Author: ಸುನಿಲ್ ಹೆಚ್. ಜಿ. ಬೈಂದೂರು

ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

ಉತ್ತರಪ್ರದೇಶ: ಮೊಬೈಲ್‌ ಫೋನ್‌ ಹೊಟ್ಟೆಯ ಮೇಲಿರಿಸಿಕೊಂಡು ಆರಾಮದಲ್ಲಿ ಅದರಿಂದ ಹಾಡುಗಳನ್ನು ಕೇಳುತ್ತಿದ್ದ ನಾನ್‌ಪಾರಾ ಪೊಲೀಸ್‌ ಠಾಣೆ ವ್ಯಾಪ್ತಿಗೆ ಸೇರಿದ ಬಹರೇಚ್‌ನ ನಿವಾಸಿಯಾಗಿರುವ ಮೂಬಿನ್‌ ಎಂದಿನಂತೆ ತನ್ನ ಹೊಟ್ಟೆಯ ಮೇಲೆ ಮೊಬೈಲ್‌ ಫೋನ್‌ ಇರಿಸಿಕೊಂಡು ಆರಾಮದಿಂದ ಹಾಡು ಕೇಳುತ್ತಿದ್ದ. ಇದ್ದಕ್ಕಿದ್ದಂತೆಯೇ ಆತನ ಮೊಬೈಲ್‌ ಸ್ಫೋಟಗೊಂಡಿತು. ಕ್ಷಣ ಮಾತ್ರದಲ್ಲಿ ನಡೆದು ಹೋದ ಈ ಸ್ಫೋಟದಿಂದ ಕಂಗಾಲಾದ ಮೂಬಿನ್‌ಗೆ ತನಗೆ ಏನಾಗುತ್ತಿದೆ ಎಂದು ಅರಿಯುವುದಕ್ಕೇ ಸಾಧ್ಯವಾಗಲಿಲ್ಲ. ಅಷ್ಟರೊಳಗಾಗಿ ಆತನ ಹೊಟ್ಟೆಯಲ್ಲಿ ಗಂಭೀರ ಸ್ವರೂಪದ ಸುಟ್ಟಗಾಯಗಳಾಗಿದ್ದವು. ಒಡನೆಯೇ ಮೂಬಿನ್‌ ನನ್ನು ನಾನ್‌ಪಾರಾ ಸಮುದಾಯ ಕೇಂದ್ರದ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಅಲ್ಲಿ ಆತನ ಗಂಭೀರ ಪರಿಸ್ಥಿತಿಯನ್ನು ಗಮನಿಸಿ ಕೂಡಲೇ ಆತನನ್ನು ಜಿಲ್ಲಾಸ್ಪತ್ರೆಗೆ ಒಯ್ಯಲಾಯಿತು. ಆದರೆ ಅಲ್ಲಿಗೆ ತಲುಪುತ್ತಲೇ ಆತ ಕೊನೆಯುಸಿರೆಳೆದ.

