Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಂಜರದಲ್ಲಿ ಮೀನು ಕೃಷಿ ಮಾಹಿತಿ ಕಾರ್ಯಾಗಾರ
    ಊರ್ಮನೆ ಸಮಾಚಾರ

    ಪಂಜರದಲ್ಲಿ ಮೀನು ಕೃಷಿ ಮಾಹಿತಿ ಕಾರ್ಯಾಗಾರ

    Updated:10/12/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ರಾಜ್ಯದಲ್ಲಿ ೨೦೧೨ರಿಂದ ಪಂಜರದಲ್ಲಿ ಮೀನು ಸಾಕಣಿಕೆ ನಡೆಯುತ್ತಿದ್ದು, ಕೃಷಿಕರು ಮೀನು ಸಾಕಣಿಕೆ ಹೆಚ್ಚಿನ ಒತ್ತನ್ನು ನೀಡಿ ಅದನ್ನು ಲಾಭದಾಯಕ ಉದ್ಯಮವಾಗಿ ಪರಿವರ್ತಿಸಿ ಎಂದು ಕರಾವಳಿ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಡಾ. ಸಿ.ಕೆ. ಮೂರ್ತಿ ಹೇಳಿದರು.

    Click Here

    Call us

    Click Here

    ಜಿಲ್ಲಾ ಪಂಚಾಯತ್ ಉಡುಪಿ ಮತ್ತು ಮೀನುಗಾರಿಕಾ ಇಲಾಖೆ ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಉಪ್ಪುಂದ ನಾಡದೋಣಿ ಭನವದಲ್ಲಿ ನಡೆದ ಪಂಜರದಲ್ಲಿ ಮೀನು ಕೃಷಿ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ವರ್ಷ ದೇಶದಲ್ಲಿ ೩೩ ಸಾವಿರ ಕೋಟಿ ರೂ. ಸಿಗಡಿ ರಫ್ತು ಮಾಡಲಾಗಿದೆ, ಇದರಲ್ಲಿ ಸಿಂಹಪಾಲು ಉತ್ಪಾದನೆ ಆಂಧ್ರ, ಕೇರಳ ರಾಜ್ಯದಿಂದ ಆಗಿದ್ದು, ಸೌಲಭ್ಯ ಕೊರತೆಯಿಂದ ನಮಗೆ ಸ್ವಲ್ಪಮಟ್ಟಿಗೆ ಹಿನ್ನೆಡೆಯಾಯಿತು. ವೈಜ್ಞಾನಿಕ ಸಂಬಂಧದೊಂದಿಗೆ ಸೀಕೇಜ್ ಕೃಷಿ ಮಾಡಿ ಫಲಕಾರಿಯಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿಯೂ ಸಿಗಡಿ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಬೇಕಾದ ಅಗತ್ಯತೆಯಿದೆ. ಈ ನಿಟ್ಟಿನಲ್ಲಿ ಪಂಜರದಲ್ಲಿ ಮೀನು ಸಾಕಣಿಕೆಗೆ ಕೇಂದ್ರ, ರಾಜ್ಯ ಹಾಗೂ ನ್ಯಾಷನಲ್ ಫೀಶರಿಸ್ ಬೋರ್ಡ್ ಹೆಚ್ಚಿನ ಅನುದಾನ ಒದಗಿಸಿ ಕೃಷಿಕರಿಗೆ ನಾನಾ ಸೌಲಭ್ಯ ನೀಡುತ್ತಿದ್ದು, ಮೀನುಗಾರರು ಇದರ ಪ್ರಯೋಜನ ಪಡೆಯಬೇಕು ಎಂದರು.

    ಕಡಲ ತೀರದಲ್ಲಿ ವಾಸಿಸುವ ರೈತರು ತಮ್ಮ ಮನೆಯ ಹತ್ತಿರದಲ್ಲಿ ಸಮುದ್ರದ ನೀರು ಬಂದು ಹೋಗುವ ನದಿ ತೀರಗಳಲ್ಲಿ ಪಂಜರ ನಿರ್ಮಿಸಿ ಮೀನುಕೃಷಿ ಮಾಡಬಹುದು. ಇದಕ್ಕಿಂತ ವಿಭಿನ್ನ ಆಲೋಚನೆಗಳು ಕೃಷಿಕರಲ್ಲಿದ್ದು, ಸರಿಯಾದ ಮಾಹಿತಿ, ಸಲಹೆ, ಸೂಚನೆಗಳನ್ನು ಕೊಟ್ಟರೆ ಅಥವಾ ಚರ್ಚಿಸಿದರೆ ಅದನ್ನು ಸರಕಾರದ ಮೂಲಕ ರೂಪರೇಷೆಗಳನ್ನು ಸಿದ್ಧಪಡಿಸಿ ಹೆಚ್ಚು ಲಾಭದಾಯಕ ಎಂಬುವುದು ಕಂಡುಬಂದರೆ ಕಾರ್ಯರೂಪಕ್ಕೆ ತರಬಹುದು ಎಂದರು.

    ಉಪ್ಪುಂದ ಗ್ರಾಪಂ ಅಧ್ಯಕ್ಷೆ ದುರ್ಗಮ್ಮ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಗೌರವಾಧ್ಯಕ್ಷ ನವೀನಚಂದ್ರ ಉಪ್ಪುಂದ, ಅಧ್ಯಕ್ಷ ಸೋಮಶೇಖರ ಖಾರ್ವಿ ಮರವಂತೆ, ವಿಜ್ಞಾನಿ ಡಾ. ಪ್ರತಿಭಾ ರೋಹಿತ್, ಬಂದರು ಇಲಾಖೆ ಜಂಟಿ ನಿರ್ದೇಶಕ ಗಣಪತಿ ಭಟ್ ಕೆ, ಮಂಗಳೂರು ಡಿಡಿಎಫ್ ಮಹೇಶ್ ಕುಮಾರ್, ಮೀನುಗಾರಿಕಾ ಹಿರಿಯ ಸಹಾಯಕ ನಿರ್ದೇಶಕ ಪಾಶ್ವನಾಥ, ಸಂಪನ್ಮೂಲ ವ್ಯಕ್ತಿ ವಿಜ್ಞಾನಿ ಡಾ. ರಾಜ್, ಪಂಜರ ಕೃಷಿಕರಾದ ರವೀಂದ್ರ ಖಾರ್ವಿ, ಬಾಬು ಖಾರ್ವಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿಜ್ಞಾನಿಗಳಿಂದ ಪಂಜರ ಮೀನು ಸಾಕಣಿಕೆಯ ಬಗ್ಗೆ ಮಾಹಿತಿ ನೀಡಲಾಯಿತು. ಮೀನುಗಾರಿಕಾ ಸಹಾಯಕ ನಿರ್ದೇಶಕ ಚಂದ್ರಶೇಖರ್ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    two × one =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.