ಮುಂಬೈ: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ನಲಸೋಪರ-ವಿರಾರ್ ಸ್ಥಳೀಯ ಕಚೇರಿಯ ವತಿಯಿಂದ ಶೈಕ್ಷಣಿಕ ನೆರವು ವಿತರಣೆ ಸಮಾರಂಭ ಜೂ. 28ರಂದು ನಲಸೋಪರ (ಪೂ.) ಆಚೋಲೆ ಗಣಪತಿ ಮಂದಿರದ ಸಭಾಗೃಹದಲ್ಲಿ ಜರಗಿತು. ಸ್ಥಳೀಯ ಕಚೇರಿಯ ಕಾರ್ಯಾಧ್ಯಕ್ಷ ಗಣೇಶ್ ವಿ. ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಅತಿಥಿಗಳಾಗಿ ಉಪಸ್ಥಿತರಿದ್ದ ಶ್ರೀನಿವಾಸ ನಾಯ್ಡು ಮಾತ ನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ ಶ್ರದ್ಧೆ, ಏಕಾಗ್ರತೆಯಿಂದ ಕಾರ್ಯ ನಿರ್ವಹಿಸಿದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ. ಬಿಲ್ಲವರ ಅಸೋಸಿ ಯೇಶನ್ನ ಸಮಾಜಪರ ಯೋಜನೆಗಳ ಸದುಪಯೋಗವನ್ನು ಸಮಾಜ ಬಾಂಧವರು ಪಡೆದುಕೊಳ್ಳಬೇಕು. ಇಂತಹ ಕಾರ್ಯಕ್ರಮಗಳಿಗೆ ನನ್ನ ಪ್ರೋತ್ಸಾಹ, ಸಹಕಾರ ಸದಾವಿರುತ್ತದೆ. ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಂಸ್ಥೆಯ ಋಣ ತೀರಿಸುವ ಕಾರ್ಯದಲ್ಲಿ ಮುಂದಾಗಬೇಕು ಎಂದರು. ಮತ್ತೋರ್ವ ಅತಿಥಿ ಕೇಂದ್ರ ಕಚೇರಿಯ ಜತೆ ಕಾರ್ಯದರ್ಶಿ ಧನಂಜಯ ಕೋಟ್ಯಾನ್ ಮಾತನಾಡಿ, ಅಸೋಸಿಯೇಶನ್ನ ವಿದ್ಯಾ ಉಪಸಮಿತಿಯು ವಿದ್ಯಾಭ್ಯಾಸಕ್ಕಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳನ್ನು ಸಭೆಯ ಮುಂದಿಟ್ಟರು. ಸಂಸ್ಥೆಯ ಯೋಜನೆಗಳ ಪ್ರಯೋಜನವನ್ನು ಎಲ್ಲರು ಪಡೆದುಕೊಳ್ಳಬೇಕು ಎಂದರು. ಸ್ಥಳೀಯ ಕಚೇರಿಯ ಗೌರವ ಕಾರ್ಯಾಧ್ಯಕ್ಷ ಜಗದೀಶ್…
Author: ಸುನಿಲ್ ಹೆಚ್. ಜಿ. ಬೈಂದೂರು
ಮುಂಬಯಿ: ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಪಡೆದಿರುವ ಬಂಟ ಕ್ರೀಡಾಪಟು, ಬಂಟರ ಸಂಘದ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯ ಕ್ರೀಡಾ ಕಾರ್ಯಾಧ್ಯಕ್ಷೆ ಸುಚರಿತಾ ಶೆಟ್ಟಿ ಕರೇಲಿಯಾ ಅವರು ಅಕ್ಟೋಬರ್ 3ರಿಂದ 7ರ ವರೆಗೆ ಆಸ್ಟ್ರೇಲಿಯಾದಲ್ಲಿ ಜರಗಲಿರುವ ಆಸ್ಟ್ರೇಲಿಯನ್ ಮಾಸ್ಟರ್ ಆ್ಯತ್ಲೆಟಿಕ್ ಮೀಟ್ಸ್ ನಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ. ರಾಜ್ಯ, ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಹಲವಾರು ಚಿನ್ನದ ಪದಕಗಳನ್ನು ಪಡೆದಿರುವ ಅವರು ಕಳೆದ ಮೇ 7ರಿಂದ 9ರ ವರೆಗೆ ಮರೀನ್ಡ್ರೈವ್ನ ಮುಂಬಯಿ ವಿ.ವಿ.ಯ ಮೈದಾನದಲ್ಲಿ ನಡೆದ ನ್ಯಾಷನಲ್ ಮರ್ಕಂಟೈಲ್ ಕಾರ್ಪೊರೇಟ್ ಮಾಸ್ಟರ್ ಟ್ರ್ಯಾಕ್ ಆ್ಯಂಡ್ ಫೀಲ್ಡ್ ಚಾಂಪಿಯನ್ಶಿಪ್ -2015ರಲ್ಲಿ ಭಾಗವಹಿಸಿರುವುದಲ್ಲದೆ 100 ಮೀ. ಓಟದಲ್ಲಿ ದ್ವಿತೀಯ, ಶಾಟ್ಪುಟ್ನಲ್ಲಿ ಪ್ರಥಮ, ಡಿಸ್ಕಸ್ ತ್ರೋನಲ್ಲಿ ಪ್ರಥಮ, ಜಾವೆಲಿನ್ ತ್ರೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ
ಮುಂಬೈ: ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ ಎಂಬ ಹಿನ್ನೆಲೆಯಲ್ಲಿ ನಾಗಪುರ್ ಕ್ಕೆ ತೆರಳಲು ನಿರಾಕರಿಸಿದ ಎನ್ ಕೌಂಟರ್ ಸ್ಪೆಶಲಿಸ್ಟ್ ಎಂದೇ ಹೆಸರು ಗಳಿಸಿದ್ದ ಮುಂಬೈ ಪೊಲೀಸ್ ಸಬ್ ಇನ್ಸ್ ಪೆಕ್ಟರ್, ಕನ್ನಡಿಗ ದಯಾ ನಾಯಕ್ ಅವರನ್ನು ಮಹಾರಾಷ್ಟ್ರ ಸರ್ಕಾರ ಪೊಲೀಸ್ ಸೇವೆಯಿಂದ ಅಮಾನತು ಮಾಡಿದೆ. ನನ್ನ ಕುಟುಂಬಕ್ಕೆ ಮೊದಲ ಆದ್ಯತೆ ಹಾಗಾಗಿ ನಾನು ನಾಗ್ಪುರಕ್ಕೆ ತೆರಳಲ್ಲ ಎಂದು ದಯಾ ಪ್ರತಿಭಟಿಸಿದ್ದರು. ಹಾಗಾಗಿಯೇ ಗುರುವಾರ ದಯಾ ನಾಯಕ್ ಅವರಿಗೆ ಅಮಾನತು ಮಾಡಿರುವ ಆದೇಶ ಬಂದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ. ದಯಾ ನಾಯಕ್ ಅವರನ್ನು ಕಳೆದ ವರ್ಷ ನಾಗ್ಪುರಕ್ಕೆ ವರ್ಗಾಯಿಸಲಾಗಿತ್ತು. ಆದರೆ ತನ್ನ ಹಾಗೂ ತನ್ನ ಹೆಂಡತಿ, ಮಕ್ಕಳಿಗೆ ಜೀವ ಬೆದರಿಕೆ ಇದ್ದು, ತಾವು ನಾಗ್ಪುರದಲ್ಲಿ ಕರ್ತವ್ಯ ನಿರ್ವಹಿಸಲಾರೆ ಎಂದು ಮಹಾರಾಷ್ಟ್ರ ಸರ್ಕಾರ ಮತ್ತು ರಾಜ್ಯ ಡಿಜಿಪಿ ಗಮನಕ್ಕೆ ತಂದಿದ್ದರು. ಆದರೆ ಅವರನ್ನು ಯಾವ ಕಾರಣದ ಮೇಲೆ ಅಮಾನತು ಮಾಡಲಾಗಿದೆ ಎಂಬ ಬಗ್ಗೆ ವಿವರ ನೀಡಲು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ನಿರಾಕರಿಸಿರುವುದಾಗಿ…
