Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಂಸ್ಕೃತಿ-ಸಂಪ್ರದಾಯದ ಕೊಂಡಿ ಮರಾಠಿ ಸಮುದಾಯದ ಹೋಳಿ ಕುಣಿತ
    Recent post

    ಸಂಸ್ಕೃತಿ-ಸಂಪ್ರದಾಯದ ಕೊಂಡಿ ಮರಾಠಿ ಸಮುದಾಯದ ಹೋಳಿ ಕುಣಿತ

    Updated:21/03/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ
    ಆಧುನಿಕತೆಯತ್ತ ಮುಖಮಾಡಿರುವ ಮಾನವರು ತಮ್ಮ ಸಂಸ್ಕೃತಿ-ಸಂಪ್ರದಾಯಗಳನ್ನು ಮರೆತು ನಡೆಯುತ್ತಿರುವ ಹೊತ್ತಿನಲ್ಲಿಯೂ ಮರಾಠಿ, ಗೊಂಡ ಸಮುದಾಯದ ಹೋಳಿಕುಣಿತ ಹಾಗೂ ಹೊಳಿ ಹಬ್ಬ ಇಂದಿಗೂ ನಮ್ಮ ನಡುವಿನ ಸಂಪ್ರದಾಯ ಕೊಂಡಿಯಾಗಿ ಉಳಿದಿದೆ.

    Click Here

    Call us

    Click Here

    ಈ ಜನಾಂಗದ ಹೊಳಿ ಕುಣಿತ ಒಂದು ವಿಶಿಷ್ಟ ಜನಪದ ಕಲೆ. ಕುಂದಾಪುರ ತಾಲೂಕಿನ ಬೇರೆ ಬೇರೆ ಭಾಗಗಳಲ್ಲಿ ನೆಲೆಸಿರುವ ಮರಾಠಿಗರು ವರ್ಷಂಪ್ರತಿ ಶಿವರಾತ್ರಿಯ ಬಳಿಕ ನಿಷ್ಠೆಯಿಂದ ಹೋಳಿ ಆಚರಿಸುತ್ತಾರೆ. ಎಲ್ಲೂರು ಬಾಳಕೊಡ್ಲುವಿನ ಮರಾಠಿ ಸಮುದಾಯದವರು ಏಳು ದಿನಗಳ ಕಾಲ ಹೊಳಿಯನ್ನು ಸಂಭ್ರಮಿಸುತ್ತಾರೆ. ಎಲ್ಲೂರು ಸುತ್ತಲಿನ 47 ಮರಾಠಿ ಕುಟುಂಬಿಕರು ತಮ್ಮ ಗುರಿಕಾರರ ಮನೆಯಲ್ಲಿ ಸೇರಿ ಹಬ್ಬ ಆಚರಿಸುವ ಬಗ್ಗೆ ತಿರ್ಮಾನ ಕೈಗೊಂಡು, ಅದರಂತೆ ಸಮುದಾಯದ ದೇವರಾದ ಶ್ರೀ ಸಿದ್ದೇಶ್ವರನಿಗೆ ಪೂಜೆ ಸಲ್ಲಿಸಿ ದೇವರ ಅಣತಿಯಂತೆ ಮುಂದುವರಿಯುತ್ತಾರೆ.  ಕುಂದಾಪ್ರ ಡಾಟ್ ಕಾಂ ವರದಿ

