Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪ್ರತಿಭೆಯೊಂದಿಗೆ ಸಾಧಿಸುವ ಛಲವಿದ್ದರೇ ಯಶಸ್ಸು ಖಂಡಿತ: ಪತ್ರಕರ್ತ ಅರುಣಕುಮಾರ್ ಶಿರೂರು
    ಊರ್ಮನೆ ಸಮಾಚಾರ

    ಪ್ರತಿಭೆಯೊಂದಿಗೆ ಸಾಧಿಸುವ ಛಲವಿದ್ದರೇ ಯಶಸ್ಸು ಖಂಡಿತ: ಪತ್ರಕರ್ತ ಅರುಣಕುಮಾರ್ ಶಿರೂರು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಪ್ರತಿಭೆ ಇದ್ದವರಿಗೆ ಅವಕಾಶಗಳ ಕೊರತೆ ಇಲ್ಲ. ಆದರೆ ಪ್ರತಿ ದಿನವೂ ಎದುರಾಗುವ ಅವಕಾಶಗಳನ್ನು ಜಾಣ್ಮೆಯಿಂದ ಬಳಸಿಕೊಳ್ಳುವ ಚಾಕಚಕ್ಯತೆ, ಸಾಗುವ ಹಾದಿಗೆ ನಿರ್ದಿಷ್ಟ ಗುರಿ ಇದ್ದರೇ ಮಾತ್ರ ನಾವು ಎಲ್ಲರಿಂದಲೂ ಭಿನ್ನರಾಗಿ ಗುರುತಿಸಿಕೊಳ್ಳುತ್ತೇವೆ ಮತ್ತು ಯಶಸ್ಸು ತಾನಾಗಿಯೇ ಹಿಂಬಾಲಿಸುತ್ತದೆ ಎಂದು ಪತ್ರಕರ್ತ ಅರುಣಕುಮಾರ್ ಶಿರೂರು ಹೇಳಿದರು.

    Click Here

    Call us

    Click Here

    ಸಂಚಲನ ರಿ. ಹೊಸೂರು ಆಶ್ರಯದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಕಾರದೊಂದಿಗೆ ಬೈಂದೂರು ಗ್ರಾಪಂ ವ್ಯಾಪ್ತಿಯ ಹೊಸೂರಿನ ಹೊಂಗಿರಣ ರಂಗಮಂದಿರದಲ್ಲಿ ಚಾಲನೆಗೊಂಡ ನಾಲ್ಕು ದಿನಗಳ ಕಾನನದೊಳಗೊಂದು ರಂಗಸುಗ್ಗಿ ‘ಶರತ್ ರಂಗ ಸಂಚಲನ -2016’ರ ಜನಪದ-ಮಾಯಾ ವೈಭವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಇಂದಿನ ಟಿ.ವಿ ಮಾಧ್ಯಮಗಳು ಹಾಗೂ ಹಣದ ಪ್ರಭಾವ ಒಂದು ದಿನದಲ್ಲಿ ಸಾಧನೆಯ ಉತ್ತುಂಗ ಸ್ಥಾನಕ್ಕೇರುವುದೇ ಯಶಸ್ಸು ಎಂಬ ಸಂಕುಚಿತ ಭಾವನೆಯನ್ನು ಮನಸ್ಸಿನೊಳಕ್ಕೆ ತುರುಕುತ್ತಿದೆ. ಹೀಗೆ ಪಡೆದ ಯಶಸ್ಸು ಬಹುಕಾಲ ಉಳಿಯದು ಎಂದ ಅವರು ಜನಪರವಾದ ವಿಚಾರಗಳನ್ನು ಕೂಡಿಸಿಕೊಂಡು ಸಾಮಾಜಿಕವಾಗಿ ಏನನ್ನಾದರೂ ಕೊಡಬೇಕು ಎಂಬು ತುಡಿತ ಉತ್ತಮ ಕಾರ್ಯಕ್ರಮಗಳ ಆಯೋಜನೆ ಸಾಧ್ಯವಾಗುತ್ತದೆ ಎಂದರು.

    ಬಿಜೂರು ಸ.ಪ್ರೌ.ಶಾಲೆಯ ಮುಖ್ಯೋಪಧ್ಯಾಯ ಅಬ್ದುಲ್ ರವೂಫ್, ಸುರಭಿ ರಿ. ಬೈಂದೂರು ಕಾರ್ಯದರ್ಶಿ ಲಕ್ಷಣ ವೈ ಕೊರಗ, ಹೊಸೂರು ಶಾಲೆ ಹಳೆವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಮಾಸ್ತಯ್ಯ, ಸುಬ್ಬ ಪೂಜಾರಿ ಹೊಸೂರು ಮೊದಲಾದವರು ವೇದಿಕೆಯಲ್ಲಿದ್ದರು. ಸಂಚಲನ ಹೊಸೂರು ಅಧ್ಯಕ್ಷ ತಿಮ್ಮ ಮರಾಠಿ ಸ್ವಾಗತಿಸಿ, ಕಾರ್ಯದರ್ಶಿ ನಾಗಪ್ಪ ಮರಾಠಿ ವಂದಿಸಿದರು. ಸಂಚಾಲಕ ಸುಧಾಕರ ಪಿ. ಬೈಂದೂರು ನಿರೂಪಿಸಿದರು.  ಬಳಿಕ ಬೈಂದೂರು ಶ್ರೀ ಮಹತ್ಮಾ ಜ್ಯೋತಿ ಬಾಪುಲೆ ಕೊರಗರ ಯುವಕಲಾ ವೇದಿಕೆಯ ಕಲಾವಿದರಿಂದ ಕೊರಗ ಜಾನಪದ ನೃತ್ಯ ವೈಭವ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಜಾದೂಗಾರ ಸತೀಶ್ ಹೆಮ್ಮಾಡಿ ಅವರಿಂದ ಜನಪದ ಜಾದೂ ಜಾತ್ರೆ ಜರುಗಿತು.

    Journalist Arun kumar shiruru Sudhakar P Byndoor Surabhi R Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    nineteen + seven =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.