ಬೆಳಿಗ್ಗಿನಿಂದ ಜಡಿ ಮಳೆ ಸುರಿಯುತ್ತಿತ್ತು. ಮಳೆ ಸುರಿದು ಗದ್ದೆಯಲ್ಲಿ ನೀರು ತುಂಬಿದಂತೆಲ್ಲ ನೆರೆದಿದ್ದವರ ಉತ್ಸಾಹವೂ ಹೆಚ್ಚಿತ್ತಲಿತ್ತು. ಅಲ್ಲಿ ನಾಯಕನಿರಲಿಲ್ಲ, ಕಾರ್ಯಕರ್ತರೂ ಇರಲಿಲ್ಲ. ಒಂದು ದಿನ ಎಲ್ಲರಲ್ಲೂ ಎಲ್ಲವನ್ನೂ ಮರೆತು, ಕಲೆತು ಸ್ನೇಹವನ್ನು ಗಟ್ಟಿಗೊಳಿಸುವ ತುಡಿತ ಮಾತ್ರ ಕಾಣುತ್ತಿತ್ತು. ಕುಂದಾಪುರ ತಾಲೂಕಿನ ಸಟ್ವಾಡಿ ಬಸ್ ನಿಲ್ದಾಣದ ಬಳಿಯ ಕೆಸರು ಗದ್ದೆಯಲ್ಲಿ ಕುಂದಾಪುರ ಬಿಜೆಪಿ ಯುವಮೋರ್ಚಾದ ವತಿಯಿಂದ ಆಯೋಜಿಸಲಾಗಿದ್ದ ’ಶ್ರಾವಣದ ಕೆಸರಿನಲ್ಲಿ ಕಮಲ ಕೂಟ’ ಎಂಬ ವಿಭಿನ್ನ ಕಾರ್ಯಕ್ರಮ ಕೆಸರಿನಲ್ಲಿ ಸ್ನೇಹ ಕಲೆಯುವಂತೆ ಮಾಡಿತ್ತು. ರಾಜಕೀಯ ಪಕ್ಷದ ಕಾರ್ಯಕ್ರಮವೆಂದಾಗಲೆಲ್ಲಾ ನಾಯಕರು, ಭಾಷಣ, ಸಂಘಟನಾತ್ಮಕ ಚಟುವಟಿಕೆಗಳೇ ಕಣ್ಮುಂದೆ ಬರುವಾಗ ಕಮಲ ಕೂಟವು ಕಾರ್ಯಕರ್ತರಲ್ಲಿ ಹೊಸ ಹುರುಪು ತುಂಬಿತ್ತು. ಸದಾ ಪಕ್ಷ, ರಾಜಕಾರಣದಲ್ಲಿ ತೊಡಗಿಕೊಳ್ಳುವವರಿಗೆ ಒಂದಿಷ್ಟು ವಿಶ್ರಾಂತಿ ನೀಡುವ ಸಲುವಾಗಿಯೇ ಆಯೋಜಿಸಲಾಗಿದ್ದ ಕೆಸರು ಗದ್ದೆಯ ಆಟೋಟ ಸ್ವರ್ಧೆಯಲ್ಲಿ ಉಡುಪಿ ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ಬಿಜೆಪಿ ಪಕ್ಷದ ಸಾವಿರಾರು ಕಾರ್ಯಕರ್ತರು ಉತ್ಸಾಹದಿಂದಲೇ ಭಾಗವಹಿಸಿದ್ದರು. (ಕುಂದಾಪ್ರ ಡಾಟ್ ಕಾಂ ವರದಿ) ಆಟೋಟ: ಕೆಸರು ಗದ್ದೆಯಲ್ಲಿ ಆಯೋಜಿಸಲಾಗಿದ್ದ ಮಾನವ ಪಿರಮಿಡ್, ಹಗ್ಗಜಗ್ಗಾಟ, ಉಪ್ಪುಮೂಟೆ ಓಟ,…
Author: ಸುನಿಲ್ ಹೆಚ್. ಜಿ. ಬೈಂದೂರು
ನಮ್ಮೂರ ಸಂಗೀತ ಕುವರನಿಗೆ ಎರಡು ಪ್ರಶಸ್ತಿ ಸುನಿಲ್ ಹೆಚ್. ಜಿ. ಬೈಂದೂರು | ಅ.5, 2015 ಹೊಸ ಬಗೆಯ ಸಂಗೀತದ ಮೂಲಕ ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿರುವ ಯಶಸ್ವಿ ಯುವ ಸಂಗೀತ ನಿರ್ದೇಶಕ, ಕುಂದಾಪುರ ತಾಲೂಕಿನ ಬಸ್ರೂರಿನ ಹುಡುಗ ರವಿ ಬಸ್ರೂರ್ ತೆಕ್ಕೆಯಲ್ಲಿ ಈ ಭಾರಿ ಎರಡು ಸಂಗೀತ ಪ್ರಶಸ್ತಿಗಳು ಸೇರಿಕೊಂಡಿದೆ. ಕಳೆದ ಕೆಲವು ದಶಕಗಳಿಂದ ಚಿತ್ರರಂಗದಲ್ಲಿ ಸಂಗೀತ ಸ್ವರ ಮೂಡಿಸುತ್ತಿದ್ದ ರವಿ ಬಸ್ರೂರ್ ಅವರಿಗೆ ಈ ಭಾರಿ ಅವಳಿ ಪ್ರಶಸ್ತಿ ದೊರೆತಿರುವುದು ಅವರ ಪ್ರತಿಭೆಗೆ ಸಂದ ದೊಡ್ಡ ಗೌರವವರೇ ಸರಿ. ಅವರು ಒಂದೆಡೆ ಜೀ ಕನ್ನಡ ವಾಹಿನಿ ಕೊಡಮಾಡಿದ 2014ನೇ ಸಾಲಿನ ‘ಜೀ ಮ್ಯೂಸಿಕ್ ಅವಾರ್ಡ್’ನ ಉತ್ತಮ ಹಿನ್ನೆಲೆ ಸ೦ಗೀತ ವಿಭಾಗದಲ್ಲಿ ಉಗ್ರಂ ಚಿತ್ರದ ಸಂಗೀತ ನಿರ್ದೇಶನಕ್ಕಾಗಿ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದರೆ, ಕನ್ನಡ ಇಂಟರ್ ನ್ಯಾಷನಲ್ ಮ್ಯೂಸಿಕ್ ಅವಾರ್ಡ್ (ಕಿಮಾ) ಕೊಡಮಾಡುವ ಉತ್ತಮ ಹಿನ್ನೆಲೆ ಸಂಗೀತ ವಿಭಾಗದ ಪ್ರಶಸ್ತಿಯನ್ನು ಉಗ್ರಂ ಚಿತ್ರಕ್ಕಾಗಿಯೇ ಪಡೆದುಕೊಂಡಿದ್ದಾರೆ. ಅತ್ಯುತ್ತಮ ಸಂಯೋಜಕ (ಅತ್ಯುತ್ತಮ ಹಾಡು)…
ಕುಂದಾಪುರ: ನಗರದ ಬಿಜೆಪಿ ಯುವಮೋರ್ಚಾದ ವತಿಯಿಂದ ಸಾರ್ವಜನಿಕರು ಹಾಗೂ ಕಾರ್ಯಕರ್ತರಿಗಾಗಿ ಕೆಸರು ಗದ್ದೆಯ ಆಟೋಟ ಸ್ವರ್ಧೆ ‘ಶ್ರಾವಣದ ಕೆಸರಿನಲ್ಲಿ ಕಮಲ ಕೂಟ’ವು ಕುಂದಾಪುರ-ಬಸ್ರೂರು ರಸ್ತೆಯ ಸಟ್ವಾಡಿ ಬಸ್ ನಿಲ್ದಾಣದ ಬಳಿ ಇಂದು(ಅಗಸ್ಟ್.9) ಜರುಗಲಿದೆ. ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ ಕಮಲ ಕೂಟವನ್ನು ಉದ್ಘಾಟಿಸಲಿದ್ದು, ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಮುಖ್ಯ ಅತಿಥಿಯಾಗಿ ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕ ರಘುಪತಿ ಭಟ್, ಉಡುಪಿ ಜಿಜೆಪಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ. ಉದಯಕುಮಾರ್ ಶೆಟ್ಟಿ, ಉಡುಪಿ ಜಿ.ಪಂ ಉಪಾಧ್ಯಕ್ಷ ಪ್ರಕಾಶ್ ಟಿ. ಮೆಂಡನ್, ಜಿ.