Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೆಮ್ಮಾಡಿ ಹೈಸ್ಕೂಲು, ಜಾಗ ಪರಬಾರೆ ಸುದ್ದಿ ಸತ್ಯಕ್ಕೆ ದೂರವಾದದ್ದು. ಸಾಮಾಜಿಕ ತಾಣಗಳ ಮೂಲಕ ನನ್ನ ತೇಜೋವಧೆ: ಶಾಸಕ ಗೋಪಾಲ ಪೂಜಾರಿ
    Uncategorized

    ಹೆಮ್ಮಾಡಿ ಹೈಸ್ಕೂಲು, ಜಾಗ ಪರಬಾರೆ ಸುದ್ದಿ ಸತ್ಯಕ್ಕೆ ದೂರವಾದದ್ದು. ಸಾಮಾಜಿಕ ತಾಣಗಳ ಮೂಲಕ ನನ್ನ ತೇಜೋವಧೆ: ಶಾಸಕ ಗೋಪಾಲ ಪೂಜಾರಿ

    Updated:30/05/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪುರ: ಹೆಮ್ಮಾಡಿಯ ವಿವಿವಿ ಮಂಡಳಿಗೆ ಸೇರಿದ ಜಾಗವನ್ನು ಪರಭಾರೆ ಮಾಡಿ ಖಾಸಗಿವರಿಗೆ ಶಾಲೆ ನಡೆಸಲು ಅವಕಾಶ ಮಾಡಿಕೊಲಾಗಿದೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದ್ದು, ಆರೋಪ ಮಾಡುವವರು ದಾಖಲೆ ಸಮೇತ ಸಾಬೀತು ಪಡಿಸಲಿ. ಅದನ್ನು ಬಿಟ್ಟು ಸಾಮಾಜಿಕ ತಾಣಗಳನ್ನು ಬಳಸಿಕೊಂಡು ನನ್ನ ತೇಜೋವಧೆ ಮಾಡುತ್ತಿರುವುದಲ್ಲದೇ, ಹತ್ತಾರು ವರ್ಷಗಳ ಇತಿಹಾಸವಿರುವ ಶಾಲೆಯ ಹೆಸರು ಕೆಡಿಸಲು ಮುಂದಾಗಿರುವುದರಲ್ಲಿ ಅರ್ಥವಿಲ್ಲ ಎಂದು ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಅವರು ಹೇಳಿದ್ದಾರೆ.

    Click Here

    Call us

    Click Here

    ಕಳೆದ ಮೂರು ದಿನಗಳಿಂದ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಯ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ವಿವಿವಿ ಮಂಡಳಿಯ ಸೇರಿದ ಹೆಸ್ಕೂಲು, ಕಾಲೇಜು ಹಾಗೂ ಜಾಗ ಮಂಡಳಿಯ ಹೆಸರಿನಲ್ಲಿಯೇ ಇದ್ದು, ಇದರಲ್ಲಿ ಎಲ್ಲಿಯೂ ಅಕ್ರಮ ನಡೆದಿಲ್ಲ. ಹೈಸ್ಕೂಲು, ಕಾಲೇಜಿನ ಜೊತೆಗೆ ಪ್ರಸ್ತುತ ಶೈಕ್ಷಣಿಕ ವರ್ಷದಿಂದ ವಿವಿವಿ ಮಂಡಳಿಯು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯನ್ನು ಆರಂಭಿಸಿರುವುದನ್ನು ಸಹಿಸದ ಮಂದಿ ತನ್ನ ತೇಜೋವಧೆ ಮಾಡಲು ನಿಂತಿರುವುದು ವಿಷಾದನೀಯ ಎಂದರು.

    ಹೆಮ್ಮಾಡಿಯ ಹೈಸ್ಕೂಲಿನಲ್ಲಿ ನೂರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಅವರಿಗೆ ಉಚಿತ ಶಿಕ್ಷಣವನ್ನು ನಿಡುತ್ತಾ ಬರಲಾಗಿದೆ. ಕಾಲೇಜಿನ ವಿದ್ಯಾರ್ಥಿಗಳಿಂದ ಪಡೆಯುವ ಕನಿಷ್ಠ ಶುಲ್ಕದಿಂದ ಸಂಸ್ಥೆಯನ್ನು ಮುನ್ನಡೆಸಲು ಯಾರೊಬ್ಬರಿಗೂ ಸಾಧ್ಯವಿಲ್ಲ. ಹೀಗಿರುವಾಗ ಕಳೆದ ಹತ್ತು ವರ್ಷಗಳಿಂದ ಕಾಲೇಜಿನ ಉಪನ್ಯಾಸಕರ ಸಂಬಳ ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಟ್ರಸ್ಟಿನ ಹಣವನ್ನೇ ಎಲ್ಲದಕ್ಕೂ ವಿನಿಯೋಗಿಸಲಾಗುತ್ತಿದೆ. ಕಾಲೇಜಿಗೆ ಪ್ರತಿ ತಿಂಗಳು ಕನಿಷ್ಠ ಒಂದು ಲಕ್ಷ ಹಣ ನಿರ್ವಹಣೆಗೆ ಬೇಕಾಗುತ್ತಿದ್ದು, ಇದರ ಮೂಲ ಯಾವುದು ಎಂದು ದಾಖಲೆಗಳನ್ನು ನೋಡಿ ಮಾತನಾಡಲಿ. ಪ್ರತಿಯೊಂದಕ್ಕೂ ಲೆಕ್ಕವಿದ್ದು, ಎಲ್ಲವೂ ಕಾನೂನಿನ ಚೌಕಟ್ಟಿನಲ್ಲಿಯೇ ನಡೆಯುತ್ತಿದೆ ಎಂದವರು ತಿಳಿಸಿದ್ದಾರೆ.

