ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲೆಯ ಅಲ್ಬಾಡಿ-ಆರ್ಡಿಯ ಚಾರಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಮಂಡಿಸಿದ ‘G.S.K (GAS SAVING KIT)’ ಎಂಬ ನೂತನ ಆವಿಷ್ಕಾರದ ಸಾಧನವು ಭಾರತ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ನಡೆಸುವ ರಾಷ್ಟ್ರಮಟ್ಟದ ‘CSIR INNOVATION AWARD FOR SCHOOL CHILDREN 2021’ ಸ್ಪರ್ಧೆಗೆ ಆಯ್ಕೆಯಾಗಿ, ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇಲ್ಲಿನ 10ನೇ ತರಗತಿಯಲ್ಲಿ ಒದುತ್ತಿರುವ ಅನುಷಾ ಹಾಗೂ ರಕ್ಷಿತ ನಾಯ್ಕ ಇಬ್ಬರು ವಿದ್ಯಾರ್ಥಿನಿಯರು ಈ ಸಾಧನೆ ಮಾಡಿದ್ದಾರೆ. ಕೇವಲ ಕಡಿಮೆ ಬೆಲೆಯಲ್ಲಿ ತಯಾರಿಸಲಾದ ‘G.S.K’ (GAS SAVING KIT) ಉಪಕರಣವನ್ನು, ಗ್ಯಾಸ್ ಸ್ಟೌಗೆ ಅಳವಡಿಸಿದರೆ, ಒಲೆಯ ಮೇಲೆ ಅಡುಗೆ ಆಗುತ್ತಿರುವಾಗಲೇ, ಇಡೀ ಕುಟುಂಬಕ್ಕೆ ಬೇಕಾಗುವಷ್ಟು ಸ್ನಾನದ ಬಿಸಿ ನೀರು ದೊರಕುತ್ತದೆ. ಪ್ರಪಂಚದಾದ್ಯಂತ ಇದನ್ನು ಎಲ್ಲಾ ಮನೆ, ಹೋಟೆಲ್ಗಳಲ್ಲಿ ಬಳಸಿದರೆ, ದಿವೊಂದಕ್ಕೆ ಲಕ್ಷಗಟ್ಟಲೆ ಟನ್ ಎಲ್.ಪಿ.ಜಿ. ಉಳಿತಾಯವಾಗುತ್ತದೆ ಎಂಬುದನ್ನು ಈ ಇಬ್ಬರು ವಿದ್ಯಾರ್ಥಿನಿಯರು ತೋರಿಸಿದ್ದಾರೆ. ಈ ಕಿಟ್ನ್ನು ಇನ್ನಷ್ಟು…
Author: ಸುನಿಲ್ ಹೆಚ್. ಜಿ. ಬೈಂದೂರು
ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪ್ರ ಕನ್ನಡದ್ ತಾಕತ್ತೇ ಅಂತದ್ ಕಾಣಿ. ಅದ್ರೊಳಗ್ ಭಾವ-ಬಂಧ ಎರಡೂ ಇತ್ತ್. ಹಂಗಾಯೇ ಕುಂದಾಪ್ರ ಭಾಷಿ ಮಾತಾಡ್ವರ್ ಯಾರ್ ಯಾರ್ ಎಲ್ಲೆಲ್ಲಿದ್ರೋ ಅಲ್ಲಲ್ಲೇ ಭಾಷಿ ಉಳ್ಸಿ-ಬೆಳ್ಸು ಬಗ್ಗ್ ಒಂಚೂರಾರೂ ನಿಗಾ ವಯ್ಸ್ಲಿ ಅಂದೇಳಿ ಆಟಿ ಅಮಾಸಿ ದಿನವೇ ’ವಿಶ್ವ ಕುಂದಾಪ್ರ ಕನ್ನಡ ದಿನ ‘ ಅಂದೇಳಿ ಮಾಡ್ತಿದ್ರ್. ಕಳ್ದ್ ಎರ್ಡ್ ವರ್ಷದ್ ಹಿಂದ್ ಸುರು ಆದ್ ಕುಂದಾಪ್ರ ಕನ್ನಡ ದಿನು ಅಂದಂದೆ ಸೈ, ಬ್ರಹ್ಮಾವರದಿಂದ್ ಬೈಂದೂರು ಶಿರೂರ್ ತನಕ್ , ದೇಶ-ವಿದೇಶದಂಗೆಲ್ಲಾ ಸದ್ದ್ ಮಾಡಿತ್. ಈ ಸರ್ತಿ ಕೊರೋನಾ ಇತ್ತಲಾ ಜನು ಸೇರ್ಸುಕಾತಿಲ್ಲ. ಆರೆ ಸೋಶಿಯಲ್ ಮೀಡಿಯಾದಗಂತೂ ಭಾರಿ ಸದ್ದ್ ಮಾಡ್ತಿತ್. ಬೇರ್ ಬೇರೆ ಬಗಿ ಸರ್ಧೆ, ಕಾರ್ಯಕ್ರಮ ಹಮ್ಮಕಂಡಿರ್. ವಿಶ್ವ ಕುಂದಾಪ್ರ ಕನ್ನಡ ದಿನ:ಕುಂದಾಪ್ರ ಕನ್ನಡ ಭಾಷೆಗೆ ತನ್ನದೇ ಆದ ಹಿರಿಮೆ-ಗರಿಮೆ ಇದೆ. ಕನ್ನಡ ಭಾಷೆಯ ಅತ್ಯಂತ ಸರಳ ಹಾಗೂ ಸಂಕ್ಷಿಪ್ತ ರೂಪವೆನಿಸಿಕೊಂಡಿರುವ ಕುಂದಾಪ್ರ ಕನ್ನಡ ಸರಿಸುಮಾರು ಬ್ರಹ್ಮಾವರದಿಂದ ಶಿರೂರಿನ ತನಕ ಮೂರು ತಾಲೂಕುಗಳಲ್ಲಿ ವ್ಯಾಪಿಸಿಕೊಂಡಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯಾವುದೇ ಸಾಕ್ಷ್ಯ ಉಳಿಸದೇ ಒಂಟಿ ಮಹಿಳೆಯ ಕೊಲೆಗೈದ ಪ್ರಕರಣವನ್ನು ಒಂದು ವಾರದ ಅಂತರದಲ್ಲಿ ಭೇದಿಸಿ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಉಡುಪಿ ಜಿಲ್ಲಾ ಪೊಲೀಸ್ ತಂಡ ಯಶಸ್ಸಿಯಾಗಿದೆ. ಕುಮ್ರಗೋಡು ಅಪಾರ್ಟ್ಮೆಂಟ್ನಲ್ಲಿ ನಡೆದ ವಿಶಾಲ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಪಿ ವಿಷ್ಣುವರ್ದನ್ ಅವರು 5 ವಿಶೇಷ ತನಿಖಾ ತಂಡವನ್ನು ರಚಿಸಿದ್ದರು. ತಾಂತ್ರಿಕ ಸಾಕ್ಷಿಗಳ ಆಧಾರದಲ್ಲಿ ಲಭ್ಯವಾದ ಸುಳಿವಿನಂತೆ ಬೇರೆ ಬೇರೆ ರಾಜ್ಯಗಳಿಗೆ ತೆರಳಿ ಆರೋಪಿ ಹುಡುಕಾಟ ನಡೆಸಿದ್ದು, ಉತ್ತರ ಪ್ರದೇಶದ ಗೋರಖ್ಪುರ್ದಲ್ಲಿ ಪೊಲೀಸ್ ಅಧಿಕಾರಿಗಳ ಸಹಕಾರದೊಂದಿಗೆ ಸ್ವಾಮಿನಾಥ ನಿಶಾದ (38) ಎಂಬ ವ್ಯಕ್ತಿಯನ್ನು ಬಂಧಿಸಿದ್ದರು. ಬಂಧಿತ ವ್ಯಕ್ತಿ ನೀಡಿದ ಮಾಹಿತಿಯಂತೆ ವಿಶಾಲ ಗಾಣಿಗ ಅವರ ಪತಿ ರಾಮಕೃಷ್ಣ ಗಾಣಿಗನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಸತ್ಯ ಬಾಯಿ ಬಿಟ್ಟಿದ್ದ. 6 ತಿಂಗಳ ಹಿಂದೆಯೇ ಸಂಚು: ಪತ್ನಿ ವಿಶಾಲಾರನ್ನು ಕೊಲೆ ಮಾಡಬೇಕೆಂದು ಸಂಚು ರೂಪಿಸಿದ್ದ ರಾಮಕೃಷ್ಣ ಗಾಣಿಗ ಇದಕ್ಕಾಗಿ ಆರು ತಿಂಗಳ ಹಿಂದೆಯೇ ದುಬೈನಲ್ಲಿ ಕುಳಿತು ಸಂಚು ರೂಪಿಸಿದ್ದ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬ್ರಹ್ಮಾವರ ಸಮೀಪದ ಕುಮ್ರಗೋಡು ಮಿಲನ ರೆಸಿಡೆನ್ಸಿಯಲ್ಲಿ ನಡೆದ ವಿಶಾಲ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಆಕೆಯ ಪತಿ ಬಿಜೂರು ಚಾರುಕೊಡ್ಲು ನಿವಾಸಿ ರಾಮಕೃಷ್ಣ ಗಾಣಿಗನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತಪದ್ಮನಾಭ ಅವರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ತನಿಕೆಗಾಗಿ ಆರೋಪಿಯನ್ನು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಇದರೊಂದಿಗೆ ಓರ್ವ ಸುಪಾರಿ ಕಿಲ್ಲರ್ನನ್ನು ಕೂಡ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಮಕೃಷ್ಣ ಗಾಣಿಗ ಇಬ್ಬರು ಉತ್ತರ ಪ್ರದೇಶ ಮೂಲದ ಇಬ್ಬರು ಸುಪಾರಿ ಕಿಲ್ಲರ್ಗಳಿಗೆ ಪತ್ನಿಯನ್ನು ಕೊಲೆ ಮಾಡುವಂತೆ ಸುಪಾರಿ ನೀಡಿದ್ದು ತನಿಕೆಯಲ್ಲಿ ಬಯಲಾಗಿದ್ದು ಅದರಂತೆ ಇಬ್ಬರು ಸುಪಾರಿ ಕಿಲ್ಲರ್ಗಳು ಈ ಕೃತ್ಯ ಎಸಗಿರುವುದು ಪೊಲೀಸರ ಪ್ರಾಥಮಿಕ ತನಿಕೆಯಲ್ಲಿ ತಿಳಿದುಬಂದಿದೆ. ಪತಿ ಪತ್ನಿಯರ ಮಧ್ಯೆ ಇದ್ದ ವಿರಸವೇ ಕೊಲೆಗೆ ಪ್ರಮುಖ ಕಾರಣವೆಂಬುದು ತನಿಕೆಯಲ್ಲಿ ತಿಳಿದುಬಂದಿದೆ. ಪತ್ನಿಯ ಅಂತ್ಯ ಸಂಸ್ಕಾರಕ್ಕೆಂದು ದುಬೈನಿಂದ ಊರಿಗೆ ಬಂಧಿದ್ದ ರಾಮಕೃಷ್ಣ ಗಾಣಿಗನ್ನು ಪೊಲೀಸರು…
