Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬ್ಯಾಂಕುಗಳು ಹಣದ ವಹಿವಾಟಿನ ಜೊತೆಗೆ ಮಾರ್ಗದರ್ಶಿ ಸಂಸ್ಥೆಗಳಾಗಿ ರೂಪುಗೊಳ್ಳುತ್ತಿವೆ: ಅಪ್ಪಣ್ಣ ಹೆಗ್ಡೆ
    ಊರ್ಮನೆ ಸಮಾಚಾರ

    ಬ್ಯಾಂಕುಗಳು ಹಣದ ವಹಿವಾಟಿನ ಜೊತೆಗೆ ಮಾರ್ಗದರ್ಶಿ ಸಂಸ್ಥೆಗಳಾಗಿ ರೂಪುಗೊಳ್ಳುತ್ತಿವೆ: ಅಪ್ಪಣ್ಣ ಹೆಗ್ಡೆ

    Updated:05/05/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪುರ ಕೋಣಿಯಲ್ಲಿ ಕರ್ಣಾಟಕ ಬ್ಯಾಂಕಿನ 728ನೇ ಶಾಖೆ ಹಾಗೂ ಎಟಿಎಂ ಉದ್ಘಾಟನೆ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಬ್ಯಾಂಕುಗಳು ಹಣದ ವಹಿವಾಟು ನಡೆಸಲಷ್ಟೇ ಸೀಮಿತವಾಗರದೇ ಸಮಾಜದ ಪ್ರತಿಯೊಬ್ಬ ನಾಗರಿಕನಿಗೂ ಅಗತ್ಯವಾದ ಸಲಹೆ, ಸಹಕಾರ, ಮಾರ್ಗದರ್ಶವನ್ನು ನೀಡುವ ಸಂಸ್ಥೆಗಳಾಗಿ ರೂಪುಗೊಳ್ಳುತ್ತಿದೆ. ಆರ್ಥಿಕ ಚಟುವಟಿಕೆಯನ್ನು ನಡೆಸುವ ಮೂಲಕ ಸಮಾಜದ ವಿವಿಧ ರಂಗಗಳಲ್ಲಿ ಅಗತ್ಯವಾದ ಸಹಕಾರ ಬ್ಯಾಂಕಿಂಗ್ ಕ್ಷೇತ್ರದಿಂದ ದೊರೆಯುತ್ತಿದೆ ಬಸ್ರೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರರಾದ ಬಿ. ಅಪ್ಪಣ್ಣ ಹೆಗ್ಡೆ ಹೇಳಿದರು.

    ಅವರು ಕುಂದಾಪುರ ತಾಲೂಕಿನ ಕೋಣಿಯಲ್ಲಿ ಕರ್ಣಾಟಕ ಬ್ಯಾಂಕಿನ ವಿತ್ತೀಯ ಶಾಖೆ ಹಾಗೂ ಎಟಿಎಂ ಉದ್ಘಾಟಿಸಿ ಮಾತನಾಡಿದರು. ಬ್ಯಾಂಕುಗಳಿಂದ ಸಾಲ ಪಡೆದ ಉದ್ದೇಶಕ್ಕಾಗಿ ಹಣವನ್ನು ವಿನಿಯೋಗಿಸದಿದರೇ ಅದರ ಮುರುಪಾವತಿಯ ಕಷ್ಟವೆನಿಸುತ್ತದೆ. ಮರುಪಾವತಿ ಮಾಡದಿದರೇ ಬಡ್ಡಿಯ ಮೇಲೆ ಬಡ್ಡಿ ಬೇಳೆಯುತ್ತದೆ. ಅದರ ಬದಲು ಬ್ಯಾಂಕಿನಿಂದ ಸಲಹೆ ಪಡೆದರೇ ಸಾಲ ಮಾಡಿದವನೂ ಹೊರೆಯಾಗದಂತೆ ಮರುಪಾವತಿ ಮಾಡಬಹುದಾಗಿದೆ. ತಂತ್ರಜ್ಞಾನ ಯುಗದಲ್ಲಿ ಹೊಸ ಸವಲತ್ತುಗಳನ್ನು ನೀಡುತ್ತಾ ಗ್ರಾಹಕರಿಗೆ ನೀಡುತ್ತಿರುವ ಬ್ಯಾಂಕುಗಳು ಕಾರ್ಯ ಸ್ವಾಗತಾರ್ಹ ಎಂದ ಅವರು ಖಾಸಗಿ ರಂಗದಲ್ಲಿ ವಿಶೇವಾದ ಪ್ರಗತಿ ಸಾಧಿಸಿರುವ ಕರ್ಣಾಟಕ ಬ್ಯಾಂಕ್ ಎಲ್ಲಾ ವಿಧದಲ್ಲಿಯೂ ಜನಸ್ನೇಹಿಯಾಗಿ ರೂಪುಗೊಂಡು ರಾಷ್ಟ್ರೀಕೃತ ಬಾಂಕುಗಳಿಗೆ ಸಮನಾಗಿ ನಿಂತಿರುವುದು ಶ್ಲಾಘನೀಯ ಎಂದರು.