ಮೊಬೈಲ್ ಗ್ರಾಹಕರ ಬಹುದಿನದ ಬೇಡಿಕೆಯಾಗಿದ್ದ ದೇಶವ್ಯಾಪಿ ಮೊಬೈಲ್ ನಂಬರ್ ಪೋರ್ಟಬಲಿಟಿ ಯೋಜನೆ ಜುಲೈ 3ರ ಶುಕ್ರವಾರದಿಂದ ಜಾರಿಗೆ ಬರಲಿದೆ. ಹೀಗಾಗಿ ಇನ್ನು ಮೊಬೈಲ್ ಬಳಕೆದಾರರು, ತಾವು ದೇಶದ ಯಾವುದೇ ಭಾಗಕ್ಕೆ ತೆರಳಿದರೂ ಹಳೆಯ ಮೊಬೈಲ್ ನಂಬರ್ ಅನ್ನೇ ಉಳಿಸಿಕೊಳ್ಳಬಹುದಾಗಿದೆ. ಹೀಗಾಗಿ ಪದೇ ಪದೇ ವಾಸ ಸ್ಥಳ ಇಲ್ಲವೇ ಕರ್ತವ್ಯದ ಸ್ಥಳ ಬದಲಾಯಿಸುವವರು, ಪದೇ ಪದೇ ಮೊಬೈಲ್ ನಂಬರ್ ಬದಲಾಯಿಸುವ ಕಿರಿಕಿರಿಯಿಂದ ಪಾರಾಗಲಿದ್ದಾರೆ. ಇದುವರೆಗೆ ಒಂದೇ ಟೆಲಿಕಾಂ ವಲಯದ ವ್ಯಾಪ್ತಿಯೊಳಗೆ ಮಾತ್ರ ಮೊಬೈಲ್ ನಂಬರ್ ಪೋರ್ಟಬಲಿಟಿ ಲಭ್ಯವಿತ್ತು. ಅಂದರೆ ಒಂದು ಕಂಪನಿಯ ಸೇವೆ ಗ್ರಾಹಕನಿಗೆ ಬೇಡವೆಂದಾದಲ್ಲಿ ಆತ ಬೇರೆ ಕಂಪನಿಗೆ ವರ್ಗಾವಣೆಗೊಳ್ಳಬಹುದಾಗಿತ್ತು. ಹೀಗೆ ಕಂಪನಿ ಬದಲಾಯಿಸಿದರೂ, ಹಳೆಯ ನಂಬರ್ ಅನ್ನೇ ಉಳಿಸಿಕೊಳ್ಳಬಹುದಿತ್ತು. ಆದರೆ ಒಂದು ಟೆಲಿಕಾಂ ವಲಯದಿಂದ ಮತ್ತೂಂದು ಟೆಲಿಕಾಂ ವಲಯ ಗ್ರಾಹಕ ತೆರಳಿದಾಗ ಈ ಸೇವೆ ಲಭ್ಯವಿರಲಿಲ್ಲ. ಹೀಗಾಗಿ ಇಂಥದ್ದೊಂದು ಸೇವೆಯ ಬೇಡಿಕೆ ಬಹುದಿನಗಳಿಂದ ಇತ್ತು. ಇಂಥ ಸೇವೆ ನೀಡುವಂತೆ ಈ ಹಿಂದೆಯೇ ಟ್ರಾಯ್, ಮೊಬೈಲ್ ಸೇವಾದಾರ ಕಂಪನಿಗಳಿಗೆ ಸೂಚಿಸಿತ್ತು. ಅದರನ್ವಯ…
ಬೈಂದೂರು: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ಹಾಗೂ ಜಿಲ್ಲಾ ಮತ್ತು ತಾಲೂಕು ಸರಕಾರಿ ಆಸ್ಪತ್ರೆ, ಸ್ಕಂದ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಈ ಸಾಲಿನ ವಿಶೇಷ ಅಗತ್ಯವುಳ್ಳ ಮಕ್ಕಳ ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ಜು. 7ರಂದು ಬೆಳಗ್ಗೆ ಗಂಟೆ 9 ರಿಂದ 1 ರವರೆಗೆ ನಾವುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.
