Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಖಂಬದಕೋಣೆ ದಿ. ಆರ್. ಕೆ. ಸಂಜೀವ ರಾವ್ ಜನ್ಮಶತಾಬ್ದಿ ಆಚರಣೆ ಸಮಾರೋಪ
    ಊರ್ಮನೆ ಸಮಾಚಾರ

    ಖಂಬದಕೋಣೆ ದಿ. ಆರ್. ಕೆ. ಸಂಜೀವ ರಾವ್ ಜನ್ಮಶತಾಬ್ದಿ ಆಚರಣೆ ಸಮಾರೋಪ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ತಮ್ಮ ಕುಟುಂಬಕ್ಕಿಂತ ಸಮಾಜದ ಹಿತವನ್ನೇ ಅನುಗಾಲವೂ ಬಯಸಿ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೇ ಜಿಲ್ಲೆಯ ಜನತೆಯ ಆಗು-ಹೋಗುಗಳಿಗೆ ಸ್ಪಂದಿಸುತ್ತಾ ಅವರಿಗೆ ಸರಿಯಾದ ರೀತಿ ಮಾರ್ಗದರ್ಶನ ನೀಡುತ್ತಾ ಕೇವಲ ಅಲ್ಪಕಾಲ ಬಾಳಿದ ಸಂಜೀವರಾಯರು ಒರ್ವ ವ್ಯಕ್ತಿಯಾಗಿರದೇ ತಮ್ಮ ವ್ಯಕ್ತಿತ್ವದ ಮೂಲಕ ಒಂದು ಅದ್ಭುತ ಶಕ್ತಿಯಾಗಿದ್ದರು ಎಂದು ೯೧ರ ಹಿರಿಯ ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ ಹೇಳಿದರು.

    Click Here

    Call us

    Click Here

    ನಾಗೂರಿನ ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ನಡೆದ, ಖಂಬದಕೋಣೆ ಪರಿಸರದ ಅಭಿವೃದ್ಧಿಯ ಹರಿಕಾರ, ಬಹುಮುಖೀ ಸಾಧಕ ಖಂಬದಕೋಣೆ ದಿ. ಆರ್. ಕೆ. ಸಂಜೀವ ರಾವ್ ಜನ್ಮಶತಾಬ್ದಿ ಆಚರಣೆ ಸಮಾರೋಪ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದರು. ಸಾಂಸ್ಕೃತಿಕ ಸಂಪನ್ನ ಕೌಟುಂಬಿಕ ಹಿನ್ನೆಲೆಯ ಸಂಜೀವ ರಾವ್ ಇವರು ತಮ್ಮ ಹುಟ್ಟೂರು ಖಂಬದಕೋಣೆಯನ್ನು ಕೇಂದ್ರವಾಗಿರಿಸಿಕೊಂಡು ಗ್ರಾಮೀಣ ಪ್ರದೇಶದ ಅಭಿವೃದ್ಧಿಯತ್ತ ಅವರು ದೃಢ ಹೆಜ್ಜೆಗಳನ್ನಿರಿಸಿದ್ದರು. ಶಿಕ್ಷಣ, ಸಂಪರ್ಕ ಸೌಲಭ್ಯ ಸೃಷ್ಟಿಸುವಲ್ಲಿ ಅವರದು ಗಣನೀಯ ಸಾಧನೆ. ಭೂದಾನದ ಮೂಲಕ ಔದಾರ್ಯ ಮೆರೆದಿದ್ದರಲ್ಲದೇ ಸಂಗೀತ, ಸಾಹಿತ್ಯ, ನಾಟಕ, ಯಕ್ಷಗಾನ ಕ್ಷೇತ್ರಗಳಲ್ಲಿ ಕೂಡಾ ವಿಶಿಷ್ಟ ಸಾಧನೆಗೈದವರು ಎಂದು ರಾಯರ ವ್ಯಕ್ತಿತ್ವವನ್ನು ನೆನಪಿಸಿಕೊಂಡರು.

    ಜಿಲ್ಲಾ ಪಂಚಾಯಿತಿ ಸದಸ್ಯೆ ಗೌರಿ ದೇವಾಡಿಗ ಸಮಾರಂಭ ಉದ್ಘಾಟಿಸಿದರು. ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ವಿನಯ್ ಹೆಗ್ಡೆ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು. ಆರ್‌ಕೆಎಸ್ ಜನ್ಮಶತಾಬ್ದಿ ಆಚರಣಾ ಸಮಿತಿಯ ಗೌರವಾಧ್ಯಕ್ಷ ಬಿ. ಅಪ್ಪಣ್ಣ ಹೆಗ್ಡೆ, ಶತಾಬ್ದಿ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿದರು. ನಿವೃತ್ತ ಪ್ರಾಂಶುಪಾಲ ಡಾ. ಎಂ. ಪ್ರಭಾಕರ ಜೋಷಿ ನುಡಿನಮನ ಸಲ್ಲಿಸಿದರು. ಉಪ್ಪುಂದ ಚಂದ್ರಶೇಖರ ಹೊಳ್ಳರಿಗೆ ’ಜನ್ಮ ಶತಾಬ್ದಿ ಪ್ರಶಸ್ತಿ’ ಪ್ರದಾನಿಸಿ, ಉಪ್ಪುಂದ ರಮೇಶ ವೈದ್ಯ, ಎಸ್. ಜನಾರ್ದನ ಮರವಂತೆ ಇವರನ್ನು ಸನ್ಮಾನಿಸಲಾಯಿತು. ಬಸ್ರೂರು ಅಪ್ಪಣ್ಣ ಹೆಗ್ಡೆ ದಂಪತಿಗಳಿಗೆ ಆರ್‌ಕೆಎಸ್ ಕುಟುಂಬಿಕರು ವಿಶೇಷವಾಗಿ ಸನ್ಮಾನಿಸಿದರು. ಶಾಸಕ ಕೆ. ಗೋಪಾಲ ಪೂಜಾರಿ, ಮಾಜಿ ಶಾಸಕ ಎ. ಜಿ. ಕೊಡ್ಗಿ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.

    ಆರ್. ಕೆ. ಸಂಜೀವ ರಾವ್ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಅಕಾಡೆಮಿಯ ಅಧ್ಯಕ್ಷ ಕೆ. ಎಸ್. ಪ್ರಕಾಶ್ ರಾವ್ ಸ್ವಾಗತಿಸಿ, ಉಪನ್ಯಾಸಕ ವಿಶ್ವನಾಥ ಶೆಟ್ಟಿ ನಿರೂಪಿಸಿದರು. ಸಂದೀಪನ್ ಶಾಲಾ ಮುಖ್ಯೋಪಾಧ್ಯಾಯ ಬಿಜೂರು ವಿಶ್ವೇಶ್ವರ ಅಡಿಗ ವಂದಿಸಿದರು. ನಂತರ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನೇತೃತ್ವದ ಯಕ್ಷಗಾನ ಕಲಾವಿದರ ತಂಡದವರಿಂದ ’ಪಾಂಚಜನ್ಯ’ ಯಕ್ಷಗಾನ ಪ್ರದರ್ಶನಗೊಂಡಿತು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    eleven − 6 =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.