Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಇಪ್ಪತ್ತು ಸಾವಿರ ರೂ. ಬಾಡಿಗೆ ಕಟ್ಟಡದಲ್ಲಿರುವ ಮೆಸ್ಕಾಂ ಕಛೇರಿಯಲ್ಲಿ ಕಾರ್ಯನಿರ್ವಹಿಸಲು ಸಿಬ್ಬಂದಿಯೇ ಇಲ್ಲ!
    ವಿಶೇಷ ವರದಿ

    ಇಪ್ಪತ್ತು ಸಾವಿರ ರೂ. ಬಾಡಿಗೆ ಕಟ್ಟಡದಲ್ಲಿರುವ ಮೆಸ್ಕಾಂ ಕಛೇರಿಯಲ್ಲಿ ಕಾರ್ಯನಿರ್ವಹಿಸಲು ಸಿಬ್ಬಂದಿಯೇ ಇಲ್ಲ!

    Updated:03/05/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ವರದಿ
    ಶಂಕರನಾರಾಯಣ: ಮೆಸ್ಕಾಂ ಕಛೇರಿ ಆರಂಭಿಸಿ ನಾಲ್ಕು ತಿಂಗಳುಗಳೇ ಕಳೆದಿವೆ. ತಿಂಗಳಿಗೆ ಬರೊಬ್ಬರಿ ಇಪ್ಪತ್ತು ಸಾವಿರ ರೂ. ಬಾಡಿಗೆಯನ್ನು ನೀಡಲಾಗುತ್ತಿದೆ. ಆದರೆ ಅಲ್ಲಿ ಕಾರ್ಯನಿರ್ವಹಿಸಲು ಸಿಬ್ಬಂಧಿಗಳೇ ನೇಮಕಗೊಳ್ಳದೇ ದಿನವಿಡಿ ಮುಚ್ಚಿಯೇ ಇರುವ ಪರಿಸ್ಥಿತಿ. ಇದು ಶಂಕರನಾರಾಯಣದ ಬಾಡಿಗೆ ಕಟ್ಟಡವೊಂದರಲ್ಲಿ ಆರಂಭಗೊಂಡ ಮೆಸ್ಕಾಂ ಇಲಾಖೆಯ ವಿದ್ಯುತ್ ಉಪವಿಭಾಗದ ಕೇಂದ್ರದ ದುಸ್ಥಿತಿ.

    Click Here

    Call us

    Click Here

    ಶಂಕರನಾರಾಯಣ ತಾಲೂಕು ರಚನಾ ಹೋರಾಟ ಸಮಿತಿ ಸತತ ಹೋರಾಟದ ಫಲವಾಗಿ ಶಂಕರನಾರಾಯಣಕ್ಕೆ ವಿದ್ಯುತ್ ಉಪವಿಭಾಗ ಕೇಂದ್ರ ಬಂದಿತ್ತು. ಸುಮಾರು 27 ಗ್ರಾಮಗಳ ವ್ಯಾಪ್ತಿ ಹೊಂದಿರುವ ಮೆಸ್ಕಾಂ ಇಲಾಖೆ ವಿದ್ಯುತ್ ಉಪವಿಭಾಗ ನಾಲ್ಕು ತಿಂಗಳ ಹಿಂದೆ ಶಂಕರನಾರಾಯಣದಲ್ಲಿ ಲೋಕಾರ್ಪಣೆಗೊಂಡಿತ್ತು. ಆದರೆ ಈವರೆಗೂ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿ ನಿಯೋಜನೆಯಾಗದೇ ಶಂಕರನಾರಾಯಣ ಪರಿಸರದ ಜನರಿಗೆ ಕಚೇರಿ ನೆರವಿಗೆ ಬಂದಿಲ್ಲ ಎನ್ನೋದು ದುರಂತ.

