ಬೈಂದೂರು: ಕಲ್ಲೆದೆಯನ್ನೂ ಕರಗಿಸುವ, ದ್ವೇಷವನ್ನು ದಹಿಸುವ ಶಕ್ತಿ ಇರುವುದು ಕಲೆಗೆ ಮಾತ್ರ. ಕಲಾಕಾರರು ಆನಂದದ ಲಹರಿಯನ್ನು ಹರಿಸಿ, ಪ್ರೀತಿಯನ್ನು ಬಿತ್ತುವ ಶಾಂತಿದೂತರು ಎಂದು ಬೈಂದೂರು ರತ್ತೂಬಾಯಿ ಹೈಸ್ಕೂಲ್ ನ ಮುಖ್ಯೋಪಧ್ಯಾಯ ಜಿ. ಎಸ್. ಭಟ್ ಹೇಳಿದರು. ಅವರು ಬೈಂದೂರು ರಥೋತ್ಸವದ ಅಂಗವಾಗಿ ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಕಲಾ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಆಯೋಜಿಸಿರುವ ‘ಸುರಭಿ ಕಲಾಸಿರಿ’ ಸಾಂಸ್ಕೃತಿಕ ವೈಭವದಲ್ಲಿ ಮೂರನೇ ದಿನ ಜರುಗಿದ ಯಕ್ಷೋತ್ಸವದ ಸಭಾ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದರು. ಎಲ್ಲಿ ಕಲೆ, ಸಾಹಿತ್ಯ, ಸಂಗೀತಕ್ಕೆ ಪ್ರೋತ್ಸಾಹ ಸಿಗುವುದಿಲ್ಲವೋ ಅಲ್ಲಿ ಅದರ ಉಳಿವು ಸಾಧ್ಯವಿಲ್ಲ. ಬೈಂದೂರಿನ ಸುರಭಿ ಸಂಸ್ಥೆಯು ಸತತವಾಗಿ ಕಲೆಯನ್ನು ಅರಳಿಸುವ ಕೆಲಸ ಮಾಡುತ್ತಿರುವುದು ಶ್ಲಾಘನಾರ್ಹ ಎಂದವರು ನುಡಿದರು. ಅತಿಥಿಯಾಗಿದ್ದ ಜಿ.ಪಂ. ಸದಸ್ಯೆ ಸುಪ್ರಿತಾ ದೀಪಕ್ ಶೆಟ್ಟಿ ಮಾತನಾಡಿ ಬೈಂದೂರಿನ ಸಾಂಸ್ಕೃತಿಕ ಲೋಕಕ್ಕೆ ಅನನ್ಯವಾದ ಕೊಡುಗೆಯನ್ನು ನೀಡಿರುವ ಸುರಭಿಯನ್ನು ಬೈಂದೂರಿನಿಂದ ಬೇರ್ಪಡಿಸಿ ನೋಡಲಾಗದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಮುಖ್ಯ ಅರಣ್ಯ…
Author: ಸುನಿಲ್ ಹೆಚ್. ಜಿ. ಬೈಂದೂರು
ಕುಂದಾಪುರ: ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಸುಧಾಕರ ವಕ್ವಾಡಿ ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರಾಂಶುಪಾಲ ಸಿ.ಸೀತಾರಾಮ ಮಧ್ಯಸ್ಥ ಅವರಿಂದ ತೆರವಾದ ಸ್ಥಾನಕ್ಕೆ ನಿಯುಕ್ತರಾದ ಅವರು ಹೆಮ್ಮಾಡಿ ಶ್ರೀ.ವಿ.ವಿ.