Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಚಿಕಿತ್ಸೆಗೆ ಧನಸಹಾಯ ಮಾಡಿ ಮಾನವೀಯತೆ ಮೆರೆದ ತ್ರಾಸಿಯ ಮಹಿಷಮರ್ದಿನಿ ಫ್ರೆಂಡ್ಸ್
    ಊರ್ಮನೆ ಸಮಾಚಾರ

    ಚಿಕಿತ್ಸೆಗೆ ಧನಸಹಾಯ ಮಾಡಿ ಮಾನವೀಯತೆ ಮೆರೆದ ತ್ರಾಸಿಯ ಮಹಿಷಮರ್ದಿನಿ ಫ್ರೆಂಡ್ಸ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಯಕ್ಷಗಾನದ ಮೂಲಕ ಆಶಕ್ತರ ವೈದ್ಯಕೀಯ ಚಿಕಿತ್ಸೆಗೆ 2.20ಲಕ್ಷ ಸಹಾಯಧನ ವಿತರಣೆ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ಆಶಕ್ತರು ಹಾಗೂ ಆಸಹಾಯಕರ ವೈದ್ಯಕೀಯ ಚಿಕಿತ್ಸೆಗೆ ಯಕ್ಷಗಾನ ಕಾರ್ಯಕ್ರಮ ಆಯೋಜಿಸುವ ಮೂಲಕ ಎರಡು ಲಕ್ಷದ ಇಪ್ಪತ್ತು ಸಾವಿರ ರೂಪಾಯಿ ಸಹಾಯಧನವನ್ನು ಹಸ್ತಾಂತರಿಸುವ ಮಾನವೀಯ ಕಾರ್ಯವನ್ನು ತ್ರಾಸಿ-ಹೊಸಪೇಟೆಯ ಮಹಿಷಮರ್ಧಿನಿ ಫ್ರೆಂಡ್ಸ್ ಮಾಡಿದೆ. ಆರ್ಥಿಕ ಅಸಹಾಯಕತೆಯಿಂದ ಬಳಲುತ್ತಿರುವ ಕುಟುಂಬಗಳ ಸಂಕಷ್ಟಕ್ಕೆ ಸ್ಪಂದಿಸುವ ನಿರ್ಧಾರ ಮಾಡಿದ ಮಹಿಷಮರ್ದಿನಿ ಫ್ರೆಂಡ್ಸ್ ಜಾತಿ,ಮತ ಧರ್ಮ ಹೊರತು ಪಡಿಸಿ ಆಯ್ದ ೮ ಮಂದಿಗೆ ವೈದ್ಯಕೀಯ ಸಹಾಯಧನ ನೀಡಿತು.

    ಏ.13ರಂದು ತ್ರಾಸಿಯಲ್ಲಿ ನಡೆದ ಸಾಲಿಗ್ರಾಮ ಮೇಳದ ರಂಗವೇದಿಕೆಯಲ್ಲಿ ಸಹಾಯಧನವನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿ ಮಾತನಾಡಿದ ತಾ.ಪಂ.ಸದಸ್ಯ ರಾಜು ದೇವಾಡಿಗ ಅವರು, ಮೊಗವೀರ ಯುವ ಸಂಘಟನೆ ಇಂದು ಡಾ.ಜಿ.ಶಂಕರ್ ನೇತೃತ್ವದಲ್ಲಿ ರಕ್ತದಾನದ ಮೂಲಕ ಜಿಲ್ಲೆಯಲ್ಲಿ ರಕ್ತದಾನದ ಮಹತ್ವದ ಅರಿವು ಮೂಡಿಸುವ ಕೆಲಸವಾಗಿದೆ. ಮಹಿಷಮರ್ದಿನಿ ಫ್ರೆಂಡ್ಸ್ ಇವತ್ತು ಒಂದು ಜಾತಿಗೆ ಸೀಮಿತವಾಗದೇ ಎಲ್ಲಾ ಧರ್ಮದ ಬಾಂಧವರಿಗೂ ಸಹಾಯಧನ ನೀಡುವ ಮೂಲಕ ಮಾನವೀಯ ಕಾರ್ಯ ಮಾಡಿದೆ ಎಂದರು.

