದರು. ಸಂಘದ ವ್ಯವಸ್ಥಾಪಕ ಮೋಹನ ಖಾರ್ವಿ ಅವರು 2014-15ನೇ ಸಾಲಿನ ವಾರ್ಷಿಕ ವರದಿಯನ್ನು ಮಂಡಿಸಿದರು. ಸಂಘದ ಸಿಬ್ಬಂದಿ ಪಾಂಡುರಂಗ ಮಡಿವಾಳ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ಸೆ. 21ರಂದು ಕುಂದಾಪುರದ ಶಾಸ್ತ್ರೀ ಸರ್ಕಲ್ನಲ್ಲಿ ವಿಶ್ವ ಶಾಂತಿ ದಿನಾಚರಣೆಯ ಅಂಗವಾಗಿ ಕ್ಯಾಂಡಲ್ ಲೈಟ್ ಬೆಳಗಿಸಿ ವಿಶ್ವ ಶಾಂತಿಗಾಗಿ ಪ್ರಾರ್ಥನೆ ನಡೆಸಲಾಯಿತು. ವಿಶ್ವದ ನಾನಾ ಭಾಗಗಳಲ್ಲಿ ಅಶಾಂತಿ ಹೆಚ್ಚುತ್ತಿದೆ. ಶಾಂತಿ, ನೆಮ್ಮದಿಯನ್ನು ಅರಸಿ ಸಿರಿಯಾ ಮೊದಲಾದ ದೇಶಗಳ ಜನರು ಪ್ರಾಣದ ಹಂಗು ತೊರೆದು ವಲಸೆ ಹೋಗುವ ಪ್ರಯತ್ನ ನಡೆಸುತ್ತಿದ್ದಾರೆ. ಭಯೋತ್ಪಾದನೆಯ ಕರಾಳ ಸ್ವರೂಪವನ್ನು ಉಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಇಂತಹ ಕಾಲಘಟ್ಟದಲ್ಲಿ ವಿಶ್ವ ಶಾಂತಿಗಾಗಿ ನಡೆಸುವ ಪ್ರಾರ್ಥನೆ ಅರ್ಥಪೂರ್ಣ ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಮಾಜಿ ಅಧ್ಯಕ್ಷ ಎ.ಎಸ್.ಎನ್. ಹೆಬ್ಬಾರ್ ಹೇಳಿದರು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು, ರೋಟರಿ ಕ್ಲಬ್ ಕುಂದಾಪುರ ಮಿಡ್ಟೌನ್ ಪೂರ್ವಾಧ್ಯಕ್ಷ ಬಶೀರ್ ಸಾಹೇಬ್ ಕೋಟ, ರೋಟರಿ ಕ್ಲಬ್ ಕುಂದಾಪುರದ ಪೂರ್ವಾಧ್ಯಕ್ಷರಾದ ಡಾ. ಎನ್. ಪಿ. ಕಮಾಲ್, ರವಿರಾಜ್ ಶೆಟ್ಟಿ, ವಿ. ಆರ್. ಕೆ. ಹೊಳ್ಳ, ಶಶಿಧರ ಹೆಗ್ಡೆ ಸಾಲಗದ್ದೆ, ರೋಟರ್ಯಾಕ್ಟ್ ಕ್ಲಬ್ ಅಧ್ಯಕ್ಷ…
