Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತಗ್ಗರ್ಸೆ ಮೊಗವೀರ ಗರಡಿ ಶ್ರೀ ಜೈನ ಜಟ್ಟಿಗೇಶ್ವರ ದೈವಸ್ಥಾನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ಹಾಲುಹಬ್ಬ
    Uncategorized

    ತಗ್ಗರ್ಸೆ ಮೊಗವೀರ ಗರಡಿ ಶ್ರೀ ಜೈನ ಜಟ್ಟಿಗೇಶ್ವರ ದೈವಸ್ಥಾನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ಹಾಲುಹಬ್ಬ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬೈಂದೂರು: ಇಲ್ಲಿನ ಬಹುಪ್ರಸಿದ್ಧ ಪುರಾತನ ಕಾರಣಿಕ ಕ್ಷೇತ್ರ ತಗ್ಗರ್ಸೆ ದೊಡ್ಡ ಮೊಗವೀರ ಗರಡಿ ಶ್ರೀ ಜೈನ ಜಟ್ಟಿಗೇಶ್ವರ ದೈವಸ್ಥಾನದಲ್ಲಿ ಜನವರಿ 16ರಿಂದ 20ರ ವರೆಗೆ ಶ್ರೀ ಜೈನ ಜಟ್ಟಿಗೇಶ್ವರ ಮತ್ತು ಸಪರಿವಾರ ದೈವ ಹಾಗೂ ನಾಗದೇವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ವಾರ್ಷಿಕ ಗೆಂಡಸೇವೆ, ಹಾಲುಹಬ್ಬ ವಿಜೃಂಭಣೆಯಿಂದ ಜರುಗಲಿದೆ.

    Click Here

    Call us

    Click Here

    ದೊಡ್ಡಮೊಗವೀರ ಗರಡಿಯಲ್ಲಿ ಶ್ರೀ ಜೈನಜಟ್ಟಿಗೇಶ್ವರ ಹಾಗೂ ನಲವತ್ತೆಂಟು ಸಪರಿವಾರ ದೈವಗಳಿವೆ. ಅನಾದಿ ಕಾಲದಿಂದಲೂ ಪೂಜಿಸುತ್ತಾ ಬಂದಿರುವ ಈ ದೈವಸ್ಥಾನದ ಬಗ್ಗೆ ಭಕ್ತರಲ್ಲಿಯೂ ಅಪಾರವಾದ ನಂಬಿಕೆ ಬೇರೂರಿದೆ. ಎಂತಹ ಸಂಕಷ್ಟದ ಪರಿಸ್ಥಿತಿಯಲ್ಲಿಯೂ ತಾನು ನಂಬಿದ ದೈವವನ್ನು ಸ್ಮರಿಸಿದರೇ ಕಷ್ಟ ದೂರವಾಗುವುದು ಎಂಬುದು ಹಲವಾರು ನಿದರ್ಶನಗಳ ಮೂಲಕವೂ ಸಾಬೀತಾಗಿದೆ. ಹಾಗಾಗಿಯೇ ವರ್ಷಕ್ಕೊಮ್ಮೆಯಾದರೂ ಎಲ್ಲಿಯೇ ಇರಲಿ ಮೊಗವೀರ ಗರಡಿಗೆ ಬಂದು ದೇವರಿಗೆ ಹರಕೆ, ಪೂಜೆ ಸಲ್ಲಿಸಿ ತೆರಳುತ್ತಾರೆ. ತಗ್ಗರ್ಸೆ, ಬೈಂದೂರು ಭಾಗದ ಭಕ್ತರಷ್ಟೇ ಅಲ್ಲದೇ ಉಡುಪಿ, ಶಿವಮೊಗ್ಗ, ಉತ್ತರಕನ್ನಡ ಜಿಲ್ಲೆಯ ಜನರು, ಬೆಂಗಳೂರು, ಮುಂಬೈಗಳಲ್ಲಿ ನೆಲೆಸಿರುವವರು ತಾವು ನಂಬಿದ ದೇವರನ್ನು ಕಾಣಲು ಹಬ್ಬದ ದಿನ ಬಂದು, ಹರಕೆ, ಪೂಜೆ ಸಲ್ಲಿಸಿ ಕೃತಾರ್ಥರಾಗುತ್ತಾರೆ. ಇದು ಅಂದಿನಿಂದ ಇಂದಿನ ವರೆಗೂ ನಡೆದು ಬಂದಿದೆ.

