Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಿರಿಯರೆಡೆಗೆ ನಮ್ಮ ನಡಿಗೆ: ಮಲಾರ್ ಜಯರಾಮ ರೈ ಅವರಿಗೆ ಪತ್ರಿಕಾ ದಿನದ ಗೌರವ
    Recent post

    ಹಿರಿಯರೆಡೆಗೆ ನಮ್ಮ ನಡಿಗೆ: ಮಲಾರ್ ಜಯರಾಮ ರೈ ಅವರಿಗೆ ಪತ್ರಿಕಾ ದಿನದ ಗೌರವ

    Updated:01/07/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕಾಸರಗೋಡು: ಪತ್ರಕರ್ತರ ವೇದಿಕೆ ರಿ. ಬೆಂಗಳೂರು, ಉಡುಪಿ-ದ.ಕ ಜಿಲ್ಲಾ ಘಟಕ ಕಳೆದ 8 ವರ್ಷಗಳಿಂದ ಪತ್ರಿಕಾ ದಿನದ ಅಂಗವಾಗಿ ಯಾಶಸ್ವಿಯಾಗಿ ಆಯೋಜಿಸುತ್ತಿರುವ ಹಿರಿಯರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಈ ವರ್ಷ ಡೆಕ್ಕನ್ ಹೆರಾಲ್ಡ್, ನವಭಾರತ ಪತ್ರಿಕೆಗಳಲ್ಲಿ ಸುದೀರ್ಘ ಕಾಲ ಅಪೂರ್ವ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತ ಮಲಾರ್ ಜಯರಾಮ ರೈ ಅವರಿಗೆ ಪತ್ರಿಕಾ ದಿನದ ಗೌರವ ಸಲ್ಲಿಸಲಾಯಿತು.

    Click Here

    Call us

    Click Here

    ಕಾಸರಗೋಡು ಶಿರಿಯಾದ ಮಲಾರ್ ಜಯರಾಮ ರೈಗಳ ನಿವಾಸದಲ್ಲಿ ನಡೆದ ವಿನೂತನ ಕಾರ್ಯಕ್ರಮದಲ್ಲಿ ಸಂಘಟಕ, ಕಸಪಾ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಟ ಪುನರೂರು ಅವರು ರೈಗಳಿಗೆ ಲೇಖನ ಪರಿಕರಗಳು ಹಾಗೂ ಪ್ರಶಸ್ತಿ ಫಲಕವನ್ನಿತ್ತು ಗೌರವಿಸಿದರು.

    ಬಳಿಕ ಹರಿಕೃಷ್ಟ ಪುನರೂರು ಮಾತನಾಡಿ, ಮಲಾರು ಜಯರಾಮ ರೈ ಅವರಂತಹ ಹಿರಿಯ ಹಾಗೂ ಕರ್ತವ್ಯ ನಿಷ್ಠ ಪತ್ರಕರ್ತರನ್ನು ಗುರುತಿಸಿ ಗೌರವಿಸಿತ್ತಿರುವುದು ಶ್ಲಾಘನಾರ್ಹ. ಶೇಖರ ಅಜೆಕಾರು ಅವರು ಪತ್ರಕರ್ತರ ವೇದಿಕೆ ಮೂಲಕ ಹಲವಾರು ಹಿರಿಯ ಪತ್ರಕರ್ತರು ಹಾಗೂ ವೃತ್ತಿನಿರತ ಪತ್ರಕರ್ತರ ಮುಖಮುಖಿಯಾಗಿಸುವ ಕಾರ್ಯ ಮಾಡಿ ಕಾರ್ಯಕ್ರಮಕ್ಕೊಂದು ಮೆರಗು ನೀಡಿರುವುದಲ್ಲದೇ ಕಿರಿಯ ಪತ್ರಕರ್ತರಿಗೆ ಒಂದು ಸದಾವಕಾಶ ಒದಗಿಸಿಕೊಟ್ಟಿದ್ದಾರೆ ಎಂದರು.

    ಗೌರವ ಸ್ವೀಕರಿಸಿದ ಮಲಾರ್ ಜಯರಾಂ ರೈ ಮಾತನಾಡಿ ನಮ್ಮ ಕಾಲದಲ್ಲಿ ಪತ್ರಿಕೋದ್ಯಮ ಒಂದು ವೃತ್ತಿಯಾಗಿರಲಿಲ್ಲ. ಅದೊಂದು ಸೇವೆ ಎಂದೇ ಭಾವಿಸಿದ್ದೇವು. ಕಡಿಮೆ ಸಂಬಳದಲ್ಲಿ ಕೆಲಸ ಮಾಡುತ್ತಿದ್ದರೂ ಆತ್ಮತೃಪ್ತಿಯ ಬದುಕು ನಮ್ಮದಾಗಿತ್ತು. ಎಂದು ಅಂದಿನ ದಿನಗಳನ್ನು ಮೆಲಕು ಹಾಕಿದರು.

