Author: ಸುನಿಲ್ ಹೆಚ್. ಜಿ. ಬೈಂದೂರು

ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

ಸುನಿಲ್ ಬೈಂದೂರು | ಕುಂದಾಪ್ರ ಡಾಟ್ ಕಾಂ | ಮೇ. 2012. ಸಾಧನೆಯೆಂಬುದು ಯಾರೊಬ್ಬರ ಸೊತ್ತಲ್ಲ. ಏನನ್ನಾದರೂ ಸಾಧಿಸಬೇಕೆಂಬ ಹಂಬಲ, ಆತ್ಮಸ್ಥೈರ್ಯ ಜೊತೆಗೊಂದಿಷ್ಟು ಕಠಿಣ ಪರಿಶ್ರವ ಇವಿಷ್ಟಿದ್ದರೆ ಸಾಕು ವ್ಯಕ್ತಿ ತಾನಾಗಿಯೇ ಬೆಳೆಯುತ್ತಾನೆ. ಸಾಧಿಸಿಯೇ ತೀರುತ್ತಾನೆ. ಬಹುಶಃ ಆತನಿಗೆ ಇದಕ್ಕಿಂತ ಹೆಚ್ಚಿನ ಆತ್ಮತೃಪ್ತಿ ಬೇರಾವುದೂ ನೀಡದು. ಬದುಕಿನಲ್ಲಿ ಅಡ್ಡಲಾದ ಟೀಕೆಯನ್ನೇ ಮೆಟ್ಟಿಲಾಗಿಸಿಕೊಂಡು, ಪ್ರೋತ್ಸಾಹದ ಮಾತುಗಳಿಂದ ಮಾರ್ಗವೊಂದನ್ನು ಕಂಡುಕೊಂಡು, ಮನಸ್ಸು ಮಾಡಿದರೆ ಏನನ್ನಾದರೂ ಸಾಧಿಸಬಹುದು ಎಂಬುದನ್ನು ತೋರಿಸಿಕೊಟ್ಟವರು ಕುಂದಾಪುರ ತಾಲೂಕು, ದೇವಲ್ಕುಂದ ಗ್ರಾಮದ ಬಾಳೆಕೆರೆಯ ಉದಯೋನ್ಮುಖ ಕ್ರೀಡಾಪಟು ವಿಶ್ವನಾಥ ಬಿ. ಪವರ್ ಲಿಫ್ಟಿಂಗ್, ವೇಯ್ಟ್ ಲಿಫ್ಟಿಂಗ್, ಡೆಡ್ ಲಿಫ್ಟಿಂಗ್, ಬಾಡಿ ಬಿಲ್ಡಿಂಗ್ ಕ್ಷೇತ್ರದಲ್ಲಿ ವಿಶೇಷ ಛಾಪು ಮೂಡಿಸಿರುವ ಇವರು ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದಲ್ಲೊಂದು ದಾಖಲೆಯನ್ನು ಬರೆದು, ರಾಜ್ಯ-ರಾಷ್ಟ್ರಮಟ್ಟದಲ್ಲೂ ಮಿಂಚಿ ಅಪಾರ ಮೆಚ್ಚುಗೆ ಗೆ ಪಾತ್ರರಾದವರು. ಕುಂದಾಪ್ರ ಡಾಟ್ ಕಾಂ ಲೇಖನ.ಕುಂದಾಪ್ರ ಡಾಟ್ ಕಾಂ ಲೇಖನ. ಚಿಕ್ಕಂದಿನಿಂದಲೂ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದ ಇವರನ್ನು ಆಕರ್ಷಿಸಿದ್ದು ಪವರ್ ಲಿಫ್ಟಿಂಗ್, ವೇಯ್ಟ್ ಲಿಫ್ಟಿಂಗ್ ನಂತಹ ಗಟ್ಟಿಗರ ಕ್ಷೇತ್ರ. ಯಾವುದೂ…

Read More