Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪ.ಜಾ. ವಧು-ವರರ ಮುಖಾಮುಖಿ ಕಾರ್ಯಕ್ರಮ ಉದ್ಘಾಟನೆ
    ಕುಂದಾಪ್ರದ್ ಸುದ್ಧಿ

    ಪ.ಜಾ. ವಧು-ವರರ ಮುಖಾಮುಖಿ ಕಾರ್ಯಕ್ರಮ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ದಲಿತರು ಸಮಾಜದ ಮುಖ್ಯವಾಹಿನಿಗೆ ಬರಲು ಹಿಂಜರಿಯಬಾರದು. ಶಿಕ್ಷಣದಿಂದ ಸುಶಿಕ್ಷಿತರಾಗಿ, ಸಕ್ರಿಯ ಚಟುವಟಿಕೆಗಳಲ್ಲಿ ಸಂಘಟಿತರಾಗಿ ಸಮುದಾಯದ ಮುನ್ನಡೆಗೆ ಜನಪರ ಕೊಡುಗೆಗಳನ್ನು ನೀಡಲು ದಲಿತರು ಮುಂದೆ ಬರಬೇಕು. ಸಮುದಾಯದ ಸಹಾಯದಿಂದ ಉನ್ನತ ಸ್ಥಾನಮಾನ ಪಡೆದವರು ತಮ್ಮ ಸಮಾಜದ ಕಷ್ಟ-ಸುಖ, ನೋವು-ನಲಿವುಗಳಿಗೆ ಸ್ಪಂದಿಸುವ ಚಿಂತನೆ ನಡೆಸಬೇಕು. ವಧು-ವರರ ವೇದಿಕೆ ದಲಿತ ಸಮುದಾಯದ ವೈವಾಹಿಕ ಬಾಂಧವ್ಯಗಳಿಗೆ ಸೇತುವಾಗಿ ಸಮಾಜಮುಖಿ ಕಾರ್ಯ ಕೈಗೊಳ್ಳುವಂತಾದರೆ ಸಾರ್ಥಕತೆ ಸಾಧ್ಯ ಎಂದು ಕುಂದಾಪುರ ಪುರಸಭಾಧ್ಯಕ್ಷೆ ಕಲಾವತಿ ಯು. ಎಸ್. ಅವರು ಹೇಳಿದರು.

    Click Here

    Call us

    Click Here

    ಮೇಲ್‌ಗಂಗೊಳ್ಳಿಯ ಡಾ. ಬಿ. ಆರ್. ಅಂಬೇಡ್ಕರ್ ಯುವಕ ಮಂಡಲ ಪೋಷಿತ ಪರಿಶಿಷ್ಟ ಜಾತಿ ವಧು-ವರರ ವೇದಿಕೆ ಆಶ್ರಯದಲ್ಲಿ ಕುಂದಾಪುರದ ಅಂಬೇಡ್ಕರ್ ಸಭಾಭವನದಲ್ಲಿ ರವಿವಾರ ಜರಗಿದ ಪರಿಶಿಷ್ಟ ಜಾತಿ ವಧು-ವರರ ಮುಖಾಮುಖಿ-2016 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಜಿಲ್ಲಾ ಪಂಚಾಯತ್ ಸದಸ್ಯ ಅನಂತ ಮೊವಾಡಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜಮುಖಿ ಕಾರ್ಯದಲ್ಲಿ ದಲಿತ ಸಮುದಾಯ ಕೈಜೋಡಿಸಬೇಕು. ದಲಿತರ ವೈವಾಹಿಕ ಬಾಂಧವ್ಯಗಳಿಗೆ ಕೊಂಡಿಯಾಗಿ ವೇದಿಕೆ ಉತ್ತಮ ಕಾರ್ಯ ನಿರ್ವಹಿಸಲಿ ಎಂದು ಶುಭಹಾರೈಸಿದರು.

    ಮುಖ್ಯ ಅತಿಥಿ ಬಂಟ್ವಾಳ ಎಲ್‌ಐಸಿ ಆಡಳಿತಾದಿಕಾರಿ ಸುರೇಶ್ ಎಚ್. ಜಿ., ಪಡುಬಿದ್ರೆ ತಾಲೂಕು ಪಂಚಾಯತ್ ಸದಸ್ಯ ಭಾಸ್ಕರ ಪಡುಬಿದ್ರೆ, ಪತ್ರಕರ್ತ ಚಂದ್ರ ಕೆ. ಹೆಮ್ಮಾಡಿ, ದಸಂಸ ಕುಂದಾಪುರ ತಾಲೂಕು ಸಂಘಟನಾ ಕಾರ್ಯದರ್ಶಿ ಮಹೇಶ್ ಜಿ. ಕೆ., ವೇದಿಕೆಯ ಖಜಾಂಚಿ ಅರುಣಕುಮಾರ, ಸತೀಶ್ ಗಂಗೊಳ್ಳಿ, ಲಕ್ಷ್ಮಣ ಬೈಂದೂರು, ಉಮೇಶ್ ಮೊವಾಡಿ, ವೆಂಕಟ ಉಪ್ಪಿನಕುದ್ರು, ಅರುಣ ಹಕ್ಲಾಡಿ, ರಘುರಾಮ ಕೋಟೆಬಾಗಿಲು, ಅಶೋಕ್ ಎನ್. ಡಿ., ಪ್ರೇಮಾನಂದ ಕೆ., ಸುಭಾಶ್ ತಲ್ಲೂರು-ಗುಡ್ಡೆಅಂಗಡಿ ಮೊದಲಾದವರು ಉಪಸ್ಥಿತರಿದ್ದರು. ವೇದಿಕೆಯ ಅಧ್ಯಕ್ಷ ಮೋಹನ ಅದ್ಯಪಾಡಿ ಅವರು ಸ್ವಾಗತಿಸಿದರು. ಸಂಜೀವ ಹೊಸಾಡು ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶೀನ ಕಾವ್ರಾಡಿ ಅವರು ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಭಾಸ್ಕರ ಎಚ್. ಜಿ. ಅವರು ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಧು-ವರರ ಮುಖಾಮುಖಿ ನಡೆಯಿತು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d