Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಗೋಳಿಹೊಳೆ ಶಾಖೆ ಲೋಕಾರ್ಪಣೆ
    ಊರ್ಮನೆ ಸಮಾಚಾರ

    ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಗೋಳಿಹೊಳೆ ಶಾಖೆ ಲೋಕಾರ್ಪಣೆ

    Updated:02/01/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಸಮಾಜದ ಎಲ್ಲಾ ವರ್ಗದ ಬಡವರನ್ನು ಗುರುತಿಸಿ ಅವರನ್ನು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಬಲಗೊಳಿಸಿ ಸಮಾಜದ ಮುಖ್ಯವಾಹಿನಿಗೆ ತರಬೇಕೆಂಬ ಉದ್ದೇಶದೊಂದಿಗೆ ಆರಂಭಗೊಂಡ ಸಹಕಾರಿ ಚಳುವಳಿಯ ಆಶಯಗಳು ಸಹಕಾರಿ ಸಂಸ್ಥೆಗಳ ಮೂಲಕ ಸಾಕಾರಗೊಳ್ಳಲಿ ಎಂದು ರಾಜ್ಯ ಸಮಾಜ ಕಲ್ಯಾಣ ಹಾಗೂ ಹಿಂದೂಳಿದ ವರ್ಗಗಳ ಕಲ್ಯಾಣ ಸಚಿವ ಎಚ್. ಆಂಜನೇಯ ಹೇಳಿದರು.

    Click Here

    Call us

    Click Here

    ಅವರು ಗೊಳಿಹೊಳೆ ಮೂರುಕೈ ಬಳಿ ತಾಯಿ ಮರ್ಲಚಿಕ್ಕು ಕಾಂಪ್ಲೆಕ್ಸ್‌ನಲ್ಲಿ ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ನಿ. ಇದರ ನೂತನ ಶಾಖೆಯನ್ನು ಲೋಕಾರ್ಪಣೆಗೊಳಿಸಿದ ಬಳಿಕ ದಿ. ಜಿ.ಎಸ್. ಆಚಾರ್ಯ ಹಾಗೂ ದಿ. ಎಸ್. ರಾಮ ಪೂಜಾರಿ ಅವರ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿದರು. ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಗ್ರಾಮೀಣ ಭಾಗದ ಜನರಿಗೆ ಉತ್ತಮ ಸೇವೆಯನ್ನು ನೀಡಿ ಯಶಸ್ಸನ್ನು ಕಾಣುವಂತಾಗಲಿ. ಎಂದವರು ಹಾರೈಸಿದರು.

    ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಭದ್ರತಾ ಕೊಠಡಿ ಉದ್ಘಾಟಿಸಿದರು. ರಾಜ್ಯ ಸೌಹಾರ್ದ ಸಹಕಾರಿ ನಿರ್ದೇಶಕ ಭಾಸ್ಕರ್ ಕಾಮತ್ ಉಡುಪಿ ಕಂಪ್ಯೂಟರ್‌ಗೆ ಚಾಲನೆ ನೀಡಿದರು.

    ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷ ಎಸ್. ರಾಜು ಪೂಜಾರಿ ಪ್ತಾಸ್ತಾವಿಕ ಮಾತುಗಳನ್ನಾಡಿ ಸಚಿವ ಆಂಜನೇಯ ಅವರ ಭೇಟಿಯ ನೆನಪಿಗಾಗಿ ಸಹಕಾರಿಯು ಬಡತನದಲ್ಲಿ ಶೈಕ್ಷಣಿಕ ಸಾಧನೆಗೈಯುವ ಇಬ್ಬರು ಪದವಿ ವಿದ್ಯಾರ್ಥಿಗಳನ್ನು ದತ್ತು ಪಡೆದು ಅವರ ಶಿಕ್ಷಣಕ್ಕೆ ನೆರವಾಗುವ ಘೋಷಣೆ ಮಾಡಿದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ, ತಾಲೂಕು ಪಂಚಾಯತ್ ಸದಸ್ಯ ವಿಜಯ ಶೆಟ್ಟಿ, ಮಾಜಿ ಸದಸ್ಯ ರಮೇಶ್ ಗಾಣಿಗ ಕೊಲ್ಲೂರು, ಕಾಲ್ತೋಡು ಗ್ರಾ.ಪಂ ಉಪಾಧ್ಯಕ್ಷ ರಾಜು ಪೂಜಾರಿ, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ರಘುರಾಮ ಶೆಟ್ಟಿ, ಕಂಬದಕೋಣೆ ರೈತರ ಸೇವಾ ಸಹಕಾರಿಯ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಉದ್ಯಮಿ ಗೋಕುಲ್ ಶೆಟ್ಟಿ, ನಾರಾಯಣ ಶೆಟ್ಟಿ ಚುಚ್ಚಿ, ರತ್ನಾಕರ ಶೆಟ್ಟಿ ಜನ್ಮನೆ, ಶ್ರಿರಾಮ ಸೌಹಾರ್ದ ಸಹಕಾರಿಯ ಉಪಾಧ್ಯಕ್ಷ ಎಂ. ವಿನಾಯಕ ರಾವ್, ನಿರ್ದೇಶಕ ಮಂಜು ಪೂಜಾರಿ, ನವೋದಯ ಸಂಘಗಳ ವಲಯ ಮೇಲ್ವಿಚಾರಕ ಶಿವರಾಮ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾಗರಾಜ ಪಿ. ಯಡ್ತರೆ ವಂದಿಸಿದರು. ನಾಗೂರು ಶಾಖಾ ಪ್ರಬಂಧಕ ರಾಜೇಂದ್ರ ದೇವಾಡಿಗ ಸಹಕರಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು.

    Sriram souharda co-operative byndoor’s new golihole branch inaugurated

    Raju Poojary Shriram souharda credit co-operative N.
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    six − two =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.