Read More

ಉತ್ತರಪ್ರದೇಶದ ಅಲಹಾಬಾದ್ ಪೊಲೀಸರಿಂದ ಬಂಧನ. ಆರೋಪಿಗಳು ಕುಂದಾಪುರ ನ್ಯಾಯಾಲಯಕ್ಕೆ ಹಾಜರು ಕುಂದಾಪುರ: ಹೂಡಿಕೆ ಮಾಡುವ ಹಣವನ್ನು ದುಪ್ಪಟ್ಟು ಮಾಡಿ ಹಿಂತಿರುಗಿಸುವುದಾಗಿ ಆನ್ಲೈನ್ ನಲ್ಲಿ ಜಾಹೀರಾತು ನೀಡಿ ಗ್ರಾಹಕರಿಗೆ ಲಕ್ಷಾಂತರ ರೂ. ವಂಚಿಸುತ್ತಿದ್ದ ಉತ್ತರಪ್ರದೇಶದ ಅಲಹಾಬಾದಿನ ಮೋಸದ ಜಾಲವೊಂದನ್ನು ಜಂಟಿ ಕಾರ್ಯಾಚರಣೆ ನಡೆಸಿದ ಕುಂದಾಪುರ ಹಾಗೂ ಅಲಹಾಬಾದಿನ ಪೊಲೀಸರು ಭೇದಿಸಿದ್ದು, ವಿಚಾರಣೆಗಾಗಿ ಆರೋಪಿಗಳನ್ನು ಕುಂದಾಪುರದ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಫಟನೆಯ ವಿವರ: ವಿದೇಶದ ಸಂತಾಂ ಮತ್ತು ಇಂಡೆಕ್ಸ್ ಟ್ರೇಡರ್ಸ್ ಎಂಬ ವಿದೇಶಿ ಹಣಕಾಸು ಸಂಸ್ಥೆಯು ನಮ್ಮ ಕಂಪೆನಿಯಲ್ಲಿ ನೀವು ಹೂಡಿಕೆ ಮಾಡುವ ಹಣದ ದುಪ್ಪಟ್ಟು ಮೊತ್ತವನ್ನು ಹಿಂಪಡೆಯಬಹುದು (‘ಒನ್ ಟೂ ಡಬ್ಬಲ್ ಸ್ಕೀಮ್) ಎಂಬ ಜಾಹೀರಾತನ್ನು ಅಂತರ್ಜಾಲದಲ್ಲಿ ಪ್ರದರ್ಶನಪಡಿಸಿತ್ತು. ಇದನ್ನು ನೋಡಿದ ವಂಡಾರಿನ ನವೀನ್ ಅಡಿಗ ಎನ್ನುವವರು ರಾಷ್ಟ್ರೀಕೃತ ಬ್ಯಾಂಕೊಂದರ ಮೂಲಕ ಹಣ ಹೂಡಿಕೆ ಮಾಡಿದ್ದರು. ಅವರನ್ನು ನಂಬಿಸಲು ‘ಒನ್ ಟೂ ಡಬ್ಬಲ್ ಸ್ಕೀಮ್’ನಲ್ಲಿ ಪ್ರತಿಭಾರಿಯೂ ಹೂಡಿಕೆ ಮಾಡಿದ ಹಣದ ಎರಡರಷ್ಟು ಮೊತ್ತವನ್ನು ನಮೂದಿಸಿದ ಚೆಕ್ ಹಾಗೂ ಆನ್ಲೈನ್ ಸ್ಟೇಟ್ಮೆಂಟ್ ಗಳನ್ನು ಇಮೇಲ್ ಮೂಲಕ…

Read More

ಮುಂಬಯಿ : ಡೊಂಬಿ ವಲಿಯ ಯಕ್ಷಗಾನ ಪ್ರಿಯರ ವತಿಯಿಂದ ಸಮಾಲೋಚನ ಸಭೆ ಜು. 5ರಂದು ಸಂಜೆ 6.30ರಿಂದ ಡೊಂಬಿವಲಿ (ಪೂ.) ತಿಲಕ್‌ ನಗರದ ಡಾ| ಆರ್‌. ಪಿ. ಮಾರ್ಗದ ಫ್ರೆಂಡ್ಸ್‌ ಬುಕ್‌ ಸ್ಟೋರ್ನ ಸ್ವಾವಲಂಬನಾ ಕೇಂದ್ರದಲ್ಲಿ ಜರಗಲಿದೆ. ಯಕ್ಷಗಾನ ಕರಾವಳಿಯ ಜನಪ್ರಿಯ ಕಲೆಯಾಗಿದ್ದು, ಮಳೆ ಗಾಲದ ಸಮಯದಲ್ಲಿ ಹಲವಾರು ಪ್ರಸಿದ್ಧ ಯಕ್ಷಗಾನ ವೃತ್ತಿ ಮೇಳಗಳು ಊರಿನಿಂದ ಮುಂಬಯಿಗೆ ಪ್ರವಾಸ ಮಾಡುತ್ತಿದ್ದು, ಡೊಂಬಿ ವಲಿಯಲ್ಲಿರುವ ಕನ್ನಡಿಗರಿಗೆ ಯಕ್ಷಗಾನ, ತಾಳಮದ್ದಳೆಯನ್ನು ಆಯೋಜಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು. ಹೆಚ್ಚಿನ ಮಾಹಿತಿಗೆ ಶಾಂತಿ ಜಿ. ಶೆಟ್ಟಿ ನೀರೆ (9967599491), ಪ್ರಾ| ವೆಂಕಟೇಶ್‌ ಪೈ (92241020053) ಅವರನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