    ಮನೆ ಮನೆ ತಿರುಗಾಟ, ಹಾಡು: ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಹೋಳಿ ಕುಣಿತಕ್ಕೆ ಮೂರು ತಂಡಗಳನ್ನು ರಚಿಸಿಕೊಂಡು ಮನೆ ಮನೆ ತಿರುಗಾಟ ಆರಂಭಿಸಲಾಗುತ್ತದೆ. ಈ ಸಂದರ್ಭದಲ್ಲಿ ಕೇಸರಿ ರುಮಾಲು, ಪಂಜೆ ಕೊಟ್ಟು ವಿಶೇಷ ವೇಷಭೂಷಣ ಧರಿಸಿ ತಿರುಗಾಡುತ್ತಾರೆ. ಪ್ರತಿ ಮನೆಯವರಿಂದ ಹಣ ಅಥವಾ ಅಕ್ಕಿ, ಕಾಯಿಯನ್ನು ಸ್ವೀಕರಿಸುವ ಮರಾಠಿ ಸಮುದಾಯ, ಮರಾಠಿ ಭಾಷೆಯಲ್ಲಿಯೇ ಹಾಡು ದಾನ ನೀಡಿದವರನ್ನು ಹೇಳಿ ಹೊಗಳುತ್ತಾರೆ. ಇದು ಆರು ದಿನಗಳ ಕಾಲ ನಿರಂತರವಾಗಿ ನಡೆಯುತ್ತದೆ. ಎಲ್ಲಾ ತಂಡಗಳು ಸಂಗ್ರಹಿಸಿದ ಹಣ ಹಾಗೂ ವಸ್ತುಗಳನ್ನು ಸಮುದಾಯದ ಮುಖಂಡನ ಮನೆಯನ್ನು ಸಂಗ್ರಹಿಸಲಾಗುತ್ತದೆ. ಏಳು ದಿನಗಳ ಕಾಲ ಯಾರೊಬ್ಬರೂ ತಮ್ಮ ತಮ್ಮ ಮನೆಗೆ ತೆರಳದೇ ಸಮುದಾಯ ಒಬ್ಬೊಬ್ಬರ ಮನೆಯಲ್ಲಿ ಊಟ ತಿಂಡಿಯನ್ನು ಒಟ್ಟಿಗೆ ಸೇವಿಸಿ ಸಾಮರಸ್ಯ ಮೆರೆಯುತ್ತಾರೆ.   ಕುಂದಾಪ್ರ ಡಾಟ್ ಕಾಂ ವರದಿ

    ಹೋಳಿ ನೃತ್ಯದಲ್ಲಿ ಒಂದೊಂದು ಸನ್ನಿವೇಶಕ್ಕೆ ತಕ್ಕಂತೆ ಹಾಡುಗಳಿದ್ದು, ಆಯಾ ಸಂದರ್ಭದಲ್ಲಿ ಒಂದೊಂದು ಹಾಡಲಾಗುತ್ತದೆ. ದೇವರ ಹಾಡು, ಕೋಲಾಟದ ಹಾಡು ಹೀಗೆ ವಿವಿಧ ಪ್ರಕಾರಗಳಿದ್ದು ಅದಕ್ಕೆ ಮದ್ದಳೆ ಹಾಗು ಗುಮ್ಟೆಯನ್ನು ವಾದ್ಯ ಪರಿಕರವಾಗಿ ಬಳಸಲಾಗುತ್ತದೆ. ಹಾಡು, ನೃತ್ಯಗಳ ಮೂಲಕ ಹೊಳಿ ಹಬ್ಬಕ್ಕೆ ರಂಗು ತುಂಬಲಾಗುತ್ತದೆ.

    ಏಳನೇ ದಿನ ಎಲ್ಲೂರು ಬಾಳಕೊಡ್ಲು ಮರಾಠಿ ಮುಖಂಡ ನಾರಾಯಣ ಮರಾಠಿ ಅವರ ಮನೆಯಲ್ಲಿ ಸಿದ್ದೇಶ್ವರ ದೇವರಿಗೆ ಪೂಜೆ ಸಲ್ಲಿಸಲಾಗುತ್ತದೆ. ಈ ಸಂದರ್ಭದಲ್ಲಿ ದೇವರನ್ನು ಆಹ್ವಾನಿಸಿಕೊಂಡು ಮುರಾಠಿ ಸಮುದಾಯದರ ಕಷ್ಟ ಕಾರ್ಪಣ್ಯಗಳನ್ನು ಹೇಳಿಕೊಳ್ಳಲಾಗುತ್ತದೆ. ದೇವರಿಗೆ ಹರಕೆ ಅರ್ಪಿಸಿದ ಬಳಿಕ ಅಲ್ಲಿಂದ ಊರಿನ ದುರ್ಗಾಪರಮೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಲಾಗುತ್ತದೆ. ಕೊನೆಯಲ್ಲಿ ಹಣಬು ಸುಡುವ ಸಂಪ್ರದಾಯವೂ ನಡೆಯುತ್ತದೆ.  ಕುಂದಾಪ್ರ ಡಾಟ್ ಕಾಂ ವರದಿ

