Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪೋಲಿಯೋ ಮುಕ್ತ ವಿಶ್ವ, ಅಕ್ಷರಸ್ಥ ರಾಷ್ಟ್ರ ರೋಟರಿ ಗುರಿ: ಗವರ್ನರ್ ಡಾ. ಭರತೇಶ್ ಆದಿರಾಜ್
    Recent post

    ಪೋಲಿಯೋ ಮುಕ್ತ ವಿಶ್ವ, ಅಕ್ಷರಸ್ಥ ರಾಷ್ಟ್ರ ರೋಟರಿ ಗುರಿ: ಗವರ್ನರ್ ಡಾ. ಭರತೇಶ್ ಆದಿರಾಜ್

    Updated:08/01/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ವಿಶ್ವವನ್ನು ಪೋಲಿಯೋ ಮುಕ್ತವಾಗಿಸಬೇಕೆಂದು ರೋಟರಿ ಕಳೆದ ಮೂವತ್ತು ವರ್ಷಗಳಿಂದ ಪಣತೊಟ್ಟಿದೆ. ಭಾರತವೂ ಸೇರಿದಂತೆ ಎಲ್ಲಾ ದೇಶಗಳಲ್ಲಿ ಪೋಲಿಯೋ ನಿರ್ಮೂಲನಾ ಕಾರ್ಯಕ್ರಮ ಸಂಪೂರ್ಣವಾಗಿ ಯಶ ಕಂಡಿದ್ದೆ ಆದರೆ ಪಾಕಿಸ್ಥಾನ ಹಾಗೂ ಅಪ್ಘಾನಿಸ್ಥಾನವನ್ನು ಪೋಲಿಯೋ ಮುಕ್ತವಾಗಿಸಲು ಸಾಧ್ಯವಾಗಿಲ್ಲ. ಭಯೋತ್ಪಾದರ ಬೆದರಿಕೆ ಹಾಗೂ ಪೋಲಿಯೋ ಲಸಿಕೆಯ ಕುರಿತ ಅಪಪ್ರಚಾರ ಈ ಕಾರ್ಯಕ್ಕೆ ಅಡ್ಡಿ ಪಡಿಸುತ್ತಿದೆ ಎಂದು ರೋಟರಿ ಜಿಲ್ಲೆ 3180 ಗವರ್ನರ್ ಡಾ.ಭರತೇಶ್ ಆದಿರಾಜ್ ಆತಂಕ ವ್ಯಕ್ತಪಡಿಸಿದರು.

    Click Here

    Call us

    Click Here

    ಕುಂದಾಪುರ ರೋಟರಿ ನರ್ಸರಿ ಸ್ಕೂಲ್ ಹಾಲ್‌ನಲ್ಲಿ ಪತ್ರಕರ್ತರೊಂದಿಗೆ ನಡೆದ ಸಂವಾದದಲ್ಲಿ ಅವರು ಮಾತನಾಡಿ, ಪೋಲಿಯೋ ನಿರ್ಮೂಲನೆ ರೋಟರಿ ಸಂಸ್ಥೆಯ ಮುಖ್ಯ ಗುರಿ. ಭಯೋತ್ಪಾದಕರ ಅಪಪ್ರಚಾರ ಮತ್ತು ಬೆದರಿಕೆ ನಡುವೆಯೋ ಪೊಲಿಯೋ ನಿರ್ಮೂಲನೆಯತ್ತ ರೋಟರಿ ದಿಟ್ಟ ಹೆಜ್ಜೆಯನ್ನಿಟ್ಟಿದೆ. ವಿಶ್ವ ಪೋಲಿಯೋ ಮುಕ್ತವಾಗುವವರೆಗೂ ಪೋಲಿಯೋ ನಿರ್ಮೂಲನೆ ಕಾರ‍್ಯಕ್ರಮ ಮುಂದುವರಿಯಲಿದೆ ಎಂದು ಹೇಳಿದರು.

    ವಿಶ್ವ ಭ್ರಾತತ್ವ ಹಾಗೂ ಶಾಂತಿ ಎಂಬ ಧ್ಯೇಯವಾಕ್ಯದೊಂದಿಗೆ ರೋಟರಿ ಮುನ್ನಡೆಯುತ್ತಿದ್ದು ಶಾಂತಿ ದೂತರ ಮೂಲಕ ಪ್ರಪಂಚದಾದ್ಯಂತ ಶಾಂತಿ ಸೌಹಾರ್ದತೆಯನ್ನು ಕಾಯುವ ಕೆಲಸ ಮಾಡಲಾಗುತ್ತಿದೆ. ರೋಟರಿಯ ಶಾಂತಿದೂತ ರಾಯಭಾರಿಗಳಿಗೆ ವಿಶ್ವದ ಆರು ದೇಶಗಳಲ್ಲಿ ವಿಶ್ವವಿದ್ಯಾನಿಲಯಗಳ ಮೂಲಕ ತರಬೇತಿ ನೀಡಲಾಗುತ್ತಿದ್ದು, ಆಂತರಿಕ ಬಿಟ್ಟಕ್ಕು ಇರುವಲ್ಲಿ ಅವರು ಕಾರ್ಯನಿರ್ವಹಿಸಲಿದ್ದಾರೆ ಎಂದರು.