ಕುಂದಾಪ್ರ ಡಾಟ್ ಕಾಂ ವರದಿ. ಕೊಲ್ಲೂರು: ಪ್ರಸಿದ್ಧ ಕೊಡಚಾದ್ರಿ ಬೆಟ್ಟಕ್ಕೆ ಚಾರಣ ಕೈಗೊಳ್ಳುವವರಿಗೆ ಪ್ರವೇಶ ಶುಲ್ಕವೇ ದುಬಾರಿಯಾಗಿರುವುದು ಚಾರಣಪ್ರಿಯರ ನಿದ್ದೆಗೆಡಿಸಿದೆ. ಚಾರಣದ ದರ ದುಪ್ಪಟ್ಟು ಜೊತೆಗೆ ಕ್ಯಾಮರಾ ಕೊಂಡೊಯ್ಯುವವರಿಗೂ ಹೆಚ್ಚಿನ ದರ ನಿಗದಿಪಡಿಸಲಾಗಿದೆ. ಪಶ್ಚಿಮಘಟ್ಟ ಪರಿಸರ ಸೂಕ್ಷ್ಮ ಪ್ರದೇಶವಾದ ಕೊಡಚಾದ್ರಿಯು ಕುದುರೆಮುಖ ವನ್ಯಜೀವಿ ಅರಣ್ಯ ವಿಭಾಗದ ಕೊಲ್ಲೂರು ವನ್ಯಜೀವಿ ಇಲಾಖಾ ವ್ಯಾಪ್ತಿಯಲ್ಲಿದ್ದು ಎಪ್ರಿಲ್ 1ರಿಂದಲೇ ಜಾರಿಯಾಗುವಂತೆ ಚಾರಣ ಶುಲ್ಕವನ್ನು ಪರಿಷ್ಕರಿಸಲಾಗಿದೆ. ಕಟ್ಟಿನಹೊಳೆಯ ಚೆಕ್’ಪೋಸ್ಟ್ ಮೂಲಕ ವಾಹನದಲ್ಲಿ ಕೊಡಚಾದ್ರಿಗೆ ತೆರಳುವ ವಯಸ್ಕ ಪ್ರವಾಸಿಗರಿಗೆ 50 ರೂ. ಮಕ್ಕಳಿಗೆ 25 ರೂ. ಶುಲ್ಕ ನಿಗದಿಪಡಿಸಲಾಗಿದೆ. ಹಿಡ್ಲುಮನೆ ಹಾಗೂ ವಳೂರು ಮೂಲಕ ಕೊಡಚಾದ್ರಿಗೆ ಹೋಗುವ ವಯಸ್ಕರು 100 ರೂ., ಮಕ್ಕಳಿಗೆ 50 ರೂ. ಶುಲ್ಕ ಹಾಗೂ ಕಟ್ಟಿನಹೊಳೆ, ಹಿಡ್ಲುಮನೆ ಮಾರ್ಗದ ಮೂಲಕ ಪಯಣ ಬೆಳೆಸುವ ವಿದೇಶಿಯರಿಗೆ 400 ರೂ. ಶುಲ್ಕ ನಿಗದಿಪಡಿಸಲಾಗಿದೆ. ಇನ್ನು ಟ್ರೆಕ್ಕಿಂಗ್ ಕೈಗೊಳ್ಳುವವರಿಗೆ ತಲಾ 300 ರೂ. ಶುಲ್ಕ ನಿಗದಿಪಡಿಸಲಾಗಿದೆ. ವಾಹನದ ಪ್ರತಿ ಟ್ರಿಪ್ಪಿಗೆ 100 ರೂ ನಿಗದಿಪಡಿಸಲಾಗಿದ್ದು, ಗೈಡ್ ಅವಶ್ಯಕತೆ ಇದ್ದರೆ…
ಸುನಿಲ್ ಹೆಚ್. ಜಿ. | ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ಕೋವಿಡ್ ಕಾಲದ ಸಂಕಷ್ಟದ ಕಥೆಗಳ ನಡುವೆ ಯುವಕರ ತಂಡವೊಂದು ನಿರಂತರ ಅರಿವು ಮೂಡಿಸುತ್ತಾ, ನೆರವು ನೀಡುತ್ತಾ ಗ್ರಾಮದ ಜನರು ಹಾಗೂ ಕೋವಿಡ್ ಪೀಡಿತರಿಗಾಗಿ ಅವಿರತವಾಗಿ ಶ್ರಮಿಸುತ್ತಿದೆ. ಬೈಂದೂರು ತಾಲೂಕಿನ ಶಿರೂರು ಗ್ರಾಮ ಅತ್ಯಧಿಕ ಕೋವಿಡ್ ಕೇಸ್ಗಳಿಂದ ಸುದ್ದಿಮಾಡಿದ ಹೊತ್ತಿನಲ್ಲಿಯೇ ಗ್ರಾಮದ ಯುವ ಪಡೆಯೊಂದು