Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕನ್ನಡ ಮಾಧ್ಯಮ ಉಳಿಸುವುದು ಸದ್ಯದ ತುರ್ತು: ಲಾವಣ್ಯ ರಂಗಸಂಭ್ರಮ ಸಮಾರೋಪದಲ್ಲಿ ಸುರೇಂದ್ರ ಅಡಿಗ
    ಊರ್ಮನೆ ಸಮಾಚಾರ

    ಕನ್ನಡ ಮಾಧ್ಯಮ ಉಳಿಸುವುದು ಸದ್ಯದ ತುರ್ತು: ಲಾವಣ್ಯ ರಂಗಸಂಭ್ರಮ ಸಮಾರೋಪದಲ್ಲಿ ಸುರೇಂದ್ರ ಅಡಿಗ

    Updated:14/03/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಬೈಂದೂರು: ನಾಟಕದಂತಹ ರಂಗಕಲೆಗಳು ಮಕ್ಕಳನ್ನು ಸೃಜನಾತ್ಮಕವಾಗಿ ತೊಡಗಿಕೊಳ್ಳುವಂತೆ ಮಾಡುವುದರೊಂದಿಗೆ ಅವರ ಬೌದ್ಧಿಕ ಬೆಳವಣಿಗೆಗೂ ಪೂರಕವಾಗಿ ನಿಲ್ಲುತ್ತವೆ. ಶಾಲೆಗಳಲ್ಲಿ ಪಠ್ಯವನ್ನು ರಂಗಕಲೆಗಳ ಮೂಲಕ ಮಕ್ಕಳಿಗೆ ಭೋಧಿಸುವಂತಾದರೆ ಅದು ಬಹುಬೇಗ ಮಕ್ಕಳಿಗೆ ತಲುಪುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹೇಳಿದರು.

    Click Here

    Call us

    Click Here

    ಲಾವಣ್ಯ ರಿ. ಬೈಂದೂರು ಆಶ್ರಯದಲ್ಲಿ ಬೈಂದೂರಿನ ಶಾರದಾ ವೇದಿಕೆಯಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾದ ರಂಗ ಸಂಭ್ರಮ-೨೦೧೬ರ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಕನ್ನಡ ಮಾಧ್ಯಮದಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ. ಕನ್ನಡ ಶಾಲೆಗಳಲ್ಲಿ ಬಲಪಡಿಸಬೇಕಾದರೇ ಅಲ್ಲಿಯೂ ಒಂದು ಇಂಗ್ಲಿಷ್ ಮಾಧ್ಯಮವನ್ನು ಆರಂಭಸಬೇಕು ಎಂಬ ಮಾತುಗಳ ಕೇಳಿಬರುತ್ತಿವೆ. ಆದರೆ ಕನ್ನಡ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಇಂಗ್ಲಿಷ್ ಮಾಧ್ಯಮ ಆರಂಭಗೊಂದರೇ ಕನ್ನಡವೇ ಇಲ್ಲವಾದಂತಾಗುತ್ತದೆ. ಮಕ್ಕಳು ಇಂಗ್ಲಿಷ್ ಕಲಿಯಲು ನಮ್ಮ ಅಭ್ಯಂತರವಿಲ್ಲ. ಇಂಗ್ಲಿಷ್ ಪರಿಣಾಮಕಾರಿ ಭೋಧನೆಗೆ ಉತ್ತಮ ಶಿಕ್ಷಕರನ್ನು ನೇಮಿಸಲು ಪ್ರಯತ್ನಿಸೋಣ. ಆದರೆ ಕನ್ನಡ ಶಾಲೆಗಳಲ್ಲಿ ಕನ್ನಡ ಮಾಧ್ಯಮವೇ ಇರಲಿ ಎಂದು ಆಶಿಸೋಣ. ಒಂದು ವೇಳೆ ಕನ್ನಡ ಶಾಲೆಗೆ ಧಕ್ಕೆ ಬರುವ ಸ್ಥಿತಿ ಬಂದರೇ ಉಪವಾಸ ಸತ್ಯಾಗ್ರಹಕ್ಕೂ ಸಿದ್ಧ ಎಂದರು.

    ಲಾವಣ್ಯ ಬೈಂದೂರು ಗೌರವಾಧ್ಯಕ್ಷ ಯು. ಶ್ರೀನಿವಾಸ ಪ್ರಭು ಅಧ್ಯಕ್ಷತೆ ವಹಿಸಿದ್ದರು. ಉಡುಪಿ ರಂಗಭೂಮಿಯ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ಚಂದ್ರ ಕುತ್ಪಾಡಿ, ಲಾವಣ್ಯದ ಅಧ್ಯಕ್ಷ ಬಿ. ರಾಮ ಟೈಲರ್ ಉಪಸ್ಥಿತರಿದ್ದರು.

    ರಂಗ ಕಲಾವಿದ ಗೋಪಾಲ ಪಡುವರಿ ಅವರನ್ನು ಸನ್ಮಾನಿಸಲಾಯಿತು. ಎರಡನೇ ಅವಧಿಗೆ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಆಯ್ಕೆಗೊಂಡ ನೀಲಾವರ ಸುರೇಂದ್ರ ಅಡಿಗ ಅವರನ್ನು ಗೌರವಿಸಲಾಯಿತು. ಲಾವಣ್ಯದ ಸದಸ್ಯ ದಯಾನಂದ, ಸ್ವಾಗತಿಸಿದರು. ಪ್ರಸನ್ನ ಸನ್ಮಾನಿತರ ಪರಿಚಯ ಪತ್ರ ವಾಚಿಸಿದರು. ಲಾವಣ್ಯದ ಕಾರ್ಯದರ್ಶಿ ನರಸಿಂಹ ಬಿ. ನಾಯಕ್ ಧನ್ಯವಾದಗೈದರು. ಉದಯ ಆಚಾರ್ ಕಾರ್ಯಕ್ರಮ ನಿರೂಪಿಸಿದರು. ಸುಮಾನಸ ಕೊಡವೂರು-ಉಡುಪಿ ಪ್ರಸ್ತುತಿಯ ಚೇತನ ತುಮಕೂರು ನಿರ್ದೇಶನದ ದಾರಾಶಿಕೊ ನಾಟಕ ಪ್ರದರ್ಶನಗೊಂಡಿತು.

     Lavanya Byndoor Ranga Sambrama Samaropa (2) _MG_7754

    Click here

    Click here

    Click here

    Click Here

    Call us

    Call us

    Lavanya R. Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    two × one =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.