Read More

‘ನಾನು ಆದರ್ಶ ಇಂಜಿನಿಯರ್ ಆಗಿಯೇ ಆಗುವೆ. ನನ್ನ ಸಮಯ ಅತ್ಯಮೂಲ್ಯ. ಏನನ್ನಾದರೂ ಸಾಧಿಸಬಲ್ಲ ಶಕ್ತಿಯ ಚಂಡು ನಾನು’ ಹೀಗೆ ತನ್ನ ಡೈರಿಯ ಪುಟಗಳಲ್ಲಿ ಬರೆದುಕೊಂಡು, ನೂರಾರು ಕನಸುಗಳನ್ನು ಹೊತ್ತು, ಪ್ರತಿದಿನವೂ ದುರ್ಗಮ ಕಾಡು ಹಾದಿಯನ್ನು ದಾಟಿ ಕಾಲೇಜಿಗೆ ಬರುತ್ತಿದ್ದ ಆ ಶಕ್ತಿಯ ಚಂಡು ಇಂದು ತನ್ನ ಕನಸುಗಳೊಂದಿಗೇ ಮರೆಯಾಗಿ ಹೋಗಿದೆ. ಅಕ್ಷತಾ ದೇವಾಡಿಗ ಎಂಬ ದಿಟ್ಟ ನಿಲುವಿನ ಆ ಹೆಣ್ಣುಮಗಳೊಬ್ಬಳನ್ನು ಕಳೆದುಕೊಂಡ ದುಃಖದಲ್ಲಿ ಇಡೀ ಊರೇ ಮುಳುಗಿದೆ. ದುಷ್ಕೃತ್ಯ ಮಾಡಿದಾತನೇನೊ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಆದರೆ ಅಕ್ಷತಾಳಂತಹ ಪ್ರತಿಭಾವಂತೆಯನ್ನು ಮತ್ತೆ ಪಡೆಯಲು, ಅವಳ ಬೆಟ್ಟದಷ್ಟು ಕನಸುಗಳನ್ನು ನನಸಾಗಿಸಲು ಯಾರಿಂದ ಸಾಧ್ಯವಾದಿತು? ಅಕ್ಷತಾ ಎಂಬ ಪ್ರತಿಭಾನ್ವಿತೆ: ಬೈಂದೂರು ಕ್ಷೇತ್ರದ ಹೇನಬೇರು ಹೊಸಹಕ್ಲುವಿನ ಬಾಬು ದೇವಾಡಿಗ ಹಾಗೂ ರಾಧಾ ದಂಪತಿಗಳ ಮೂವರು ಮಕ್ಕಳಲ್ಲಿ ಹಿರಿಯ ಮಗಳಾದ ಅಕ್ಷತಾ ದೇವಾಡಿಗ ತಾನು ಇಂಜಿನೀಯರ್ ಆಗಬೇಕು ಎಂಬ ಮಹದಾಸೆಯನ್ನು ಹೊತ್ತಿದ್ದಳು. ಪ್ರತಿದಿನವೂ ಕಾಡು ಹಾದಿಯನ್ನು ಕಾಲ್ನಡಿಗೆಯಲ್ಲಿಯೇ ದಾಟಿ ನಡೆದು ಶಾಲೆಗೆ ಹೋಗಿ ಎಸ್.ಎಸ್.ಎಲ್.ಸಿ ಕನ್ನಡ ಮಾಧ್ಯಮದಲ್ಲಿ ಓದಿ…

