Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಿಕ್ಷಕರ ದಿನಾಚರಣೆ ಹಾಗೂ ವಿಶ್ವ ಸಾಕ್ಷರತಾ ದಿನಾಚರಣೆ: ನೇಶನ್ ಬಿಲ್ಡರ್ ಪ್ರಶಸ್ತಿ ಪ್ರದಾನ
    ಊರ್ಮನೆ ಸಮಾಚಾರ

    ಶಿಕ್ಷಕರ ದಿನಾಚರಣೆ ಹಾಗೂ ವಿಶ್ವ ಸಾಕ್ಷರತಾ ದಿನಾಚರಣೆ: ನೇಶನ್ ಬಿಲ್ಡರ್ ಪ್ರಶಸ್ತಿ ಪ್ರದಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕನ್ನಡ ಮಾಧ್ಯಮ ಶಾಲೆಗಳು ಹಲವಾರು ಸಮಸ್ಯೆ ಸವಾಲುಗಳನ್ನು ಎದುರಿಸುತ್ತಿದ್ದು, ಇಂದಿನ ಆಧುನಿಕ ಜಗತ್ತಿನಲ್ಲಿ ಶಿಕ್ಷಣ ಕ್ಷೇತ್ರ ಧಾವಿಸುತ್ತಿರುವ ವೇಗಕ್ಕೆ ಅನುಗುಣವಾಗಿ ಹಲವು ಮಾರ್ಪಾಡುಗಳ ಅಗತ್ಯವಿದೆ. ಹೀಗಿರುವಾಗ ಹಲವು ಇಲ್ಲಗಳ ನಡುವೆ ಸಾರ್ವಜನಿಕರ ಸಹಕಾರದೊಂದಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಲು ಪ್ರಯತ್ನಿಸುತ್ತಿರುವ ಶಿಕ್ಷಕರ ಸೇವೆ ಅನನ್ಯವಾದುದು ಎಂದು ಉಡುಪಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಶಿಧರ ಶೆಟ್ಟಿ ಹೇಳಿದರು.

    Click Here

    Call us

    Click Here

    ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ರೋಟರಿ ನರ್ಸರಿ ಹಾಲ್‌ನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಹಾಗೂ ವಿಶ್ವ ಸಾಕ್ಷರತಾ ದಿನಾಚರಣೆ ಅಂಗವಾಗಿ ಸಾಧಕ ಶಿಕ್ಷಕರಿಗೆ ನೇಶನ್ ಬಿಲ್ಡರ್ ಅವಾರ್ಡನ್ನು ಹಸ್ತಾಂತರಿಸಿ ಮಾತನಾಡಿದರು.
    ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಅಧ್ಯಕ್ಷತೆವಹಿಸಿ ಮಾತನಾಡಿ ಇಂಜಿನಿಯರ‍್ಸ್ ಸೇತುವೆಗಳನ್ನು ನಿರ್ಮಿಸುತ್ತಾರೆ, ವೈದ್ಯರು ರೋಗಿಯ ಪ್ರಾಣ ಕಾಪಾಡುತ್ತಾರೆ, ಪೋಲಿಸರು ಕಾನೂನು ವ್ಯವಸ್ಥೆಯನ್ನು ರಕ್ಷಿಸುತ್ತಾರೆ ಆದರೆ ಇವರೆಲ್ಲರನ್ನು ರೂಪಿಸುವ ಶಿಕ್ಷಕ ನಿಜವಾದ ರಾಷ್ಟ್ರ ನಿರ್ಮಾತೃರಾಗಿದ್ದಾರೆ ಆದುದರಿಂದ ಅಂತಹ ಸಾಧಕರನ್ನು ಗುರುತಿಸಿ ನೇಶನ್ ಬಿಲ್ಡರ್ ಅವಾರ್ಡ್‌ನ್ನು ನೀಡಲಾಗಿದೆ ಎಂದರು.
    ಸಾಧಕ ಶಿಕ್ಷಕರಾದ ಗುಜ್ಜಾಡಿಯ ಸರಕಾರಿ ಹಿ.ಪ್ರಾ.ಶಾಲೆ ಮುಖ್ಯ ಶಿಕ್ಷಕ ಎಂ. ಹನುಮಂತ ಬಿಲ್ಲವ, ಬಸ್ರೂರಿನ ನಿವೇದಿತಾ ಪ್ರೌಢಶಾಲೆಯ ಪದವೀಧರ ಶಿಕ್ಷಕ ಸುಬ್ಬಣ್ಣ ಕೋಣಿ, ಜಡ್ಡಿನಗದ್ದೆಯ ಸರಕಾರಿ ಹಿ. ಪ್ರಾ. ಶಾಲೆ ಮುಖ್ಯ ಶಿಕ್ಷಕ ವೈ. ಪಟ್ಟಾಭಿರಾಮ ಭಟ್ ಅವರಿಗೆ ನೇಶನ್ ಬಿಲ್ಡರ್ ಅವಾರ್ಡ್‌ನ್ನು ನೀಡಿ ಪುರಸ್ಕರಿಸಲಾಯಿತು.

    ಈ ಸಂದರ್ಭದಲ್ಲಿ ರೋಟರಿ ಮಾಜಿ ಜಿಲ್ಲಾ ಗವರ್ನರ್ ಎ.ಎಸ್.ಎನ್. ಹೆಬ್ಬಾರ್, ಪೂರ್ವಾಧ್ಯಕ್ಷ ಟಿ. ಬಿ. ಶೆಟ್ಟಿ, ಲಿಟ್ರಸಿ ಛೇರ್‌ಮೆನ್ ಆವರ್ಸೆ ಮುತ್ತಯ್ಯ ಶೆಟ್ಟಿ ಉಪಸ್ಥಿತರಿದ್ದರು. ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು, ಪರಮೇಶ್ವರ ಹೆಗಡೆ, ಡಾ. ರಾಜಾರಾಮ ಶೆಟ್ಟಿ, ರಘುರಾಮ್ ರಾವ್ ಅತಿಥಿಗಳನ್ನು ಪರಿಚಯಿಸಿದರು. ಜತೆ ಕಾರ್ಯದರ್ಶಿ ಮನೋಜ್ ನಾಯರ್ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ

    19/12/2025

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.