Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹರ್ಕೂರು-ನಾರ್ಕಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನ: ಪ್ರತಿಷ್ಠಾ ಮಹೋತ್ಸವ ಬ್ರಹ್ಮಕುಂಭಾಭಿಷೇಕ
    ಊರ್ಮನೆ ಸಮಾಚಾರ

    ಹರ್ಕೂರು-ನಾರ್ಕಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನ: ಪ್ರತಿಷ್ಠಾ ಮಹೋತ್ಸವ ಬ್ರಹ್ಮಕುಂಭಾಭಿಷೇಕ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ: ಕಾರ್ಯತತ್ಪರತೆ, ಕರ್ಮನಿಷ್ಠೆಯು ಭಗವಂತನಿಗೆ ಪ್ರಿಯವಾಗುತ್ತದೆ. ಕೇವಲ ಜೀವಿಸಿದ ಮಾತ್ರಕ್ಕೆ ಶ್ರೇಷ್ಠತ್ವ ಪ್ರಾಪ್ತಿಯಾಗುವುದಿಲ್ಲ. ಸಾಧನೆಯಿಂದ ಮಾತ್ರ ಬ್ರಹ್ಮತ್ವ ಸಿದ್ಧಿ ಸಾಧ್ಯ ಎಂದು ವಿದ್ಯಾವಾಚಸ್ಪತಿ ಡಾ. ವಿಶ್ವಸಂತೋಷ ಭಾರತಿ ಶ್ರೀಪಾದರು ನುಡಿದರು.

    Click Here

    Call us

    Click Here

    ಹರ್ಕೂರು ಗ್ರಾಮದ ನಾರ್ಕಳಿ ಬ್ರಾಹ್ಮಣರಬೆಟ್ಟುವಿನ ನವನಿರ್ಮಿತ ಕಾರಣಿಕ ಕ್ಷೇತ್ರ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀ ಮಹಿಷಮರ್ದಿನಿ ಅಮ್ಮನವರ ಪ್ರತಿಷ್ಠಾ ಮಹೋತ್ಸವ ಬ್ರಹ್ಮಕುಂಭಾಭಿಷೇಕ ಅಂಗವಾಗಿ ಶನಿವಾರ ಜರಗಿದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಕುಂಕುಮ ಧಾರಣೆಯು ದೇವಿ ಸಾನ್ನಿಧ್ಯದ ಪ್ರತೀಕವಾಗಿದೆ. ಸ್ತ್ರೀ ಜಾಗೃತಿಯಿಂದ ಭಾರತೀಯ ಸಂಸ್ಕೃತಿ ಉಳಿದಿದೆ. ದೇವರ ಹೆಸರಿನಲ್ಲಿ ಕಟ್ಟಿದ ಸಂಘಟನೆ ಬಲಿಷ್ಠವಾಗಿ ಉಳಿಯುತ್ತದೆ. ದೇಶ, ಧರ್ಮಕ್ಕಾಗಿ ಯುವಕರು ಒಂದಾಗಿ ಕೆಲಸ ಮಾಡಿದಾಗ ದೇಶ ಸುಭದ್ರವಾಗಬಲ್ಲುದು ಎಂದರು.

    ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೃಷ್ಣಪ್ರಸಾದ್ ಅಡ್ಯಂತಾಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಧಾರ್ಮಿಕ ಜಾಗೃತಿಯಿಂದ ಹಿಂದುತ್ವದ ರಕ್ಷಣೆ ಸಾಧ್ಯ ಎಂದರು. ಮುಖ್ಯ ಅತಿಥಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಉದ್ಯಮಿ ಬಿ. ಎಂ. ಸುಕುಮಾರ ಶೆಟ್ಟಿ, ಜಿ. ಪಂ. ಸದಸ್ಯ ಕೆ. ಬಾಬು ಶೆಟ್ಟಿ, ತಾ. ಪಂ. ಸದಸ್ಯೆ ಇಂದಿರಾ ಶೆಟ್ಟಿ, ಗ್ರಾ. ಪಂ. ಅಧ್ಯಕ್ಷ ಸುಬ್ಬಣ್ಣ ಶೆಟ್ಟಿ, ಉದ್ಯಮಿಗಳಾದ ಜಗದೀಶ್ ಶೆಟ್ಟಿ ಹೆಮ್ಮುಂಜೆ, ಅಶೋಕ್ ಶೆಟ್ಟಿ ಜಡ್ಡಾಡಿ, ನಿವೃತ್ತ ಮುಖ್ಯಶಿಕ್ಷಕ ಗೋಪಾಲಕೃಷ್ಣ ಶೆಟ್ಟಿ ನಾರ್ಕಳಿ-ಹಳ್ಳಿಜಡ್ಡು, ಶೀನಪ್ಪ ಶೆಟ್ಟಿ ನಾರ್ಕಳಿ ಮುಗಿನವರಮನೆ, ವಿಜಯಾ ಬ್ಯಾಂಕ್ ನಿವೃತ್ತ ಮೆನೇಜರರಾದ ತೇಜಪ್ಪ ಶೆಟ್ಟಿ ಹಳ್ಳಿ ಹೊಸಿಮನೆ ಮತ್ತು ಆನಂದ ಶೆಟ್ಟಿ ನಾರ್ಕಳಿ ಹಳಗೇರಿಮನೆ, ನಿವೃತ್ತ ಅಧ್ಯಾಪಕ ಸದಾಶಿವ ಶೆಟ್ಟಿ ನಾರ್ಕಳಿ ಮಕ್ಕಿಮನೆ, ನಿವೃತ್ತ ಮುಖ್ಯಶಿಕ್ಷಕ ಡಿ. ವಿ. ಅಡಿಗ ದಕ್ಕೆರಕೊಡಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಂದ್ರಯ್ಯ ಆಚಾರ್ಯ ಕಳಿ ಮೊದಲಾದವರು ಉಪಸ್ಥಿತರಿದ್ದರು. ದಾನಿಗಳನ್ನು ಈ ಸಂದರ್ಭದಲ್ಲಿ ಸಮ್ಮಾನಿಸಲಾಯಿತು.

    ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಧಾಕರ ಶೆಟ್ಟಿ ಹಳಗೇರಿಮನೆ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕ ಉದಯಕುಮಾರ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ನಿವೃತ್ತ ಅಧ್ಯಾಪಕ ಸದಾಶಿವ ಶೆಟ್ಟಿ ನಾರ್ಕಳಿ ವಂದಿಸಿದರು. ಪ್ರಧಾನ ಅರ್ಚಕ ವೇ.ಮೂ. ಶೇಷ ಅಡಿಗ ಮತ್ತು ಸಹೋದರರು ಹರ್ಕೂರು ನೂಜಿ ಹಾಗೂ ಪ್ರಧಾನ ಪುರೋಹಿತ ವೇ.ಮೂ. ಚೆನ್ನಕೇಶವ ಉಪಾಧ್ಯಾಯ ಮತ್ತು ಸಹೋದರರು ಕುಂದಬಾರಂದಾಡಿ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿಗಳು ಜರಗಿದವು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಆಕಾಶವಾಣಿ ಕಲಾವಿದ ಚಂದ್ರ ಕೆ. ಹೆಮ್ಮಾಡಿ ಮತ್ತು ಬಳಗದವರಿಂದ ಸುಗಮ ಸಂಗೀತ ಹಾಗೂ ದೂರದರ್ಶನ ಕಲಾವಿದೆ ಕಲಾವತಿ ದಯಾನಂದ್ ಮತ್ತು ತಂಡ ಉಡುಪಿ ಅವರಿಂದ ಜಾನಪದ ಸಂಗೀತ ಕಾರ್ಯಕ್ರಮ ನಡೆಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    eleven − 2 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.