Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತುಳುನಾಡಿನ ಸಂಸ್ಕೃತಿ, ಸಂಸ್ಕಾರಗಳನ್ನು ಕೈಬಿಟ್ಟಿಲ್ಲ: ಶಿಲ್ಪಾ ಶೆಟ್ಟಿ
    ಮುಂಬೈ

    ತುಳುನಾಡಿನ ಸಂಸ್ಕೃತಿ, ಸಂಸ್ಕಾರಗಳನ್ನು ಕೈಬಿಟ್ಟಿಲ್ಲ: ಶಿಲ್ಪಾ ಶೆಟ್ಟಿ

    Updated:16/04/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಮುಂಬಯಿ: ಪ್ರತಿಯೊಬ್ಬರು ಜೀವನದಲ್ಲಿ ಮೇಲೆ ಬರಬೇಕು. ಇಂದು ನನ್ನ ಸಾಧನೆಯನ್ನು ಗುರುತಿಸಿ ಗಣ್ಯರಿಂದ ನನಗೆ ಸಮ್ಮಾನ ಸಿಕ್ಕಿರುವುದು ಸಂತೋಷವಾಗುತ್ತಿದೆ. ನನ್ನ ಅಮೂಲ್ಯ ಸಮಯವನ್ನು ಮೀಸಲಿಟ್ಟು ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರಕ್ಕೆ ಬಂದಿದ್ದೇನೆ. ನಾನು ಬರದಿದ್ದರೆ ಒಂದು ಸುಂದರ ಅವಕಾಶವನ್ನು ಕಳೆದುಕೊಳ್ಳುತ್ತಿದ್ದೆ. ತುಳುನಾಡ ತಾಯಿಯ ಆಶೀರ್ವಾದದಿಂದ ನಾನಿಂದು ಇಷ್ಟು ಎತ್ತರಕ್ಕೆ ಬೆಳೆದಿದ್ದೇನೆ. ನಾನು ತುಳುನಾಡಿನ ಸಂಸ್ಕೃತಿ, ಸಂಸ್ಕಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಬಂದಿದ್ದೇನೆ. ಘನ್ಸೋಲಿ ಶ್ರೀ ಮೂಕಾಂಬಿಕೆಯ ಸನ್ನಿಧಾನಕ್ಕೆ ಬಂದು ನನ್ನ ಜೀವನ ಪಾವನವಾದಂತಾಗಿದೆ ಎಂದು ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಅಭಿಪ್ರಾಯಿಸಿದರು.

    Click Here

    Call us

    Click Here

    News Mumbai shilpa shetty honored

    ಎ. 2 ರಂದು ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಾಲಯದಲ್ಲಿ ಶ್ರೀ ಮೂಕಾಂಬಿಕಾ ದೇವಿಗೆ ಶತಚಂಡಿಕಾಯಾಗ ಸಹಿತ ಅಷ್ಟಬಂಧ ಬ್ರಹ್ಮಕಲಶೋತ್ಸವ, ಸುವರ್ಣ ಕವಚ ಸಮರ್ಪಣೆಯ ಅಂಗವಾಗಿ ಮಂದಿರಕ್ಕೆ ಭೇಟಿನೀಡಿ ಸಮ್ಮಾನ ಸ್ವೀಕರಿಸಿ ಮಾತನಾಡಿದ ಅವರು, ನನ್ನ ಪಾಲಕರೊಂದಿಗೆ ಮಂದಿರಕ್ಕೆ ಭೇಟಿ ನೀಡಲು ಸಂತೋಷವಾಗುತ್ತಿದೆ. ಮಂದಿರದ ಒಳಗಡೆ ಬಂದಾಕ್ಷಣ ಭಕ್ತಿ ಉಕ್ಕಿ ಹರಿಯುತ್ತಿದೆ. ತುಳುವರ ಸಂಘಟನಾ ಚಾತುರ್ಯಕ್ಕೆ ಮನತುಂಬಿ ಬರುತ್ತಿದೆ ಎಂದರು.

    ಎ. 2 ರಂದು ಮುಂಜಾನೆ 7.30 ರಿಂದ ಮಹಾಗಣಪತಿ ದೇವರಿಗೆ ಬ್ರಹ್ಮಕಲಶಾಭಿಷೇಕ, ಶ್ರೀ ಮೂಕಾಂಬಿಕಾ ದೇವಿಗೆ ತತ್ವ ಹೋಮ, ತತ್ವ ಕಲಶಾಭಿಷೇಕ, ನಾಗದೇವರಿಗೆ ಆಶ್ಲೇಷಾ ಬಲಿ, ಪ್ರಧಾನ ಹೋಮ, ಪವಮಾನ ಹೋಮ, ಕಲಶಾಭಿಷೇಕ, ನಾಗ ಪ್ರಸನ್ನ ಪೂಜೆ, ಮಹಾಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ 5 ಗಂಟೆಯಿಂದ ಬ್ರಹ್ಮಕಲಶ ಸಹಿತ ಸಹಸ್ರ ಕಲಶಾಧಿವಾಸ, ಅಧಿವಾಸ ಹೋಮಗಳು, ಅಷ್ಟಾವಧಾನ ಸೇವೆ, ಮಹಾಪೂಜೆ, ಅನ್ನಸಂತರ್ಪಣೆ ಜರಗಿತು.