    Click here

    Click here

    Click here

    Call us

    Call us

    ಹೋಳಿ ಕುಣಿತದಲ್ಲಿ ವೃದ್ಧರು, ಯುವಕರೆನ್ನದೇ ಎಲ್ಲರೂ ಒಟ್ಟಾಗಿ ಭಾಗವಹಿಸುತ್ತಾರೆ. ಎಲ್ಲಿಯೇ ಉದ್ಯೋಗದಲ್ಲಿರಲಿ ಒಂದು ವಾರಗಳ ಕಾಲ ಊರಿಗೆ ಬಂದು ದೇವರ ಕಾರ್ಯದಲ್ಲಿ ಶ್ರದ್ಧೆಯಿಂದ ಭಾಗವಹಿಸುತ್ತಾರೆ.

    ಅಜ್ಜ ಅಜ್ಜಿ ಕಾಲದಿಂದ ನಡೆದು ಬಂದ ಆಚರಣೆ ಇದೆ. ಸಿದ್ದೇಶ್ವರನೇ ನಮಗೆ ಅಧಿದೈವ. ಆತನನ್ನು ಬಿಟ್ಟು ಬೇರೆ ದೇವರನ್ನು ನಂಬುವುದಿಲ್ಲ. ಹಾಗಾಗಿ ಹೋಳಿ ಇದೇ ದೊಡ್ಡ ಆಚರಣೆ. ಇದನ್ನು ಅಚ್ಚುಕಟ್ಟಾಗಿ ನಡೆಸಿಕೊಂಡು ಬರುತ್ತಿದ್ದೇವೆ. ನಮ್ಮ ಸಮುದಾಯದ ಎಲ್ಲರೂ ಒಗ್ಗಟ್ಟಾಗಿ ಸೇರಿ ಹೋಳಿ ಹಬ್ಬವನ್ನು ಆಚರಿಸುತ್ತೇವೆ. – ಅಣ್ಣಪ್ಪ ಮರಾಠಿ ಎಲ್ಲೂರು

    ಮರಾಠಿ ಸಮುದಾಯದ ತಲಾತಲಾಂತರದಿಂದ ಈ ಆಚರಣೆ ನಡೆದುಬಂದಿದೆ. ನಮ್ಮ ಸಮುದಾಯದಲ್ಲಿ ಈಗ ಹಲವಾರು ಮಂದಿ ವಿದ್ಯಾವಂತರಿದ್ದಾರೆ. ಉತ್ತಮ ನೌಕರಿಯಲ್ಲಿರುವವರೂ ಇದ್ದಾರೆ. ಆದರೆ ಅವರೆಲ್ಲರೂ ಶ್ರದ್ಧೆಯಿಂದ ಈ ಹಬ್ಬದಲ್ಲಿ ಭಾಗವಹಿಸುತ್ತಾರೆ. ಮನೆ ಮನೆ ತಿರುಗಾಡಿ ಕೊನೆಗೆ ದೇವರಿಗೆ ಪೂಜೆ ಸಲ್ಲಿಸುವವರೆಗೂ ನಾವು ಒಗ್ಗಟ್ಟಾಗಿ ಪಾಲ್ಗೊಳ್ಳುತ್ತೇವೆ. – ಗೋಪಾಲ ಮರಾಠಿ ಎಲ್ಲೂರು 

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d