Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರದಲ್ಲಿ ಬಹುಮಹಡಿ ಕಟ್ಟಡವನ್ನೇರಿದ ಜ್ಯೋತಿರಾಜನ ಸಾಹಸಕ್ಕೆ ಬೆರಗಾದ ಜನ
    ವಿಶೇಷ ವರದಿ

    ಕುಂದಾಪುರದಲ್ಲಿ ಬಹುಮಹಡಿ ಕಟ್ಟಡವನ್ನೇರಿದ ಜ್ಯೋತಿರಾಜನ ಸಾಹಸಕ್ಕೆ ಬೆರಗಾದ ಜನ

    Updated:28/05/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ವರದಿ
    ಕುಂದಾಪುರ: ಅವರು ನೋಡನೋಡುತ್ತಿದ್ದಂತೆ ಚಕಚಕನೆ ಕಟ್ಟಡವನ್ನೇರಿ ನೆರೆದಿದ್ದವರಲ್ಲಿ ಬೆರಗು ಮೂಡಿಸಿದರು. ಆರು ಮಹಡಿಯ ಕಟ್ಟಡವನ್ನು ಆರು ನಿಮಿಷಗಳಲ್ಲಿ ಸರಾಗವಾಗಿ ಏರಿ ಪ್ರೇಕ್ಷಕರ ಚಪ್ಪಾಳೆ ಗಿಟ್ಟಿಸಿಕೊಂಡರು. ಹೀಗೆ ಕುಂದಾಪುರದ ಶಾಸ್ತ್ರೀವೃತ್ತದ ಬಳಿ ಇರುವ ಜೆ.ಕೆ ಟವರ್ಸ್ ಏರಿ ತಮ್ಮ ಸಾಹಸ ಪ್ರದರ್ಶಿಸಿದವರು ಚಿತ್ರದುರ್ಗದ ಜ್ಯೋತಿರಾಜ್ ಯಾನೆ ಕೋತಿರಾಮ ಮತ್ತವರ ಅಣ್ಣನ ಮಗ ಮಾಸ್ಟರ್ ಅಕ್ಷಯ್.

    Click Here

    Call us

    Click Here

    ಕುಂದಾಪುರ ಟಿಟಿ ರಸ್ತೆಯ ಶ್ರೀ ವಿಘ್ನೇಶ್ವರ ಯುವಕ ಸಂಘ ರಜತ ಸಂಭ್ರಮಕ್ಕೆ ಆಗಮಿಸಿದ ಸಂದರ್ಭ ಸಾಹಸ ಕಾರ್ಯ ನಡೆಸಿದರು. ನೆಲ ಅಂತಸ್ತಿನಿಂದ ಏರಿದ ಜ್ಯೋತಿರಾಜ್ ಹಾಗೂ ಅವರ ಅಣ್ಣನ ಮಗ ನೋಡ ನೋಡುತ್ತಿದ್ದಂತೆ ಆರು ಮಹಡಿಗಳ ಜೆ.ಕೆ. ಟವರ್ಸ್ ಏರಿ, ಕೆಳಕ್ಕಿಳಿದರು. ಸಲೀಸಾಗಿ ಕಟ್ಟಡ ಏರಿದ ಕೋತಿರಾಮ ಅದೇ ವೇಗದಲ್ಲಿ ಕೆಳಗಿಳಿದು ಅಚ್ಚರಿ ಮೂಡಿಸಿದರು. ಸಾಹಸ ಕಾರ್ಯಕ್ಕೆ ಶಾಸ್ತ್ರೀ ವೃತ್ತದ ಸುತ್ತಮುತ್ತ ಅಪಾರ ಜನಸಂದಣಿ ನೆರೆದಿತ್ತು. ಕಟ್ಟಡದಿಂದ ಕೆಳಗಿಳಿಯುತ್ತಿದ್ದಂತೆ ಜನರು ಅಭಿನಂದನೆ ಮಹಾಪೂರ ಹರಿಸಿದರು.

    ಜ್ಯೋತಿರಾಜ್ ಅವರ ಸಾಹಸ ಕಾರ್ಯ ವೀಕ್ಷಿಸಲೆಂದು ಬಂದ ಜನಸಂದಣಿಯ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಯಲ್ಲಿ ಸಂಚಾರ ವ್ಯತ್ಯಯ ಉಂಟಾಯಿತು. ಪೊಲೀಸರು ಸುಗಮ ಸಂಚಾರಕ್ಕೆ ಬಳಿಕ ಅನುವು ಮಾಡಿಕೊಟ್ಟರು. ಇದೇ ಸಂದರ್ಭ ಜೆ.ಕೆ. ಟವರ್ಸ್ ಮಾಲೀಕ ಸತೀಶ್ ಶೆಟ್ಟಿ ಸಾಹಸ ಮಾಡಿದ ಜ್ಯೋತಿರಾಜ್ ಅವರನ್ನು ಸಹಸ್ರಾರು ನಾಗರಿಕರ ಸಮ್ಮುಖ ಸನ್ಮಾನಿಸಿದರು. ಕಟ್ಟಡ ಏರುವ ಮೊದಲು ಜ್ಯೋತಿರಾಜ್ ಅವರನ್ನು ಶ್ರೀ ವಿಘ್ನೇಶ್ವರ ಯುವಕ ಸಂಘದ ಪದಾಧಿಕಾರಿಗಳು ರ‍್ಯಾಲಿ ಮೂಲಕ ಬಹುಮಹಡಿ ಕಟ್ಟಡದತ್ತ ಕರೆತಂದರು.

