Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಜ್ಯ ಸರಕಾರ ಜನಸಾಮಾನ್ಯರ ಬದುಕಿನೊಂದಿಗೆ ಚಲ್ಲಾಟವಾಡುತ್ತಿದೆ: ಬಿ.ಎಸ್.ವೈ
    ಊರ್ಮನೆ ಸಮಾಚಾರ

    ರಾಜ್ಯ ಸರಕಾರ ಜನಸಾಮಾನ್ಯರ ಬದುಕಿನೊಂದಿಗೆ ಚಲ್ಲಾಟವಾಡುತ್ತಿದೆ: ಬಿ.ಎಸ್.ವೈ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಬೈಂದೂರು: ಅಸಮರ್ಥ ಸಚಿವರ ತಂಡ ಕಟ್ಟಿಕೊಂಡು ರಾಜ್ಯಭಾರ ಮಾಡುತ್ತಿರುವ ಮುಖ್ಯಮಂತ್ರಿ. ಭ್ರಷ್ಟಾಚಾರದಿಂದ ತಾಂಡವವಾಡುತ್ತಿರುವ ರಾಜ್ಯ. ಸರಕಾರದಿಂದ ಮಂಜೂರಾದ ಅಭಿವೃದ್ಧಿ ಕಾರ್ಯಗಳು ಅನುಷ್ಟಾನಗೊಳ್ಳದೇ ಸ್ಥಗಿತಗೊಂಡಿದ್ದು, ರಾಜ್ಯದ ತುಘಲಕ್ ಸರಕಾರಕ್ಕೆ ಬುದ್ದಿ ಕಲಿಸುವ ಕಾಲ ಸನ್ನಿಹಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಲಿ ಸಂಸದ ಬಿ.ಎಸ್.ಯಡಿಯೂರಪ್ಪ ಹೇಳಿದರು.

    Click Here

    Call us

    Click Here

    ಗೋಳಿಹೊಳೆಯಲ್ಲಿ ಸಂಜೆ ನಡೆದ ಬೈಂದೂರು ಜಿಪಂ, ತಾಪಂ ಬಹಿರಂಗ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಅಧಿಕಾರದ ಮದವೇರಿದ ಮುಖ್ಯಮಂತ್ರಿ ಎಲ್ಲದಕ್ಕೂ ಕೇಂದ್ರದ ಕಡೆ ಕೈತೋರಿಸುತ್ತಿದ್ದಾರೆ. ಜನವಿರೋಧಿ ನೀತಿ ಅನುಸರಿಸಿ ಸಾಮಾನ್ಯ ಜನರ ಜೀವನದೊಂದಿಗೆ ಚೆಲ್ಲಾಟವಾಡುತ್ತಿರುವ ಸರಕಾರಕ್ಕೆ ಅನ್ನದಾತರ ಸರಣಿ ಆತ್ಮಹತ್ಯೆಗಳು ನಡೆಯುತ್ತಿದ್ದರೂ ಮುಖ್ಯಮಂತ್ರಿಗಳು ಪರಿಹಾರ ನೀಡಲಿಕ್ಕೂ ಸಬೂಬು ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ. ಈ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಅನ್ಯಾಯ, ಅಧರ್ಮ, ಅತ್ಯಾಚಾರ, ಭೃಷ್ಟಾಚಾರ ಹೆಚ್ಚಾಗಿದ್ದು ಕಾನೂನು ಸುವ್ಯವಸ್ಥೆ ಸರ್ವನಾಶವಾಗಿದೆ. ದೇಶದ ಭದ್ರತೆ ಕಾಂಗ್ರೆಸ್‌ಗೆ ಸಂಬಂಧಿಸಿಲ್ಲ ಎಂಬಂತೆ ರಾಜ್ಯ ಸರಕಾರ ವರ್ತಿಸುತ್ತಿದೆ ಎಂದು ಸರಕಾರದ ವಿರುದ್ದ ಹರಿಹಾಯ್ದರು.

    ಹಿಂದೆ ಬಿಜೆಪಿ ಸರಕಾರ ಮಾಡಿದ ಹತ್ತು-ಹಲವು ಯೋಜನೆಗಳ ಅನುಷ್ಟಾನಗಳ ಪ್ರಮಾಣ ನಿಧಾನಗತಿಯಲ್ಲಿ ಸಾಗುತ್ತಿದೆ. ಮುಖ್ಯಮಂತ್ರಿಗಳೇ ಸ್ವತಃ ಹಣಕಾಸು ಇಲಾಖೆಯನ್ನು ನೋಡಿಕೊಳ್ಳುತ್ತಿದ್ದರೂ ಕೇಂದ್ರದಿಂದ ಬಂದ ಅನುದಾನ, ಅಭಿವೃದ್ದಿ ಯೋಜನೆಗಳಿಗಾಗಿ ವ್ಯಯಿಸಿದ ಹಣದ ಲೆಕ್ಕಾಚಾರದ ಬಗ್ಗೆ ಅವರಿಗೆ ಮಾಹಿತಿಯಿಲ್ಲ. ಬಜೆಟ್‌ನಲ್ಲಿ ಮೀಸಲಿರಿಸಿದ ಹಣ ಖರ್ಚುಮಾಡದೇ ಜನರಿಗೆ ವಂಚಿಸುತ್ತಿದ್ದು, ಸದಾ ನಿದ್ದೆಯಲ್ಲಿರುವ ಸರಕಾರ ಅತ್ಯಂತ ದಯನೀಯಸ್ಥಿತಿಗೆ ಬಂದು ನಿಂತಿದೆ ಎಂದು ಬಿಎಸ್‌ವೈ ಕುಟುಕಿದರು. ಮುಂದಿನ ಎರಡು ವರ್ಷ ರಾಜ್ಯದ ಮೂಲೆಮೂಲೆಯಲ್ಲಿ ಸಂಚರಿಸಿ ಪಕ್ಷದ ಬಲವರ್ಧನೆಗಾಗಿ ಶ್ರಮಿಸುತ್ತೇನೆ. ಈಗಿನ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆದು ಬಿಜೆಪಿಯನ್ನು ಅಧಿಕಾರಕ್ಕೇರಿಸುವ ತನಕ ವಿರಮಿಸಲಾರೆ ಎಂದರು.

    ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ.ಎಂ.ಸುಕುಮಾರ್ ಶೆಟ್ಟಿ ಅಧ್ಯಕ್ಷತೆವಹಿಸಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಜಿಪಂ ಮಾಜಿ ಸದಸ್ಯೆ ಸುಪ್ರೀತಾ ದೀಪಕ್‌ಕುಮಾರ್ ಶೆಟ್ಟಿ, ಸುನಿಲ್ ಭಟ್ಕಳ ನೇತೃತ್ವದ ತಂಡ, ಮೆಟ್ಟಿನಹೊಳೆ ಗ್ರಾಮಸ್ಥರನ್ನು ಬಿಎಸ್‌ವೈ ಪಕ್ಷಕ್ಕೆ ಬರಮಾಡಿಕೊಂಡರು.

    ವೇದಿಕೆಗೆ ಬಂದವರೇ ಅಸೀನರಾಗುವ ಮೊದಲು ಮೈಕ್ ಹಿಡಿದ ಯಡಿಯೂರಪ್ಪ ಸಿಯಾಚಿನ್‌ನಲ್ಲಿ ಆರು ದಿನ ಹಿಮದಡಿ ಸಿಲುಕಿ ಸಾವನ್ನು ಗೆದ್ದುಬಂದರೂ ನಂತರ ಚಿಕಿತ್ಸೆ ಫಲಕಾರಿಯಾಗದೇ ಹುತಾತ್ಮರಾದ ವೀರಕನ್ನಡಿಗ ಯೋಧ ಲಾನ್ಸ್‌ನಾಯಕ್ ಹನುಮಂತಪ್ಪ ಕೊಪ್ಪದ ಅವರ ಆತ್ಮಕ್ಕೆ ಶಾಂತಿಕೋರಿ ಪ್ರಾರ್ಥಿಸುವಂತೆ ಜನರಲ್ಲಿ ಮನವಿ ಮಾಡಿದರು. ಸಭೆಯಲ್ಲಿ ನೆರೆದಿದ್ದ ಸಹಸ್ರಾರು ಜನರು ಸಾಮೂಹಿಕ ಮೌನಪ್ರಾರ್ಥನೆ ಮೂಲಕ ಯೋಧನಿಗೆ ಶೃದ್ದಾಂಜಲಿ ಸಲ್ಲಿಸಿದರು.

    Click here

    Click here

    Click here

    Click Here

    Call us

    Call us

    ವಿಧಾನಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕ ಕೆ.ಲಕ್ಷ್ಮೀನಾರಾಯಣ, ಗೋಳಿಹೊಳೆ ಗ್ರಾಪಂ ಅಧ್ಯಕ್ಷ ರಾಜು ಪೂಜಾರಿ, ರಾಜ್ಯ ಬಿಜೆಪಿ ರೈತಮೋರ್ಚಾ ಉಪಾಧ್ಯಕ್ಷ ದೀಪಕ್‌ಕುಮಾರ್ ಶೆಟ್ಟಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಗುರುರಾಜ ಗಂಟಿಹೊಳೆ, ಬೈಂದೂರು ಜಿಪಂ ಅಭ್ಯರ್ಥಿ ಶಂಕರ ಪೂಜಾರಿ, ಶಿರೂರು ಜಿಪಂ ಅಭ್ಯರ್ಥಿ ಸುರೇಶ ಬಟವಾಡಿ, ತಾಪಂ ಅಭ್ಯರ್ಥಿಗಳಾದ ಬಿ.ಎಸ್.ಸುರೇಶ ಶೆಟ್ಟಿ, ಮಾಲಿನಿ ಕೆ., ವಿದ್ಯಾವತಿ ಕನ್ನಂತ, ಸುಜಾತ ದೇವಾಡಿಗ, ಶಕ್ತಿಕೇಂದ್ರದ ಎಂ.ಆರ್.ಶೆಟ್ಟಿ, ವೆಂಕಟ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಪಡುವರಿ ಗ್ರಾಪಂ ಉಪಾಧ್ಯಕ್ಷ ಸದಾಶಿವ ಡಿ ನಿರೂಪಿಸಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ವಂದಿಸಿದರು.

    Kundapra.com ?????????? ?????????? ?????????? ??????????Kundapra.com

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    five − two =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.