Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಖಂಬದಕೋಣೆ: ವಿಜಯಾ ಬ್ಯಾಂಕ್ ನೂತನ ಕಟ್ಟಡಕ್ಕೆ ಸ್ಥಳಾಂತರ
    ಊರ್ಮನೆ ಸಮಾಚಾರ

    ಖಂಬದಕೋಣೆ: ವಿಜಯಾ ಬ್ಯಾಂಕ್ ನೂತನ ಕಟ್ಟಡಕ್ಕೆ ಸ್ಥಳಾಂತರ

    2 Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ತನ್ನ ಸೇವೆಗಳ ಮೂಲಕ ಜನಮನ ಗೆದ್ದಿರುವ ವಿಜಯಾ ಬ್ಯಾಂಕ್ ತನ್ನ ಗ್ರಾಹಕರಿಗೆ ಇನ್ನಷ್ಟು ಹೆಚ್ಚಿನ ಸೇವೆ, ಸೌಲಭ್ಯ ಸೇವೆಗಳನ್ನು ನೀಡುವ ನೆಲೆಯಲ್ಲಿ ಕಾರ್ಯಪ್ರವೃತ್ತವಾಗಿದ್ದು, ಇದಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ನಾಗೇಶ್ವರ ರಾವ್ ವೈ. ಹೇಳಿದರು.

    Click Here

    Call us

    Click Here

    ಖಂಬದಕೋಣೆಯ ಕರ್ನಾಟಕ ಖಾರ್ವಿ ಯಾನೆ ಹರಿಕಾಂತ ಮಹಾಜನ ಸಂಘದ ಸಮುದಾಯ ಭವನಕ್ಕೆ ಸ್ಥಳಾಂತರಗೊಂಡ ವಿಜಯಾ ಬ್ಯಾಂಕ್ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಹಕರಿಗೆ ಉತ್ತಮ ಸೇವೆ ನೀಡುವ ಮೂಲಕ ಜನರ ಪ್ರೀತಿ ವಿಶ್ವಾಸಕ್ಕೆ ಪಾತ್ರವಾಗಿರುವ ವಿಜಯಾ ಬ್ಯಾಂಕ್ ಅಂದಿನ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನ್ಮತಾಳಿದ್ದು, ಬ್ಯಾಂಕಿನ ೨೫೬ನೇ ಶಾಖೆಯಾಗಿ ಖಂಬದಕೋಣೆಯಲ್ಲಿ ೧೯೭೪ರಲ್ಲಿ ಪ್ರಾರಂಭಿಸಲಾಯಿತು. ಈಗ ದೇಶಾದ್ಯಂತ ೧೯೯೫ ಶಾಖೆಗಳನ್ನು ಬ್ಯಾಂಕ್ ಹೊಂದಿದೆ. ಎಲ್ಲಾ ಶಾಖೆಗಳಲ್ಲಿ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುವಲ್ಲಿ ಮುಂಚೂಣಿಯಲ್ಲಿದ್ದು, ಅಲ್ಲದೇ ಹಿಂದೆ ಆರ್ಥಿಕ ವಿಪ್ಲವದ ಕಾಲಘಟ್ಟದಲ್ಲಿ ವಿಜಯಾ ಬ್ಯಾಂಕ್ ಸ್ಥಾಪಿಸುವುದರ ಮೂಲಕ ಹಣಕಾಸಿನ ವ್ಯವಹಾರದ ಪುನಃಶ್ಚೇತನಕ್ಕೆ ನಾಂದಿಯಾಗಿದ್ದ ಬ್ಯಾಂಕಿನ ಸಂಸ್ಥಾಪಕ ಮೂಲ್ಕಿ ಸುಂದರಾಂ ಶೆಟ್ಟಿ ಅವರ ಕನಸನ್ನು ನನಸು ಮಾಡುತ್ತಿರುವ ದೇಶದ ಅಗ್ರಮಾನ್ಯ ಬ್ಯಾಂಕುಗಳಲ್ಲಿ ಒಂದಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಸೇವೆ ನೀಡುವ ಉದ್ದೇಶದಿಂದ ಈ ಭಾಗದ ಎಲ್ಲಾ ಶಾಖೆಗಳಲ್ಲಿ ಮೂಲಸೌಕರ್ಯಗಳನ್ನು ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

    ಕರ್ನಾಟಕ ಖಾರ್ವಿ ಯಾನೆ ಹರಿಕಾಂತ ಮಹಾಜನ ಸಂಘದ ಅಧ್ಯಕ್ಷ ನವೀನಚಂದ್ರ ಉಪ್ಪುಂದ ಭದ್ರತಾ ಕೊಠಡಿ ಹಾಗೂ ಉಪ ಮಹಾಪ್ರಬಂಧಕ, ಉಡುಪಿ ಪ್ರಾದೇಶಿಕ ಪ್ರಬಂಧಕ ಎಮ್. ಜೆ. ನಾಗರಾಜ್ ಬ್ಯಾಂಕಿನ ಎಟಿಎಂ ಘಟಕವನ್ನು ಉದ್ಘಾಟಿಸಿದರು. ಸಂಸ್ಥಾಪಕರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ ನವೀನಚಂದ್ರ ಉಪ್ಪುಂದ ಪ್ರಧಾನ ಕಾರ್ಯದರ್ಶಿ ಎ. ಆನಂದ ಖಾರ್ವಿ, ಕೋಶಾಧ್ಯಕ್ಷ ಶಂಕರ ಖಾರ್ವಿ, ಹಿಂದಿನ ಶಾಖೆಹೊಂದಿದ ಕಟ್ಟಡ ಮಾಲಿಕ ಶ್ರೀಧರ ಉಡುಪ ಇವರನ್ನು ಸನ್ಮಾನಿಸಲಾಯಿತು. ಶಾಖಾಪ್ರಬಂಧಕ ಸುಕೇಶ್ ಕುಮಾರ್ ಯು., ವಿವಿಧ ಶಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ವಿಶ್ವನಾಥ ಶೆಟ್ಟಿ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    2 Comments

    1. Deepak shetty on 11/12/2016 12:01 am

      Hi Sunil , my pappa late Sachidanand shetty was the branch manager when it was set up in 1974. He struggled a lot those days to set it up.

      Reply
      • ನ್ಯೂಸ್ ಬ್ಯೂರೋ on 11/12/2016 12:02 am

        Most appreciated.

        Reply
    Leave A Reply Cancel Reply

    nine − one =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.