ಪಂ. ಸದಸ್ಯ ಬಾಬು ಶೆಟ್ಟಿ, ಬಿಜೆಪಿ ಮೀನುಗಾರಿಕಾ ಪ್ರಕೋಷ್ಠದ ರಾಜ್ಯ ಸಂಚಾಲಕ ಕಿಶೋರ್ ಕುಮಾರ್ ಕುಂದಾಪುರ, ಯುವಮೋರ್ಚಾ ರಾಷ್ಟ್ರೀಯ ಕಾರ್ಯದರ್ಶಿ ವಿಕಾಸ್ ಪುತ್ತೂರು, ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ರಂಜಿತ್ ಸಾಲಿಯಾನ್, ಮಹಿಳಾ ಯುವಮೋರ್ಚಾ ಅಧ್ಯಕ್ಷೆ ಶೀಲಾ ಶೆಟ್ಟಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ…
ಉಡುಪಿ: ಅಕ್ರಮವಾಗಿ ಸ್ಕಾರ್ಪಿಯೊ ವಾಹನದಲ್ಲಿ ದನಗಳನ್ನು ತುಂಬಿ ಸಾಗಣೆ ಮಾಡುತ್ತಿದ್ದ ಘಟನೆ ಹುಲಿಕಲ್ ಘಾಟ್ ಬಳಿ ತಪಾಸಣೆ ವೇಳೆ ಬೆಳಕಿಗೆ ಬಂದಿದೆ. ಸ್ಕಾರ್ಪಿಯೊ ವಾಹನದಲ್ಲಿ ದನಗಳನ್ನು ಸಾಗಿಸುತ್ತಿದ್ದ ವೇಳೆ ಹೊಸನಗರ ತಾಲೂಕಿನ ನಗರದ ಹುಲಿಕಲ್ ಘಾಟ್ ಗೇಟ್ ನಲ್ಲಿ ತಪಾಸಣೆ ನಡೆಸಿದಾಗ ಇಬ್ಬರು ಆರೋಪಿಗಳು ಅಲ್ಲಿದ್ದ ಅಧಿಕಾರಿಗಳನ್ನು ಬೆದರಿಸಿ ವಾಹನವನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ವಾಹನದಲ್ಲಿ ಒಟ್ಟು 8 ದನಗಳಿದ್ದು ಆ ಪೈಕಿ 3ದನಗಳ ಕುತ್ತಿಗೆ ಕಾಲು ಕತ್ತರಿಸಿ ತುಂಬಲಾಗಿತ್ತು. ವಿಪರೀತ ಗಾಯಗೋಂಡಿದ್ದ 5 ದನಗಳನ್ನು ರಕ್ಷಿಸಲಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಂಗೊಳ್ಳಿ: ನೆಲದ ಮೇಲೆ ಬೆಳೆದ ಹೂಬಳ್ಳಿಗಳು ಗಿಡ ಗಂಟಿಗಳು ಹತ್ತಿರದಲ್ಲಿರುವ ಮನೆ, ಅಂಗಡಿ ಮುಗ್ಗಟ್ಟು ಅಥವಾ ಕಂಬಗಳನ್ನು ಹತ್ತಿ ಬೆಳೆಯುವುದು ಮಳೆಗಾಲದಲ್ಲಿ ಸಾಮಾನ್ಯ. ಆದರೆ ಗಂಗೊಳ್ಳಿಯ ಮ್ಯಾಂಗನೀಸ್ ರಸ್ತೆಯ ಶ್ರೀ ಚಕ್ರೇಶ್ವರಿ ದೇವಸ್ಥಾನದ ಸಮೀಪದಲ್ಲಿರುವ ವಿದ್ಯುತ್ ಕಂಬವೊಂದರ ಮೇಲೆ ಬಳ್ಳಿಗಳು ದೊಡ್ಡದಾಗಿ ಬೆಳೆದು ವಿದ್ಯುತ್ ತಂತಿ ಸಮೇತ ಕಂಬವನ್ನು ಆವರಿಸುತ್ತಿದೆ. ಇಷ್ಟಿದ್ದರೂ ಮೆಸ್ಕಾಂ ಇಲಾಖೆ ದಿವ್ಯ ನಿರ್ಲಕ್ಷ್ಯ ತಾಳಿದ್ದು, ಕಂಬವನ್ನು ಸುತ್ತುವರಿದಿರುವ ಬಳ್ಳಿಗಳನ್ನು ಕತ್ತರಿಸುವ ಗೋಜಿಗೆ ಹೋಗಿಲ್ಲ. ಇದು ಮುಂದಿನ ದಿನಗಳಲ್ಲಿ ಅನಾಹುತಗಳಿಗೆ ಎಡೆಮಾಡಿಕೊಡುವ ಸಾಧ್ಯತೆಗಳಿದ್ದು, ಮೆಸ್ಕಾಂ ಅಧಿಕಾರಿಗಳು ಇತ್ತಮ ಗಮನಹರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಚಿತ್ರ: ಸುರಭಿ ಗಂಗೊಳ್ಳಿ
ಗಂಗೊಳ್ಳಿ: ಮಕ್ಕಳಲ್ಲಿ ಭಾರತೀಯ ಸಂಸ್ಕೃತಿ, ಆಚಾರ ವಿಚಾರಗಳನ್ನು ತಿಳಿಸಿದರೆ ಮಕ್ಕಳಲ್ಲಿ ದೇಶಭಕ್ತಿ ಮೂಡಲು ಸಹಾಯಕವಾಗುತ್ತದೆ. ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನ ಪ್ರಾಣತ್ಯಾಗ ಮಾಡಿದ ಅನೇಕ ದೇಶಭಕ್ತರನ್ನು, ಯೋಧರನ್ನು ನಾವು ಸದಾ ಸ್ಮರಿಸಿಕೊಳ್ಳಬೇಕು. ದೇಶದೆಲ್ಲೆಡೆ ಹೆಚ್ಚುತ್ತಿರುವ ಭಯೋತ್ಪಾದನೆ ಮೊದಲಾದ ಅನೇಕ ದೇಶದ್ರೋಹಿ ಚಟುವಟಿಕೆಗಳಲ್ಲಿ ಯುವಕರ ಪಾತ್ರ ಹೆಚ್ಚಾಗಿ ಕಂಡು ಬರುತ್ತಿದ್ದು, ಇಂತಹ ಚಟುವಟಿಕೆಗಳನ್ನು ಹತ್ತಿಕ್ಕಲು ನಾವು ನಮ್ಮ ದೇಶದ ಮೇಲೆ ಪ್ರೀತಿ ಅಭಿಮಾನವನ್ನು ಬೆಳೆಸಿಕೊಂಡು ನಾವೆಲ್ಲರೂ ಭಾರತೀಯರು ಎಂಬ ಭಾವನೆ ರೂಢಿಸಿಕೊಳ್ಳಬೇಕು ಎಂದು ಸಮಾಜಸೇವಕ ಜಿ.ಗಣಪತಿ ಶಿಪಾ ಹೇಳಿದರು. ಅವರು ಇತ್ತೀಚಿಗೆ ಗಂಗೊಳ್ಳಿಯ ವೀರ ಸಾವರ್ಕರ್ ದೇಶಪ್ರೇಮಿಗಳ ಬಳಗದ ಆಶ್ರಯದಲ್ಲಿ ಗಂಗೊಳ್ಳಿಯ ದೊಡ್ಡಹಿತ್ಲು ವಠಾರದಲ್ಲಿ ಜರಗಿದ ಭಾರತ ಮಾತಾ ಪೂಜನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕ ಅರವಿಂದ ಕೋಟೇಶ್ವರ ದಿಕ್ಸೂಚಿ ಭಾಷಣ ಮಾಡಿದರು. ಸ್ಫೂರ್ತಿ ಮಹಿಳಾ ಸಂಘದ ಸದಸ್ಯರು ಭಾರತ ಮಾತೆಗೆ ವಂದಿಸುವ ಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವೀರ ಸಾವರ್ಕರ್ ದೇಶಪ್ರೇಮಿಗಳ ಬಳಗದ ರಂಜಿತ್ ಖಾರ್ವಿ…