    ಶಂಕರನಾರಾಯಹಣ ಹೆ.ಬಿ.ಆರ್. ಕಾಂಪ್ಲೆಕ್ಸ್‌ನ ಬಾಡಿಗೆ ಕಟ್ಟಡದಲ್ಲಿ ಕಛೇರಿಯಿದ್ದು, ಕೇವಲ ವಿದ್ಯುತ್ ಬಿಲ್ಲು ತೆಗೆದುಕೊಳ್ಳಲು ಮಾತ್ರ ಒಬ್ಬ ಸಿಬ್ಬಂದಿ ಬೆಳಿಗ್ಗೆ ಹೊತ್ತು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಉಳಿದ ಸಮಯದಲ್ಲಿ ಈ ಉಪವಿಭಾಗದ ಬಾಗಿಲು ಹಾಕಿಯೇ ಇರುತ್ತದೆ. ಆದರೆ ವಿದ್ಯುತ್ ಬಿಲ್ ಪಾವತಿಗೋಸ್ಕರ ಉಪವಿಭಾಗ ಬೇಕಿಲ್ಲ. ಅಂಚೆ ಕಚೇ ರಿಯಲ್ಲೂ ವಿದ್ಯುತ್ ಬಿಲ್ಲು ಪಾವತಿ ವ್ಯವಸ್ಥೆ ಇದೆ ಎನ್ನೋದು ಮೆಸಾಂ ಗಮನಕ್ಕಿಲ್ಲವಾ ಎಂದು ಸ್ಥಳಿಯರು ಪ್ರಶ್ನಿಸುತ್ತಿದ್ದಾರೆ. ಕುಂದಾಪ್ರ ಡಾಟ್ ಕಾಂ ವರದಿ

    ಚಿಮಣಿ ದೀಪ ಹಿಡಿದು ಪ್ರತಿಭಟಿಸುವ ಎಚ್ಚರಿಕೆ
    ತತ್‌ಕ್ಷಣ ವಿದ್ಯುತ್ ಉಪವಿಭಾಗಕ್ಕೆ ಸಂಬಂಧಪಟ್ಟ 27 ಗ್ರಾಮಗಳ ಕಡತ ಕುಂದಾಪುರದ ವಿದ್ಯುತ್ ಕಚೇರಿಯಿಂದ ಶಂಕರನಾರಾಯಣಕ್ಕೆ ವರ್ಗಾಯಿಸುವುದು ಹಾಗೂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್, ಒಬ್ಬ ಟೆಕ್ನಿಕಲ್ ಆಫೀಸರ್ ಹಾಗೂ ಸಿಬ್ಬಂದಿ ಮೆಸ್ಕಾಂ ಅಧಿಕಾರಿಗಳು ಶಂಕರನಾರಾಯಣ ವಿದ್ಯುತ್ ಉಪವಿಭಾಗಕ್ಕೆ ನಿಯೋಜನೆ ಮಾಡುವುದು, ಈ ಭಾಗದ ವಿದ್ಯುತ್ ಬಳಕೆದಾರರು ಹಾಗೂ ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಡುವುದು. ಈ ಮೂರು ಬೇಡಿಕೆಗಳಿಗೆ ಇಲಾಖೆ ಸ್ಪಂದಿಸದಿದ್ದಲ್ಲಿ ವಿದ್ಯುತ್ ಬಳಕೆದಾರರು ಮತ್ತು ಶಂಕರನಾರಾಯಣ ತಾಲೂಕ್ ರಚನಾ ಹೋರಾಟ ಸಮಿತಿ ಚಿಮಣಿ ದೀಪ ಹಿಡಿದುಕೊಂಡು ಉದ್ಘಾಟನೆಯಾಗಿಯೂ ಬಾಗಿಲು ಮುಚ್ಚಿದ ವಿದ್ಯುತ್ ಉಪವಿಭಾಗದ ಎದುರು ಹೋರಾಟಕ್ಕೆ ಅಣಿಯಾಗಲಿದ್ದಾರೆ ಎಂದು ಶಂಕರನಾರಾಯಣ ತಾಲೂಕ್ ಹೋರಾಟ ಸಮಿತಿ ಪದಾಧಿಕಾರಿಗಳ ಚಿಟ್ಟೆ ರಾಜಗೋಪಾಲ ಹೆಗ್ಡೆ, ಆವರ್ಸೆ ರತ್ನಾಕರ ಶೆಟ್ಟಿ, ತಲಾರಿ ಹರಿಹರ ಭಟ್ಟ, ಬಿ.ಕೆ. ಶ್ರೀನಿವಾಸ, ತಲಾರಿ ನರಸಿಂಹ ಭಟ್ಟ, ನಾರಾಯಣ ಶೆಟ್ಟಿಗಾರ್, ಉಮೇಶ್ ರಾವ್, ನಾಗೇಶ್ಚಂದ್ರ ಭಟ್ಟ ರಮೇಶ ಕನ್ನಂತ, ರಾಮಚಂದ್ರ ಐತಾಳ, ಸುಧಾಕರ ಕುಲಾಲ್ ತಿಳಿಸಿದ್ದಾರೆ. / ಕುಂದಾಪ್ರ ಡಾಟ್ ಕಾಂ ವರದಿ /

    Shankaranarayana
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024
    Leave A Reply Cancel Reply

    4 × 4 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.