Read More

ಬೈಂದೂರು:  ಸಮೀಪದ ಯಡ್ತರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತಿ ಹೊಂದಿದ ಮುಖ್ಯೋಪಧ್ಯಾಯ ಎಚ್. ಕೃಷ್ಣಪ್ಪ ಶೆಟ್ಟಿಯವರನ್ನು ಬೀಳ್ಕೊಡುವ ಸಮಾರಂಭ ಇತ್ತಿಚಿಗೆ ಜರುಗಿತು. ಸಮಾರಂಭದಲ್ಲಿ ಎಚ್. ಕೃಷ್ಣಪ್ಪ ಶೆಟ್ಟಿ ಮತ್ತು ಉಪಾ ಕೆ. ಶೆಟ್ಟಿ ದಂಪತಿಯನ್ನು ಸನ್ಮಾನಿಸಿದ ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಮಾತನಾಡಿ ಶಾಲೆಯ ಅಭಿವೃದ್ಧಿಯಲ್ಲಿ ಪ್ರತಿ ಶಿಕ್ಷಕರ ಪಾತ್ರವೂ ಪ್ರಾಮುಖ್ಯವಾದುದು. ವಿದ್ಯಾರ್ಥಿಗಳಲ್ಲಿ ಉತ್ತಮವಾದ ಚಿಂತನೆಯನ್ನು ರೂಪಿಸಿ ಅವರನ್ನು ಸಮಾಜದ ಆಸ್ತಿಯನ್ನಾಗಿಸುವ ಜವಾಬ್ದಾರಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪೋಷಕರ ಮೇಲಿದೆ. ಕೃಷ್ಣಪ್ಪ ಶೆಟ್ಟಿಯವರು ಶಾಲೆಯನ್ನು ಮಾದರಿಯಾಗಿ ಬೆಳೆಸಿದ ರೀತಿ ಇತರರಿಗೂ ಪ್ರೇರಣೆಯಾದುದು ಎಂದು ಹೇಳಿದರು. ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಬಾಬು ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕ ರೂಪ್ಲಾ ಕಾಮತ್, ಯಡ್ತರೆ ಗ್ರಾ,ಪಂ. ಸದಸ್ಯೆ ಮೀನಾಕ್ಷಿ, ಬೈಂದೂರು ವಲಯ ಶಿಕ್ಷಕರ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ, ಶಾಲಾ ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಗೀತಾ ಶೆಟ್ಟಿ, ರಂಗಕರ್ಮಿ ಗಣೇಶ ಕಾರಂತ್, ಶಿಕ್ಷಕ…

Read More

ಉಡುಪಿ: ಬಹುಮುಖ ಪ್ರತಿಭೆಯ ನಾದವೈಭವಂ ಉಡುಪಿ ವಾಸುದೇವ ಭಟ್ಟರು ಪತ್ರಕರ್ತರಾಗಿ ಕೂಡ ಅಂದಿನ ಕಾಲದಲ್ಲಿ ಸಾರ್ಥಕ ಕೀರ್ತಿಯನ್ನು ಪಡೆದಿದ್ದಾರೆ. ಅವರಿಗೆ ರಾಜ್ಯೋತ್ಸವದಂತಹ ಪ್ರಶಸ್ತಿಗಳು ಯಾವಾಗಲೋ ಒಲಿದು ಬರಬೇಕಿತ್ತು ಎಂದು ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಹೇಳಿದರು. ಅವರು ಪತ್ರಕರ್ತರ ವೇದಿಕೆ ಬೆಂಗಳೂರು ಇದರ ಉಡುಪಿ ಜಿಲ್ಲಾ ಘಟಕದ ಆಶ್ರಯದಲ್ಲಿ ‘ಕುಂದಾಪ್ರ ಡಾಟ್ ಕಾಂ’ ಸಹಯೋಗದೊಂದಿಗೆ ಆಯೋಜಿಸಿದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ನಾದವೈಭವಂ ಉಡುಪಿ ವಾಸುದೇವ ಭಟ್ ಅವರಿಗೆ ’ಪತ್ರಿಕಾ ದಿನದ ಗೌರವ’ವನ್ನು ಅವರ ನಿವಾಸದಲ್ಲಿಯೇ ಪ್ರಧಾನ ಮಾಡಿ ಮಾತನಾಡಿದರು. ಸರಕಾರದ ಯಾವುದೇ ಪ್ರಶಸ್ತಿಗಳು ಲಾಭಿ ಇಲ್ಲದೆ ಸಿಗದ ಪರಿಸ್ಥಿತಿ ಇದೆ. ಇದರಲ್ಲಿ ಮುಚ್ಚುಮರೆ ಎಂಬುದಿಲ್ಲ. ವಾಸುದೇವ ಭಟ್ ಅವರನ್ನು ಸರಕಾರ ಗುರುತಿಸಿ ಸೂಕ್ತ ಗೌರವ ನೀಡಬೇಕೆಂದು ಆಶಿಸಿದರು. ಕಲ್ಪವೃಕ್ಷ, ಲೇಖನ ಸಾಮಾಗ್ರಿ, ಸ್ಮರಣಿಕೆ ಹಾಗೂ ಮಾನಪತ್ರ ಸಹಿತ ಅವರನ್ನು ಗೌರವಿಸಲಾಯಿತು. ಗೌರವವನ್ನು ಸ್ವೀಕರಿಸಿದ ನಾದವೈಭವಂ ಉಡುಪಿ ವಾಸುದೇವ ಭಟ್ ಮಾತನಾಡಿ ಪ್ರಶಸ್ತಿ-ಗೌರವಗಳ ಬಗೆಗೆ ನನಗೆ ಅಂತಹ ವ್ಯಾಮೋಹಗಳಿಲ್ಲ.…

