ಕುಂದಾಪುರ: ಸಮುದ್ರದಲ್ಲಿ ಉಪ್ಪು ಹೇಗೆ ಬೆರೆತಿದೆಯೋ ಹಾಗೇ ನಾವು ಭಗವಂತನೊಂದಿಗೆ ಭಕ್ತಿಯ ಮೂಲಕ ಬೆರೆಯಬೇಕು. ಭಗವಂತನಿಗೆ ಹತ್ತಿರವಾಗುವುದು ಎಂದರೆ ಆತನಲ್ಲಿ ಲೀನವಾಗುವುದು ಎಂದರ್ಥ. ಪರಿಶುದ್ಧ ಭಾವನೆಯಿಂದ ಭಗವಂತನನ್ನು ನೆನೆದು ನಮ್ಮಲ್ಲಿರುವ ಕೆಡುಕನ್ನು ದೂರ ಮಾಡುವ ಮೂಲಕ ಆತನ ಕೃಪೆಗೆ ಪಾತ್ರರಾಗಬೇಕಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ಕುಂದಾಪುರ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನ ರಜತಮಹೋತ್ಸವದ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಕೃಪಾ ಭವನವನ್ನು ಉದ್ಘಾಟಿಸಿ ಮಾತನಾಡಿದರು. ಸಹಬಾಳ್ವೆ, ಸಾಹಸ, ಕಠಿಣ ಕೆಲಸಕ್ಕೆ ಖಾರ್ವಿ ಸಮಾಜ ಹೆಸರಾಗಿದ್ದು ಒಗ್ಗಟ್ಟು, ಶ್ರಮ ಜೀವನ ಸಮಾಜಕ್ಕೆ ಮಾದರಿ. ಅತ್ಯಂತ ನಂಬಿಕೆ, ಪ್ರಾಮಾಣಿಕತೆ ಖಾರ್ವಿ ಸಮಾಜದ ಹೆಚ್ಚುಗಾರಿಕೆ. ಕಳೆದ ನಾಲ್ಕಾರು ದಶಕಗಳಲ್ಲಿ ಸಮಾಜ ಸಾಕಷ್ಟು ಬದಲಾವಣೆಗಳನ್ನು ಕಂಡಿದೆ ಎಂದ ಅವರು ದುಡಿಮೆಗೆ ತಕ್ಕ ಪ್ರತಿಫಲ ಈಗ ಸಿಗುತ್ತಿದ್ದು ಹಿಂದಿನ ಕಷ್ಟದ ಬದುಕಿಗಿಂತ ಈಗಿನ ಜೀವನ ಸುಧಾರಣೆ ಕಾಣಲು ಸಾಧ್ಯವಾಗಿದೆ ಎಂದರು. ಈ ಸಂದರ್ಭದಲ್ಲಿ ಬಸ್ರೂರು…
Author: ಸುನಿಲ್ ಹೆಚ್. ಜಿ. ಬೈಂದೂರು
ಕುಂದಾಪುರ: ಯುವಜನರಲ್ಲಿ ಸಂಘಟನೆ, ಸೇವಾ ಭಾವ ಹೆಚ್ಚುತ್ತಿರುವುದು ಉತ್ತಮ ಬೆಳವಣಿಗೆ. ಜೇಸಿ ಸಂಘಟನೆ ಸಪ್ತಾಹ ಆಯೋಜನೆಯ ಮೂಲಕ ಉತ್ತಮ ಕಾರ್ಯಕ್ರಮಗಳನ್ನು ಸಮಾಜಕ್ಕೆ ನೀಡುವ ಜೊತೆಗೆ ಸಾಂಸ್ಕೃತಿಕ ಲೋಕ ಕುಂದಾಪುರದಲ್ಲಿ ಮೇಳೈಸುವಂತೆ ಮಾಡಿದ್ದಾರೆ. ಇಂತಹ ಅಪೂರ್ವ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಸಂಘಟಿಸಿದ ಜೇಸಿಐ ಕುಂದಾಪುರ ಸಿಟಿ ಅಧ್ಯಕ್ಷ ಚಂದ್ರಕಾಂತ್ ಅವರ ಕಾರ್ಯ ವೈಖರಿ ಪ್ರಶಂಸನೀಯ ಎಂದು ಬಸ್ರೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೋಕ್ತೆಸರರಾದ ಬಿ. ಅಪ್ಪಣ್ಣ ಹೆಗ್ಡೆ ಹೇಳಿದರು. ಅವರು ಜೇಸಿಐ ಕುಂದಾಪುರ ಸಿಟಿ ಆಶ್ರಯದಲ್ಲಿ ಕುಂದಾಪುರದ ರೋಟರಿ ಲಕ್ಷ್ಮೀನರಸಿಂಹ ಕಲಾಮಂದಿರದಲ್ಲಿ ಒಂದು ವಾರಗಳ ಕಾಲ ಅದ್ಧೂರಿಯಾಗಿ ನಡೆದ ಜೇಸಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಕುಂದಾಪುರದ ಖ್ಯಾತ ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರ ಅವರಿಗೆ ವೃತ್ತಿ ಜೀವನದ ಸಾಧನೆಯನ್ನು ಗುರುತಿಸಿ ಜೇಸಿ ಸ್ವರ್ಣ ಪತ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜೇಸಿಐ ಕುಂದಾಪುರ ಸಿಟಿ ಪೂರ್ವಾಧ್ಯಕ್ಷ ನಿತಿನ್ ಅವಭೃತ ಅವರಿಗೆ ಕಮಲ ಪತ್ರ ಪ್ರದಾನ ಮಾಡಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಜೇಸಿಐ…
ಕುಂದಾಪುರ: ಜೇಸಿಐ ಕುಂದಾಪುರ ಸಿಟಿ ಆಶ್ರಯದಲ್ಲಿ ಜೇಸಿ ಸಪ್ತಾಹದ ಅಂಗವಾಗಿ ನಡೆದ ಆದರ್ಶ ದಂಪತಿಗಳು ಸ್ಪರ್ಧೆಯಲ್ಲಿ ಅಂತಿಮ ಸುತ್ತಿನಲ್ಲಿ ಪಾಲ್ಗೊಂಡ 7 ದಂಪತಿಗಳಲ್ಲಿ ಸಿದ್ದಾಪುರದ ಪುರುಷೋತ್ತಮ ಭಟ್ ಹಾಗೂ ಶ್ರೀಮತಿ ಅನಸೂಯ ಪಿ. ಭಟ್ ಅವರು ಪ್ರಥಮ ಸ್ಥಾನವನ್ನು ಪಡೆದುಕೊಂಡರು. ನಾಗೇಶ್ ಕೋಟ ಹಾಗೂ ಶ್ರೀಮತಿ ಭವ್ಯ ನಾಗೇಶ್ ಅವರು ದ್ವಿತೀಯ ಸ್ಥಾನ ಮತ್ತು ಕೋಡಿಯ ಅಶೋಕ ಪೂಜಾರಿ ಮತ್ತು ಶ್ರೀಮತಿ ತೃತೀಯ ಸ್ಥಾನ ಪಡೆದುಕೊಂಡರು. ತೀರ್ಪುಗಾರರಾಗಿ ಉದ್ಯಮಿ ಸದಾನಂದ ನಾವಡ, ಉಪನ್ಯಾಸಕ ರಂಜಿತ್ಕುಮಾರ್ ಶೆಟ್ಟಿ ವಕ್ವಾಡಿ, ಶ್ರುತಿ ಶಶಾಂಕ್ ಪಟೇಲ್ ಸಹಕರಿಸಿದರು. ಜೇಸಿ ವಲಯ ೧೫ರ ವಲಯಾಧ್ಯಕ್ಷ ಕೃಷ್ಣಮೋಹನ್ ಪಿ.ಎಸ್., ಉದ್ಯಮಿ ಸಂತೋಷ ಪ್ರಭು ಕೋಟ, ಉದ್ಯಮಿ ದಿನೇಶ್ ಗೋಡೆ, ಮೊಬೈಲ್ ಎಕ್ಸ್ನ ಮುಸ್ತಾಫ, ಹರೀಶ್ ಪೂಜಾರಿ ಅಂಕದಕಟ್ಟೆ, ವಲಯ ಉಪಾಧ್ಯಕ್ಷ ನಾಗೇಂದ್ರ ಪೈ, ಜೇಸಿಐ ಕುಂದಾಪುರ ಸಿಟಿ ದಶಮಾನೋತ್ಸವ ಸಮಿತಿ ಅಧ್ಯಕ್ಷ ಕೆ. ಕಾರ್ತೀಕೇಯ ಮಧ್ಯಸ್ಥ, ಸಿಟಿ ಜೇಸಿಸ್ ಸ್ಥಾಪಕಾಧ್ಯಕ್ಷ ಹುಸೇನ್ ಹೈಕಾಡಿ, ನಿಕಟಪೂರ್ವಾಧ್ಯಕ್ಷ ನಿತಿನ್ ಅವಭೃತ, ಕಾರ್ಯದರ್ಶಿ…
ಕುಂದಾಪುರ: ತಾಲೂಕಿನ ಉಳ್ಳೂರು11ನೇ ಯರುಕೋಣೆ ಭಂಡಾರರ ಕುಟುಂಬದವರಾದ ವೈ. ಚಂದ್ರಶೇಖರ ಶೆಟ್ಟಿ (80) ಇಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ನಿವೃತ್ತ ಮುಖ್ಯೋಪಧ್ಯಾಯರು, ಪ್ರಗತಿಪರ ಕೃಷಿಕರೂ ಆದ ಚಂದ್ರಶೇಖರ ಶೆಟ್ಟಿಯವರು ಧಾರ್ಮಿಕ, ಸಾಮಾಜಿಕ, ರಾಜಕೀಯ, ಸಹಕಾರಿ ಕ್ಷೇತ್ರಗಳಲ್ಲಿ ಹಲವಾರು ವರ್ಷಗಳ ಕಾಲ ತಮ್ಮನ್ನು ತೊಡಗಿಸಿಕೊಂಡವರು. ಸರಕಾರಿ ಪ್ರೌಢಶಾಲೆ ಖಂಬದಕೋಣೆ, ಬೈಂದೂರು, ಉಪ್ಪುಂದಲ್ಲಿ ಮುಖ್ಯೋಪಧ್ಯಾಯರಾಗಿ ಸೇವೆಸಲ್ಲಿಸಿದ್ದ ಅವರು, ಬಳಿಕ ಹೇರೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಖಂಬದಕೋಣೆ ಸಿ.ಎ ಬ್ಯಾಂಕ್ನ ಅಧ್ಯಕ್ಷರಾಗಿ, ಕುಂದಾಪುರ ಕೃಷಿಕ ಸಮಾಜದ ಅಧ್ಯಕ್ಷರಾಗಿ, ಜನತಾದಳ ಬೈಂದೂರು ಬ್ಲಾಕ್ ಅಧ್ಯಕ್ಷರಾಗಿ, ಮಣಿಪಾಲ ಕೆನರಾ ಮಿಲ್ಕ್ ಯೂನಿಯನ್ ನಿರ್ದೇಶಕರಾಗಿ, ಮೇಕೋಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಧರ್ಮದರ್ಶಿಯಾಗಿ, ಮೇಕೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಥಾಪಕ ಅಧ್ಯಕ್ಷರಾಗಿ ದುಡಿದಿದ್ದರು. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಸೇರಿದಂತೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿರುವ ಚಂದ್ರಶೇಖರ ಶೆಟ್ಟಿ ಅವರ ನಿಧನಕ್ಕೆ, ಅವರ ಅಪಾರ ಬಂಧು-ಮಿತ್ರರು ಹಾಗೂ ಶಿಷ್ಯವೃಂದ ಸಂತಾಪ…
ಗಂಗೊಳ್ಳಿ: ಗಂಗೊಳ್ಳಿಯ ನಿನಾದ ಸಂಸ್ಥೆಯ ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ ಶ್ರೀ ಗಣೇಶೋತ್ಸವದ ಪ್ರಯುಕ್ತ ಸಂಗೀತ ಕಾರ್ಯಕ್ರಮ ಇತ್ತೀಚಿಗೆ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಯಿತು. ದೇವಳದ ಆಡಳಿತ ಮೊಕ್ತೇಸರ ಎನ್.ಸದಾಶಿವ ನಾಯಕ್, ಜಿ.ಎ.ಪೈ ಮುಂಬೈ, ಬಿ.ಪ್ರಕಾಶ ಪಡಿಯಾರ್, ಎಚ್.ಸಂಜೀವ ನಾಯಕ್ ಹಾಗೂ ಸಂಗೀತ ಶಿಕ್ಷಕ ಶಂಭು ಭಟ್ ಅವರು ಜಂಟಿಯಾಗಿ ಕಾರ್ಯಕ್ರಮ ಉದ್ಘಾಟಿಸಿದರು. ಇದೇ ಸಂದರ್ಭ ಸಂಗೀತ ಶಾಲೆಯ ಶಿಕ್ಷಕ ಶಂಭು ಭಟ್ಟ ಅವರನ್ನು ಉದ್ಯಮಿ ಎಚ್.ಗಣೇಶ ಕಾಮತ್ ಮತ್ತು ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ ಇವರು ಸನ್ಮಾನಿಸಿದರು ಹಾಗೂ ಕರ್ನಾಟಕ ಸರಕಾರದ ವತಿಯಿಂದ ನಡೆದ ಸಂಗೀತ ಪರೀಕ್ಷೆಯಲ್ಲಿ ಉತ್ತೀರ್ಣರಾದ ದಿವ್ಯಾ ನಾಯಕ್ ಹಾಗೂ ಪ್ರಿಯಾ ಪೈ ಇವರನ್ನು ಜಿ.ಜಯಶ್ರೀ ಎನ್.ಶೆಣೈ ಗೌರವಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ದೇವಳದ ಆಡಳಿತ ಮಂಡಳಿ ಸದಸ್ಯ ಜಿ.ವೆಂಕಟೇಶ ನಾಯಕ್ ಪ್ರಶಂಸನಾ ಪತ್ರ ವಿತರಿಸಿ ಶುಭ ಹಾರೈಸಿದರು. ಹಿಂದುಸ್ತಾನಿ, ಶಾಸ್ತ್ರೀಯ ಸಂಗೀತ, ತಬಲಾ ವಾದನ ಹಾಗೂ ಭಜನೆಗಳ ಮೂಲಕ ನಿನಾದ ಸಂಸ್ಥೆಯ…