ಗಂಗೊಳ್ಳಿ: ಶಾಲೆಯ ಅಭಿವೃದ್ಧಿಗಾಗಿ ಪಂಚಾಯತ್ ವತಿಯಿಂದ ದೊರೆಯುವ ಸೌಲಭ್ಯವನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಶಾಲೆಯ ಅಭಿವೃದ್ಧಿಯಲ್ಲಿ ಪೋಷಕರು ಕೈಜೋಡಿಸಬೇಕು. ಪೋಷಕರು ಶಾಲೆಗೆ ಭೇಟಿ ನೀಡಿ ಮಕ್ಕಳ ಶೈಕ್ಷಣಿಕ ಪ್ರಗತಿಯನ್ನು ಪರಿಶೀಲಿಸಬೇಕು ಜೊತೆಗೆ ಶಾಲೆಯ ಕುಂದು ಕೊರತೆಗಳ ಬಗ್ಗೆ ಶಾಲಾಭಿವೃದ್ಧಿ ಸಮಿತಿಯ ಗಮನಕ್ಕೆ ತರಬೇಕು ಎಂದು ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಹರೀಶ ಮೇಸ್ತ ಹೇಳಿದರು. ಅವರು ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಪೋಷಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಸ್ಡಿಎಂಸಿ ಅಧ್ಯಕ್ಷ ರಾಮನಾಥ ಚಿತ್ತಾಲ್, ಗುಜ್ಜಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಕಾವ್ಯ ಶೇರುಗಾರ್, ವೇದಾವತಿ, ಆರತಿ ಶುಭ ಹಾರೈಸಿದರು. ಇದೇ ಸಂದರ್ಭ ಸರಕಾರದ ಅಧಿನಿಯಮದಂತೆ ಶಾಲೆಯ ಎಸ್ಡಿಎಂಸಿಗೆ ಪೋಷಕರು ೧೮ ಸದಸ್ಯರನ್ನು ನಾಮಕರಣ ಮಾಡಿ ಆಯ್ಕೆ ಮಾಡಲಾಯಿತು ಹಾಗೂ ತಾಯಂದಿರ ಸಮಿತಿಯನ್ನು ರಚಿಸಲಾಯಿತು. ಎಸ್ಡಿಎಂಸಿ ಉಪಾಧ್ಯಕ್ಷೆ ಇಂದಿರಾ, ಸಮಿತಿಯ ಸದಸ್ಯರಾದ ಮುತ್ತು, ಗಾಯತ್ರಿ, ಮೋಹನ ನಾಯ್ಕ್, ಜ್ಯೋತಿ, ಸರಿತಾ, ಸರಸ್ವತಿ, ಶೇಖರ ಪೂಜಾರಿ, ಕರಿಯ ಪೂಜಾರಿ, ದೇವದಾಸ…
ಕುಂದಾಪುರ: ವಿದ್ಯಾರ್ಜನೆ ವಿದ್ಯಾರ್ಥಿಗಳ ಪರಮ ಗುರಿಯಾಗಿರಬೇಕು ಅದರೊಂದಿಗೆ ಇಂಟರ್ಯಾಕ್ಟ್ನಂತಹ ಸಂಸ್ಥೆಯ ಮೂಲಕ ಹೆಚ್ಚಿನ ಕೌಶಲ್ಯ ಹಾಗೂ ಜ್ಞಾನವನ್ನು ಪಡೆದು ಅಂತರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಛಾಪನ್ನು ಮೂಡಿಸುವ ನಿಟ್ಟಿನಲ್ಲಿ ಪ್ರಯತ್ನಶೀಲರಾಗಿ ಎಂದು ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಹೇಳಿದರು. ಅವರು