Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದೇವಸ್ಥಾನಗಳು ಜೀವನ ಪ್ರೀತಿಯನ್ನು ಕಲಿಸಿಕೊಡುವ ತಾಣಗಳು: ಸುಬ್ರಹ್ಮಣ್ಯ ಭಟ್ ಗುಂಡಿಬೈಲು
    ಊರ್ಮನೆ ಸಮಾಚಾರ

    ದೇವಸ್ಥಾನಗಳು ಜೀವನ ಪ್ರೀತಿಯನ್ನು ಕಲಿಸಿಕೊಡುವ ತಾಣಗಳು: ಸುಬ್ರಹ್ಮಣ್ಯ ಭಟ್ ಗುಂಡಿಬೈಲು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಸೇನಾಪುರ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ನವೀಕೃತ ಶಿಲಾದೇಗುಲದ ಪ್ರತಿಷ್ಠಾ ಮಹೋತ್ಸವ ಹಾಗೂ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ದೇವಸ್ಥಾನಗಳು ಜೀವನ ಪ್ರೀತಿಯನ್ನು ಕಲಿಸಿಕೊಡುವ ತಾಣಗಳು. ದೇವಸ್ಥಾನಗಳಿಂದಾಗಿ ಇಡೀ ಊರು ಒಟ್ಟುಗೂಡುವುದಲ್ಲದೇ ಸೌಹಾರ್ದಯುವತಾಗಿ ಬಾಳುವಂತೆ ಮಾಡುತ್ತದೆ. ಜೀವನ ಪ್ರೀತಿಗೆ ಬಡವ ಬಲ್ಲಿದನೆಂಬ ಭೇದವಿಲ್ಲ. ಅಲ್ಲಿ ಎಲ್ಲವನ್ನೂ ಸಮಾನವಾಗಿ ಕಾಣಲಾಗುತ್ತದೆ ಎಂದು ವಾಸ್ತುತಜ್ಞ ವೇ.ಮೂ ಸುಬ್ರಹ್ಮಣ್ಯ ಭಟ್ ಗುಂಡಿಬೈಲು ಹೇಳಿದರು.

    ಅವರು ಸೇನಾಪುರ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ನವೀಕೃತ ಶಿಲಾದೇಗುಲದ ಪ್ರತಿಷ್ಠಾ ಮಹೋತ್ಸವ ಹಾಗೂ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಧಾರ್ಮಿಕ ಪ್ರವಚನವಿತ್ತರು. ಹಿಂದಿನ ಕಾಲದ ದುಸ್ತರ ಬದುಕಿನ ನಡುವೆಯೂ ಊರಿನಲ್ಲೊಂದು ಸುಂದರ ದೇವಸ್ಥಾನಗಳು ನಿರ್ಮಾಣಗೊಳ್ಳುತ್ತಿದ್ದವು. ಆ ಕಾಲದಲ್ಲಿ ಹಸಿವು ನೀಗಿಸಿಕೊಳ್ಳಲು ಪ್ರತಿಫಲವನ್ನು ಬಯಸುತ್ತಿದ್ದರೇ ಹೊರತು ಹಣ ಮಾಡುವ ಉದ್ದೇಶ ಹೊಂದಿರಲಿಲ್ಲ. ಪ್ರತಿಫಲಾಪೇಕ್ಷೆ ಇಲ್ಲದ ನಮ್ಮ ಪೂರ್ವಜರುಗಳ ಕಾರ್ಯವೈಖರಿಯನ್ನು ಹಿಂದಿನ ಕಾಲದ ದೇವಸ್ಥಾನಗಳಲ್ಲಿ ನೋಡಿದರೆ ತಿಳಿಯುವುದು ಎಂದರು.

