Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭಗವದ್ಗೀತಾ ಸಪ್ತಾಹ ಅಭಿಯಾನದ ಪ್ರಯುಕ್ತ ಪೂರ್ವಭಾವಿ ಸಭೆ
    ಊರ್ಮನೆ ಸಮಾಚಾರ

    ಭಗವದ್ಗೀತಾ ಸಪ್ತಾಹ ಅಭಿಯಾನದ ಪ್ರಯುಕ್ತ ಪೂರ್ವಭಾವಿ ಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಕಾಲ್ತೋಡು ಗ್ರಾಪಂ ವ್ಯಾಪ್ತಿಯ ಮೆಟ್ಟಿನಹೊಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೂಜ್ಯ ಶಿರಸಿ ಸ್ವರ್ಣವಲ್ಲಿ ಶ್ರೀ ಗಂಗಾಧರೇಂದ್ರ ಶ್ರೀಗಳ ಮಾರ್ಗದರ್ಶನ ಹಾಗೂ ಆಶೀರ್ವಾದದೊಂದಿಗೆ ನಡೆಯುವ ಭಗವದ್ಗೀತಾ ಸಪ್ತಾಹ ಅಭಿಯಾನದ ಪ್ರಯುಕ್ತ ಪೂರ್ವಭಾವಿ ಸಭೆ ನಡೆಯಿತು.

    Click Here

    Call us

    Click Here

    ಸಭೆಯನ್ನುದ್ದೇಶಿಸಿ ಯಳಜಿತ್ ಶ್ರೀ ಸಿದ್ಧಿವಿನಾಯಕ ಸಾಂಸ್ಕೃತಿಕ ಕೇಂದ್ರದ ಸಂಚಾಲಕ, ಸಂತ ಮಂಗೇಶ್ ಶೆಣೈ ಮಾತನಾಡಿ ಇಂದಿನ ದಿನಗಳಲ್ಲಿ ತಾಂತ್ರಿಕ ಜೀವನವನ್ನು ಅವಲಂಬಿಸುತ್ತಿರುವ ಪರಿಣಾಮ ಮಾನಸಿಕ ಒತ್ತಡ, ಖಿನ್ನತೆಗೆ ಒಳಗಾಗಿ ರಾಕ್ಷಸರಾಗುತ್ತಿದ್ದೇವೆ. ಇದನ್ನು ನಿಯಂತ್ರಿಸಲು ಪ್ರತಿ ಮನೆಗಳಲ್ಲಿಯೂ ಭಗವದ್ಗೀತೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಜೀವನಕ್ಕೆ ಪೂರಕವಾದ ಅಂಶಗಳೇ ಭಗವದ್ಗೀತೆಯ ಸಾರಾಂಶ ಎಂದು ಹೇಳಿದರು.

    ಜಾತಿ, ಮತ, ಸಸ್ಯಾಹಾರಿ, ಮಾಂಸಹಾರಿಗಳೆಂಬ ಭೇಧವಿಲ್ಲದೇ ಏಕಾಗ್ರತೆಯಿಂದ ಧ್ಯಾನಾಸಕ್ತರಾಗಿ ಗೀತಾಪಠಣ ಮಾಡಿದರೆ ಜ್ಞಾನ ಹೆಚ್ಚಾಗುವುದಲ್ಲದೇ ಸಾಂಸಾರಿಕಾ, ವ್ಯಾವಹಾರಿಕಾ ಒತ್ತಡಗಳ ನಿಯಂತ್ರಣಕ್ಕೂ ಸಹಕಾರಿಯಾಗುತ್ತದೆ. ಪಾಪಕರ್ಮ ಮಾಡಿದವರಿಗೂ ಇದರಿಂದ ವಿಮೋಚನಾ ಮಾರ್ಗ ಪಡೆಯಬಹುದಲ್ಲದೆ, ಸೂತಕಾದಿಗಳು ಕೂಡಾ ಇಂದಿಗೂ ವಿಶ್ವ ಮಾನ್ಯವಾಗಿರುವ ಹಾಗೂ ಸೂತ್ರಪ್ರಾಯವಾಗಿರುವ ಮಹಾನ್ ಗ್ರಂಥವನ್ನು ಓದಬಹುದು ಎಂದರು.

    ಕಾಲ್ತೋಡು ಗ್ರಾಮ ಪಂಚಾಯತ್ ಸದಸ್ಯೆ ಚೆಂದು ಕುಲಾಲ್ತಿ ಅಧ್ಯಕ್ಷತೆವಹಿಸಿದ್ದರು. ಈ ಸಂದರ್ಭ ಸಂತ ವೈ. ಮಂಗೇಶ್ ಶೆಣೈ ೧೮ ಅಧ್ಯಾಯಗಳ ಗೀತೆಯ ಸಾರಂಶವನ್ನು ವಿವರಿಸಿದರು. ಅವರ ಶಿಷ್ಯವೃಂದದವರು ಮತ್ತು ಸುಮಾರು ೪೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಒಟ್ಟಾಗಿ ಭಗವದ್ಗೀತಾ ಪಠಣ ಮಾಡಿದರು. ಕಾಲ್ತೋಡು ಜನಾರ್ದನ ನಾಯಕ್, ಹೇರಂಜಾಲು ನಾಗೇಶ ರಾವ್ ಉಪಸ್ಥಿತರಿದ್ದರು. ಗ್ರಾಮಸ್ಥರು, ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಿವೃತ್ತ ಶಿಕ್ಷಕ ಮೆಟ್ಟಿನಹೊಳೆ ಬಡಿಯಾ ಹಾಂಡ ಸ್ವಾಗತಿಸಿ, ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    four + 12 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.