    ತಮಿಳುನಾಡಿನ ಹುಡುಗ ಈಗ ವೀರ ಕನ್ನಡಿಗ
    ತಮಿಳುನಾಡು ತೇನಿ ಜಿಲ್ಲೆಯ ಕಾಮರಾಜ ನಗರದಲ್ಲಿ ಜನಿಸಿದ ಜ್ಯೋತಿರಾಜ್ (29) ಕೋತಿರಾಜ್ ಚಿಕ್ಕ ವಯಸ್ಸಿನಲ್ಲಿಯೇ ಬಾಗಲಕೋಟೆಯಲ್ಲಿ ಬಂದು ನೆಲೆಸಿದ್ದರು. ಕೆಲವು ವರ್ಷಗಳ ಕಾಲ ಇಲ್ಲಿಯೇ ಕೆಲಸ ಮಾಡಿಕೊಂಡಿದ್ದ ಜ್ಯೋತಿರಾಜ್ ಬಳಿಕ ಚಿತ್ರದುರ್ಗದತ್ತ ಮುಖಮಾಡಿದರು. 18ನೇ ವಯಸ್ಸಿನಲ್ಲಿ ಬದುಕಿನಲ್ಲಿ ಬೇಸರಗೊಂಡು ಸಾಯಲು ಪ್ರಯತ್ನಿಸಿದರೂ ಅದೃಷ್ಟವಶಾತ್ ಬದುಕಿಬಂದರು. ಸಾಯ ಹೋರಟ ಅವರ ಕೊನೆಯ ಪ್ರಯತ್ನವೇ ಅವರ ಬದುಕನ್ನು ಬದಲಿಸಿತು. ಕೋತಿಗಳು ಸಲೀಸಾಗಿ ಬಂಡೆಗಳನ್ನು ಏರುವುದನ್ನು ಕಂಡು ಪ್ರೇರಿತರಾಗಿ ಅದರಂತೆಯೇ ಬಂಡೆಗಳನ್ನು ಏರುವುದನ್ನು ಕಲಿತು ಯಶಸ್ವಿಯಾದರು. ಚಿತ್ರದುರ್ಗಕ್ಕೆ ಬರುವ ಪ್ರವಾಸಿಗರ ಎದುರು ಕೋಟೆಗಳನ್ನು ಏರಿ ತನ್ನ ಪ್ರತಿಭೆಯನ್ನು ತೋರ್ಪಡಿಸಿಕೊಂಡು ಕೋತಿರಾಜ್ ಎಂದೇ ಪ್ರಸಿದ್ದರಾದರು.

    ಪ್ರಪಂಚ ದಲ್ಲಿರುವ ಎಲ್ಲ ಬಂಡೆಗಳನ್ನು ಏರಬೇಕೆಂಬ ತವಕವಿದೆ. ಇದುವರೆಗಿನ ನನ್ನ ಸಾಹಸ ಯಾತ್ರೆಯಲ್ಲಿ ಅತ್ಯಂತ ಅಪಾಯಕಾರಿ ಪರಿಸ್ಥಿತಿ ಎದುರಾಗಿದ್ದು ಜೋಗ್‌ಫಾಲ್ಸ್‌ನಲ್ಲಿ. ನೀರನ್ನು ಭೇದಿಸಿ ಮೇಲೇರುವ ಸಾಹಸ ಸಾಕಷ್ಟು ರಿಸ್ಕ್ ಆಗಿತ್ತು. ದೇವರು ಈ ಸಾಹಸ ಕಾರ್ಯದಲ್ಲಿ ಕೈ ಹಿಡಿದಿದ್ದರಿಂದ ಎಲ್ಲವೂ ಸುಖಮಯವಾಯಿತು ಎಂದರು. ಸತತ 10 ಬಾರಿ ಫಾಲ್ಸ್ ಕ್ಲೈಂಬಿಂಗ್ ಮಾಡಿದ್ದೇನೆ. ಮೈಸೂರಿನಲ್ಲಿರುವ 14 ಮಹಡಿ ಕಟ್ಟಡ ಏರಿದ್ದು ಇದುವರೆಗಿನ ಹೈಯೆಸ್ಟ್ ಕ್ಲೈಂಬಿಂಗ್ ಎಂದು ವಿವರಿಸಿದರು. ಕುಂದಾಪುರಕ್ಕೆ ಇದು ನನ್ನ ಎರಡನೇ ಭೇಟಿಯಾಗಿದ್ದು ಇಲ್ಲಿನ ಜನರ ಪ್ರೋತ್ಸಾಹ ತನಗೆ ಖುಷಿ ತಂದಿದೆ ಎಂದರು.