    ನಿವೃತ್ತ ಉಪನ್ಯಾಸಕ ಡಾ. ಬಿ. ಮಂಜುನಾಥ ಸೋಮಯಾಜಿ ಮಾತನಾಡಿ ದೇವಸ್ಥಾನದಲ್ಲಿ ದೇವರು ಯಾರಿಗೂ ಭೇದ ಮಾಡುವುದಿಲ್ಲ. ಸಮರ್ಪಣೆಯ ಆಧಾರದಲ್ಲಿ ಹೆಚ್ಚು ಕಡಿಮೆ ಪ್ರಮಾಣದ ಆಶಿರ್ವದಿಸುವುದಿಲ್ಲ. ಭಕ್ತಿಯಿಂದ ಸ್ಮರಿಸುವ ಎಲ್ಲರಿಗೂ ಸಮಾವಾಗಿ ಹರಸುತ್ತಾನೆ. ಸ್ಥಿರತೆ, ಕ್ಷಮೆ, ಮನೋನಿಗ್ರಹ, ನನ್ನದಲ್ಲದ ವಸ್ತುಗಳನ್ನು ಮುಟ್ಟದಿರುವುದು ಮುಂತಾದ ಸತ್ಕಾರ್ಯಗಳು ಧರ್ಮದ ಲಕ್ಷಣಗಳು. ಧರ್ಮವನ್ನು ಕ್ರೀಯಾಮಾರ್ಗ, ಭಕ್ತಮಾರ್ಗ, ರಾಜಮಾರ್ಗ ಹಾಗೂ ತತ್ವಜ್ಞಾನಿಯಂತೆ ಪಾಲಿಸುವವರಿಗೆ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂದರು.

    ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ಮಾತನಾಡಿ ದೇವಸ್ಥಾನಗಳ ಅಭಿವೃದ್ಧಿಯಿಂದ ಊರಿನ ಅಭಿವೃದ್ಧಿಯೂ ಸಾಧ್ಯವಿದೆ. ದೇವಾಲಯಗಳಿಂದ ಸಂಸ್ಕಾರಯುತ ಸಮಾಜ ನಿರ್ಮಾಣ ಸಾಧ್ಯವಿದೆ ಎಂದರು.

    Click here

    Click here

    Click here

    Click Here

    Call us

    Call us

    ದೇವಳದ ಜೀಣೋದ್ಧಾರಕ್ಕೆ ಸಹಕಾರವಿತ್ತ ದಾನಿಗಳನ್ನು ಸನ್ಮಾನಿಸಲಾಯಿತು. ದೇವಸ್ಥಾನದ ಅನುವಂಶಿಯ ಅರ್ಚಕ ವೆಂಕಟೇಶ ಮಂಜ ದಂಪತಿಗಳನ್ನು ಗೌರವಿಸಲಾಯಿತು. ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ತಾಲೂಕು ಪಂಚಾಯತ್ ಉಪಾಧ್ಯಕ್ಷ ಪ್ರವೀಣಕುಮಾರ್ ಶೆಟ್ಟಿ, ನಾಡ ಗ್ರಾಪಂ ಅಧ್ಯಕ್ಷೆ ಜೇನ್ ಮೇರಿ ಒಲಿವೆರಾ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ಚೇತನ ಕುಮಾರ್, ಮೊದಲಾದವರು ಉಪಸ್ಥಿತರಿದ್ದರು.

    ವಿಷ್ಣುಮೂರ್ತಿ ದೇವಸ್ಥಾನದ ಜೀಣೋದ್ಧಾರ ಸಮಿತಿ ಅಧ್ಯಕ್ಷ ಬಿ. ಅರುಣಕುಮಾರ್ ಶೆಟ್ಟಿ ಸ್ವಾಗತಿಸಿದರು. ಪರಮೇಶ್ವರ ಉಡುಪ ಪ್ರಾರ್ಥಿಸಿದರು. ಚೇತನ ಶ್ಯಾನುಭೋಗ್ ಹಾಗೂ ನಾಗೇಶ್ ಶ್ಯಾನುಭೋಗ್ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    four × 3 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.