    ಸಾಕ್ಷರತೆಗಾಗಿ ‘ಟೀಚ್’. ಕುಂದಾಪುರ 30 ಶಾಲೆಗಳಿಗೆ ಇ-ಲರ್ನಿಂಗ್ ಕಿಟ್:
    ಸಂಪೂರ್ಣ ಸಾಕ್ಷರತೆ ಸಾಧಿಸುವುದಕ್ಕಾಗಿ ದಕ್ಷಿಣ ಏಷ್ಯಾದ ರಾಷ್ಟ್ರಗಳಲ್ಲಿ ಕಳೆದ ವರ್ಷದಿಂದ ಟೀಚ್ ಎನ್ನುವ ಕಾರ್ಯಕ್ರಮ ರೋಟರಿ ಕೈಗೆತ್ತಿಕೊಂಡಿದ್ದು ಶಿಕ್ಷಕರ ಕೊರತೆಯನ್ನು ನೀಗಿಸುವುದು, ವಿದ್ಯಾರ್ಥಿಗಳು ಹಾಗೂ ವಯಸ್ಕರ ಶಿಕ್ಷಣ, ಆಧುನಿಕ ಪದ್ಧತಿಯ ಶಿಕ್ಷಣವನ್ನು ಇದು ಒಳಗೊಂಡಿದೆ. ಸಹಾಯಕ ಗವರ್ನರ್ ಸತೀಶ್ ಎನ್. ಶೇರುಗಾರ್ ಅವರ ಮುಂದಾಳತ್ವದಲ್ಲಿ ಕುಂದಾಪುರ ಗ್ರಾಮೀಣ ಭಾಗದ 30 ಶಾಲೆಗಳನ್ನು ಆಯ್ಕೆಮಾಡಿಕೊಂಡು ಇ ಕಿಟ್ ನೀಡಲಾಗುತ್ತಿದೆ. ಗ್ರಾಮೀಣ ಭಾಗದ ವಿದ್ಯುತ್ ಕಾಣದ ಮನೆಯ ಮಕ್ಕಳಿಗೆ ಸೋಲಾರ್ ಲೈಟ್ ನೀಡಲಾಗುತ್ತಿದೆ. ರಾಜ್ಯದ 450 ಮನೆಗಳಿಲ್ಲಿ ಕುಂದಾಪುರದ 20 ಮನೆಗಳಿಗೆ ಸೋಲಾರ್ ದೀಪ ನೀಡಲಾಗುತ್ತಿದೆ. ಇದೆಲ್ಲವೂ ಶಿಕ್ಷಣವನ್ನು ಉತ್ತೇಜಿಸುವ ಮತ್ತು ಮಕ್ಕಳು ಸಂತೋಷದಿಂದ ಕಲಿಯುವ ಸಲುವಾಗಿ ಮಾಡಲಾಗಿದೆ. ಇದರೊಂದಿಗೆ ದೇಶಾದ್ಯಂತ ಆಶಾಕಿರಣ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಶಿಕ್ಷಣಕ್ಕಾಗಿ ಮಕ್ಕಳ ದತ್ತು ಸ್ವೀಕಾರ ಮಾಡಿ ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು.

    ರೋಟರಿ ಫೌಂಡೇಶನ್:
    ರೋಟರಿ ಫೌಂಡೇಶನ್ ಮೂಲಕ ಪ್ರಪಂಚದ ಬಡ ಜನರ ಸಹಾಯಕ್ಕಾಗಿ, ಮಾನವೀಯ ಕಾರ್ಯಕ್ಕಾಗಿ ಪಣ ತೊಟ್ಟಿದ್ದು ಪ್ರತಿ ಗವರ್ನರ್‌ಗೆ ಐದು ಲಕ್ಷ ಡಾಲರ್ ಹಣ ಸಂಗ್ರಹಿಸಿ ದೇಣಿಗೆ ನೀಡಲು ನೆರವಾಗುವಂತೆ ಸೂಚನೆ ನೀಡಲಾಗಿದೆ. ಅದರಂತೆ ಜಿಲ್ಲೆಯ 140 ರೋಟರಿ ಕ್ಲಬ್ ಹಾಗೂ ಸಾರ್ವಜನಿಕರು ಫೌಂಡೇಶನ್‌ನ ಈ ಮಹತ್ತರವಾದ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ.

    Click here

    Click here

    Click here

    Call us

    Call us

    ರೋಟರಿ ಸಹಾಯಕ ಗವರ್ನರ್ ಸತೀಶ್ ಎನ್. ಶೇರುಗಾರ್, ರೋಟರಿ ಕುಂದಾಪುರ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಕೊಡ್ಲಾಡಿ ಸುಭಾಸ್‌ಚಂದ್ರ ಶೆಟ್ಟಿ, ಕಾರ್ಯದರ್ಶಿ ಸಂತೋಷ್ ಕೋಣಿ, 2016-17ನೇ ಸಾಲಿನ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಇದ್ದರು.

     _MG_7980 _MG_7982 _MG_7989 _MG_7993

    Like this:

    Like Loading...

    Related

    Rotary Kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d