Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಡ್ಡರ್ಸೆಯವರು ಧ್ಯೇಯಾದರ್ಯಗಳನ್ನು ಇಂದಿನ ಪತ್ರಕರ್ತರು ಮನಗಾಣಬೇಕಿದೆ
    ಊರ್ಮನೆ ಸಮಾಚಾರ

    ವಡ್ಡರ್ಸೆಯವರು ಧ್ಯೇಯಾದರ್ಯಗಳನ್ನು ಇಂದಿನ ಪತ್ರಕರ್ತರು ಮನಗಾಣಬೇಕಿದೆ

    Updated:26/06/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೋಟ: ನಿಷ್ಪಕ್ಷಪಾತವಾದ ವರದಿಗಳ ಮುಂಗಾರು ಪತ್ರಿಕೆಗೆ ತನ್ನದೇ ಆದ ಘನತೆ ತಂದುಕೊಟ್ಟಿದ್ದ ವಡ್ಡರ್ಸೆ ರಘುರಾಮ ಶೆಟ್ಟರು ನಿರ್ಭಿತ ಪತ್ರಿಕೋದ್ಯಮದ ಮೂಲಕ ಸಮಾಜದಲ್ಲಿ ಸಂಚಲನ ಉಂಟು ಮಾಡಿದ ಪತ್ರಕರ್ತರಾಗಿದ್ದರು. ಅವರ ಆದರ್ಶ, ಧ್ಯೇಯ ಧೋರಣೆಗಳನ್ನು ಇಂದಿನ ಪತ್ರಕರ್ತರು ಮನಗಾಣಬೇಕಿದೆ ಎಂದು ಸಾಮಾಜಿಕ ಹೋರಾಟಗಾರ ಜ್ಞಾನವಸಂತ ಶೆಟ್ಟಿ ಬ್ರಹ್ಮಾವರ ತಿಳಿಸಿದರು.

    Click Here

    Call us

    Click Here

    ವಡ್ಡರ್ಸೆ ಮಹಾಲಿಂಗೇಶ್ವರ ಸಭಾಭವನದಲ್ಲಿ ನಿಮ್ಮ ಅಭಿಮತ ಪಾಕ್ಷಿಕ ಪತ್ರಿಕೆ ಹಾಗೂ ಬ್ರಹ್ಮಾವರ ವಲಯ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಖ್ಯಾತ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿಯವರ ಸಂಸ್ಮರಣಾ ಕಾರ್ಯಕ್ರಮದಲ್ಲಿ ವಡ್ಡರ್ಸೆಯವರ ಬದುಕು, ಬರಹದ ಕುರಿತು ಅವರು ಮಾತನಾಡಿದರು. ವಿವಿಧ ಪತ್ರಿಕೆಗಳಲ್ಲಿ ಕೆಲಸ ನಿರ್ವಹಿಸಿದ ವಡ್ಡರ್ಸೆಯವರು, ಮುಂದೆ ಮುಂಗಾರು ಪತ್ರಿಕೆ ಆರಂಭಿಸುವ ಮೂಲಕ ಹಲವಾರು ಪತ್ರಕರ್ತರಿಗೆ ಅವಕಾಶ ಒದಗಿಸಿದ್ದಾರೆ. ಪತ್ರಿಕೋಧ್ಯಮದ ಜವಾಬ್ದಾರಿ, ಕರ್ತವ್ಯ, ಪತ್ರಕರ್ತನ ಜವಾಬ್ದಾರಿ ಇತ್ಯಾದಿಗಳನ್ನು ಅವರ ವರದಿ, ಬರಹಗಳ ಮೂಲಕ ಮನಗಾಣಬಹುದು ಎಂದರು.

    ಬ್ರಹ್ಮಾವರ ವಲಯ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಭಾಕರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ವಡ್ಡರ್ಸೆಯವರ ಸಹೋದರ ಸದಾಶಿವ ಶೆಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಡ್ಡರ್ಸೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮೊಕ್ತೇಸರ ಉದಯಕುಮಾರ್ ಶೆಟ್ಟಿ ಕೊತ್ತಾಡಿ, ಸಹಕಾರಿ ಧುರೀಣ ಭೋಜರಾಜ ಹೆಗ್ಡೆ, ಮುಖ್ಯ ಶಿಕ್ಷಕ ಆನಂದ ಶೆಟ್ಟಿ, ಬ್ರಹ್ಮಾವರ ವಲಯ ಕಾರ‍್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಅಶ್ವಥ ಆಚಾರ್ಯ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ೬೧೧ ಅಂಕ ಪಡೆದ ಸ್ಥಳೀಯ ಪ್ರೌಢಶಾಲಾ ವಿದ್ಯಾರ್ಥಿನಿ ನಾಗಶ್ರೀ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

    ಪತ್ರಕರ್ತ ರಾಜೇಶ ಗಾಣಿಗ ಅಚ್ಲಾಡಿ ಸ್ವಾಗತಿಸಿ, ವಸಂತ ಗಿಳಿಯಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಚಂದ್ರಶೇಖರ್ ಬೀಜಾಡಿ ಕಾರ್ಯಕ್ರಮ ನಿರ್ವಹಿಸಿದರು. ಶರತ್ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    twenty − 16 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.