Read More

ಬೈಂದೂರು: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಸಮಬಲ ಸಾಧಿಸಿ ಭಾರಿ ನಿರೀಕ್ಷೆ ಹುಟ್ಟಿಸಿದ್ದ ಬಿಜೂರು ಗ್ರಾಮ ಪಂಚಾಯತ್ ನಲ್ಲಿ ಅಧ್ಯಕ್ಷ ಗಾದಿ ಕೊನೆಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿಯ ಪಾಲಿಗೆ ಒಲಿದಿದೆ. ಗ್ರಾಮ ಪಂಚಾಯತ್ ಅಧ್ಯಕ್ಷ ಗಾದಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 9 ಹಾಗೂ ಬಿಜೆಪಿ ಬೆಂಬಲಿತ 9 ಸದಸ್ಯರು ಮತ ಚಲಾಯಿಸಿದ್ದರು. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಯೋರ್ವರು ಚಲಾಯಿಸಿದ ಮತ ಅಸಿಂಧುವಾದ್ದರಿಂದ ಕೊನೆಗೆ ಬಿಜೆಪಿಯ ಲೋಕಾಕ್ಷಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿತ್ತು. ಆದರೆ ಇಲ್ಲಿ ಪ್ರತಿಸ್ಪರ್ಧಿ ಇಲ್ಲದಿದ್ದುರಿಂದ ಕಾಂಗ್ರೆಸ್ ಬೆಂಬಲಿತ ಚಂದು ಅವರು ನೇರವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಭದ್ರಕೋಟೆ ಒಡೆಯಿತು ಬಿಜೂರು ಗ್ರಾಮ ಪಂಚಾಯತ್ ಕಾಂಗ್ರೆಸ್ ಪಕ್ಷದ ಭದ್ರಕೋಟೆ ಎಂದೇ ಕರೆಯಲ್ಪಡುತ್ತಿತ್ತು. ಸುಮಾರು 25ಕ್ಕೂ ಹೆಚ್ಚು ವರ್ಷಗಳಿಂದ ಪಂಚಾಯತಿಯಲ್ಲಿ ಕಾಂಗ್ರೆಸ್ ಆಡಳಿತವಿತ್ತು. ಎಪಿಸಿಸಿ ಸದಸ್ಯ ಹಾಗೂ ಎಸ್.ಡಿ.ಸಿ.ಸಿ ಬ್ಯಾಂಕಿನ ನಿರ್ದೇಶಕ ರಘರಾಮ ಶೆಟ್ಟಿ ಹಾಗೂ ಬೈಂದೂರು ಕ್ಷೇತ್ರದ ಶಾಸಕ ಗೋಪಾಲ…