    Click here

    Click here

    Click here

    Call us

    Call us

    [quote font_size=”16″ bgcolor=”#ffffff” bcolor=”#dd9933″ arrow=”yes”]ವಿದೇಶಗಳಲ್ಲಿ ವಾಲ್ ಕ್ಲೈಂಬಿಂಗ್ ನೀಡುತ್ತಿರುವ ಪ್ರೋತ್ಸಾಹ ನಮ್ಮಲ್ಲಿ ನೀಡುತ್ತಿಲ್ಲ. ಕಳೆದ 6 ವರ್ಷಗಳಿಂದ ವಾಲ್ ಕ್ಲೈಂಬಿಂಗ್ ನಿರ್ಮಿಸಿಕೊಡಿ ಎಂಬ ಕನಿಷ್ಠ ಬೇಡಿಕೆಗೂ ಸರಕಾರ ಸ್ಪಂದಿಸದಿರುವುದು ನೋವುಂಟುಮಾಡಿದೆ. ನಾನು ಅನಕ್ಷರಸ್ಥ. ಆದರೆ ದೇವರ ದಯೆಯಿಂದ ಈ ಕಲೆ ನನ್ನಲ್ಲಿ ಅಂತರ್ಗತವಾಗಿದೆ. ಸಾಹಸ ಪ್ರವೃತ್ತಿಯ 17 ಹುಡುಗರಿಗೆ ಈಗಾಗಲೇ ಈ ಕಲೆಯ ಪರಿಚಯ ಮಾಡಿಸಿದ್ದೇನೆ. 2020ರ ಒಲಿಂಪಿಕ್ಸ್‌ಗೆ ವಾಲ್ ಕ್ಲೈಂಬಿಂಗ್‌ಗೆ ಅಣ್ಣನ ಮಗ ಮಾಸ್ಟರ್ ಅರ್ಜುನ್ ಅವರನ್ನು ತಯಾರುಗೊಳಿಸುತ್ತಿದ್ದೇನೆ. ಭಾರತದಲ್ಲಿ ವಾಲ್ ಕ್ಲೈಂಬಿಂಗ್ ತರಬೇತಿ ಆರಂಭಿಸಬೇಕು. ಸಾಹಸ ಪ್ರವೃತ್ತಿಯ ಯುವಕರಿಗೆ ಪ್ರೇರಣೆ ನೀಡಬೇಕೆಂಬುದು ನನ್ನ ಅಭಿಲಾಷೆ. – ಜ್ಯೋತಿರಾಜ್[/quote]

    Jyothiraj Climbed JK towers in Kundapura shastri curcle (1) Jyothiraj Climbed JK towers in Kundapura shastri curcle (2) Jyothiraj Climbed JK towers in Kundapura shastri curcle (3) Jyothiraj Climbed JK towers in Kundapura shastri curcle (4) Jyothiraj Climbed JK towers in Kundapura shastri curcle (5)Jyothiraj Climbed JK towers in Kundapura shastri curcle (14)Jyothiraj Climbed JK towers in Kundapura shastri curcle (15)Jyothiraj Climbed JK towers in Kundapura shastri curcle (16)Jyothiraj Climbed JK towers in Kundapura shastri curcle (18)Jyothiraj Climbed JK towers in Kundapura shastri curcle (13)Jyothiraj Climbed JK towers in Kundapura shastri curcle (6)Jyothiraj Climbed JK towers in Kundapura shastri curcle (7)Jyothiraj Climbed JK towers in Kundapura shastri curcle (8)Jyothiraj Climbed JK towers in Kundapura shastri curcle (9)Jyothiraj Climbed JK towers in Kundapura shastri curcle (11)Jyothiraj Climbed JK towers in Kundapura shastri curcle (20)Jyothiraj Climbed JK towers in Kundapura shastri curcle (21)Jyothiraj Climbed JK towers in Kundapura shastri curcle (22)Jyothiraj Climbed JK towers in Kundapura shastri curcle (23)Jyothiraj Climbed JK towers in Kundapura shastri curcle (24)

    Like this:

    Like Loading...

    Related

    Jyothiraj Climbed kundapura JK towers
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d