ಬೈಂದೂರು: ಇಲ್ಲಿನ ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಶ್ರೀ ಗುರುವಿವೇಕ ಯೋಗಸಂಘದಿಂದ ರಾಷ್ಟ್ರೀಯ ವೈದ್ಯ ದಿನಾಚರಣೆ ಜರುಗಿತು. ಬೈಂದೂರು ಹೋಬಳಿ ಕಸಾಪ ಅಧ್ಯಕ್ಷ ಡಾ. ಸುಬ್ರಹ್ಮಣ್ಯ ಭಟ್ ವೈದ್ಯೋನಾರಾಯಣೋ ಹರಿಃ ಎನ್ನುವ ನುಡಿಯಂತೆ ರೋಗಿಗಳ ಪಾಲಿಗೆ ವೈದ್ಯರು ಸಾಕ್ಷಾತ್ ದೇವರಿದ್ದಂತೆ. ಹಿಂದಿನಿಂದಲೂ ಸಮಾಜದಲ್ಲಿ ವೈದ್ಯರಿಗೆ ವಿಶೇಷವಾದ ಸ್ಥಾನಮಾನ. ವೈದ್ಯರೂ ಕೂಡಾ ರೋಗಿಗಳನ್ನು ತಮ್ಮ ಕುಟುಂಬದ ಸದಸ್ಯರಂತೆ ಪ್ರೀತಿ, ಕಾಳಜಿಯಿಂದ ನೋಡಿಕೊಳ್ಳುತ್ತಿದ್ದರು ಎಂದು ಹೇಳಿದರು. ಸೇವೆಯ ಧ್ಯೇಯ ಹೊಂದಿದ ಆರೋಗ್ಯ ಕ್ಷೇತ್ರ ಇಂದು ವ್ಯಾವಹಾರಿಕ ಕ್ಷೇತ್ರವಾಗಿದೆ. ಆಸ್ಪತ್ರೆಗಳು ಹೂಡಿಕೆಗೆ ಅತಿಯೋಗ್ಯ ಸ್ಥಳಗಳೆನಿಸಿವೆ. ವೈದ್ಯಕೀಯ ವೃತ್ತಿಯಲ್ಲಿಲ್ಲದವರು ದೊಡ್ಡ ದೊಡ್ಡ ಆಸ್ಪತ್ರೆಗಳನ್ನು ನಡೆಸುತ್ತಿದ್ದಾರೆ. ಅಲ್ಲೆಲ್ಲಾ ವೈದ್ಯರು ಸಂಬಳಕ್ಕೆ ದುಡಿಯುವ ನೌಕರರಂತಾಗಿದೆ. ಇದರ ಕೆಟ್ಟ ಪರಿಣಾಮ ರೋಗಿಗಳ ಮೇಲಾಗುತ್ತಿದೆ. ಆಸ್ಪತ್ರೆಗಳ ನಡುವೆ ಪೈಪೋಟಿ ಹೆಚ್ಚಾಗುತ್ತಿದೆ. ಎಳಜಿತ್ ಶ್ರೀ ಸಿದ್ದಿವಿನಾಯಕ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ವೈ. ಮಂಗೇಶ್ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಡಾ. ಯು. ವಿ. ಮಯ್ಯ, ಪತ್ರಕರ್ತ ನರಸಿಂಹ ಬಿ. ನಾಯಕ್ ಉಪಸ್ಥಿತರಿದ್ದರು. ಯೋಗಗುರು ಮಂಜುನಾಥ ಎಸ್. ಬಿಜೂರು…
ಗಂಗೊಳ್ಳಿ: ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಗಂಗೊಳ್ಳಿ ಇವರ ಆಶ್ರಯದಲ್ಲಿ ವಿಶೇಷ ದಾಖಲಾತಿ ಆಂದೋಲನ ಕಾರ್ಯಕ್ರಮ ಗಂಗೊಳ್ಳಿಯ ಸ.ವಿ.ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಗಂಗೊಳ್ಳಿ ಜಿಎಸ್ವಿಎಸ್ ಅಸೋಸಿಯೇಶನ್ ಕಾರ್ಯದರ್ಶಿ ಎಚ್.ಗಣೇಶ ಕಾಮತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಲೆಯ ಸಂಚಾಲಕ ಎನ್.ಸದಾಶಿವ ನಾಯಕ್, ಸಿಆರ್ಪಿ ತಿಲೋತ್ತಮ, ಎಸ್.ವಿ.ಪದವಿಪೂರ್ವ ಕಾಲೇಜಿನ ಪ್ರೌಢಶಾಲೆಯ ಉಪಪ್ರಾಂಶುಪಾಲ ವಾಮನದಾಸ ಭಟ್, ಎಸ್.ವಿ.ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಮಂಜುನಾಥ ಮಹಾಲೆ, ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು ಉಪಸ್ಥಿತರಿದ್ದರು.
