Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ‘ತೆರೆದ ಮನೆ’ ಕಾರ್ಯಕ್ರಮ. ವಿದ್ಯಾರ್ಥಿಗಳೊಂದಿಗೆ ಸಂವಾದ
    ಊರ್ಮನೆ ಸಮಾಚಾರ

    ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ‘ತೆರೆದ ಮನೆ’ ಕಾರ್ಯಕ್ರಮ. ವಿದ್ಯಾರ್ಥಿಗಳೊಂದಿಗೆ ಸಂವಾದ

    No Comments
    Facebook Twitter Pinterest LinkedIn WhatsApp Reddit Tumblr Email
    ?
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಗಂಗೊಳ್ಳಿ : ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಪೊಲೀಸರೊಂದಿಗೆ ಮುಕ್ತವಾಗಿ ಹಂಚಿಕೊಂಡಾಗ ಸಾರ್ವಜನಿಕರು ಹಾಗೂ ಪೊಲೀಸರ ನಡುವಿನ ಸಂಬಂಧವನ್ನು ಉತ್ತಮಗೊಳಿಸಲು ಸಾಧ್ಯವಾಗುತ್ತದೆ. ಪೊಲೀಸ್ ಠಾಣೆಗೆ ಬರಲು ಯಾವುದೇ ಅಂಜಿಕೆ ಪಡದೆ ತಮಗಾಗುತ್ತಿರುವ ಅನ್ಯಾಯವನ್ನು ಸಂಬಂಧಪಟ್ಟ ಠಾಣಾಧಿಕಾರಿಯವರಿಗೆ ಲಿಖಿತವಾಗಿ ನೀಡಬೇಕು. ವಿದ್ಯಾರ್ಥಿಗಳು ಪೊಲೀಸ್ ಇಲಾಖೆಗೆ ಸಂಬಂಧಪಟ್ಟ ಮಾಹಿತಿಯನ್ನು ಪಡೆದುಕೊಂಡು, ಪೊಲೀಸ್ ಇಲಾಖೆಯಂದಿಗೆ ಸಹಕರಿಸಿದಾಗ ಸಮಾಜವನ್ನು ಅಪರಾಧಮುಕ್ತ ಸಮಾಜವನ್ನಾಗಿ ಮಾಡಲು ಸಾಧ್ಯವಾಗುತ್ತದೆ ಎಂದು ಗಂಗೊಳ್ಳಿ ಪೊಲೀಸ್ ಠಾಣಾ ಉಪನಿರೀಕ್ಷಕ ಸುಬ್ಬಣ್ಣ ಹೇಳಿದರು.

    Click Here

    Call us

    Click Here

    ಅವರು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಜರಗಿದ ‘ತೆರೆದ ಮನೆ’ ಕಾರ್ಯಕ್ರಮದಲ್ಲಿ ಮರವಂತೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದರು. ಸಾರ್ವಜನಿಕ ಸ್ಥಳದಲ್ಲಿ ಬೀಡಿ ಸಿಗರೇಟ್ ಸೇವನೆ ಶಿಕ್ಷಾರ್ಹ ಅಪರಾಧ. ಮಟ್ಕಾ, ಜುಗಾರಿ, ಕೋಳಿ ಅಂಕದ ಆಟ, ಬೆಟ್ಟಿಂಗ್ ಮೊದಲಾದವುಗಳು ಕಾನೂನಿನ್ವಯ ಅಪರಾಧ. ಇಂತಹ ಪ್ರಕರಣಗಳು ಅಥವಾ ಯಾವುದೇ ಅಕ್ರಮ ಚಟುವಟಿಕೆ ನಡೆಯುತ್ತಿದ್ದರೆ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಶಾಲೆಗಳಲ್ಲಿ ಅಥವಾ ಸಾರ್ವಜನಿಕ ಸ್ಥಳದಲ್ಲಿ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರೆ ನೇರವಾಗಿ ಠಾಣೆಯಲ್ಲಿ ದೂರು ದಾಖಲಿಸಬೇಕು. ಸಂಶಯಾಸ್ಪದ ವ್ಯಕ್ತಿಗಳು ಯಾ ಸಂಶಯಾಸ್ಪದ ವಸ್ತುಗಳು ಕಂಡು ಬಂದರೆ ಕೂಡಲೇ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದರು.

    ಇದೇ ಸಂದರ್ಭ ಶಾಲಾ ವಿದ್ಯಾರ್ಥಿಗಳು ಸ್ವಾರಸ್ಯಕರ ಚರ್ಚೆ ನಡೆಸಿದರು. ಮರವಂತೆ ವ್ಯಾಪ್ತಿಯ ಕೆಲವೆಡೆ ಮಟ್ಕಾ ಜುಗಾರಿ ಆಟ ಹೆಚ್ಚಾಗುತ್ತಿದೆ. ಆದರೆ ಪೊಲೀಸರು ಅವರಿಗೆ ಯಾವುದೇ ಶಿಕ್ಷೆ ನೀಡುದಿಲ್ಲ. ಯಾವುದೇ ಘಟನೆ ನಡೆದ ಸಂದರ್ಭ ದೂರು ನೀಡಲು ಏನು ಮಾಡಬೇಕು. ಪ್ರಕರಣದಲ್ಲಿ ಸಾಕ್ಷಿದಾರರಿಗೆ ಪದೇ ಪದೇ ಅಲೆದಾಡುವುದನ್ನು ತಪ್ಪಿಸಲು ಯಾವ ಕ್ರಮಕೈಗೊಳ್ಳುತ್ತೀರಿ. ಶಾಲಾ ವಿದ್ಯಾರ್ಥಿನಿಯರು ಸೈಕಲಿನಲ್ಲಿ ಹೋಗುವಾಗ ಕೆಲವರು ತಮ್ಮ ವಾಹನವನ್ನು ವೇಗವಾಗಿ ಚಲಾಯಿಸಿ ತೊಂದರೆ ನೀಡುತ್ತಿದ್ದಾರೆ. ಇದನ್ನು ಕೊನೆಗಾಣಿಸಲು ಏನು ಮಾಡಬೇಕು. ವಿದ್ಯಾರ್ಥಿಗಳು ರಸ್ತೆ ದಾಟುವ ಸ್ಥಳಗಳಲ್ಲಿ ಝಿಬ್ರಾ ಕ್ರಾಸಿಂಗ್ ಮತ್ತು ನಾಮಫಲಕ ಅಳವಡಿಸಲು ಕ್ರಮಕೈಗೊಳ್ಳಬೇಕು ಎಂಬಿತ್ಯಾದಿ ಪ್ರಶ್ನೆಗಳ ಸುರಿಮಳೆಗೈದರು ಹಾಗೂ ಫೋಕ್ಸೊ ಕಾಯ್ದೆ ಬಗ್ಗೆ ಮಾಹಿತಿ ಪಡೆದುಕೊಂಡರು. ಇಲಾಖೆಯ ಬಗ್ಗೆ ವಿವಿಧ ಮಾಹಿತಿಗಳನ್ನು ಪಡೆದುಕೊಂಡ ವಿದ್ಯಾರ್ಥಿಗಳು ಪೊಲೀಸರು ಉಪಯೋಗಿಸುವ ರೈಫಲ್, ಗನ್, ತೋಳ ಮೊದಲಾದವುಗಳ ಉಪಯೋಗಿಸುವ ಬಗ್ಗೆ ಮಾಹಿತಿ ಪಡೆದು.

    ಮರವಂತೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಸತ್ಯನಾ ಕೊಡೇರಿ, ತಾಲೂಕು ಶಿಕ್ಷಣ ಸಂಯೋಜಕಿ ಶೈಲಾ ನಾಯಕ್, ಉಡುಪಿ ಜಿಲ್ಲಾ ಶಿಕ್ಷಣ ಸಂಪನ್ಮೂಲ ಸಂಸ್ಥೆಯ ಅಧ್ಯಕ್ಷ ರಾಘವೇಂದ್ರ ನಾವಡ, ತಾಲೂಕು ಶಿಕ್ಷಣ ಸಂಪನ್ಮೂಲ ಸಂಸ್ಥೆಯ ಸಂಘಟನಾ ಕಾರ್ಯದರ್ಶಿ ಹುಸೇನ್ ಹೈಕಾಡಿ, ಗಂಗೊಳ್ಳಿ ಠಾಣೆಯ ಎಎಸ್ಸೈ ರಘುರಾಮ, ಹೆಡ್ ಕಾನ್‌ಸ್ಟೇಬಲ್ ಮೋಹನ ಪೂಜಾರಿ, ಸೂರ, ಸಿಬ್ಬಂದಿಗಳಾದ ಚಂದ್ರಶೇಖರ, ನರಸಿಂಹ, ಚೇತನ್ ಮೊದಲಾದವರು ಉಪಸ್ಥಿತರಿದ್ದರು. ಹೆಡ್ ಕಾನ್‌ಸ್ಟೇಬಲ್ ಆನಂದ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    3 + 19 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.