Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು: ರತ್ತೂಬಾಯಿ ಹೈಸ್ಕೂಲಿನಲ್ಲಿ ಸಾಂಸ್ಕೃತಿಕ ಸೌರಭ
    ಊರ್ಮನೆ ಸಮಾಚಾರ

    ಬೈಂದೂರು: ರತ್ತೂಬಾಯಿ ಹೈಸ್ಕೂಲಿನಲ್ಲಿ ಸಾಂಸ್ಕೃತಿಕ ಸೌರಭ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಸಂಸ್ಕೃತಿಯ ಪ್ರೀತಿ ಜೀವನದಲ್ಲಿ ಹೊಸ ಬದುಕನ್ನು ರೂಪಿಸುತ್ತದೆ. ಮಾನವೀಯ ಮೌಲ್ಯ ವೃದ್ಧಿಸಿ ಸಮಾಜಮುಖಿ ಚಿಂತನೆಗಳನ್ನು ಕಲ್ಪಿಸುತ್ತದೆ. ಅದೇ ರೀತಿ ಕೇವಲ ಪುಸ್ತಕದ ಜ್ಞಾನ ಜೀವನಕ್ಕೆ ಸಾಕಾಗುವುದಿಲ್ಲ. ಶಿಕ್ಷಣೇತರ ಚಟುವಟಿಕೆಗಳು ಜೀವನದದ್ದುಕ್ಕಕ್ಕೂ ನೆನಪಿನಲ್ಲಿ ಉಳಿದು ಸಾಂಸ್ಕೃತಿಕವಾಗಿ ಎಲ್ಲವನ್ನು ಎದುರಿಸುವ ಧೈರ್ಯ ತುಂಬಲು ಸಹಕಾರಿಯಾಗುತ್ತದೆ ಎಂದು ಮೀನುಗಾರಿಕಾ, ಯುವಜನ ಸೇವೆ, ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

    Click Here

    Call us

    Click Here

    ಬೈಂದೂರು ರತ್ತೂಬಾಯಿ ಜನತಾ ಪೌಢಶಾಲೆಯಲ್ಲಿ ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಕತ್ವದಲ್ಲಿ ನಡೆದ ಸಾಂಸ್ಕೃತಿಕ ಸೌರಭ ಉದ್ಘಾಟಿಸಿ ಮಾತನಾಡಿದರು. ಸಾಂಸ್ಕೃತಿಕ ಸಿರಿವಂತಿಕೆ ಪಡೆದ ಭಾರತದೇಶ ವಿಶ್ವದಲ್ಲಿ ಪ್ರಥಮ ಸ್ಥಾನದಲ್ಲಿದೆ. ಹಿಂದಿನವರಿಂದ ಪರಂಪರಾಗತವಾಗಿ ಬಂದಿರುವ ಹಲವು ಕಲೆಗಳನ್ನು ಮುಂದಿನ ಪೀಳಿಗೆಯವರೆಗೂ ವಿಸ್ತರಿಸುವ ನಿಟ್ಟಿನಲ್ಲಿ ಸರಕಾರ ಇಂತಹ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುವುದರ ಮೂಲಕ ಹೊಸ ಪ್ರತಿಭೆಗಳಗೆ ಉತ್ತೇಜನ ನೀಡುತ್ತಿದೆ. ಇದು ಕೇವಲ ಮನರಂಜನೆ ಮಾತ್ರ ಸೀಮಿತಗೊಳಿಸದೇ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

    ಶಾಸಕ ಕೆ. ಗೋಪಾಲ ಪೂಜಾರಿ ಅಧ್ಯಕ್ಷತೆವಹಿಸಿದ್ದರು. ಜಿಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ, ಸದಸ್ಯರಾದ ಶಂಕರ ಪೂಜಾರಿ, ಗೌರಿ ದೇವಾಡಿಗ, ಸುರೇಶ ಬಟ್ವಾಡಿ, ತಾಪಂ ಸದಸ್ಯೆ ಸುಜಾತಾ ದೇವಾಡಿಗ, ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ, ಹೋಬಳಿ ಕಸಾಪ ಅಧ್ಯಕ್ಷ ಗಣಪತಿ ಹೋಬಳಿದಾರ್ ಉಪಸ್ಥಿತರಿದ್ದರು.

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಿ. ಎಂ. ರವಿಕುಮಾರ್ ಸ್ವಾಗತಿಸಿ, ಶಾಲೆಯ ಮುಖ್ಯಶಿಕ್ಷಕ ಮಂಜು ಕಾಳಾವರ್ ವಂದಿಸಿದರು. ಪ್ರಕಾಶ ಮಾಕೋಡು ಮತ್ತು ಆನಂದ ಮದ್ದೋಡಿ ನಿರೂಪಿಸಿದರು. ನಂತರ ದಿನವಿಡೀ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳ ಆಯ್ದ ಖ್ಯಾತ ಕಲಾವಿದರಿಂದ ಕರ್ನಾಟಕ ಶಾಸ್ತ್ರೀಯ ವಾದ್ಯಸಂಗೀತ, ಹಿಂದೂಸ್ತಾನಿ ಶಾಸ್ತ್ರೀಯ ಗಾಯನ, ಸುಗಮ ಸಂಗೀತ, ಜನಪದಗೀತೆ, ಸಮೂಹನೃತ್ಯ, ಡೊಳ್ಳುಕುಣಿತ, ಕೋಲಾಟ, ನಾಟಕ, ಗಮಕ, ಹೋಳಿನೃತ್ಯ ಮತ್ತು ಗುಮ್ಟೆವಾದನ ಪ್ರದರ್ಶನ ನಡೆಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    fifteen − 7 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.