ಕುಂದಾಪುರ: ತಾಲೂಕಿನ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ವತಿಯಿಂದ ಮರವಂತೆಯ ಶ್ರೀ ವರಾಹಸ್ವಾಮಿ ದೇವರ ಸನ್ನಿಧಿಯಲ್ಲಿ ಮೀನುಗಾರರು ಸಾಮೂಹಿಕವಾಗಿ ಸಮುದ್ರ ಪೂಜೆ ನೆರವೇರಿಸಿದರು. ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಕೆ.ಮಂಜು ಬಿಲ್ಲವ ಮತ್ತು ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಬಿ.ಕುಮಾರ್ ನೇತೃತ್ವದಲ್ಲಿ ಮರವಂತೆಯ ಶ್ರೀ ಗಂಗಾಧರೇಶ್ವರ ಸ್ವಾಮಿ ದೇವಸ್ಥಾನ, ಅರಮ ದೇವಸ್ಥಾನ (ಬೊಬ್ಬರ್ಯ) ಮತ್ತು ಶ್ರೀ ವರಾಹ, ಶ್ರೀ ವಿಷ್ಣು ಮತ್ತು ಶ್ರೀ ನರಸಿಂಹ ದೇವಸ್ಥಾನ ಹಾಗೂ ಕ್ಷೇತ್ರಪಾಲ ದೇವಸ್ಥಾನದಲ್ಲಿ ಮೀನುಗಾರರು ವಿಶೇಷ ಪೂಜೆ ಸಲ್ಲಿಸಿದರು. ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ಕಾರ್ಯದರ್ಶಿ ಚೌಕಿ ವಿಠೋಬ ಖಾರ್ವಿ, ಮಾಜಿ ಕಾರ್ಯದರ್ಶಿ ಬಿ.ಸುರೇಶ ಬಂಗೇರ ಕೋಡಿ, ಕಾರ್ಯದರ್ಶಿ ನಾಗಪ್ಪಯ್ಯ ಪಟೇಲ್, ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಉಪಾಧ್ಯಕ್ಷ ಬಿ.ಮಹೇಶ ಖಾರ್ವಿ, ಕೆ.ಎಂ.ಸೋಮಶೇಖರ, ಕಾರ್ಯದರ್ಶಿ ಶೇಖರ ಖಾರ್ವಿ, ಕೋಶಾಧಿಕಾರಿ ಅಣ್ಣಯ್ಯ ಖಾರ್ವಿ, ಶ್ರೀ ರಾಮ ಮಂದಿರ ಸೇವಾಸಮಿತಿ ಅಧ್ಯಕ್ಷ ಬಿ.ವೆಂಕಟರಮಣ ಖಾರ್ವಿ ಮರವಂತೆ, ಹಕ್ರೆಮಠ ಶ್ರೀ ರಾಮ…
ಕುಂದಾಪುರ: ತಾಲೂಕಿನ ಕಂದಾವರದಲ್ಲಿ ವಿಜಯನಗರ ಸಾಮ್ರಾಜ್ಯದ ಖ್ಯಾತ ಚಕ್ರವರ್ತಿ ಕೃಷ್ಣದೇವರಾಯನ ಶಾಸನ ಪತ್ತೆಯಾಗಿದೆ. ಈ ಬಗ್ಗೆ ಮಾಧ್ಯಮಕ್ಕೆ ಶಿರ್ವದ ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಸಹ ಪ್ರಾಧ್ಯಾಪಕ, ಪ್ರೊ| ಟಿ. ಮುರುಗೇಶಿ ಮಾಹಿತಿ ನೀಡಿದ್ದಾರೆ. ಶಾಸನವನ್ನು ಆಯತಾಕಾರದ ಕಲ್ಲಿನ ಮೇಲೆ ಬರೆಯಲಾಗಿದ್ದು, ಕನ್ನಡ ಲಿಪಿ ಮತ್ತು ಭಾಷೆಯಲ್ಲಿ ಬರೆಯಲಾಗಿದೆ. ಶಾಸನದ ಪ್ರತೀ ಸಾಲನ್ನು ಸೊನ್ನೆಯೊಂದಿಗೆ ಆರಂಭಿಸಲಾಗಿದೆ. ಸಾಮಾನ್ಯವಾಗಿ ವಿಜಯ ನಗರದ ಶಾಸನಗಳು