    ಆಕಾಶವಾಣಿ ನಿರ್ದೇಶಕ ಡಾ. ವಸಂತ ಕುಮಾರ್ ಪೆರ್ಲ ಮಾತನಾಡಿ ಪತ್ರಿಕೋದ್ಯಮ ಇಂದು ಹೊಸ ಹೊಸ ಆಯಾಮಗಳೊಂದು ಜನರನ್ನು ಎದಿರುಗೊಳ್ಳುತ್ತಿದೆ. ಮುದ್ರಣ ಮಾಧ್ಯಮದಿಂದ ಆರಂಭಗೊಂಡು ಶ್ರಾವ್ಯ, ದೃಶ್ಯ ಮಾಧ್ಯಳ ನಂತರ ವೆಬ್ ಮಾಧ್ಯಮಗಳು ನಮ್ಮ ಮುಂದೆ ಬಂದಿವೆ. ಆಧುನಿಕತೆಯ ನಡುವೆಯೂ ಪತ್ರಿಕೆ ಓದುವವರ ಸಂಖ್ಯೆ ವೃದ್ಧಿಯಾಗುತ್ತಲೇ ಇದೆ. ಜೊತೆಗೆ ಎಲ್ಲಾ ಬಗೆಯ ಮಾಧ್ಯಮಗಳೂ ತನ್ನ ಸ್ಥಾನವನ್ನು ಗಟ್ಟಿಗೊಳಿಸುತ್ತಲೇ ಬಂದಿವೆ. ಪತ್ರಿಕೋದ್ಯಮದಲ್ಲಿ ಸಾಧಿಸುವವರಿಗೆ ವಿಪುಲ ಅವಕಾಶಗಳಿದ್ದು, ಅದನ್ನು ಸದ್ಬಳಕೆ ಮಾಡಿಕೊಳ್ಳುವ ಜಾಣ್ಮೆ ನಮ್ಮದಾಗಬೇಕಿದೆ ಎಂದರು.

    Click here

    Click here

    Click here

    Call us

    Call us

    ಸಂಘಟಕ ಡಾ. ರಾಜೇಶ್ ಆಳ್ವ, ಹಿರಿಯ ಪತ್ರಕರ್ತರಾದ ರಾಧಾಕೃಷ್ಣ ಉಳಿಯತಡ್ಕ, ಎಸ್. ಜಯರಾಂ, ಗಂಗಾಧರ ಪಿಲಿಯೂರು ಕಾಸರಗೋಡಿನ ಶಿರಿಯಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅತಿಥಿಯಾಗಿದ್ದರು. ಬೆಂಗಳೂರು ಪತ್ರಕರ್ತರ ವೇದಿಕೆಯ ಉಡುಪಿ-ದ.ಕ ಘಟಕದ ಅಧ್ಯಕ್ಷ ಶೇಖರ ಅಜೆಕಾರು ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಹಾಗೂ ಕಾಸರಗೋಡಿಯ ಹಿರಿ ಕಿರಿಯ ಪತ್ರಕರ್ತ ಮಿತ್ರರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

    ಕುಂದಾಪ್ರ ಡಾಟ್ ಕಾಂ ಸಂಪಾದಕ ಸುನಿಲ್ ಹೆಚ್. ಜಿ. ಬೈಂದೂರು ಸ್ವಾಗತಿಸಿದರು. ನಿವೃತ್ತ ಪ್ರಾಂಶುಪಾಲೆ ಚಂದ್ರಪ್ರಭಾ ಹೆಗ್ಡೆ ಧನ್ಯವಾದಗೈದರು. ಶಿಕ್ಷಕಿ ಸಾಯಿಶ್ವರಿ ಕಾರ್ಯಕ್ರಮ ನಿರೂಪಿಸಿದರು.

    Hiriyaredege namma nadige 10 Hiriyaredege namma nadige1 Hiriyaredege namma nadige2 Hiriyaredege namma nadige3 Hiriyaredege namma nadige4Hiriyaredege namma nadige9 Hiriyaredege namma nadige5 Hiriyaredege namma nadige6 Hiriyaredege namma nadige8 Hiriyaredege namma nadige09Hiriyaredege namma nadige9 Hiriyaredege namma nadige10 Hiriyaredege namma nadige11 Hiriyaredege namma nadige12 Hiriyaredege namma nadige14Hiriyaredege namma nadige15 Hiriyaredege namma nadige16 Hiriyaredege namma nadige17 Hiriyaredege namma nadige19 Hiriyaredege namma nadige20

    Like this:

    Like Loading...

    Related

    Shekar Ajekar
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಆತಿಥ್ಯ ನೀಡುವುದರಲ್ಲಿ ಬಂಟ ಸಮುದಾಯ ಪ್ರಸಿದ್ಧಿ: ಬೆಳಗಾವಿ ಬಂಟರ ಭವನ ಉದ್ಘಾಟಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

    15/06/2025

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ

    08/04/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌
    • ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d