ವಿ. ಮಂಡಳಿಯ ಅಧ್ಯಕ್ಷ, ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಅವರಿಂದ ನೇಮಕಗೊಂಡಿದ್ದಾರೆ. ಸುಧಾಕರ ವಕ್ವಾಡಿ ಅವರು ಹೆಮ್ಮಾಡಿ ಕಾಲೇಜಿನ ಸ್ಥಾಪಕ ಉಪನ್ಯಾಸಕರಾಗಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕರಾಗಿ ೧೯ ವರ್ಷಗಳ ಸೇವಾ ಅನುಭವ ಪಡೆದಿದ್ದಾರೆ. ರಂಗ ನಿರ್ದೇಶಕ, ನಟನಾಗಿ ರಾಷ್ಟ್ರಮಟ್ಟದವರೆಗೂ ಕನ್ನಡ ಸೇರಿದಂತೆ ಹಿಂದಿ, ಆಂಗ್ಲ ಭಾಷೆಯ ನಾಟಕ ಸ್ವರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದಿರುತ್ತಾರೆ.೧೯೯೬ ರಲ್ಲಿ ತೆರೆಕಂಡ ಕುಂದಾಪುರದ ದಲಿತ ಕವಿ ಕೆ.ಕೆ.ಕಾಳಾವರ್ಕರ್ ಅವರ ತುಳು ಚಲನಚಿತ್ರ ‘ಕಾಲ’ ದಲ್ಲಿ ಕಲಾತ್ಮಕ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿದ್ದ ಅವರು ಪತಂಜಲಿ ಹಾಗೂ ಜ್ಞಾನ ವಿಕಾಸ ಕೇಂದ್ರದಲ್ಲಿ ಸಿದ್ಧ ಯೋಗ ಸಾಧಕರಾಗಿರುತ್ತಾರೆ.
ಕುಂದಾಪುರ: ತಾಲೂಕಿನ ಮಲೆನಾಡು ಪ್ರಾಂತ್ಯದಲ್ಲಿ ಶನಿವಾರ ಮಧ್ಯಾಹ್ನ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಒಂದುವರೆ ತಾಸಿಗೂ ಮಿಕ್ಕಿ ಸುರಿದ ಭಾರಿ ಮಳೆಗೆ ಜನಜೀವನ ತತ್ತರಿಸಿದೆ. ಅಮಾಸೆಬೆಲು, ಹಾಲಾಡಿ, ಶಂಕರನಾರಾಯಣ, ಬೆಳ್ವೆ ಸುತ್ತಮುತ್ತಲ ಪ್ರದೇಶಗಳಲ್ಲಿ ಮಳೆ ಸುರಿದಿದೆ. ಗಾಳಿಮಳೆಯ ಅಬ್ಬರಕ್ಕೆ ಮರಮಟ್ಟುಗಳು ಧರೆಗುರುಳಿದ್ದು ವಿದ್ಯುತ್, ದೂರವಾಣಿ ಸಂಪರ್ಕ ಕಡಿತಗೊಂಡಿದೆ. ಬಿರುಗಾಳಿ ಅಬ್ಬರ-ಸಂಚಾರ ಮೊಟಕು: ಹಾಲಾಡಿ ಸಮೀಪದ ಮುಂಡಕೋಡು ಸನಿಹದ ಬಾಕುಡಿಹೊಲ ರಕ್ಷಿತಾರಣ್ಯ ವ್ಯಾಪ್ತಿಯ ಪ್ರದೇಶಗಳಲ್ಲಿ ಬಿರುಗಾಳಿ ಅಬ್ಬರದಿಂದ ಬೆಲೆಬಾಳುವ ಮರಗಿಡಗಳು ಅರ್ಧಕ್ಕೆ ಮುರಿದು ಬಿದ್ದಿವೆ. ಹಾಲಾಡಿ-ಮುಂಡಕೋಡು ನಡುವೆ ಭಾರಿ ಗಾತ್ರದ ಮರ ರಸ್ತೆಗೆ ಉರುಳಿದ್ದರಿಂದ ಹಾಲಾಡಿ-ಅಮಾಸೆಬೆಲು ನಡುವೆ ಕೆಲಹೊತ್ತು ಸಂಚಾರ ಮೊಟಕುಗೊಂಡಿತು. ಮುಂಡಕೋಡು, ಬಾಕುಡಿಹೊಲ, ಹೊರ್ಲಿಜೆಡ್ಡು ಪ್ರದೇಶ ವ್ಯಾಪ್ತಿಯಲ್ಲಿ ಭಾರಿ ಪ್ರಮಾಣದಲ್ಲಿ ಮರಗಳು ಮುರಿದುಬಿದ್ದಿವೆ. ಅಲ್ಲಿ ಮಳೆ ಇಲ್ಲಿ ಬಿರುಬಿಸಿಲು : ತಾಲೂಕಿನ ಮಲೆನಾಡು ಪ್ರಾಂತ್ಯದಲ್ಲಿ ವ್ಯಾಪಕ ಮಳೆಯಾಗಿದ್ದರೆ ಕರಾವಳಿಯಲ್ಲಿನ ಬಿರುಬಿಸಿಲು ನಾಗರಿಕರನ್ನು ಕಂಗೆಡಿಸುವಂತೆ ಮಾಡಿದೆ.