    ಜಿ.ಪಂ.ಮಾಜಿ ಸದಸ್ಯ ಅನಂತ ಮೊವಾಡಿ ಮಾತನಾಡಿ, ಸಮಾಜದಲ್ಲಿ ನೊಂದು ಬೆಂದವರಿಗೆ ಸಹಾಯ ಮಾಡುವ ನಿಸ್ವಾರ್ಥ ಕಾರ್ಯ ಶ್ಲಾಘನಾರ್ಯ. ಎರಡು ಲಕ್ಷದ ಇಪ್ಪತ್ತು ಸಾವಿರ ಮೊತ್ತದ ವೈದ್ಯಕೀಯ ಸಹಾಯಧನ ನೀಡುತ್ತಿರುವುದು ತ್ರಾಸಿ ಇತಿಹಾಸದಲ್ಲಿ ಪ್ರಥಮ ಎಂದು ಅಭಿಪ್ರಾಯ ಪಟ್ಟರು.

    ಮಹಿಷಮರ್ದಿನಿ ಫ್ರೆಂಡ್ಸ್ ತ್ರಾಸಿ-ಹೊಸಪೇಟೆ ಇದರ ಅಧ್ಯಕ್ಷರಾದ ರಾಜು ಮೆಂಡನ್ ತ್ರಾಸಿ, ಮೊಗವೀರ ಯುವ ಸಂಘಟನೆಯ ಉಪಾಧ್ಯಕ್ಷ ರಾಜು ಶ್ರೀಯಾನ್, ತ್ರಾಸಿ ಗ್ರಾ.ಪಂ.ಅಧ್ಯಕ್ಷರಾದ ರವೀಂದ್ರ ಖಾರ್ವಿ, ಪಾಂಡುರಂಗ ದೇವಾಡಿಗ, ಸಾಲಿಗ್ರಾಮ ಮೇಳದ ಭಾಗವತರಾದ ರಾಘವೇಂದ್ರ ಮಯ್ಯ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಈ ಸಂದರ್ಭದಲ್ಲಿ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪದ್ಮಾವತಿ ಸುರೇಶ ಮೊಗವೀರ ಇವರಿಗೆ ೧.೫ಲಕ್ಷ, ರಾಜೇಶ ಪೂಜಾರಿ ಭಟ್ರಹಿತ್ಲು ತ್ರಾಸಿ, ಜ್ಯೋತಿ ಮೊಗವೀರ ಸಸಿಹಿತ್ಲು ತ್ರಾಸಿ, ಸುನೀತಾ ನಾಯ್ಕ ತ್ರಾಸಿ, ಚಂದ್ರ ಶೆಟ್ಟಿಗಾರ್ ಕೊಳ್ಕೆರೆ ತ್ರಾಸಿ, ಪೆರ್ಡಿಕ್ ಫೆರ್ನಾಂಡೀಸ್ ತ್ರಾಸಿ, ದುರ್ಗಯ್ಯ ಖಾರ್ವಿ ಹೊಸಪೇಟೆ ತ್ರಾಸಿ, ಗೀತಾ ಮೊಗವೀರ ತ್ರಾಸಿ ಇವರಿಗೆ ತಲಾ ೧೦,೦೦೦ ರೂ.ಗಳ ಸಹಾಯಧನ ವಿತರಿಸಲಾಯಿತು.
    ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ಅಧ್ಯಕ್ಷ ವಾಸು.ಜಿ.ನಾಯ್ಕ್ ವಂಡ್ಸೆ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು. ನಂತರ ಸಾಲಿಗ್ರಾಮ ಮೇಳದವರಿಂದ ’ವಜ್ರ ಮಾನಸಿ’ ಯಕ್ಷಗಾನ ಪ್ರದರ್ಶನ ನಡೆಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    18 − 5 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.