Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಟ್ಪಾ ಯಶಸ್ವಿ ಅನುಷ್ಠಾನಕ್ಕೆ ಚಿಂತನೆ. ಕುಂದಾಪುರದ ಅಂಗಡಿಗಳಿಗೆ ದಾಳಿ
    ಊರ್ಮನೆ ಸಮಾಚಾರ

    ಕೊಟ್ಪಾ ಯಶಸ್ವಿ ಅನುಷ್ಠಾನಕ್ಕೆ ಚಿಂತನೆ. ಕುಂದಾಪುರದ ಅಂಗಡಿಗಳಿಗೆ ದಾಳಿ

    Updated:01/01/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    ಕುಂದಾಪುರ: ಉಡುಪಿ ಜಿಲ್ಲೆಯನ್ನು ತಂಬಾಕುಮುಕ್ತಗೊಳಿಸುವ ನಿಟ್ಟಿನಲ್ಲಿ ಕೊಟ್ಪಾ (ಸಿಗರೇಟ್ ಮತ್ತು ಇನ್ನಿತರ ತಂಬಾಕು ಉತ್ಪನ್ನ ಕಾಯ್ದೆ) ಕಾಯ್ದೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
    _MG_7679
    ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡಿದ ಕೊಟ್ಪಾ ಕಾಯ್ದೆಯ ವಿಶೇಷ ನೋಡೆಲ್ ಅಧಿಕಾರಿ ಡಾ| ಜಾನ್ ಭಾರತದಲ್ಲಿ ಪ್ರತಿ ವರ್ಷ ಹತ್ತು ಲಕ್ಷ ಜನರು ತಂಬಾಕು ಸೇವನೆಯಿಂದ ಸಾಯುತ್ತಿದ್ದರೇ, ಕರ್ನಾಟಕವೊಂದರಲ್ಲೇ 60,000 ಜನರು ಸಾಯುತ್ತಿದ್ದಾರೆ. ಪ್ರತಿದಿನ ರಾಜ್ಯದಲ್ಲಿ ಸರಾಸರಿ 20 ಜನ ಸಾವನ್ನಪ್ಪುತ್ತಿದ್ದಾರೆ ಇದನ್ನು ತಡೆಗಟ್ಟಲು ತಂಬಾಕು ನಿಷೇಧ ಜಾರಿಗೊಳಿಸುವುದು ಅಗತ್ಯ. ಆದರೆ ತಂಬಾಕು ಸೇವನೆ ನಮ್ಮ ಸಂಸ್ಕೃತಿಯ ಜೊತೆಗೆ ಬೆಳೆದು ಬಂದಿರುವುದರಿಂದ ಒಂದೇ ಬಾರಿಗೆ ಅನುಷ್ಠಾನಗೊಳಿಸಲು ಸಾಧ್ಯವಿಲ್ಲವಾದರೂ ಹಂತ ಹಂತವಾಗಿ ಜಾಗೃತಿ ಮೂಡಿಸಬಹುದಾಗಿದೆ. ಈಗಾಗಲೇ ಸಾರ್ವಜನಿಕ ಪ್ರದೇಶಗಳಲ್ಲಿ ತಂಬಾಕು ಮಾರಾಟ ನಿಷೇಧದ ಬಗ್ಗೆ 2003 ಕಾನೂನು ಜಾರಿಯಲ್ಲಿದೆ. ಕರ್ನಾಟಕ ರಾಜ್ಯದಲ್ಲಿ ಗದಗ ಜಿಲ್ಲೆಯನ್ನು ತಂಬಾಕು ಮುಕ್ತ ಜಿಲ್ಲೆಯನ್ನಾಗಿಸಲಾಗಿದೆ. ಕೋಲಾರದಲ್ಲಿಯೂ ಈ ಆಂದೋಲನವನ್ನು ಕೈಗೆತ್ತಿಕೊಂಡಿದ್ದೆವು. ಈಗ ಉಡುಪಿ ಜಿಲ್ಲೆಯಲ್ಲಿ ಈ ಕಾಯ್ದೆಯ ಯಶಸ್ವಿ ಅನುಷ್ಠಾನವಾಗಬೇಕಿದೆ ಎಂದರು.
    ಸಾರ್ವಜನಿಕ ಸ್ಥಳಗಳಲ್ಲಿ ಶಾಲಾ-ಕಾಲೇಜು ಆವರಣದಿಂದ 100ಮೀ ಅಂತರದಲ್ಲಿ, ಅಂಗಡಿ, ಸರಕಾರಿ ಹಾಗೂ ಕಛೇರಿ, ಹೊಟೇಲು, ಬಾರ್ ಮತ್ತು ರೆಸ್ಟೋರೆಂಟ್ ಈ ಸ್ಥಳಗಳಲ್ಲಿ ತಂಬಾಕು, ಬೀಡಿ, ಸಿಗರೇಟು ಮಾರಾಟ ಹಾಗೂ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಕಡ್ಡಾಯವಾಗಿ ಎಲ್ಲಾ ಅಂಗಡಿ, ಕಛೇರಿ, ಶಾಲಾ-ಕಾಲೇಜುಗಳ ಆವರಣದಲ್ಲಿ ಪೊಲೀಸ್ ಇಲಾಖೆ ಮಾರ್ಗದರ್ಶನದಂತೆ ಫಲಕಗಳನ್ನು ಅಳವಡಿಸುವುದು ಕಡ್ಡಾಯ. ಸಿಗರೇಟು ಹಾಗೂ ಇನ್ನಿತರ ತಂಬಾಕು ಕಂಪೆನಿಗಳಿಗೆ ಸಂಬಂಧಿಸಿದ ಜಾಹೀರಾತುಗಳನ್ನು ಯಾವುದೇ ರೂಪದಲ್ಲಿ, ಎಲ್ಲಿಯೂ ಪ್ರದರ್ಶಿಸುವಂತಿಲ್ಲ. ನಿಯಮಗಳನ್ನು ಉಲ್ಲಂಘಿಸಿದಲ್ಲಿ ಪೊಲೀಸ್ ಅಧಿಕಾರಿಗಳು, ಆರೋಗ್ಯ ಅಧಿಕಾರಿಗಳು, ತಾಲೂಕು  ದಂಡಾಧಿಕಾರಿಗಳು ಯಾರು ಬೇಕಾದರೂ ದಂಡ ವಿಧಿಸಬಹುದು. ಮೊದಲ ಬಾರಿ ತಪ್ಪಿತಸ್ಥರೆಂದು ಸಿಕ್ಕಿಬಿದ್ದರೆ 2 ವರ್ಷ ಜೈಲು ಹಾಗೂ ಐದು ಸಾವಿರ ದಂಡ, ಎರಡನೇ ಬಾರಿ ಸಿಕ್ಕಿ ಬಿದ್ದರೆ 5 ವರ್ಷ ಜೈಲು ಹಾಗೂ 5000 ದಂಡ ವಿಧಿಸಲಾಗುತ್ತದೆ ಎಂದರು.
        ಬೀಡಿ, ಸಿಗರೇಟ್‌ ಮುಂತಾದ ತಂಬಾಕು ಉತ್ಪನ್ನಗಳನ್ನು ಸಾರ್ವಜನಿಕ ಸ್ಥಳದಲ್ಲಿ  ಸೇವಿಸುವಂತಿಲ್ಲ. ಕೆಲವು ನಿಷೇಧಿತ ಪ್ರದೇಶಗಳನ್ನು ಹೊರತುಪಡಿಸಿ ಬೇರೆ ಎಲ್ಲಾ  ಕಡೆಗಳಲ್ಲೂ  ತಂಬಾಕು ಉತ್ಪನ್ನಗಳ ಮಾರಾಟ ಮಾಡಬಹುದು. ಆದರೆ ಪ್ರದರ್ಶನಕ್ಕಿಡುವಂತಿಲ್ಲ. ಸಿಗರೇಟು ಸೇದುವವರು ಫ್ರೀ ಸ್ಮೋಕಿಂಗ್ ಜೋನ್ (ಕುಂದಾಪುರದಲ್ಲಿ ಇಲ್ಲ) ಬಳಸಿಕೊಳ್ಳಬಹುದು ಸೇರಿದಂತೆ ಕಾಯಿದೆಗಳ ಸಂಪೂರ್ಣ ಚಿತ್ರಣವನ್ನು ತೆರೆದಿಟ್ಟರು.
    Share. Facebook Twitter Pinterest LinkedIn Tumblr Telegram Email
    Kundapra.com

    Related Posts

    ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ

    19/12/2025

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.