ಅಗಸ್ಟ್ ೦೫ರಂದು ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ಹೆಮ್ಮಾಡಿಯ ಜನತಾ ಫ್ರೌಢ ಶಾಲೆಯಲ್ಲಿ ಇಂಟರ್ಯಾಕ್ಟ್ ಕ್ಲಬ್ ನೂತನ ಅಧ್ಯಕ್ಷ ಭೂಷಣ್ ನಾಯ್ಕ್, ಕಾರ್ಯದರ್ಶಿ ಶರಣ್ಯ ಅವರಿಗೆ ಪದಪ್ರದಾನ ನೆರವೇರಿಸಿ ಮಾತನಾಡಿದರು. ಇಂಟರ್ಯಾಕ್ಟ್ ಕ್ಲಬ್ ನೂತನ ಅಧ್ಯಕ್ಷ ಭೂಷಣ್ ನಾಯ್ಕ್ ಮಾತನಾಡಿ ಸೇವಾ ಚಟುವಟಿಕೆಗಳನ್ನು ಆಯೋಜಿಸುವ ಜೊತೆಗೆ ಪ್ರಸಕ್ತ ಸಾಲಿನಲ್ಲಿ ಉತ್ತಮ ಇಂಟರ್ಯಾಕ್ಟ್ ಕ್ಲಬ್ ಆಗಿಸುವ ನಿಟ್ಟಿನಲ್ಲಿ ಎಲ್ಲ ಸದಸ್ಯರ ಸಹಕಾರ ಕೋರಿದರು. ಹೆಮ್ಮಾಡಿಯ ಜನತಾ ಫ್ರೌಢ ಶಾಲೆಯ ಮುಖ್ಯೋಪಧ್ಯಾಯ ಮೋಹನದಾಸ ಶೆಟ್ಟಿ, ಇಂಟರ್ಯಾಕ್ಟ್ ಕ್ಲಬ್ ಛೇರ್ಮೆನ್ ವೆಂಕಟೇಶ ಪ್ರಭು, ಆನ್ಸ್ ಕ್ಲಬ್ ಕುಂದಾಪುರದ ಅಧ್ಯಕ್ಷೆ ಭಾರತಿ ಪ್ರಕಾಶ್ಚಂದ್ರ ಶೆಟ್ಟಿ, ಕಾರ್ಯದರ್ಶಿ ಸುನೇತ್ರಾ ಸತೀಶ್ ಕೋಟ್ಯಾನ್, ರೋಟರಿ ಕ್ಲಬ್…
ಬೈಂದೂರು: ಕೆರ್ಗಾಲು ಗ್ರಾಮ ಪಂಚಾಯತ್ನ 2015-16ನೆ ಸಾಲಿನ ಮೊದಲ ಸುತ್ತಿನ ಗ್ರಾಮಸಭೆ ಅಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಅಧ್ಯಕ್ಷೆ ಸೋಮು ಅಧ್ಯಕ್ಷತೆ ವಹಿಸಿದ್ದರು. ಕಳೆದ ವರ್ಷದ ಆದಾಯ ಮತ್ತು ವೆಚ್ಚದ ವಿವರ ಮಂಡನೆಯಾಗುತ್ತಿದ್ದಂತೆ ಕೆಲವು ಗ್ರಾಮಸ್ಥರು ಪ್ರಶ್ನೆ, ಆಕ್ಷೇಪಗಳ ಸುರಿಮಳೆಗೈದರು. ಮಂಜುನಾಥ ಎಂಬವರು ಭಗವತಿ ದೇವಸ್ಥಾನ ಮಾರ್ಗದಲ್ಲಿ ಚರಂಡಿ ರಚನೆಯಾಗದಿದ್ದರೂ ವ್ಯಯದಲ್ಲಿ ತೋರಿಸಲಾಗಿರುವುದಕ್ಕೆ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಅದಕ್ಕೆ ಭಾಸ್ಕರ, ಹಿಂದಿನ ಅಧ್ಯಕ್ಷೆ ರೇವತಿ ಪೂಜಾರಿ ಧ್ವನಿಗೂಡಿಸಿದರು. ಇದಕ್ಕೆ ಸಮಜಾಯಿಷಿ ನೀಡಿದ ಅಭಿವೃದ್ಧಿ ಅಧಿಕಾರಿ ಆನಂದ ಆ ರಸ್ತೆಗೆ ಚರಂಡಿ ನಿರ್ಮಿಸಲು ಆಕ್ಷೇಪಣೆ ಬಂದ ಕಾರಣ ಆ ಕಾಮಗಾರಿಯನ್ನು ಯಕ್ಷೇಶ್ವರಿ ಮಾರ್ಗದಲ್ಲಿ ಮಾಡಲಾಗಿದೆ ಎಂದರು. ಗಣೇಶ ಎಲ್ಲ ಕಾಮಗಾರಿಗಳ ವಿವರ ಬೇಕು ಎಂದು ಪಟ್ಟುಹಿಡಿದರು. ಒಂದು ಹಂತದಲ್ಲಿ ರೇವತಿ ಪೂಜಾರಿ ಅಧ್ಯಕ್ಷರೇ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ಆಗ್ರಹಿಸಿದರು. ಮಾರ್ಗದರ್ಶಿ ಅಧಿಕಾರಿ ಪಶುವೈದ್ಯ ಶಂಕರ ಶೆಟ್ಟಿ, ಉಪಾಧ್ಯಕ್ಷ ಸುಂದರ ಕೊಠಾರಿ ಮತ್ತು ಕೆಲವು ಸದಸ್ಯರು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿ,…
ಕುಂದಾಪುರ: ಸೇವೆಯಲ್ಲಿ ಭಗವಂತನನ್ನು ಕಂಡಾಗ ಕಾರ್ಯಚಟುವಟಿಕೆಯಲ್ಲಿ ಶ್ರದ್ಧೆ, ಪ್ರಾಮಾಣಿಕತೆ ತುಂಬಿ ನಾವುಗಳು ಸಮಾಜಕ್ಕೆ ವರವಾಗಿ ನಿಲ್ಲಲು ಸಾಧ್ಯ ಎಂದು ಸೈಂಟ್ ಮೇರಿಸ್ ಫ್ರೌಢ ಶಾಲೆ ಮುಖ್ಯೋಪಧ್ಯಾಯಿನಿ ಸಿಸ್ಟರ್ ಚೇತನ ಹೇಳಿದರು. ಅವರು ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ಕುಂದಾಪುರದ ಸೈಂಟ್ ಮೇರಿಸ್ ಫ್ರೌಢ ಶಾಲೆಯಲ್ಲಿ ಇಂಟರ್ಯಾಕ್ಟ್ ಕ್ಲಬ್ ಪದಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಅವರು ಇಂಟರ್ಯಾಕ್ಟ್ ಕ್ಲಬ್ ನೂತನ ಅಧ್ಯಕ್ಷೆ ಸೌಮ್ಯ, ಕಾರ್ಯದರ್ಶಿ ಪ್ರಜ್ವಲ್ ಪಾಟೀಲ್ ಅವರಿಗೆ ಪದಪ್ರದಾನ ನೆರವೇರಿಸಿದರು. ರೋಟರಿ ಕ್ಲಬ್ ಕುಂದಾಪುರದ ಕಾರ್ಯದರ್ಶಿ ಸಂತೋಷ ಕೋಣಿ ಇಂಟರ್ಯಾಕ್ಟ್ ಕ್ಲಬ್ ಪದಾಧಿಕಾರಿಗಳಿಗೆ ಪ್ರಮಾಣವಚನ ಭೋಧಿಸಿದರು. ಇಂಟರ್ಯಾಕ್ಟ್ ಕ್ಲಬ್ ಛೇರ್ಮೆನ್ ವೆಂಕಟೇಶ ಪ್ರಭು, ಇಂಟರ್ಯಾಕ್ಟ್ ಕ್ಲಬ್ ನಿರ್ಗಮನ ಅಧ್ಯಕ್ಷೆ ಐಶ್ವರ್ಯ, ನಿರ್ಗಮನ ಕಾರ್ಯದರ್ಶಿ ಪ್ರಥ್ವಿಕ್ ಉಪಸ್ಥಿತರಿದ್ದರು. ಇಂಟರ್ಯಾಕ್ಟ್ ಕ್ಲಬ್ ಕೋ-ಆರ್ಡಿನೇಟರ್ ಸ್ಟ್ಯಾನಿ ದಿನಮಣಿ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.
