Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಖ್ಯಾತ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ
    ಯಕ್ಷಲೋಕ

    ಖ್ಯಾತ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ

    Updated:16/04/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Kandavara raghuram shettyಕರ್ನಾಟಕ ರಾಜ್ಯದ ಯಕ್ಷಗಾನ ರಸಿಕರಿಗೆಲ್ಲಾ ಚಿರಪರಿಚಿತರಾಗಿರುವ, ಕಂದಾವರ ರಘುರಾಮ ಶೆಟ್ಟಿಯವರು, ಒಬ್ಬ ಖ್ಯಾತ ಶಿಕ್ಷಕ, ಯಕ್ಷಗಾನ ಪ್ರಸಂಗ ಕರ್ತ, ಅರ್ಥಧಾರಿ, ಹವ್ಯಾಸಿ ನಾಟಕ ಕಲಾವಿದ, ಹವ್ಯಾಸಿ ಕಲಾವಿದ. ಶ್ರೀ. ರಘುರಾಮ ಶೆಟ್ಟಿಯವರು ಯಕ್ಷಗಾನ ವಲಯದಲ್ಲಿ ಕಂದಾವರದವರು ಎ೦ಬ ಹೆಸರಿನಿಂದ ಪ್ರಸಿದ್ಧರು.

    Click Here

    Call us

    Click Here

    ಬಾಲ್ಯ , ಶಿಕ್ಷಣ
    ಕಂದಾವರ ರಘುರಾಮ ಶೆಟ್ಟಿಯವರು ಕುಂದಾಪುರ ತಾಲ್ಲೂಕಿನ ಬಳ್ಕೂರು ಗ್ರಾಮದ ಕಂದಾವರದಲ್ಲಿ 1936ರಲ್ಲಿ ಜನಿಸಿದರು. ಅವರ ತಂದೆ, ಕರ್ಕಿ ಸದಿಯಣ್ಣ ಶೆಟ್ಟಿಯವರು. ತಾಯಿ ಕಂದಾವರ ಪುಟ್ಟಮ್ಮನವರು. ಈಗ ಶ್ರೀಯುತರು, ತಮ್ಮ ಪತ್ನಿ, ಮಕ್ಕಳು ಮೊಮ್ಮಕ್ಕಳ ಸಂಗದಲ್ಲಿ ನೂಜಾಡಿಯಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದಾರೆ. ತಮ್ಮ ಆರಂಭದ ಬದುಕಿನಲ್ಲಿ ಕಂಡ್ಲೂರು ನೇತಾಜಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ-ಶಿಕ್ಷಕರಾಗಿ, ಮುಖ್ಯೋಪಾಧ್ಯರಾಗಿ, ಸುಮಾರು 35 ವರ್ಷಗಳ ಕಾಲ ಸೇವೆ ಮಾಡಿರುವ ಕಂದಾವರ ರಘುರಾಮ ಶೆಟ್ಟಿಯವರು, `ಮಾದರೀ ಶಿಕ್ಷಕ` ಪ್ರಶಸ್ತಿಗೆ ಭಾಜನರಾಗಿದ್ದಾರೆ. ಎಳೆ ಪ್ರಾಯದಿಂದಲೂ ಸಾಹಿತ್ಯ, ಸಂಗೀತ, ಯಕ್ಷಗಾನಗಳ ಬಗೆಗೆ, ವಿಶೇಷ ಒಲವು ಆಸಕ್ತಿಗಳನ್ನು ತಳೆದ ಕಂದಾವರ ರಘುರಾಮ ಶೆಟ್ಟಿಯವರು ವಿದ್ಯಾರ್ಥಿದೆಶೆಯಲ್ಲೇ “ಮಕ್ಕಳ ಯಕ್ಷಗಾನಕ್ಕೆ ಭಾಗವತಿಗೆ“ ಮಾಡಿ “ಬಾಲ ಭಾಗವತ“ ನೆಂಬ ಖ್ಯಾತಿಪ್ರಾಪ್ತಿಗೆ ಪಾತ್ರರಾದರು. ದಿವಂಗತ ಎಂ. ಎಂ. ಹೆಗ್ಡೆ ಯವರ ಕೂಟದಲ್ಲಿ ಹವ್ಯಾಸಿ ವೇಷಧಾರಿಯಾಗಿ ಪಾತ್ರ ನಿರ್ವಹಣೆ ಮಾಡುತ್ತಿದ್ದರು. ಸ್ವತಃ ಉತ್ತಮ ಅರ್ಥಧಾರಿಯಾದ ಕಂದಾವರ ರಘುರಾಮ ಶೆಟ್ಟಿಯವರು, ಬೇರೆ ಅರ್ಥಧಾರಿಗಳ ಜೊತೆಗೂಡಿ ತಾಳಮದ್ದಲೆಯಲ್ಲಿ ಪಾಲ್ಗೊಂಡಿದ್ದರು.