ಜನರ ರಕ್ಷಣೆಗೆ ನಿಂತಿದೆ. ಶಿರೂರಿನ ಅನಿವಾಸಿ ಭಾರತೀಯ ಉದ್ಯಮಿ ಮಣಿಗಾರ್ ಮೀರಾನ್ ಸಾಹೇಬ್ ಅವರ ಮುತುವರ್ಜಿಯಲ್ಲಿ, ಶಿರೂರು ಅಸೋಶಿಯೇಷನ್, ಗ್ರಾಮ ಪಂಚಾಯತ್, ಆರೋಗ್ಯ ಇಲಾಖೆ ಸಹಕಾರದಲ್ಲಿ ಯುವ ಪತ್ರಕರ್ತ ಅರುಣ್ ಕುಮಾರ್ ಶಿರೂರು ಮುಂದಾಳತ್ವದಲ್ಲಿ ಲಾಕ್’ಡೌನ್ ಸಂದರ್ಭದಲ್ಲಿ ಕೋವಿಡ್ ಎದುರಿಸಲು ದಿಟ್ಟ ಪ್ರಯತ್ನ ನಡೆಸಿ ಯಶಸ್ಸು ಕಾಣುತ್ತಿದೆ. ಶಿರೂರು ಗ್ರಾಮ ಪಂಚಾಯತ್ ಸದಸ್ಯರುಗಳಾದ ಉದಯ ಪೂಜಾರಿ, ಶಲೀಕ್ ಮೊಹಮ್ಮದ್ ಹಾಗೂ ಮುಕ್ರಿ ಅಲ್ತಾಫ್ ಅವರನ್ನೊಳಗೊಂಡ 10ಕ್ಕೂ ಅಧಿಕ ಯುವಕರ ತಂಡ ಈ ನಿಸ್ವಾರ್ಥ ಸೇವೆಯಲ್ಲಿ ತೊಡಗಿಕೊಂಡಿದೆ. ನಿರಂತರ ಅರಿವು ನೆರವು: ಶಿರೂರು ಗ್ರಾಮದಲ್ಲಿ ಆರೋಗ್ಯ…
ಸುನಿಲ್ ಹೆಚ್. ಜಿ. | ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಲಾಕ್ಡೌನ್ನಿಂದಾಗಿ ಊಟ – ಉಪಹಾರಕ್ಕೆ ಸರಿಯಾದ ಹೋಟೆಲ್ಗಳು ಸಿಗದೆ ತೊಂದರೆ ಅನುಭವಿಸುತ್ತಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಲಾರಿ, ಟ್ರಕ್ಗಳ ಚಾಲಕರ ಹಸಿವು ತಣಿಸುವ ಕಾರ್ಯದಲ್ಲಿ ಕುಂದಾಪುರದ ತಾಲೂಕು ಸೇವಾಭಾರತಿ ಸಂಸ್ಥೆಯ ಕಾರ್ಯಕರ್ತರು ಎರಡು ವಾರಗಳಿಂದ ನಿರಂತರವಾಗಿ ತೊಡಗಿಕೊಂಡಿದ್ದಾರೆ. ಸೇವಾ ಭಾರತಿ ಸಂಸ್ಥೆಯ ಮೂಲಕ ನಿತ್ಯವೂ ಮಧ್ಯಾಹ್ನದ ಹೊತ್ತಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಗೂಡ್ಸ್ ವಾಹನಗಳು ಹಾಗೂ ಅಂಬ್ಯುಲೆನ್ಸ್ ಚಾಲಕರಿಗೆ ಉಚಿತ ಊಟ ಪೊಟ್ಟಣ ಹಾಗೂ ನೀರಿನ ಬಾಟಲಿಗಳನ್ನು ವಿತರಿಸಲಾಗುತ್ತಿದೆ. ಪ್ರತಿನಿತ್ಯ ಮಧ್ಯಾಹ್ನ ತೆಕ್ಕಟ್ಟೆ ಹಾಗೂ ಕೋಟೇಶ್ವರ ಭಾಗದಲ್ಲಿ ಎರಡು ತಂಡಗಳನ್ನು ಮಾಡಿಕೊಂಡು ಊಟ ವಿತರಿಸಲಾಗುತ್ತಿದೆ. ಆರಂಭದಲ್ಲಿ 100 ಊಟದ ಪೊಟ್ಟಣ ಖಾಲಿಯಾದರೆ ಈಗ 300 ರಿಂದ 350 ಊಟದ ಪೊಟ್ಟಣಗಳನ್ನು ಮಾಡಿ ವಿತರಿಸಲಾಗುತ್ತಿದೆ. ಕಳೆದ ಎರಡು ವಾರಗಳಿಂದ ಸೇವಾ ಭಾರತಿ ನಡೆಸುತ್ತಿರುವ ಈ ಸೇವಾ ಕಾರ್ಯದಲ್ಲಿ ವಿವಿಧ ದಾನಿಗಳು ಕೈಜೋಡಿಸಿದ್ದು ಅಗತ್ಯವಿರುವ ಆರ್ಥಿಕ ಸಹಕಾರ, ಅಕ್ಕಿ, ತರಕಾರಿಗಳನ್ನು ನೀಡುತ್ತಿದ್ದಾರೆ.…
ಸುನಿಲ್ ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಸಾಹಸಕ್ಕೆ ಹೆಸರಾದ ಕೊಂಕಣಿ ಖಾರ್ವಿ ಜನಾಂಗವು ಹೋಳಿ ಹಬ್ಬವನ್ನು ಅತ್ಯಂತ ಶ್ರದ್ಧೆ ಹಾಗೂ ಸಂಪ್ರದಾಯಬದ್ಧವಾಗಿ ಆಚರಿಸುತ್ತಾ ಬಂದಿದ್ದಾರೆ. ಈ ಸಮುದಾಯದ ಬಂಧುಗಳು ಬಣ್ಣದ ಓಕುಳಿಯಲ್ಲಿ ವಿಂದೇಳುವ ಮೊದಲು ವಾರಗಳ ಕಾಲ ಹಿಂದಿನ ಕಟ್ಟುಪಾಡುಗಳನ್ನು ಕ್ರಮಬದ್ಧವಾಗಿ ಆಚರಿಸುತ್ತಾ, ಇಂದಿಗೂ ಮುಂದುವರಿಸಿಕೊಂಡು ಬಂದಿದ್ದಾರೆ. ಕುಂದಾಪುರ ಹಾಗೂ ಗಂಗೊಳ್ಳಿ ಭಾಗದಲ್ಲಿ ನೆಲೆಸಿರುವ ಕೊಂಕಣಿ ಭಾಷಿಕ ಖಾರ್ವಿ ಸಮುದಾಯದ ಬಹುದೊಡ್ಡ ಹಬ್ಬ ಹೋಳಿ. ಸಮಾಜದ ಏಳಿಗೆಗೆ ಈ ಸಂಪ್ರದಾಯವನ್ನು ಶ್ರದ್ಧೆ ಹಾಗೂ ಭಕ್ತಿಯಿಂದ ಆಚರಿಸಬೇಕೆಂಬುದನ್ನು ಈ ಜನಾಂಗದ ಪ್ರತಿಯೊಬ್ಬರೂ ಬಲವಾಗಿ ನಂಬಿದ್ದಾರೆ. ಅದರಂತೆಯೇ ಶಿವರಾತ್ರಿಯ ಬಳಿಕ ಹೊಳಿ ಹಬ್ಬದ ತಯಾರಿಗಳು ನಡೆಯುತ್ತದೆ. ಕುಂದಾಪುರದ ಕೊಂಕಣಿ ಖಾರ್ವಿ ಜನಾಂಗದವರು ಊರಿನ ಅಧಿದೇವರಾದ ಶ್ರೀ ಕುಂದೇಶ್ವರನಿಗೆ ಪೂಜೆ ಸಲ್ಲಿಸಿ ದೇವರಿಂದ ಆಜ್ಞಾಪನೆ ದೊರೆತ ಬಳಿಕ ಸಮುದಾಯದ ಪ್ರತಿ ಮನೆಯಲ್ಲಿಯೂ ಹೋಳಿ ಹಬ್ಬದ ವಿಧಿ-ವಿಧಾನಗಳಿಗೆ ಚಾಲನೆ ದೊರೆಯುತ್ತದೆ. ಈ ಸಂದರ್ಭದಲ್ಲಿ ಮನೆ ಮನೆಗೆ ತೆರಳುವ ಸಮುದಾಯದ ಪುರುಷರು ಗುಮಟೆ ಬಾರಿಸುತ್ತಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕಮಲಶಿಲೆ: ತಾಲೂಕಿನ ಪ್ರಸಿದ್ದ ಕಮಲಶಿಲೆ ಶ್ರೀ ಬ್ರಾಹ್ಮೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಪ್ರಸಿದ್ಧ ಅರೆಕಾ ಟೀ ಸಂಸ್ಥೆಯ ಸಂಸ್ಥಾಪಕ, ಯುವ ಉದ್ಯಮಿ ನಿವೇದನ್ ನೆಂಪೆ ಭೇಟಿ ನೀಡಿ ಶ್ರೀ ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ತಮ್ಮ ಕುಟುಂಬಿಕರೊಂದಿಗೆ ದೇವಳಕ್ಕೆ ಭೇಟಿ ನೀಡಿದ ನಿವೇದನ್ ಅವರನ್ನು ದೇವಸ್ಥಾನ ಆಡಳಿತ ಮಂಡಳಿ ವತಿಯಿಂದ ಗೌರವಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಿರ್ದೇಶಕ, ನಟ ರಿಷಬ್ ಶೆಟ್ಟಿ ನಾಯಕರಾಗಿ ನಟಿಸುತ್ತಿರುವ ‘ಹರಿಕಥೆ ಅಲ್ಲ ಗಿರಿಕಥೆ’ ಸಿನೆಮಾದ ಹಾಡಿನ ಚಿತ್ರೀಕರಣ ಕುಂದಾಪುರ, ಮರವಂತೆ ಹಾಗೂ ಬೈಂದೂರು ಭಾಗದಲ್ಲಿ ನಡೆದಿದೆ. ಮೈಸೂರು ಮಡಿಕೇರಿಯನ್ನು ಮುಗಿಸಿ ಪ್ರಮುಖ ಊರುಗಳಲ್ಲಿ ಹಾಡು ಹಾಗೂ ಚಿತ್ರದ ಕೆಲವು ಸೀನ್ಗಳ ಚಿತ್ರೀಕರಣ ನಡೆಯಿತು. ಸಂದೇಶ್ ನಾಗರಾಜ್ ಅವರ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ರಿಷಬ್ ಶೆಟ್ಟಿ ಫಿಲಂಸ್ ಸಹಯೋಗದೊಂದಿಗೆ ನಿರ್ಮಿಸುತ್ತಿರುವ, ಕರಣ್ ಅನಂತ್ ಹಾಗೂ ಅನಿರುದ್ಧ್ ಮಹೇಶ್ ಜಂಟಿಯಾಗಿ ನಿರ್ದೇಶಿಸುತ್ತಿದ್ದಾರೆ. ಗಿರಿಕೃಷ್ಣ ಕಥೆ ಹಾಗೂ ರಿಷಬ್ ಶೆಟ್ಟಿ, ಅನಿರುದ್ಧ್ ಮಹೇಶ್, ಕರಣ್ ಅನಂತ್ ಚಿತ್ರಕಥೆ ಬರೆದಿರುವ ಈ ಚಿತ್ರಕ್ಕೆ, ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಚಂದ್ರಶೇಖರನ್, ರಂಗನಾಥ್ ಸಿ.ಎಂ ಛಾಯಾಗ್ರಹಣ, ಪ್ರಗತಿ ರಿಷಬ್ ಶೆಟ್ಟಿ ವಸ್ತ್ರ ವಿನ್ಯಾಸ ಹಾಗೂ ರಿತ್ವಿಕ್ ಅವರ ಸಂಕಲನ ಮಾಡುತ್ತಿದ್ದಾರೆ. ಪ್ರಮೋದ್ ಶೆಟ್ಟಿ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರಿಷಬ್ ಶೆಟ್ಟಿ ಅವರು ನಾಯಕನಾಗಿ ನಟಿಸುತ್ತಿರುವ ಮೂರನೇ ಸಿನಿಮಾ ಇದಾಗಿದು, ಈ ಸಿನಿಮಾದಲ್ಲಿ ರಿಷಭ್…