ಗಂಗೊಳ್ಳಿ: ಇತ್ತೀಚಿಗೆ ಆಕಸ್ಮಿಕವಾಗಿ ಮೃತಪಟ್ಟ ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ಸದಸ್ಯ ಕಂಚುಗೋಡು ಭಗತ್ ನಗರದ ನಿವಾಸಿ ಕೃಷ್ಣ ಖಾರ್ವಿ ಕುಟುಂಬಕ್ಕೆ ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ವತಿಯಿಂದ ಪರಿಹಾರ ವಿತರಿಸಲಾಯಿತು. ಸಂಘದ ಅಧ್ಯಕ್ಷ ಎಚ್.ಮಂಜು ಬಿಲ್ಲವ ಅವರು ಪರಿಹಾರದ ಚೆಕ್ನ್ನು ಮೃತರ ಪತ್ನಿ ಮಾಲತಿ ಕೃಷ್ಣ ಖಾರ್ವಿ ಅವರಿಗೆ ವಿತರಿಸಿದರು. ಸಂಘದ ಮಾಜಿ ಅಧ್ಯಕ್ಷ ಡಿ.ಚಂದ್ರ ಖಾರ್ವಿ, ಕಾರ್ಯದರ್ಶಿ ಚೌಕಿ ವಿಠೋಬ ಖಾರ್ವಿ, ತ್ರಾಸಿ ಗ್ರಾಪಂ ಮಾಜಿ ಉಪಾಧ್ಯಕ್ಷ ಕೃಷ್ಣ ಎನ್.ಖಾರ್ವಿ, ಗಣೇಶ ಖಾರ್ವಿ ಕೋಡಿ ಮತ್ತು ನಾಗಪ್ಪಯ್ಯ ಪಟೇಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕುಂದಾಪುರ: ಇತಿಹಾಸ ಪ್ರಸಿದ್ಧ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ ಮಹೋತ್ಸವವು ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಾಂಗವಾಗಿ ನೆರವೇರಿತು. ಸೆ.17ರಂದು ಬೆಳಿಗ್ಗೆ 8ರಿಂದ ಶ್ರೀ ಮಹಾಗಣಪತಿ ಹೋಮ ಸಂಕಲ್ಪ, ಮಧ್ಯಾಹ್ನ 12ಕ್ಕೆ 1008 ತೆಂಗಿನ ಕಾಯಿ ಮಹಾಗಣಪತಿ ಹವನದ ಪೂರ್ಣಾಹುತಿ, ಮಹಾ ಪೂಜೆ ವಿದ್ಯುಕ್ತವಾಗಿ ಋತ್ವಿಜರ ವೇದ ಮಂತ್ರಘೋಷಗಳೊಂದಿಗೆ ದೇವಳದ ಧರ್ಮದರ್ಶಿ ಹೆಚ್. ರಾಮಚಂದ್ರ ಭಟ್ ಅವರ ಮಾರ್ಗದರ್ಶನದಲ್ಲಿ ನಡೆಯಿತು. ರಾತ್ರಿ ರಂಗಪೂಜಾದಿ ಸೇವೆಗಳು ಜರುಗಿತು. ಸತ್ಯಗಣಪತಿ ವ್ರತ : ಸೆ. 18ರಂದು ಬೆಳಿಗ್ಗೆ 10ಕ್ಕೆ 108 ಶ್ರೀ ಸತ್ಯಗಣಪತಿ ವ್ರತ ಹಾಗೂ ಕಥಾ ನಿರೂಪಣೆ ಧಾರ್ಮಿಕ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಶ್ರೀ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಸಂಜೆ ಸೃಷ್ಠಿ ಕಲಾಕುಟೀರ, ಉಡುಪಿ ಇವರಿಂದ ನೃತ್ಯ ವೈವಿಧ್ಯ, ಭಸ್ಮಾಸುರ ಮೋಹಿನಿ ನೃತ್ಯ ರೂಪಕ, ಕೂಚುಪುಡಿ, ಜಾನಪದ ನೃತ್ಯಗಳು ಕಲಾತ್ಮಕವಾಗಿ ಮೂಡಿ ಬಂದವು.
