Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ ಠಾಣಾಧಿಕಾರಿ ಕಬ್ಬಾಳರಾಜ್ ರಾಜಿನಾಮೆ? ಎಸ್ಪಿ ತರಾಟೆಗೆ ತೆಗೆದುಕೊಂಡ ಹಿನ್ನೆಲೆ
    ಊರ್ಮನೆ ಸಮಾಚಾರ

    ಕೋಟ ಠಾಣಾಧಿಕಾರಿ ಕಬ್ಬಾಳರಾಜ್ ರಾಜಿನಾಮೆ? ಎಸ್ಪಿ ತರಾಟೆಗೆ ತೆಗೆದುಕೊಂಡ ಹಿನ್ನೆಲೆ

    Updated:22/09/20161 Comment
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೋಟ: ನಿಷ್ಠಾವಂತ ಅಧಿಕಾರಿ ಎಂದು ಹೆಸರು ಮಾಡಿದ್ದ ಕೋಟ ಠಾಣೆಯ ಎಸೈ ಕಬ್ಬಾಳರಾಜ್ ಹೆಚ್. ಡಿ., ಅವರನ್ನು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜಿಲ್ಲಾ ಎಸ್ಪಿ ತರಾಟೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಎಸೈ ರಾಜಿನಾಮೆ ನೀಡಿ ತೆರಳಿದ್ದಾರೆ ಎನ್ನಲಾಗಿದೆ.

    Click Here

    Call us

    Click Here

    ಐರೋಡಿ ಹಂಗಾರಕಟ್ಟೆಯ ಖಾಸಗಿ ವ್ಯಕ್ತಿಯೋರ್ವರ ಜಾಗದ ವಿಷಯದಲ್ಲಿ ಇದ್ದ ತಕರಾರು ಕೋಟ ಠಾಣೆಯ ಮೆಟ್ಟಿಲೇರಿತ್ತು. ಠಾಣಾಧಿಕಾರಿ ಕಬ್ಬಾಳರಾಜ್ ಪ್ರಕರಣವನ್ನು ಇತ್ಯರ್ಥಗೊಳಿಸಿ ಸುಖಾಂತ್ಯ ಕಾಣಿಸಿದ್ದರಾದರೂ ಅತೃಪ್ತರೊರ್ವರು ತಮಗೆ ಅನ್ಯಾಯವಾಗಿದೆ ಎಂದು ಜಿಲ್ಲಾ ಎಸ್ಪಿ ಕೆ.ಟಿ. ಬಾಲಕೃಷ್ಟ ಅವರಲ್ಲಿ ದೂರಿಕೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಎಸ್ಪಿ ನೇರವಾಗಿ ಕೋಟ ಠಾಣಾಧಿಕಾರಿ ಕಬ್ಬಾಳರಾಜ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಇಂದು ಬೆಳಿಗ್ಗೆ ಎಸ್ಪಿ ಅವರೊಂದಿಗೆ ದೂರವಾಣಿಯ ಮೂಲಕ ಸಂವಾದ ನಡೆಸಿದ್ದ ಕಬ್ಬಾಳರಾಜ್ ಠಾಣೆಯ ಡೈರಿಯಲ್ಲಿ ರಾಜೀನಾಮೆ ವಿಷಯವನ್ನು ಪ್ರಸ್ತಾಪ ಮಾಡಿ ಹೊರಕ್ಕೆ ನಡೆದಿದ್ದಾರೆ ಮೂಲಗಳು ತಿಳಿಸಿವೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಠಾಣೆಯಿಂದ ತೆರಳಿದ ಬಳಿಕ ಕಬ್ಬಾಳರಾಜ್ ಅವರ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಸಂಪರ್ಕಕ್ಕೆ ದೊರೆಯುತ್ತಿಲ್ಲ. ಠಾಣೆಯಲ್ಲಿ ಬರೆದಿಟ್ಟ ಡೈರಿಯೂ ಎಸ್ಪಿ ಕಛೇರಿಗೆ ತಲುಪಿದೆ ಎನ್ನಲಾಗಿದೆ. ಈ ಹಿಂದೆಯೂ ಪೊಲೀಸರ ಮುಷ್ಕರದ ಸಂದರ್ಭದಲ್ಲಿ ಕಬ್ಬಾಳರಾಜ್ ರಾಜಿನಾಮೆಗೆ ಮುಂದಾಗಿದ್ದರಾದರೂ ಆಗಿನ ಎಸ್ಪಿ ಅಣ್ಣಾಮಲೈ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಕೋಟ ನಾಗರಿಕರ ಅಸಮಾಧಾನ:
    ನೇರ ನಡೆಯ ಅಧಿಕಾರಿಯಾಗಿದ್ದ ಕಬ್ಬಾಳರಾಜ್ ರಾಜಿನಾಮೆ ನೀಡಿರುವ ಬಗ್ಗೆ ಕೋಟ ಪರಿಸರದ ಜನರ ಅಸಮಾಧಾನಗೊಂಡಿದ್ದಾರೆ. ಅವರ ರಾಜನಾಮೆಯನ್ನು ಅಂಗೀಕರಿಸಬಾರದೆಂದು ಎಸ್ಪಿಯನ್ನು ಭೇಟಿಯಾಗುವ ಸಿದ್ಧತೆಯಲ್ಲಿ ಕೋಟ ನಾಗರಿಕರಿದ್ದಾರೆ. ನಿಷ್ಠಾವಂತ ಅಧಿಕಾರಿ ರಾಜಿನಾಮೆ ಕೊಟ್ಟರೆ ಕೋಟದಲ್ಲಿ ಬಂದ್ ಮಾಡಲಾಗುತ್ತದೆ ಎನ್ನುವ ಮಾತುಗಳೂ ಕೇಳಿ ಬರುತ್ತಿವೆ. /ಕುಂದಾಪ್ರ ಡಾಟ್ ಕಾಂ ಸುದ್ದಿ/

    Kota Resign SI Kabbalraj
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    1 Comment

    1. Pingback: ಕರ್ತವ್ಯಕ್ಕೆ ಮರಳಲಿದ್ದಾರಂತೆ ಕೋಟ ಎಸೈ ಕಬ್ಬಾಳರಾಜ್ | Kundapra.com ಕುಂದಾಪ್ರ ಡಾಟ್ ಕಾಂ

    Leave A Reply Cancel Reply

    2 × one =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.