ಕುಂದಾಪುರ: ಎರಡು ದಿನಗಳಿಂದ ನಾಪತ್ತೆಯಾಗಿದ್ದ ಗುಜ್ಜಾಡಿ ನಿವಾಸಿ ಚಂದ್ರ ದೇವಾಡಿಗ (39) ಶನಿವಾರ ಬೆಳಗ್ಗೆ 10.30ರ ಸುಮಾರಿಗೆ ಮನೆ ಸಮೀಪದ ಅಕೇಶಿಯಾ ಹಾಡಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ. ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನೆಯ ವಿವರ: ಕೃಷಿ ಕೂಲಿಕಾರರಾಗಿರುವ ಚಂದ್ರ ದೇವಾಡಿಗ ಎಂದಿನಂತೆ ತನ್ನಿಬ್ಬರು ಮಕ್ಕಳಾದ ಕಿರಣ್ ಮತ್ತು ಅರುಣ್ ಅವರೊಂದಿಗೆ ಏ. 23ರಂದು ಗೇರುಬೀಜ ಹೆಕ್ಕಲು ಪಕ್ಕದ ಗೇರು ಹಾಡಿಗೆ ಹೋಗಿದ್ದರು. ಮಧ್ಯಾಹ್ನದ ವೇಳೆ ಮಕ್ಕಳನ್ನು ಮನೆಗೆ ಹೋಗುವಂತೆ ತಿಳಿಸಿ ಕೆಲಸ ಮುಂದುವರಿಸಿದ್ದರು. ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಗಾಬರಿಗೊಳಗಾದ ಪತ್ನಿ, ಮಕ್ಕಳು, ಮನೆಯವರು ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಏ.24ರಂದು ಗಂಗೊಳ್ಳಿ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದರು. ಶನಿವಾರ ಗೇರು ಹಾಡಿ ಸಮೀಪದ ಅಕೇಶಿಯಾ ಪ್ಲಾಂಟೇಶನ್ನಲ್ಲಿ ದುರ್ವಾ ಸನೆ ಹಬ್ಬಿದ್ದು ಸ್ಥಳೀಯರು ನೋಡುವಾಗ ಚಂದ್ರ ದೇವಾಡಿಗ ಹೆಣವಾಗಿದ್ದರು. ಬಡಕುಟುಂಬ ಕಂಗಾಲು: ಪತ್ನಿ ಪ್ರೇಮ, ಸಹೋದರಿ ಸರೋಜಾ, ತಾಯಿ ಗಂಗಾ ದೇವಾಡಿಗ, ಮಕ್ಕಳಾದ ಕಿರಣ್ (9ನೇ ತರಗತಿ) ಮತ್ತು ಅರುಣ್…