    ಗುರುರಕ್ಷಾ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆ ವಿವಿವಿ ಮಂಡಳಿಗೇ ಸೇರಿದ್ದು:
    ಪ್ರಸಕ್ತ ಸಾಲಿನಲ್ಲಿ ನೂತನವಾಗಿ ಆರಂಭಿಸಲಾಗಿರುವ ಗುರುರಕ್ಷಾ ಪೂರ್ವ ಪ್ರಾಥಮಿಕ ಹಾಗೂ ಗುರುರಕ್ಷಾ ಆಂಗ್ಲ ಮಾಧ್ಯಮ ಶಾಲೆಯು ವಿವಿ ಮಂಡಳಿಗೆ ಸೇರಿದ್ದಾಗಿದ್ದು ಇದರಲ್ಲಿ ಅಕ್ರಮ ನಡೆದಿದೆ ಎನ್ನುವುದರಲ್ಲಿ ಹುರುಳಿಲ್ಲ. ಟ್ರಸ್ಟ್‌ಗೆ ಸಂಬಂಧಿಸಿದ ಜಾಗದಲ್ಲಿಯೇ ಹೊಸತಾಗಿ ಗುರುರಕ್ಷಾ ಪೂರ್ವ ಪ್ರಾಥಮಿಕ ಹಾಗೂ ಕಿರಿಯ ಪ್ರಾಥಮಿಕ ಶಾಲೆಯನ್ನು ತೆರೆಯಲು ಶಿಕ್ಷಣ ಇಲಾಖೆಯಿಂದಲೇ ಅನುಮತಿ ದೊರೆತಿದೆ. ಶಿಕ್ಷಣ ಇಲಾಖೆಯ ನಿಯಮಾನುಸಾರವಾಗಿ ಆಂಗ್ಲ ಮಾಧ್ಯಮ ಶಾಲೆಯನ್ನು ತೆರೆಯಲಾಗಿದೆ ಎಂದು ತಿಳಿಸಿರುವ ಗೋಪಾಲ ಪೂಜಾರಿ ಅವರು, ಸದ್ಯ ಹೈಸ್ಕೂಲು, ಕಾಲೇಜು ಮಾತ್ರವೇ ಇರುವುದರಿಂದ ಸರಕಾರಿ ನಿಯಮಗಳನ್ನು ಪರಾಮರ್ಶಿಸಿಯೇ ಪ್ರಾಥಮಿಕ ಶಾಲೆಯನ್ನು ಆರಂಭಿಸಲಾಗುತ್ತಿದೆ ಎಂದಿದ್ದಾರೆ.

    ವಿವಿವಿ ಮಂಡಳಿ ಆರಂಭಿಸಿರುವ ಗುರುರಕ್ಷಾ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕಾಲೇಜನ್ನು ಗುರುದರ್ಶನ ಟ್ರಸ್ಟ್‌ಗೆ ನಿರ್ವಹಣೆಗಾಗಿ ಲೀಸ್ ಆಧಾರದಲ್ಲಿ ಬಿಟ್ಟುಕೊಡಲಾಗಿದ್ದು ಯಾವುದನ್ನೂ ಮಾರಾಟ ಅಥವಾ ಪರಭಾರೆ ಮಾಡುವ ಕೆಲಸ ನಡೆದಿಲ್ಲ. ಹೌಸ್ಕೂಲು ವಿಭಾಗದಲ್ಲಿ ಈ ಟ್ರಸ್ಟಿನ ಹಸ್ತಕ್ಷೇಪವೂ ಇಲ್ಲ. ಸಂಸ್ಥೆಯ ಏಳ್ಗೆಯ ದೃಷ್ಠಿಯಿಂದ ಉತ್ತಮ ಹೀಗಿ ಮಾಡಲಾಗಿದೆಯೇ ಹೊರತು ಬೇರೆ ಉದ್ದೇಶವೂ ತಮಗಿಲ್ಲ. ಸುಮ್ಮನೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ ಶಿಕ್ಷಣ ಸಂಸ್ಥೆ ಹಾಗೂ ತನ್ನ ಹೆಸರು ಕೆಡಿಸುವ ಹುನ್ನಾರವಿದು ಎಂದು ಶಾಸಕರು ತಿಳಿಸಿದ್ದಾರೆ.

    Click here

    Click here

    Click here

    Click Here

    Call us

    Call us

    gururaksha1 gururaksha2

    Byndoor MLA News K. Gopal Poojary
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026

    ಶಂಕರನಾರಾಯಣ: ಮದರ್ ತೆರೆಸಾ ಶಾಲೆಯ ವಿದ್ಯಾರ್ಥಿ ಎಸ್‌.ಎಸ್.‌ಎಲ್.‌ಸಿಯಲ್ಲಿ ಪ್ರೀತಮ್ ಜಿ. ಪೂಜಾರಿ ರಾಜ್ಯಕ್ಕೆ ಟಾಪರ್‌

    23/04/2026
    Leave A Reply Cancel Reply

    ten − 7 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.