Read More

ಸುನಿಲ್ ಎಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. 29 ಜೂನ್ 2015 ಬೈಂದೂರು: ಕನ್ನಡ ಶಾಲೆಗಳಿಗೆ ಮಕ್ಕಳೇ ಬರುವುದಿಲ್ಲ ಎಂದು ಬೊಬ್ಬೆ ಹೊಡೆಯುವ ಶಿಕ್ಷಣ ಇಲಾಖೆ ಹಾಗೂ ಸರಕಾರ, ಮಕ್ಕಳು ಬರುವ ಕನ್ನಡ ಶಾಲೆಗಳನ್ನು ಸುಸ್ಥಿತಿಯಲ್ಲಿಡುವುದನ್ನು ಮಾತ್ರ ಮರೆತು ಬಿಟ್ಟಂತಿದೆ. ಬೈಂದೂರು ವಲಯದ ಕಾಲ್ತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಪ್ಪಾಡಿ-ಮೂರೂರಿನ ಬಿದ್ದು ಹೋಗುವ ಸ್ಥಿತಿಯಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯು ಮಕ್ಕಳಿದ್ದರೂ ಸಹಿತ ಕಳೆದ ಒಂದೆರಡು ವರ್ಷಗಳಿಂದ ಸರಕಾರಿ ಶಿಕ್ಷಕರು ಹಾಗೂ ಮೂಲಭೂತ ಸೌಕರ್ಯಗಳಿಲ್ಲದೇ ಸೊರಗುತ್ತಿದೆ. ಸರಕಾರಿ ಶಿಕ್ಷಕರೇ ಇಲ್ಲ: ಕಪ್ಪಾಡಿ ಶಾಲೆಯಲ್ಲಿ 1ರಿಂದ 5 ನೇ ತರಗತಿಯ ವರೆಗೆ ಒಟ್ಟು 33 ವಿದ್ಯಾರ್ಥಿಗಳಿದ್ದಾರೆ. ಸುತ್ತಲಿನ ಗುಂಡ್ವಾಣ, ಆಚಾರಿಕೇರಿ, ಮೂರೂರಿನ ಮಕ್ಕಳು ಇದೇ ಶಾಲೆಗೆ ಬರುತ್ತಿದ್ದಾರೆ. ಈ ಶೈಕ್ಷಣಿಕ ವರ್ಷದಲ್ಲಿ 8 ಮಕ್ಕಳು ಹೊಸದಾಗಿ ಸೇರ್ಪಡೆಗೊಂಡಿದ್ದಾರೆ. ಕಳೆದ ವರ್ಷಕ್ಕೆ ಹೊಲಿಸಿದರೆ ಪ್ರಸಕ್ತ ಸಾಲಿನಲ್ಲಿ 6 ಮಕ್ಕಳು ಹೆಚ್ಚಿಗೆ ಸೇರ್ಪಡೆಗೊಂಡಿದ್ದಾರೆ. ಇಷ್ಟು ಮಕ್ಕಳಿದ್ದರೂ ಕೂಡ ಶಾಲೆಗೆ ಸರಕಾರಿ ಶಿಕ್ಷಕರು…

Read More

ಕುಂದಾಪುರ ತಾಲೂಕಿನ ಆ್ಯಕ್ಸಿಸ್ ಬ್ಯಾಂಕ್ ಶಾಖೆ Kundapura Taluk Axis Bank ಶಾಖೆ: ಕುಂದಾಪುರ – Kundapura ವಿಳಾಸ: ಹಳೆ ಪೋಸ್ಟ್ ಆಫೀಸ್ ಕಾಂಪೌಂಡ್ ಬಳಿ, ಮುಖ್ಯ ರಸ್ತೆ ಕುಂದಾಪುರ, ಉಡುಪಿ ಜಿಲ್ಲೆ, ಕರ್ನಾಟಕ-576201 IFSC Code: UTIB0001118 Branch Code: 001118 MICR Code: 576211202 ಪೋನ್: (08254) 235601/ 02/ 03 / (08254) 235604 [divide icon=”square” icon_position=”left”] ಕುಂದಾಪುರ ತಾಲೂಕಿನ ಐಸಿಐಸಿಐ ಬ್ಯಾಂಕ್ ಶಾಖೆ Kundapura Taluk ICICI Bank ಶಾಖೆ: ಕುಂದಾಪುರ – Kundapur ವಿಳಾಸ: ಪುರಸಭೆ ವಾಣಿಜ್ಯ ಸಂಕೀರ್ಣ ಕುಂದಾಪುರ, ಉಡುಪಿ ಜಿಲ್ಲೆ, ಕರ್ನಾಟಕ 576201 IFSC Code: ICIC0001076 Branch Code: 001076 MICR Code: 576229202 ಪೋನ್: 9845578000 [divide icon=”square” icon_position=”left”] ಕುಂದಾಪುರ ತಾಲೂಕಿನ ಐ.ಡಿ.ಬಿ.ಐ. ಬ್ಯಾಂಕ್  ಶಾಖೆ Kundapura Taluk IDBI Bank ಶಾಖೆ: ಕುಂದಾಪುರ – Kundapur ವಿಳಾಸ: ಪುರಸಭೆ ವಾಣಿಜ್ಯ ಸಂಕೀರ್ಣ ಕುಂದಾಪುರ, ಉಡುಪಿ ಜಿಲ್ಲೆ, ಕರ್ನಾಟಕ 576201 IFSC Code: IBKL0000204 Branch Code: 000204 MICR Code: — ಪೋನ್: 08254-2335501-02 [divide icon=”square” icon_position=”left”] ಕುಂದಾಪುರ ತಾಲೂಕಿನ ಇಂಡಿಯನ್ ಓವರ್ಸೀಸ್ ಬ್ಯಾಂಕ್  ಶಾಖೆ…

Read More

ಕುಂದಾಪುರ ತಾಲೂಕಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆ Kundapura Taluk State bank of india branch ಶಾಖೆ: ಕುಂದಾಪುರ  – Kundapur ವಿಳಾಸ: ಮರಿಯಾ ಕಾಂಪ್ಲೆಕ್ಸ್ ಎನ್. ಹೆಚ್. 66 ವಡೇರಹೋಬಳಿ, ಕುಂದಾಪುರ, ಉಡುಪಿ ಜಿಲ್ಲೆ, ಕರ್ನಾಟಕ 576201 IFSC Code: SBIN0011333 Branch Code:  011333 MICR Code: 576002202 ಪೋನ್: BM-9449866347 [divide icon=”square” icon_position=”left”] ಕುಂದಾಪುರ ತಾಲೂಕಿನ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಶಾಖೆ Kundapura Taluk State bank of Mysore branch ಶಾಖೆ: ಕುಂದಾಪುರ  – Kundapur ವಿಳಾಸ: ಬಸ್ರೂರು ಕ್ರಾಸ್ ಬಳಿ ಕುಂದಾಪುರ, ಉಡುಪಿ ಜಿಲ್ಲೆ, ಕರ್ನಾಟಕ 576201 IFSC Code: SBMY0040150 Branch Code:  040150 MICR Code: 576006202 ಪೋನ್: 08254-20315 [divide icon=”square” icon_position=”left”] ಶಾಖೆ: ಬೈಂದೂರು  – Byndoor ವಿಳಾಸ: ಮುಖ್ಯ ರಸ್ತೆ, ಎನ್. ಹೆಚ್.66 ಬೈಂದೂರು, ಕುಂದಾಪುರ ತಾಲೂಕು, ಉಡುಪಿ ಜಿಲ್ಲೆ, ಕರ್ನಾಟಕ-576214 IFSC Code: SBMY0040623 Branch Code:  040623 MICR Code: 576006202 ಪೋನ್: 08254-751800 [divide icon=”square” icon_position=”left”]

Read More