ದೇವತಾ ಶ್ಲೋಕದೊಂದಿಗೆ ಆರಂಭವಾಗುವುದು ವಾಡಿಕೆ. ಆದರೆ ಈ ಶಾಸನ ಕೇವಲ ಸ್ವಸ್ತಿಶ್ರೀ ಎಂಬ ಮಂಗಳ ಪದದೊಂದಿಗೆ ಆರಂಭವಾಗಿದ್ದು, ಶಾಸನವನ್ನು 30 ಸಾಲುಗಳಲ್ಲಿ ಬರೆಯಲಾಗಿದೆ. ಶಾಸನ ಜಯಾಭ್ಯುದಯ ಶಾಲಿವಾಹನ ಶಕ ವರುಷ ಎಂದು ಕಾಲಮಾನದ ಉಲ್ಲೇಖದೊಂದಿಗೆ ಆರಂಭವಾಗಿದ್ದರೂ ಕಾಲವನ್ನು ಉಲ್ಲೇಖೀಸಿದ ಭಾಗ ಸಂಪೂರ್ಣ ಅಳಿಸಿ ಹೋಗಿದೆ. ಶಾಸನದಲ್ಲಿ ಶುಕ್ಲ ಸಂವತ್ಸರ ಮಾಘ ಮಾಸ ಎಂಬ ಉಲ್ಲೇಖವಿರುವುದರಿಂದ, ಶಾಸನದ ಕಾಲ ಕ್ರಿ.ಶ. 1509ಕ್ಕೆ ಸರಿಹೊಂದುತ್ತದೆ. “ಕೃಷ್ಣರಾಯ ಮಹಾರಾಯರು ಸಕಲ ವಂರ್ನಶ್ರಮಗಳನು ಪ್ರತಿಪಾಲಿಸುತಿಹ ಕಾಲದಲು’ ಎಂಬ ಉಲ್ಲೇಖವಿರುವುದರಿಂದ ಈ ಶಾಸನ ಕೃಷ್ಣದೇವರಾಯನ…
ಕುಂದಾಪುರ : ರಾತ್ರಿ ಕೊಟೇಶ್ವರ ಹೆದ್ದಾರಿ ಸಮೀಪ ಮೊಬೈಲ್ ಮಾರಾಟದ ಅಂಗಡಿಯ ಶಟರ್ ನ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು 5ಲಕ್ಷ ಮೌಲ್ಯದ ಮೊಬೈಲುಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಹೆದ್ದಾರಿ ಪಕ್ಕದಲ್ಲಿರುವ ಕೋಟಿಲಿಂಗೇಶ್ವರ ಟವರ್ಸ್ ನ ಮೊದಲ ಅಂತಸ್ಥಿನಲ್ಲಿ ಸುರೇಶ್ ಪೂಜಾರಿ ಎಂಬವರಿಗೆ ಸೇರಿದ ಸನ್ನಿದಿ ಮೊಬೈಲ್ಸ್ ಕೇರ್ ಹೆಸರಿನ ಮೊಬೈಲ್ ಮಾರಾಟದ ಅಂಗಡಿಯಿದ್ದು ಎಂದಿನಂತೆ ವ್ಯವಹಾರ ಮುಗಿಸಿ ನಿನ್ನೆ ಮನೆಗೆ ತೆರಳಿದ ಅವರು ಮರುದಿನ ಬೆಳಿಗ್ಗೆ ಅಂಗಡಿ ತೆರೆಯಲು ಬಂದಾಗ ಕಳ್ಳತನ ವಾಗಿರುವ ವಿಚಾರ ಬೆಳಕಿಗೆ ಬಂದಿತ್ತು. ಮುಂಭಾಗದ ಶಟರಿನ ಬೀಗವನ್ನು ಒಡೆದು ಒಳ ಪ್ರವೇಶಿಸಿದ ಕಳ್ಳರು ಅಂಗಡಿಯೆಲ್ಲ ಜಾಲಾಡಿ ಬೆಲಬಾಳುವ ಸುಮಾರು 25 ಮೊಬ್ಯಲ್ ಸೆಟ್ ಗಳನ್ನು ಕಳ್ಳತನ ಮಾಡಿದ್ದಾರೆ. ಯಾವಾಗಲೂ ಮೊಬೈಲ್ ಗಳನ್ನು ಮನೆಗೆ ಕೊಂಡೊಯ್ಯುವ ಪರಿಪಾಠ ವಿಟ್ಟುಕೊಂಡಿದ್ದ ಸುರೇಶ್ ಮಳೆಯ ಕಾರಣ ಕೆಲವು ದಿನಗಳಿಂದ ಮೊಬೈಲ್ ಗಳನ್ನು ಅಂಗಡಿಯಲ್ಲಿಯೇ ಇರಿಸುತ್ತರಿದ್ದರೆನ್ನಲಾಗಿದೆ. ಸ್ಥಳಕ್ಕೆ ಪೊಲೀಸ್ ಶ್ವಾನ ದಳವು ಆಗಮಿಸಿತ್ತು ಕಳೆದ ಮಳೆಗಾಲದಲ್ಲಿಯೂ ಸಹಾ ಈ ಭಾಗದ…
