Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಟ್ಟಿಯಂಗಡಿಯಲ್ಲಿ ಸಂಕಷ್ಟ ಚತುರ್ಥಿ ಮಹಾಪೂಜೆ ಸಂಪನ್ನ
    ಊರ್ಮನೆ ಸಮಾಚಾರ

    ಹಟ್ಟಿಯಂಗಡಿಯಲ್ಲಿ ಸಂಕಷ್ಟ ಚತುರ್ಥಿ ಮಹಾಪೂಜೆ ಸಂಪನ್ನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಸಮೀಪದ ಕಾರಣಿಕ ಕ್ಷೇತ್ರ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪ್ರತಿಷ್ಠಾ ವರ್ಧಂತಿಯ ಅಂಗವಾಗಿ ನಡೆದ ಅಷ್ಟೋತ್ತರ ಸಹಸ್ರ ನಾಳಿಕೇರ ಮಹಾ ಗಣಯಾಗ(೧೦೦೮ ತೆಂಗಿನಕಾಯಿ) ನವಚಂಡಿ ಹವನ ಮತ್ತು ಸಂಕಷ್ಟಹರ ಚತುರ್ಥಿ(ಅಂಗಾರಿಕಾ) ಮಹಾಪೂಜೆ ಸಕಲ ಧಾರ್ಮಿಕ ವಿಧಿ ವಿಧಾನದಿಂದ ಸಾವಿರಾರು ಭಕ್ತರ ಸಮ್ಮುಖದಲ್ಲಿ ಋತ್ವಿಜರ ವೇದಮಂತ್ರ ಘೋಷದೊಂದಿಗೆ ಸಾಂಗವಾಗಿ ನೆರವೇರಿತು.

    Click Here

    Call us

    Click Here

    ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ ಭಕ್ತರು ಶ್ರೀದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಸಹಸ್ರ ನಾಳಿಕೇರ ಮಹಾ ಗಣಯಾಗ, ನವಚಂಡಿ ಹವನ, ಸಂಕಷ್ಟಹರ ಚತುರ್ಥಿ ಪೂಜೆಯಲ್ಲಿ ಪಾಲ್ಗೊಂಡು ಕೃಥಾರ್ತರಾದರು. ಧಾರ್ಮಿಕ ಮಹೋತ್ಸವದ ಅಂಗವಾಗಿ ನವಗ್ರಹ ಹವನ, ಬ್ರಹ್ಮಣಸ್ಪತಿಸೂಕ್ತ ಹವನ, ಶ್ರೀಸೂಕ್ತ ಹವನ, ಪುರುಷ ಸೂಕ್ತ ಹವನ, ಲಕ್ಷ್ಮೀನಾರಾಯಣ ಹೃದಯ ಪಾರಾಯಣ ಮತ್ತು ಹವನ, ಧನ್ವಂತರಿ ಹವನ, ನವಾಕ್ಷರೀ ಮಂತ್ರಜಪ ಹಾಗೂ ಹವನ, ರುದ್ರಪಾರಾಯಣ ಹಾಗೂ ರುದ್ರ ಹವನ, ದುರ್ಗಾ ಹೋಮ, ಅಥರ್ವಶೀರ್ಷ ಹವನ, ಲಲಿತ ಸಹಸ್ರನಾಮ ಹವನ, ಚಂಡಿಕಾ ಪಾರಾಯಣ, ಅಧಿವಾಸ ಹವನ, ಕಲಾತತ್ವ ಹವನ, ಶ್ರೀ ಸ್ವಾಮಿಗೆ ೧೦೮ ಕಲಶಾಭಿಷೇಕ, ಕನಕಾಭಿಷೇಕ ವಿದ್ಯುಕ್ತವಾಗಿ ಜರುಗಿತು.

    ಫೆ.೧೨ರಂದು ರಾತ್ರಿ ಶ್ರೀ ಕೃಪಾಪೋಷಿತ ಯಕ್ಷಗಾನ ಮಂಡಳಿ ಹಟ್ಟಿಯಂಗಡಿಯವರಿಂದ ಚೂಡಾಮಣಿ-ಲಂಕಾದಹನ ಯಕ್ಷಗಾನ, ಫೆ.೧೩ರಂದು ರಾತ್ರಿ ರೂಪಕಲಾ ಕುಂದಾಪುರದವರಿಂದ ಹಾಸ್ಯ ನಾಟಕ, ಫೆ.೧೪ರಂದು ಸಂಜೆ ೪ ಗಂಟೆಗೆ ಶಿವಮೊಗ್ಗ ಜಿಲ್ಲೆಯ ಮತ್ತೂರಿನ ಹೆಸರಾಂತ ಗಮಕ ವಾಚಕರಾದ ಡಾ. ಸನತ್ ಕುಮಾರ ಅವರ ಗಮಕ ವಾಚನ, ಕುಮಾರವ್ಯಾಸ ಪ್ರಶಸ್ತಿ ಪುರಸ್ಕೃತ ವೇ.ಮೂ. ಮಾರ್ಕಂಡೇಯ ಅವಧಾನಿ ಅವರು ಗಮಕ ವ್ಯಾಖ್ಯಾನ ಮನೋಜ್ಞವಾಗಿ ಮೂಡಿ ಬಂತು. ಪ್ರತಿದಿನ ಸಂಜೆ ಕದ್ರಿ ರಮೇಶನಾಥ್ ಮತ್ತು ಹರಿದಾಸ ಡೋಗ್ರ ಮತ್ತು ಬಳಗದವರಿಂದ ಸ್ಯಾಕ್ಸೋಫೋನ್ ಕಛೇರಿ ನಡೆಯಿತು. ದೇವಳವನ್ನು ತಳಿರು ತೋರಣ, ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಈ ಸಂದರ್ಭದಲ್ಲಿ ದೇವಳದ ಆಡಳಿತ ಧರ್ಮದರ್ಶಿ ಹೆಚ್. ರಾಮಚಂದ್ರ ಭಟ್, ಪ್ರಧಾನ ಅರ್ಚಕರಾದ ಬಾಲಚಂದ್ರ ಭಟ್, ಹಟ್ಟಿಯಂಗಡಿ ಶ್ರೀ ಸಿಧ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರಾದ ಶರಣ್‌ಕುಮಾರ್, ಅರ್ಚಕ ವೃಂದ ಮೊದಲಾದವರು ಉಪಸ್ಥಿತರಿದ್ದರು.

    Shri Siddivinayaka Temple Hattiyangadi
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

    17/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ

    17/12/2025

    ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.