ಉಡುಪಿ: ಗೆಳತಿಯನ್ನು ಕೂರಿಸಿಕೊಂಡು ಎಂಐಟಿ ವಿದ್ಯಾರ್ಥಿ ಬೈಕಲ್ಲಿ ಹೋಗುತ್ತಿದ್ದಾಗ ರಸ್ತೆ ವಿಭಾಜಕ ಮತ್ತು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿದ್ದು, ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ. ಮಣಿಪಾಲ ಖಾಸಗಿ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದುಕೊಂಡು ಎಂಐಟಿಯಲ್ಲಿ ಕಲಿಯುತ್ತಿದ್ದ ಉತ್ತರ ಭಾರತದ ಉದಿತ್ ಜೈಸ್ವಾಲ್ (22) ಮೃತ ವಿದ್ಯಾರ್ಥಿ. ಆತನ ಗೆಳತಿ ವಿದ್ಯಾರ್ಥಿನಿ ನತಾಸ್ ಅಲಿಸಾ ಡಯಾಸ್ (22) ಗಂಭೀರ ಗಾಯಗೊಂಡವಳು. ಭಾನುವಾರ ಆಗಿದ್ದರಿಂದ ತರಗತಿಗೆ ರಜೆಯಾಗಿದ್ದು, ಸಂಜೆ ಹೊತ್ತಿಗೆ ಗೆಳತಿಯನ್ನು ಕೂರಿಸಿಕೊಂಡು ಮಣಿಪಾಲ ಟೈಗರ್ ಸರ್ಕಲ್ನಿಂದ ಉಡುಪಿ ಕಡೆಗೆ ಹೊರಟಿದ್ದಾರೆ. ಜಾಲಿರೈಡ್ ಮೂಡಿನಲ್ಲಿ ಅತಿವೇಗದಲ್ಲಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಟೈಗರ್ ಸರ್ಕಲ್ನ ಸಮೀಪದಲ್ಲಿಯೇ ಡಿವೈಡರ್ ಮತ್ತು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಯುವಕನ ತಲೆ ಒಡೆದು ಹೋಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದಾನೆ. ಯುವತಿ ಗಾಯಗೊಂಡು ಅರಚುತ್ತಿದ್ದು, ಕೂಡಲೇ ಇಬ್ಬರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಯುವಕ ಅಷ್ಟೊತ್ತಿಗೆ ಮೃತಪಟ್ಟಿದ್ದಾನೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರದ ಸಮುದಾಯ ಸಾಂಸ್ಕೃತಿಕ ಸಂಘಟನೆಯು ಎಂಟುದಿನಗಳ ಮಕ್ಕಳ ಮೇಳವನ್ನು ಸಂಘಟಿಸಿ ಆ ಮೇಳದ ಮಕ್ಕಳಿಂದಲೇ ನಾಟಕವನ್ನು ಆಡಿಸಿದೆ. ಮೇಳದ ಸಮಾರೋಪದಂದು ನಾಟಕ ಪ್ರದರ್ಶನ ನಡೆಯಿತು. ‘ನಕ್ಕಳಾ ರಾಜಕುಮಾರಿ’ ಸಮಯದ ಮಿತಿಯಲ್ಲಿ ತಯಾರಾದ ನಾಟಕವಾದರೂ ಮಕ್ಕಳ ಉತ್ಸಾಹ, ದೃಶ್ಯ ಜೋಡಣೆ ಮತ್ತು ಮಕ್ಕಳಿಂದ ಸಹಜ ಅಭಿನಯವನ್ನು ಬಳಸಿಕೊಳ್ಳುವಲ್ಲಿ ನಿರ್ದೇಶಕರು ತೋರಿದ ಜಾಣ್ಮೆ ನಾಟಕವನ್ನು ಸುಂದರ ಕಲಾಕೃತಿಯನ್ನಾಗಿಸಿತು. ಆಕಾಶವಾಣಿಯ ಚಿಣ್ಣರ ಚಿಲುಮೆ ಕಾರ್ಯಕ್ರಮಕ್ಕಾಗಿ ಮಕ್ಕಳ ನಾಟಕ ಮಾಡಿಸಲು ಹೊರಟ ರಂಗಕರ್ಮಿ ಎಂ ಅಬ್ದುಲ್ ರಹಮಾನ್ ಪಾಷಾ ಮಕ್ಕಳ ಜೊತೆ ಕೆಲಸಮಾಡುತ್ತಾ, ಮಕ್ಕಳ ಸಹಾಯದಿಂದಲೇ ರಚಿಸಿದ ನಾಟಕವಿದು. ಈ ನಾಟಕಕ್ಕೆ ಹೆಸರಿಟ್ಟದ್ದು ಕೂಡಾ ಮಕ್ಕಳೇ! ನಾಟಕದ ಮುಖ್ಯ ಪಾತ್ರಗಳಾದ ಎಂಕ, ಸೀನ ಮತ್ತು ನೊಣ ಹಳ್ಳಿಯ ಶ್ರಮಿಕ ಸಂಸ್ಕೃತಿಯನ್ನು ಪ್ರತಿನಿಧಿಸುತ್ತಾರೆ. ರಕ್ತ ಮಾಂಸಗಳ ಜೊತೆ ಹಸಿವು, ಮುಗ್ಧತೆಗಳನ್ನೂ ದೇಹಕ್ಕೆ ಮೆತ್ತಿಕೊಂಡಂತಿರುವ ಈ ಪಾತ್ರಗಳು ಕೆಟ್ಟ ಪ್ರಭುತ್ವದಿಂದ ಬವಣೆಗೊಳಗಾಗಿ ಮನೆಯಿಂದ ಹೊರಹಾಕಲ್ಪಟ್ಟವರು. ನಗದ ರಾಜಕುಮಾರಿಯನ್ನು ಸಂತೋಷ ಪಡಿಸಿ ಅವಳನ್ನು ನಗಿಸಿದವರಿಗೆ ದೊಡ್ಡ ಬಹುಮಾನ ದೊರೆಯುವುದೆಂಬ ಡಂಗುರದ ಘೋಷಣೆಯನ್ನು…
ಮಕ್ಕಳಿಗೆ ಬೇಸಿಗೆ ರಜೆ ಆರಂಭವಾಗುತ್ತಿದ್ದಂತೆಯೇ ಸಮ್ಮರ್ ಕ್ಯಾಂಪು, ಟ್ರೆನಿಂಗು, ಕೋಚಿಂಗ್ ಎಂದು ಮತ್ತೊಂದು ಬಗೆಯಲ್ಲಿ ತರಗತಿಗಳು ಆರಂಭಗೊಂಡುಬಿಡುತ್ತದೆ. ಎಲ್ಲಾ ಒತ್ತಡಗಳಿಂದ ಮುಕ್ತರಾಗಿ ಒಂದೆರಡು ತಿಂಗಳು ಅಜ್ಜಿ ಮನೆಯಲ್ಲೊ ಅಥವಾ ಮತ್ಯಾರೋ ಬಂಧು-ಸ್ನೇಹಿತರೊಂದಿಗೋ ಬಾಲ್ಯದ ಸವಿಯನ್ನು ಸವಿಯೋದಕ್ಕೂ ಬಿಡದೇ ಮತ್ತೆ ಬೋರ್ಡು, ಬ್ರಷ್ಗಳ ಮುಂದೆ ತಂದು ಕೂರಿಸುವ ಕಾರ್ಯಕ್ರಮಗಳಿಗೆ ಬರವಿಲ್ಲ. ಅಂಥಹದರಲ್ಲಿ ಅಲ್ಲೊಂದು ಇಲ್ಲೊಂದು ಎಂಬಂತೆ ಕೆಲವೊಂದು ಸಂಘ ಸಂಸ್ಥೆಗಳು ಮಕ್ಕಳನ್ನು ಮಕ್ಕಳನ್ನಾಗಿ ನೋಡಿ, ಅವರು ಆಡುತ್ತಾ, ಓಡುತ್ತಾ, ಕುಣಿದು ಕುಪ್ಪಳಿಸುತ್ತಾ ಕಲಿಯುವಂತೆ ಮಾಡಿ ಬಾಲ್ಯವನ್ನು ಬೆರಗುಗಣ್ಣಿನಿಂದ ನೋಡುವಂತೆ ಮಾಡುವಲ್ಲಿ ಶ್ರಮಿಸಿ ಯಶಸ್ಸನ್ನೂ ಕಾಣುತ್ತದೆ. ಇಲ್ಯಾರು ಮೇಷ್ಟ್ರುಗಳಾಗೊದಕ್ಕೆ ಬಯಸೊಲ್ಲ ಬದಲಿಗೆ ಮಕ್ಕಳದೇ ಪ್ರಪಂಚದಲ್ಲಿ, ಮಕ್ಕಳೊಂದಿಗೆ ಮಕ್ಕಳಾಗಿ ಒಂದಿಷ್ಟು ಕಲಿಸಿ, ಕಲಿತು ನಿಜಾರ್ಥದಲ್ಲಿ ಶಿಬಿರವನ್ನು ಸಾರ್ಥಕ್ಯಗೊಳಿಸುವ ನಿಸ್ವಾರ್ಥ ಪ್ರಯತ್ನ ಮಾಡಿತ್ತಾರೆ. ಹೌದು. ಕುಂದಾಪುರದ ‘ಸಮುದಾಯ’ ಸಾಂಸ್ಕೃತಿಕ ಸಂಘಟನೆಯು ಕೆಲವು ವರ್ಷಗಳಿಂದ ಆಯೋಜಿಸುತ್ತಾ ಬಂದಿರುವ ‘ರಂಗ ರಂಗು’ ಬೇಸಿಗೆ ಶಿಬಿರ ಈ ಭಾರಿಯೂ ಹಲವು ವಿಶೇಷತೆಗಳಿಂದ ಕೂಡಿತ್ತು. ವಡೇರಹೋಬಳಿ ಸ.ಹಿ.ಪ್ರಾ ಶಾಲೆಯಲ್ಲಿ ಕುಂದಾಪುರ ಜೆಸಿಐ ಸಿಟಿಯ…
ಕುಂದಾಪುರ: ಪರಸ್ಪರ ಗಾಢವಾಗಿ ಪ್ರೀತಿಸುತ್ತಿದ್ದ ಪರಿಶಿಷ್ಟ ಜಾತಿಯ ಯುವಕ ಮತ್ತು ಪರಿಶಿಷ್ಟ ಪಂಗಡ (ಕೊರಗ) ಯುವತಿಗೆ ಭಾನುವಾರ ತಾಲೂಕು ಕೊರಗ ಶ್ರೇಯೋಭಿವದ್ಧಿ ಸಂಘದ ನೇತತ್ವದಲ್ಲಿ ಭಾನುವಾರ ಕುಂಭಾಸಿ ಕೊರಗ ಕಾಲೋನಿಯ ಅಂಬೇಡ್ಕರ ಭವನದಲ್ಲಿ ಮದುವೆ ನೆರವೇರಿಸಲಾಯಿತು. ಪರಿಶಿಷ್ಟ ಜಾತಿಗೆ ಸೇರಿರುವ ಹೆಮ್ಮಾಡಿಯ ನಿವಾಸಿ ಅಚ್ಯುತ(27) ಹಾಗೂ ನಾಗೂರಿನ ಕೊರಗ ಯುವತಿ ಪುಷ್ಪಾ(21) ಸತಿಪತಿಗಳಾದರು. ಪುಷ್ಪಾ ಕುಂದಾಪುರ ಖಾಸಗಿ ಆಸ್ಪತ್ರೆಯೊಂದರಲ್ಲಿ ಉದ್ಯೋಗಿ ಯಾಗಿದ್ದು ಅಚ್ಯುತ ಗಾರೆವತ್ತಿ ಮಾಡಿಕೊಂಡಿದ್ದ. 4 ವರ್ಷದ ಹಿಂದೆ ಪರಸ್ಪರ ಭೇಟಿಯಾದ ಇವರು ಪ್ರೀತಿಸಲು ಆರಂಭಿಸಿದ್ದರು. ಮದುವೆಗೆ ಮನೆಯವರ ವಿರೋಧವಿತ್ತು. ಕೊರಗ ಸಂಘಟನೆಗಳ ಗಮನಕ್ಕೆ ವಿಷಯ ತಲುಪಿದ್ದು ಸಂಘಟನೆಯವರು ಪ್ರೇಮಿ ಗಳನ್ನು ಭೇಟಿ ಮಾಡಿ ಧೈರ್ಯ ತುಂಬಿ ಮದುವೆ ಮಾಡಿಸುವ ಭರವಸೆ ನೀಡಿದರು. ಅದರಂತೆ ಅಂಬೇಡ್ಕರ್ ಭವನದಲ್ಲಿ ಸರಳ ವಿವಾಹ ನೆರವೇರಿಸಲಾಯಿತು. ಸಂಪ್ರದಾಯಿಕವಾಗಿ ನಡೆದ ಈ ಸರಳ ವಿವಾಹದಲ್ಲಿ ವರ 101 ರೂಪಾಯಿಯನ್ನು ವಧುದಕ್ಷಿಣೆಯಾಗಿ ನೀಡಿದರು. ವಧುವರರನ್ನು ಡೋಲುವಾದನದ ಮೂಲಕ ಮದುವೆ ಮಂಟಪಕ್ಕೆ ಕರೆತರಲಾಯಿತು. ಮಾಂಗಲ್ಯ ಧಾರಣೆ ಬಳಿಕ ಶುಭ…
ಬೈಂದೂರು: ಇಂದು ಮಕ್ಕಳಿಗೆ ಅವಕಾಶಗಳು ವಿಪುಲವಾಗಿ ದೊರೆಯುತ್ತಿದ್ದು ಅದನ್ನು ಸದ್ಭಳಕೆ ಮಾಡಿಕೊಂಡಲ್ಲಿ ಭವಿಷ್ಯದಲ್ಲಿ ಯಶಸ್ಸನ್ನು ಕಾಣಬಹುದಾಗಿದೆ ಎಂದು ಬೈಂದೂರು ಜೀವ ವಿಮಾ ಅಧಿಕಾರಿ ಸೋಮನಾಥನ್ ಆರ್ ಹೇಳಿದರು. ಅವರು ಬೈಂದೂರು ರಥೋತ್ಸವದ ಅಂಗವಾಗಿ ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಕಲಾ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಆಯೋಜಿಸಿರುವ ‘ಸುರಭಿ ಕಲಾಸಿರಿ’ ಸಾಂಸ್ಕೃತಿಕ ವೈಭವದಲ್ಲಿ ಜರುಗಿದ ರಂಗೋತ್ಸವದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಮಕ್ಕಳು ಎಲ್ಲಾ ಕ್ಷೇತ್ರದಲ್ಲಿಯೂ ಮುಂಚೂಣಿಯಲ್ಲಿದ್ದಾರೆ. ಇಂತಹ ಮಕ್ಕಳಿಗೆ ವೇದಿಕೆಯಾಗುವಲ್ಲಿ, ಕಲೆ, ಸಂಸ್ಕೃತಿ, ಸಾಹಿತ್ತಿಕವಾದ ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ಮುಂಚೂಣಿಯಲ್ಲಿರುವ ಸುರಭಿ ಬೈಂದೂರಿನ ಸಾಂಸ್ಕೃತಿಕ ರಾಯಭಾರಿಯಾಗಿದೆ ಎಂದವರು ಪ್ರಶಂಸಿಸಿದರು. ಬೈಂದೂರು ಗ್ರಾ.ಪಂ ಅಧ್ಯಕ್ಷ ಜನಾರ್ಧನ ಯು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸುರಭಿ ನಿರ್ದೇಶಕ ಸುಧಾಕರ ಪಿ. ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸುರಭಿಯ ಅಧ್ಯಕ್ಷ ಶಿವರಾಮ ಕೊಠಾರಿ ಸ್ವಾಗತಿಸಿ, ಕಾರ್ಯದರ್ಶಿ ಲಕ್ಷ್ಮಣ ಕೊರಗ ವಂದಿಸಿದರು. ಸುರಭಿಯ ನಿರ್ದೇಶಕ ಗಣಪತಿ ಹೋಬಳಿದಾರ್ ಕಾರ್ಯಕ್ರಮ ನಿರೂಪಿಸಿದರು.…