    ಬಹಳ ಪುರಾತನವಾದ ದೈವಸ್ಥಾನ ಮೊದಲು ಹುಲ್ಲಿನ ಹೊದಿಕೆಯಿಂದ ಕೂಡಿತ್ತು. ಮುಂದೆ ಹಂಚಿನ ಹೊದಿಕೆ ಮಾಡಲಾಯಿತು. ಕಾಲಕ್ರಮೇಣ ಭಕ್ತರ ಸಹಕಾರದಿಂದ ದೈವಸ್ಥಾನ ಸುಸಜ್ಜಿತ ಕಾಂಕ್ರಿಟ್ ಹೊದಿಕೆಯೊಂದಿಗೆ ನಿರ್ಮಾಣಗೊಂಡಿತು. ದೈವಸ್ಥಾನದಲ್ಲಿ ದಿನಪೂಜೆ, ಸಂಕ್ರಾಂತಿ ಪೂಜೆ ಹಾಗೂ ವಾರ್ಷಿಕ ಪೂಜೆಗಳು ಕ್ರಮವತ್ತಾಗಿ ನಡೆದು ಬಂದಿದೆ. ಜೀರ್ಣೋದ್ಧಾರವಾದ ಬಳಿಕ ನಂಬಿದ ಭಕ್ತರು ತನು ಮನ ಧನ ಸಹಾಯ ಮಾಡಿದ್ದರಿಂದಾಗಿ ಎರಡು ದಿನದ ಅನ್ನಸಂತರ್ಪಣೆ ನಡೆಸಿಕೊಂಡು ಬರಲಾಗುತ್ತಿದೆ. ದೇವರನ್ನು ನಂಬಿದ ಕುಟುಂಬದವರು ತಮ್ಮ ಸ್ವಇಚ್ಛೆಯಿಂದ ಅನ್ನಸಂತರ್ಪಣೆ ಸೇವೆಗೆ ಮುಂದಾಗುತ್ತಿದ್ದು 2027ರ ವರೆಗೆ ಈ ಸೇವೆಗಾಗಿ ಮುಂಗಡ ಹೆಸರು ನೊಂದಾಯಿಸುವುದು ಭಕ್ತಿಯ ಪರಾಕಾಷ್ಠೆಗೆ ಸಾಕ್ಷಿಯಾಗಿದೆ.

    ಐದು ದಿನಗಳ ಕಾರ್ಯಕ್ರಮ:
    ಜ.16 ಸಂಜೆ ಹಾಗೂ ಜ.17ರಂದು ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೇರವೇರಿದರೇ, ಎರಡನೇ ದಿನ ರಾತ್ರಿ ಮಯ್ಯಾಡಿ ಶಾಲಾ ಮಕ್ಕಳಿಂದ ನೃತ್ಯ ವೈವಿಧ್ಯ ಜರುಗಲಿದೆ. ಜನವರಿ 18ರಂದು ಬ್ರಹ್ಮಕಲಶಾಭಿಶೇಷ, ಪೂರ್ಣಹುತಿ, ಮಹಾಮಂಗಳಾರತಿಯ ಬಳಿಕ ಮಹಾ ಅನ್ನಸಂತರ್ಪಣೆ ನಡೆದರೇ, ಅದೇ ದಿನ ಬೆಳಿಗ್ಗೆ ಧಾರ್ಮಿಕ ಸಭಾ ಕಾರ್ಯಕ್ರಮ, ಮಧ್ಯಾಹ್ನ ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ಕೃಷ್ಣ ಸಂಧಾನ ಯಕ್ಷಗಾನ ತಾಳಮದ್ದಳೆ, ರಾತ್ರಿ ಕಲಾತರಂಗ ಬಸ್ರೂರು ಕಲಾವಿದರಿಂದ ಸಾದ್ನಿ ಮಾಡದ್ ಯಾರ್? ನಾಟಕ ಪ್ರದರ್ಶನಗೊಳ್ಳಲಿದೆ. ಜನವರಿ 19ರ ಸಂಜೆ ಬಸ್ರೂರು ಜಗದೀಶ ಕುಮಾರ್ ಮತ್ತು ಬಳಗದಿಂದ ಭಕ್ತಿ ರಸಮಂಜರಿ ರಾತ್ರಿ ಗೆಂಡಸೇವೆ ಹಾಗೂ ಅನ್ನಸಂತರ್ಪಣೆ, ಬಳಿಕ ಶನೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ನೂತನ ಪ್ರಸಂಗ ಯಕ್ಷಗಾನ ಬಯಲಾಟ ನಡೆಯಲಿದೆ. ಜ.20ರಂದು ಮಹಾ ಅನ್ನಸಂತರ್ಪಣೆಯೊಂದಿಗೆ ವಾರ್ಷಿಕ ಧಾರ್ಮಿಕ ಉತ್ಸವ ಸಮಾಪನಗೊಳ್ಳಲಿದೆ.

    IMG-20160114-WA0069 IMG-20160114-WA0072 IMG-20160114-WA0070

    Click here

    Click here

    Click here

    Call us

    Call us

    Like this:

    Like Loading...

    Related

    Dodda Mogaveera Garadi Thaggarse Thaggarse
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ

    05/12/2025

    ಕಥೆ ಹೇಳುವ ಸ್ಪರ್ಧೆಯಲ್ಲಿ ಮದರ್ ತೆರೇಸಾ ಪ್ರಾಥಮಿಕ ಶಾಲೆಯ ಪ್ರಣತಿ ಶೆಟ್ಟಿಗೆ ದ್ವಿತೀಯ ಸ್ಥಾನ

    01/12/2025

    ಹಿಂದಿ ಭಾಷಣ ಸ್ಪರ್ಧೆ: ಮದರ್ ತೆರೇಸಾ ಪಿಯು ಕಾಲೇಜಿನ ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿಗೆ ದ್ವಿತೀಯ ಸ್ಥಾನ

    01/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌
    • ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d