ಕುಂದಾಪುರ: ಅವಿಭಜಿತ ದ.ಕ ಜಿಲ್ಲೆಯ ಪ್ರತಿಷ್ಠಿತ ಸಂಘಗಳಲ್ಲಿ ಒಂದಾದ ಉಪ್ಪುಂದದಲ್ಲಿ ಪ್ರಧಾನ ಕಛೇರಿ ಹೊಂದಿರುವ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಜಿಲ್ಲೆಯ ಮೂರು ಸಹಕಾರಿ ಸಂಘಗಳಲ್ಲಿ ಒಂದು ಎಂದು ಗುರುತಿಸಿ ಕೊಂಡು ತನ್ನ ಸದಸ್ಯರಿಗೆ ಗ್ರಾಹಕರಿಗೆ ಉತ್ತಮ ಸೇವೆ ನೀಡುವುದರೊಂದಿಗೆ ೧೫ ವರ್ಷಗಳಿಂದ ಸತತವಾಗಿ ಪ್ರಶಸ್ತಿ ಪಡೆಯುವುದರಲ್ಲಿ ನಿರಂತರ ಸಾಧನೆ ಬಗ್ಗೆ ಆಡಿಟ್ ಎ ವರ್ಗಿಕರಣ ಹೊಂದಿದ್ದು, ಜಿಲ್ಲೆಯಲ್ಲೇ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ, ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದೆ. ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಎಂ.ಎನ್. ರಾಜೇಂದ್ರ ಕುಮಾರ್ ಇವರು ಸಂಘದ ಅಧ್ಯಕ್ಷರಾದ ಶ್ರೀ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಸತೀಶ ಪೈ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಬಿ. ರಘುರಾಮ ಶೆಟ್ಟಿ, ಕೆ. ಮೋಹನ ಪೂಜಾರಿ, ಗುರುರಾಜ ಹೆಬ್ಬಾರ್,…
ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಪ್ರಸಕ್ತ ಸಾಲಿನ ವಾರ್ಷಿಕ ಮಹಾಸಭೆಯು ಉಪ್ಪುಂದ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಉಭಯ ಜಿಲ್ಲೆಗಳ ಪ್ರತಿಷ್ಠಿತ ಸಹಕಾರಿ ಸಂಸ್ಥೆಯೆಂದು ಗುರುತಿಸಲ್ಪಟ್ಟಿರುವ ಸಂಘವು ಪ್ರಸಕ್ತ ವರ್ಷದಲ್ಲಿ ರೂ. 370 ಕೋಟಿ ವ್ಯವಹಾರ ನಡೆಸಿ, ರೂ. 2.22 ಕೋಟಿ ನಿವ್ವಳ ಲಾಭ ಗಳಿಸಿದೆ. ಮುಂದಿನ ಸಾಲಿನಲ್ಲಿ ವ್ಯವಹಾರವನ್ನು ರೂ. 400 ಕೋಟಿಗೆ ಹೆಚ್ಚಿಸುವ ಗುರಿ ಹೊಂದಿದೆ. ಈಗಿನ ಠೇವಣಿ ರೂ. 70.99 ಕೋಟಿ ಇದ್ದರೆ, ಮುಂದಿನ ಸಾಲಿನಲ್ಲಿ ರೂ. 85 ಕೋಟಿ ಸಂಗ್ರಹಿಸುವ ಗುರಿ ಇರಿಸಿಕೊಳ್ಳಲಾಗಿದೆ. ಸದಸ್ಯರಿಗೆ ಶೇ. 15 ಲಾಭಾಂಶ ನೀಡಲಾಗುವುದು. ರೂ. 