ಕೊಲ್ಲೂರು: ಶಂಕರಾಚಾರ್ಯರ ತಪೋಭೂಮಿಯಾದ ಕೊಡಚಾದ್ರಿಯಲ್ಲಿ ಎ. 23ರಂದು ವಿಶೇಷ ಪೂಜೆಯೊಡನೆ ಶಂಕರ ಜಯಂತಿ ನಡೆಯಿತು. ಕೊಡಚಾದ್ರಿ ಪರಿಸರ ಸಂರಕ್ಷಣಾ ಸಮಿತಿ ಗೌರವಾಧ್ಯಕ್ಷ ಕೇಮಾರು ಶ್ರೀ ಈಶ ವಿಠಲದಾಸ ಸ್ವಾಮೀಜಿ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ಜರುಗಿತು. ಈ ಸಂದರ್ಭ ಮಾತನಾಡಿದ ಕೇಮಾರು ಸ್ವಾಮೀಜಿ, ಶಂಕರಾಚಾರ್ಯರ ತಪೋಭೂಮಿಯಾದ ಕೊಡಚಾದ್ರಿಯ ಸರ್ವಜ್ಞ ಪೀಠ ಬಹಳ ಮಹತ್ವದ್ದಾಗಿದೆ. ಶ್ರೀದೇವಿಯನ್ನು ಸಾಕ್ಷಾತ್ಕಾರಗೊಳಿಸಿದ ಶ್ರೇಷ್ಠ ಋಷಿ ಮುನಿಗಳಲ್ಲಿ ಶಂಕರಾಚಾರ್ಯರು ಓರ್ವರಾಗಿದ್ದು, ಅವರ ಭಗವತ್ ಭಕ್ತಿ, ಧಾರ್ಮಿಕ ಶ್ರದ್ದೆ ಪ್ರತಿಯೋರ್ವರಿಗೂ ದಾರಿದೀಪ. ಇಂತಹ ಶ್ರೇಷ್ಠ ಪರಂಪರೆಯ ವ್ಯಕ್ತಿತ್ವ ಹೊಂದಿರುವ ಶಂಕರಾಚಾರ್ಯರನ್ನು ವರುಷಕ್ಕೊಮ್ಮೆ ಶಂಕರ ಜಯಂತಿಯಂದು ನೆನಪಿಸಿ ಸದ್ಭಕ್ತಿಯಿಂದ ಧ್ಯಾನಿಸಿ ಪೂಜಿಸಿದಲ್ಲಿ ಪ್ರತಿಯೋರ್ವರಿಗೂ ಶ್ರೇಯಸ್ಸಾಗುವುದು ಎಂದರು. ಕೊಡಚಾದ್ರಿ ಸಂರಕ್ಷಣಾ ಟ್ರಸ್ಟ್ ಅಧ್ಯಕ್ಷ ಕೆ.ಕೆ. ಸಾಬೂ, ಖಜಾಂಚಿ ನಾಗೇಂದ್ರ ಜೋಗಿ, ಅಲ್ಲಿನ ದೇವಸ್ಥಾನದ ಅಧ್ಯಕ್ಷ ಶಿವರಾಮ ಶೆಟ್ಟಿ, ಹರೀಶ್ ತೋಳಾರ್, ವಿನೋದ್ ಹೆಬ್ಟಾರ್ ಮೊದಲಾದವರು ಉಪಸ್ಥಿತರಿದ್ದರು. ಇದೇ ಸಂದರ್ಭ ಚಿತ್ರಮೂಲದ ಅಗಸ್ತ್ಯ ಗುಹೆಗೆ ತೆರಳಿ ಅಲ್ಲಿನ ಪರ್ವತೇಶ್ವರೀ ಗಂಭೀರನಾಥ ಇನ್ನಿತರ ದೇವಾಲಯಗಳಲ್ಲಿ ಪ್ರಾರ್ಥನೆ ಹಾಗೂ…