    ಮಧ್ಯಾಹ್ನ 12 ಗಂಟೆಯಿಂದ ಎರ್ಮಾಳ್‌ ಗಣೇಶ್‌ ಮತ್ತು ಬಳಗದಿಂದ ಭಕ್ತಿ ಭಾವ ಜಾನಪದ ಗೀತೆಗಳ ಗಾಯನ, ಅಪರಾಹ್ನ 3 ಗಂಟೆಯಿಂದ ಧಾರ್ಮಿಕ ಸಭೆ, ಸಂಜೆ 5 ಗಂಟೆಯಿಂದ ನವರಸ ಅಕಾಡೆಮಿ ನೆರೂಲ್‌ ಅವರಿಂದ ಭರತನಾಟ್ಯವನ್ನು ಆಯೋಜಿಸಲಾಗಿತ್ತು. ಕೃಷ್ಣಮೂರ್ತಿ ಭಟ್‌ ವಾಶಿ ಅವರ ನೇತೃತ್ವದಲ್ಲಿ, ವೇದಮೂರ್ತಿ ಕಳತ್ತೂರು ಉದಯ ತಂತ್ರಿಗಳ ಮಾರ್ಗದರ್ಶನದಲ್ಲಿ, ದೇವಾಲಯದ ತಂತ್ರಿಗಳಾದ ವಿದ್ವಾನ್‌ ರಾಮಚಂದ್ರ ಬಾಯರ್‌ ಅವರ ಆಚಾರ್ಯತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.

    Click here

    Click here

    Click here

    Call us

    Call us

    ಇದೇ ಸಂದರ್ಭದಲ್ಲಿ ವಿಶೇಷ ಅತಿಥಿಗಳಾಗಿ ಆಗಮಿಸಿದ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ, ಅವರ ತಾಯಿ ಸುನಂದಾ ಶೆಟ್ಟಿ, ಶಿಲ್ಪಾ ಶೆಟ್ಟಿ ಅವರ ತಂದೆ ಸುರೇಂದ್ರ ಶೆಟ್ಟಿ ಅವರನ್ನು ಮಂದಿರದ ವತಿಯಿಂದ ಶಾಲು ಹೊದಿಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಲಾಯಿತು. ಸಮಾರಂಭದಲ್ಲಿ ದೇವಾಲಯದ ಅಧ್ಯಕ್ಷ, ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ, ಉಪಾಧ್ಯಕ್ಷರುಗಳಾದ ನಂದಿಕೂರು ಜಗದೀಶ್‌ ಶೆಟ್ಟಿ, ಕೆ. ಎಂ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸುರೇಶ್‌ ಎಸ್‌. ಕೋಟ್ಯಾನ್‌, ಜತೆ ಕಾರ್ಯದರ್ಶಿ ತಾಳಿಪಾಡಿಗುತ್ತು ಭಾಸ್ಕರ್‌ ಎಂ. ಶೆಟ್ಟಿ, ಕೋಶಾಧಿಕಾರಿ ಶೇಖರ್‌ ವಿ. ದೇವಾಡಿಗ, ಜತೆ ಕೋಶಾಧಿಕಾರಿ ದೆಪ್ಪುಣಿಗುತ್ತು ಚಂದ್ರಹಾಸ್‌ ಪಿ. ಶೆಟ್ಟಿ, ಸದಸ್ಯರುಗಳಾದ ರಾಘು ಆರ್‌. ಕೋಟ್ಯಾನ್‌, ಕುಟ್ಟಿ ಎ. ಕುಂದರ್‌, ಸುಧಾಕರ್‌ ಸಿ. ಪೂಜಾರಿ, ಶಂಕರ ಮೊಲಿ, ವಿಶ್ವನಾಥ್‌ ಎಸ್‌. ಶೆಟ್ಟಿ, ಅಣ್ಣು ಎಂ. ಶೆಟ್ಟಿ, ಶ್ರೀಧರ್‌ ಬಿ. ಪೂಜಾರಿ, ಮಹಾಬಲ ಟಿ. ಶೆಟ್ಟಿ, ಹರೀಶ್‌ ಪಡುಬಿದ್ರೆ, ಹರೀಶ್‌ ಕುರ್ಕಾಲ್‌, ಹರೀಶ್‌ ನಲ್ಲೂರು, ಶಕುಂತಳಾ ಎಸ್‌. ಶೆಟ್ಟಿ, ಶ್ರೀ ಮೂಕಾಂಬಿಕಾ ಚಾರಿಟೇಬಲ್‌ ಮಂಡಳದ ಸದಸ್ಯರು, ಶ್ರೀ ಮೂಕಾಂಬಿಕಾ ಧರ್ಮಶಾಸ್ತ ಸೇವಾ ಸಂಸ್ಥೆಯ ಸದಸ್ಯರು, ಉಪಸಮಿತಿಯ ಸದಸ್ಯರು, ಮಹಿಳಾ ಮಂಡಳಿಯ ಪದಾಧಿಕಾರಿಗಳು, ಸದಸ್ಯೆಯರು ಅಧಿಕ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಬಿಲ್ಲವ ಸೇವಾ ಸಂಘ ಕುಂದಾಪುರ, ಮುಂಬಯಿ: ಕೋಟಿ-ಚೆನ್ನಯ ಕ್ರೀಡೋತ್ಸವ ಉದ್ಘಾಟನೆ

    11/01/2023

    ಬಿಲ್ಲವ ಸೇವಾ ಸಂಘ ಮುಂಬಯಿ ನೂತನ ಕಾರ್ಯದರ್ಶಿಯಾಗಿ ಅಶೋಕ ಎನ್. ಪೂಜಾರಿ ಆಯ್ಕೆ

    26/09/2020

    ಮುಂಬಯಿ: ರಾಜು ಶ್ರೀಯಾನ್ ನಾವುಂದ ವಿಧಿವಶ

    23/07/2020
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.