Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರಿನ ಪ್ರಥಮ ದರ್ಜೆ ಕಾಲೇಜು: ಉದ್ಯೋಗ ಮಾಹಿತಿ ಶಿಬಿರ
    ಕ್ಯಾಂಪಸ್ ಕಾರ್ನರ್

    ಬೈಂದೂರಿನ ಪ್ರಥಮ ದರ್ಜೆ ಕಾಲೇಜು: ಉದ್ಯೋಗ ಮಾಹಿತಿ ಶಿಬಿರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಬೈಂದೂರು: ಪದವಿ ಶಿಕ್ಷಣದ ಅನಂತರ ಉದ್ಯೋಗವನ್ನು ಅರಸಿ, ಅದನ್ನು ಪಡೆದುಕೊಳ್ಳುವುದೇ ದೊಡ್ಡ ಸಾಧನೆ ಎಂಬಂತಾಗಿದೆ. ಎಲ್ಲಾ ಕ್ಷೇತ್ರಗಳಲ್ಲೂ ತೀವ್ರವಾದ ಪೈಪೋಟಿ ಇರುವುದರಿಂದ ಉದ್ಯೋಗಾಕಾಂಕ್ಷಿ ವಿಶಿಷ್ಟವಾಗಿ ಗುರುತಿಸಿಕೊಳ್ಳಬೇಕಾಗುತ್ತದೆ. ತನ್ನಲ್ಲಿರುವ ಪ್ರತಿಭೆ, ಅರ್ಹತೆಯನ್ನು ತೋರಿಸಿಕೊಳ್ಳಲು ಉತ್ತಮ ರೆಸ್ಯೂಂ (ಸ್ವವಿವರ) ರಚಿಸಿಕೊಳ್ಳುವುದು ಅತೀ ಅಗತ್ಯ ಎಂದು ಹಿರಿಯಡ್ಕ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಪ್ರತಾಪಚಂದ್ರ ನುಡಿದರು.

    Click Here

    Call us

    Click Here

    ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಸಹಯೋಗದಲ್ಲಿ ನಡೆದ ಉದ್ಯೋಗ ಮಾಹಿತಿ ಹಾಗೂ ರೆಸ್ಯೂಂ ರಚನಾ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಕ್ರಿಯಾಶೀಲತೆ ಕಡಿಮೆ ಆಗುತ್ತಿದೆ. ರೆಸ್ಯೂಂ ರಚಿಸುವುದು ಸೇರಿದಂತೆ ತೀರಾ ವೈಯಕ್ತಿಕ ವಿಷಯಕ್ಕೂ ಅಂತರ್ಜಾಲದ ಮೊರೆ ಹೋಗುತ್ತಿರುವುದು ಬೇಸರದ ಸಂಗತಿ. ಅಭ್ಯರ್ಥಿಯ ಸಂಪೂರ್ಣ ವಿವರವನ್ನು ಸ್ಪಷ್ಟ ಹಾಗೂ ಆಕರ್ಷಕವಾದ ರೀತಿಯಲ್ಲಿ ಪ್ರಸ್ತುತಪಡಿಸಿದಾಗ ಅದು ಸಂದರ್ಶಕರ ಮನಗೆಲ್ಲುತ್ತದೆ. ತನ್ನ ಸಾಮರ್ಥ್ಯವೇನು ಎಂಬುದನ್ನು ಪ್ರಸ್ತುತಪಡಿಸುವ ಕೌಶಲ್ಯತೆ ಯಾರಿಗಿರುತ್ತದೋ ಅವರು ಸುಲಭವಾಗಿ ಸಂದರ್ಶನವನ್ನು ಎದುರಿಸುತ್ತಾರೆ ಹಾಗಾಗಿ ಉದ್ಯೋಗದ ಬೇಟೆಗೆ ಹೋಗುವಾಗ ರೆಸ್ಯೂಂನಿಂದ ಹಿಡಿದು ಪ್ರತಿಯೊಂದು ವಿಚಾರದಲ್ಲೂ
    ಶಿಸ್ತು ಮತ್ತು ಪೂರ್ವಸಿದ್ಧತೆ ಹೇಗಿರಬೇಕೆಂದವರು ವಿವರಿಸಿದರು.

    ನೂರಕ್ಕೂ ಅಧಿಕ ಶಿಬಿರಾರ್ಥಿಗಳು ಭಾಗವಹಿಸಿದ್ದ ಈ ಕಾರ್ಯಾಗಾರವನ್ನು ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಉಮೇಶ ಮಯ್ಯರವರು ಸಂಯೋಜಿಸಿದರು. ತೃತೀಯ ಬಿ.ಕಾಂ ವಿದ್ಯಾರ್ಥಿನಿಯಾದ ಪೂರ್ಣಿಮಾ ಎನ್ ಆರ್ ಧನ್ಯವಾದಗೈದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026
    Leave A Reply Cancel Reply

    7 − one =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.