2.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾರ್ಯಾಲಯ ಸಂಕೀರ್ಣದಲ್ಲಿ ಸದಸ್ಯರಿಗೆ, ಗ್ರಾಹಕರಿಗೆ ಗುಣಮಟ್ಟದ ಸೇವೆ ಒದಗಿಸಲು ಸಾಧ್ಯವಾಗುವಂತೆ ಅದನ್ನು ಸುಸಜ್ಜಿತಗೊಳಿಸಲಾಗುವುದು ಎಂದು ಹೇಳಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ ಪೈ ಸ್ವಾಗತಿಸಿದರು. ವಿಷ್ಣು ಪೈ ಮಹಾಸಭೆಯ ನೋಟಿಸು ಓದಿದರು. ನಾಗರತ್ನಾ ಡಿ. ವಾರ್ಷಿಕ ಆಡಳಿತ ವರದಿ ಮಂಡಿಸಿದರು. ಚರ್ಚೆಯಲ್ಲಿ ಭಾಗವಹಿಸಿ ಸದಸ್ಯರು ಸಲಹೆಯಿತ್ತರು.…
ಕುಂದಾಪುರ: ನಗರದ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದ ಗಣೇಶೋತ್ಸವ ಸಮಿತಿ ರಜತ ಮಹೋತ್ಸವವನ್ನು ಮಹಾಕಾಳಿ ದೇವಸ್ಥಾನದ ಅಧ್ಯಕ್ಷ ಜಯಾನಂದ ಖಾರ್ವಿ ಉದ್ಘಾಟಿಸಿದರು. ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಸಂದೀಪ್ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಮಹಾಕಾಳಿ ದೇವಳದ ಮೊಕ್ತೇಸರ ಶಂಕರ ನಾಕ್, ಬೆಂಗಳೂರು ಕೊಂಕಣಿ ವಿದ್ಯಾ ವೇದಿಕೆಯ ಅಧ್ಯಕ್ಷ ಶ್ರೀನಿವಾಸ ಕೆ. ನಾಕ್, ಕೆ.ಕೆ. ಫಿಶರೀಸ್ ನ ಕೃಷ್ಣ ಖಾರ್ವಿ, ಕುಂದಾಪುರ ವಿದ್ಯಾರಂಗ ಮಿತ್ರ ಮಂಡಳಿಯ ಅರುಣ್ ಖಾರ್ವಿ, ಗಣೇಶೋತ್ಸವ ಸಮಿತಿಯ ಸ್ಥಾಪಕಾಧ್ಯಕ್ಷ ವೆಂಕಟೇಶ ಸಾರಂಗ್ ಮೊದಲಾದವರು ಉಪಸ್ಥಿತರಿದ್ದರು. ರವಿರಾಜ ಖಾರ್ವಿ ಸ್ವಾಗತಿಸಿ, ಹರ್ಷವರ್ಧನ ಕಾರ್ಯಕ್ರಮ ನಿರೂಪಿಸಿದರು. ಬಳಿಕ ತಾಲೂಕು ಮಟ್ಟದ ಗಣೇಶನ ಚಿತ್ರ ಬಿಡಿಸುವ ಸ್ವರ್ಧೆ, ತಾಲೂಕು ಮಟ್ಟದ ಭಕ್ತಗೀತೆ ಸ್ವರ್ಧೆ, ಕುಂದಾಪುರ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ, ರಾತ್ರಿ ಸಂಪೂರ್ಣ ದೇವಿ ಮಹಾತ್ಮೆ ಯಕ್ಷಗಾನ ಜರುಗಿತು. ಗಣಪತಿಯನ್ನು ತಂದು ಪೀಠದಲ್ಲಿ ಪ್ರತಿಷ್ಠಾಪಿಸಿದ ಬಳಿಕ ಪ್ರಾಣ ಪ್ರತಿಷ್ಠೆ, ಗಣಹೋಮ, ಮಹಾಪೂಜೆ, ರಂಗಪೂಜೆ, ಪ್ರಸಾದ ವಿತರಣೆ ನಡೆಯಿತು.