    ಕರ್ಣಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಪಿ. ಜಯರಾಮ ಭಟ್ ಮಾತನಾಡಿ ಗ್ರಾಮೀಣ ಭಾಗದ ಜನರಿಗೆ ಬ್ಯಾಂಕಿಂಗ್ ಸೌಲಭ್ಯವನ್ನು ಒದಗಿಸಲು ಆದ್ಯತೆ ನೀಡಲಾಗುತ್ತಿದ್ದು 2020ರ ವೇಳೆಗೆ 1000 ಶಾಖೆಗಳನ್ನು ತೆರೆಯುವ ಯೋಜನೆಯಿದೆ. ಜನರೇ ನೇರವಾಗಿ ವ್ಯವಹರಿಸುವ ಈ-ಲೊಬಿ ಸೌಲಭ್ಯವನ್ನು ಹೆಚ್ಚಿಸಲು ಕಾರ್ಯಯೋಜನೆ ಹಾಕಿಕೊಳ್ಳಲಾಗಿದೆ. ಇಂಟರ್‌ನೆಟ್ ಬ್ಯಾಂಕಿಂಗ್, ಮೊಬೈಲ್ ಬಾಂಕಿಂಗ್‌ಗೆ ಒತ್ತು ನೀಡುತ್ತಿರುವುದರಿಂದ ಮುಂದಿನ ಐದು ವರ್ಷದಲ್ಲಿ ವಿದ್ಯುನ್ಮಾನದ ವ್ಯವಹಾರಗಳು 50%ದಿಂದ 90% ಕ್ಕೆ ಏರಿಕೆಯಾಗಲಿದೆ ಎಂದರು. ಒಂದು ಕಾಲದಲ್ಲಿ ಕೃಷಿ ಸಾಲವನ್ನು ಅತೀ ಹೆಚ್ಚು ನೀಡುತ್ತಿದ್ದ ಹೆಗ್ಗಳಿಕೆ ಕರ್ಣಾಟಕ ಬ್ಯಾಂಕಿನದ್ದಾಗಿತ್ತು. ಇಂದೂ ಕೂಡ ಕೃಷಿ ಕ್ಷೇತ್ರಕ್ಕೆ ಮನ್ನಣೆ ನೀಡಲಾಗುತ್ತಿದೆ. ಸಾಮಾಜಿಕ ಕಳಕಳಿಯ ವಿಚಾರಗಳ ಬಗ್ಗೆ ಬ್ಯಾಂಕ್ ಆಸಕ್ತಿ ವಹಿಸಿದೆ ಎಂದರು.

    ಕಾರ್ಯಕ್ರಮದಲ್ಲಿ ಕರ್ಣಾಟಕ ಬ್ಯಾಂಕಿನ ಮಾಜಿ ನಿರ್ದೇಶಕ ಎ.ಜಿ. ಕೊಡ್ಗಿ, ನಿರ್ದೇಶಕ ಡಾ.ಎಚ್. ರಾಮಮೋಹನ್ ಉಪಸ್ಥಿತರಿದ್ದರು. ಕಟ್ಟಡದ ಮಾಲೀಕ ಆನಂದ ಭಂಡಾರಿ, ಜಿಲ್ಲಾ ಪಂಚಾಯತ್ ಸದಸ್ಯೆ ಲಕ್ಷ್ಮೀ ಮಂಜು ಬಿಲ್ಲವ, ಮೊದಲಾದವರನ್ನು ಗೌರವಿಸಲಾಯಿತು. ಸವಿತಾ ಪ್ರಾರ್ಥಿಸಿದರು. ಉಡುಪಿ ಪ್ರಾದೇಶಿಕ ಕಛೇರಿಯ ಸಹಾಯಕ ಮಹಾ ಪ್ರಬಂಧಕಿ ವಿದ್ಯಾಲಕ್ಷ್ಮೀ ಆರ್ ಪ್ರಾಸ್ತಾವಿಕ ಮಾತುಗಳನ್ನಾಡಿ, ಸ್ವಾಗತಿಸಿದರು. ಎಮ್. ರಮೇಶ ನಿರೂಪಿಸಿದರು. ಶಾಖಾ ಪ್ರಬಂಧಕ ನಾಗಪ್ಪ ಪೂಜಾರಿ ವಂದಿಸಿದರು. / ಕುಂದಾಪ್ರ ಡಾಟ್ ಕಾಂ ಸುದ್ದಿ./

    Click here

    Click here

    Click here

    Click Here

    Call us

    Call us

    Karnataka Bank New Branch nd ATM opened in Koni - CEO Jayaram Bhat (1) Karnataka Bank New Branch nd ATM opened in Koni - CEO Jayaram Bhat (2) Karnataka Bank New Branch nd ATM opened in Koni - CEO Jayaram Bhat (3) Karnataka Bank New Branch nd ATM opened in Koni - CEO Jayaram Bhat (4)Karnataka Bank New Branch nd ATM opened in Koni - CEO Jayaram Bhat (5)Karnataka Bank New Branch nd ATM opened in Koni - CEO Jayaram Bhat (6)Karnataka Bank New Branch nd ATM opened in Koni - CEO Jayaram Bhat (7)Karnataka Bank New Branch nd ATM opened in Koni - CEO Jayaram Bhat (8)

    Karnataka Bank Koni
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    16 + 7 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.