Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಿರೂರು: ಸಾವಯವ ಕೃಷಿಯ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಶಿರೂರು: ಸಾವಯವ ಕೃಷಿಯ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಸಾವಯವ ಮತ್ತು ರಸಗೊಬ್ಬರ ನಡುವೆ ಸಮತೋಲನ ಕಾಪಾಡುವ ಅಗತ್ಯವಿದೆ. ಅದರ ಕುರಿತು ತರಬೇತಿ ಪಡೆದುಕೊಳ್ಳಬೇಕು. ಅದರೊಂದಿಗೆ ಹೈನುಗಾರಿಕೆ, ಕೋಳಿಸಾಕಣೆ ನಡೆಸುವುದಲ್ಲದೆ ಸುಲಭದಲ್ಲಿ ಆರೋಗ್ಯ ನೀಡುವ ವಿವಿಧ ತರಕಾರಿ, ಹಣ್ಣುಗಳನ್ನು ಬೆಳೆಸಿ ಮನೆಯ ಖರ್ಚಿಗೆ ಬಳಸಿಕೊಂಡು ಸ್ವಾವಲಂಬನೆ ಸಾಧಿಸಬೇಕು ಎಂದು ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡೀಸ್ ಕರೆ ನೀಡಿದರು.

    Click Here

    Call us

    Click Here

    ಶಿರೂರು ಶ್ರೀವೆಂಕಟರಮಣ ಸಭಾಭವನದಲ್ಲಿ, ಸಂಸದರ ಆದರ್ಶಗ್ರಾಮ ಯೋಜನೆ, ಪ್ರಾದೇಶಿಕ ಸಾವಯವ ಕೃಷಿ ಕೇಂದ್ರ ಬೆಂಗಳೂರು, ಗ್ರಾಮ ಪಂಚಾಯತ್ ಶಿರೂರು, ಕೃಷಿ ಇಲಾಖೆ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಸಾವಯವ ಕೃಷಿಯ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ನಾಲ್ಕು ದಶಕಗಳ ಹಿಂದೆ ದೇಶದಲ್ಲಿ ಅನ್ನದ ಕೊರತೆ ಇದ್ದಾಗ ರಾಸಾಯನಿಕ ಗೊಬ್ಬರ ಬಳಸಿ ಹಸಿರು ಕ್ರಾಂತಿ ಸಾಧಿಸಲಾಯಿತು. ಆದರೆ ಅತಿಯಾದ ರಸಗೊಬ್ಬರ ಬಳಕೆಯಿಂದ ಭೂಮಿ ಸತ್ವ ಕಳೆದುಕೊಳ್ಳುತ್ತಿರುವುದರಿಂದ ಸಾವಯವ ಕೃಷಿಗೆ ಮರಳುವುದು ಈಗ ಅನಿವಾರ್ಯವೆನಿಸಿದೆ. ಬೇಸಾಯವೆಂದರೆ ಹೆಚ್ಚು ರಾಸಾಯನಿಕ ಗೊಬ್ಬರ ಬಳಸಿ ಬೆಳೆ ಬೆಳೆಯುವುದಲ್ಲ. ಸಾವಯವ ಕೃಷಿಯ ಮೂಲಕ ಬರಡಾಗುತ್ತಿರುವ ಭೂಮಿಯ ಮಣ್ಣಿನ ಗುಣ ರಕ್ಷಣೆ ಮಡುವ ಮೂಲಕ ಹೆಚ್ಚು ನೀರನ್ನು ಹೀರಿಕೊಳ್ಳುವಂತೆ ನೋಡಿಕೊಳ್ಳಬೇಕು ಎಂದರು.

    ಗ್ರಾಪಂ ಅಧ್ಯಕ್ಷೆ ದಿಲ್‌ಶಾದ್ ಬೇಗಂ ಅಧ್ಯಕ್ಷತೆವಹಿಸಿದ್ದರು. ಈ ಸಂದರ್ಭ ಶಿರೂರು ಭಾಗದ ಪ್ರಗತಿಪರ ಕೃಷಿಕ ಸರ್ಪನಮನೆ ಗೋವಿಂದ ಮೇಸ್ತರನ್ನು ಸಂಸದರು ಗೌರವಿಸಿ ಸನ್ಮಾನಿಸಿದರು. ಶಾಸಕ ಕೆ. ಗೋಪಾಲ ಪೂಜಾರಿ, ಜಿಪಂ ಸದಸ್ಯ ಸುರೇಶ ಬಟ್ವಾಡಿ, ತಾಪಂ ಸದಸ್ಯರಾದ ಮೌಲಾನಾ ದಸ್ತಗೀರ್, ಪುಷ್ಪರಾಜ್ ಶೆಟ್ಟಿ, ಗ್ರಾಪಂ ಉಪಾಧ್ಯಕ್ಷ ನಾಗೇಶ ಮೊಗೇರ, ಪ್ರಾದೇಶಿಕ ಸಾವಯವ ಕೃಷಿ ಕೇಂದ್ರ ಬೆಂಗಳೂರು ಇಲ್ಲಿನ ಸಹಾಯಕ ನಿರ್ದೇಶಕ ಡಾ. ವಿ.ವೈ. ದೋಗರೆ, ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ, ವಿಶೇಷ ತಹಶೀಲ್ದಾರ್ ಕಿರಣ್ ಜಿ. ಗೌರಯ್ಯ, ಕೆಪಿಸಿಸಿ ಕಾರ್ಯದರ್ಶಿ ಎಂ. ಎ. ಗಫೂರ್ ಉಪಸ್ಥಿತರಿದ್ದರು. ಬ್ರಹ್ಮಾವರ ಕೃಷಿವಿಜ್ಞಾನ ಕೇಂದ್ರದ ವಿಷಯ ತಜ್ಞ ಡಾ. ನವೀನ್ ಎನ್.ಈ., ಪ್ರಗತಿಪರ ಕೃಷಿಕರಾದ ತಿಮ್ಮಣ್ಣ ಹೆಗಡೆ ಯಳ್‌ಜೀತ್, ಉದಯಶಂಕರ ಭಟ್ ಕಿರಿಮಂಜೇಶ್ವರ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ರೈತರಿಗೆ ಸಾವಯವ ಕೃಷಿಯ ಕುರಿತು ಮಾಹಿತಿ ಹಾಗೂ ತರಬೇತಿ ನೀಡಿದರು. ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಚಂದ್ರಶೇಖರ ನಾಯಕ್ ಪ್ರಾಸ್ತಾವಿಸಿದರು. ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ವಿಠಲರಾವ್ ಸ್ವಾಗತಿಸಿ, ಅರುಣ್‌ಕುಮಾರ್ ಶಿರೂರು ನಿರೂಪಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    3 × three =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.