    ಯಕ್ಷಗಾನ-ಪ್ರಸಂಗ ರಚನೆ, ಕನ್ನಡ ಸಾಹಿತ್ಯ ಸೇವೆ
    ಯಕ್ಷಗಾನ ಎಳವೆಯಲ್ಲೇ ಇವರನ್ನು ಆಕರ್ಷಿಸಿತು. ಅದನ್ನು ಹವ್ಯಾಸವಾಗಿ ನಿರಂತರ ಬೆಳೆಸಿ ಕೊಂಡು ಬಂದಿದ್ದಾರೆ. ಭಾಗವತರಾಗಿ, ವೇಷಧಾರಿಯಾಗಿ, ಅರ್ಥಧಾರಿಯಾಗಿ ಹಾಗೂ ಪ್ರಸಂಗಕರ್ತರಾಗಿ ಈ ಕ್ಷೇತ್ರಕ್ಕೆ ಇವರಿಂದ ಗಮನಾರ್ಹ ಕೊಡುಗೆ ಸಂದಿದೆ. 1978ರಿಂದ ಆರಂಭವಾದ ಈ ಪ್ರಸಂಗ-ಕೃಷಿ, ಇದುವರೆಗೆ 29 ಪ್ರಸಂಗಗಳ ಗುಚ್ಛವಾಗಿದೆ. ಕಂದಾವರರು ಇವನ್ನೆಲ್ಲಾ ಒಟ್ಟುಗೂಡಿಸಿಬರೆದು ಯಕ್ಷಗಾನ ಕ್ಷೇತ್ರಕ್ಕೆ ವಿಶೇಷ ಕೊಡುಗೆಯಾಗಿ ಸಮರ್ಪಿಸಿದ್ದಾರೆ. ಅವುಗಳಲ್ಲಿ ಹಲವು ಉಭಯ ತಿಟ್ಟುಗಳ ವೃತ್ತಿ ಮೇಳಗಳಲ್ಲಿ ಯಶಸ್ವಿಯಾಗಿ ಪ್ರದರ್ಶನ ಗೊಂಡಿವೆ. ಶ್ರೀದೇವಿ ಬನಶಂಕರಿ, ಚೆಲುವೆ ಚಿತ್ರಾವತಿ, ರತಿ ರೇಖಾ, ಶೂದ್ರ ತಪಸ್ವಿನಿ ಕಲಾಭಿಮಾನಿಗಳ ಅಪಾರ ಮೆಚ್ಚುಗೆ ಗಳಿಸಿವೆ. ಹತ್ತಾರು ವರ್ಷ ಕಳೆದ ಮೇಲೂ ಇವು ಪ್ರದರ್ಶನ ಗೊಳ್ಳುತ್ತಿರುವುದು ಪ್ರಸಂಗದ ಗಟ್ಟಿತನಕ್ಕೆ ಸಾಕ್ಷಿಯಾಗಿದೆ.
    ಇವೆಲ್ಲಾ ದಾಖಲೆಯ ಪ್ರದರ್ಶನಗಳನ್ನು ಜನಪ್ರಿಯತೆಯನ್ನೂ ಗಳಿಸಿವೆ. ಮತ್ತೊಂದು ವಿಶೇಷವೆಂದರೆ, ಬಡಗು ತಿಟ್ಟಿನ ಎಲ್ಲಾ ಮೇಳಗಳೂ ತೆಂಕುತಿಟ್ಟಿನ ಧರ್ಮಸ್ಥಳ, ಕಟೀಲು ಮೇಳದವರು ಈಗಲೂ ಶ್ರದ್ಧಾಸಕ್ತಿಗಳಿಂದ ಆಡಿ ಸಂಭ್ರಮಿಸುತ್ತಿದ್ದಾರೆ. ಕಂದಾವರರ ಅಪಾರ ಅನುಭವ ಮತ್ತು ಬುದ್ಧಿಮತ್ತೆಗೆ ಸಾಕ್ಷಿಯಾಗಿ, ಆಯ್ದ ಪ್ರಸಂಗಗಳ ಸಂಕಲನ, “ದಶಮಿ“ ಪ್ರಕಾಶನಗೊಂಡಿವೆ,
    ಹವ್ಯಾಸಿ ನಾಟಕ ಕಲಾವಿದರಾದ ಇವರು ಕಂಪೆನಿ ನಾಟಕಗಳಲ್ಲೂ ಅತಿಥಿ ನಟರಾಗಿ ಅಭಿನಯಿಸಿ ಕಲಾ ರಸಿಕರ ಮನಗೆದ್ದಿದ್ದಾರೆ. ಕರ್ನಾಟಕ ಸರಕಾರದ ನಾಟಕ ಅಕಾಡೆಮಿ ಪ್ರಕಟಿಸಿದ “ಇಂದಿನ ರಂಗ ಕಲಾವಿದರು“ ಎಂಬ ಪುಸ್ತಕದಲ್ಲಿ ಇವರ ಪರಿಚಯ ಬಂದಿರುವುದು ಈ ಕ್ಷೇತ್ರಕ್ಕೆ ಇವರು ಸಲ್ಲಿಸಿದ ಕೊಡುಗೆಗೆ ನಿದರ್ಶನ. ಕವಿಯಾಗಿ, ಬಿಡಿಬರಹಗಳ ಲೇಖಕರಾಗಿ ಕನ್ನಡ ಓದುಗರಿಗೆ ತಮ್ಮನ್ನು ತೆರೆದುಕೊಂಡವರು. ನಾಡಿನ ಪ್ರತಿಷ್ಠಿತ ಪತ್ರಿಕೆಗಳಲ್ಲಿ ಇವರ ಲೇಖನಗಳು ಪ್ರಕಟಗೊಂಡಿವೆ. ಕುಂದಾಪುರ ತಾಲೂಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ನಾಲ್ಕು ವರ್ಷ ಸಾರ್ಥಕ ಸೇವೆ ಸಲ್ಲಿಸಿದ್ದಾರೆ. ಪುರಾಣ ವಾಚನದಲ್ಲಿ ಗಮಕಿಗಳಾಗಿ, ಪ್ರವಚನಕಾರರಾಗಿ ಭಾಗವಹಿಸಿದ್ದಾರೆ.
    ನೂರಾರು ನಾಟಕಗಳಲ್ಲಿ ಹಾಸ್ಯದ ಪಾತ್ರವಹಿಸಿ ಅಪಾರ ಜನಮನ್ನಣೆಗೆ ಪಾತ್ರರಾಗಿದ್ದಾರೆ. ಕೆಲವು ಕಂಪೆನಿ ನಾಟಕಗಳಲ್ಲಿ ಗೌರವನಟರಾಗಿ ರಂಗಮಂಚದಮೇಲೆ ಕಾಣಿಸಿಕೊಂಡಿದ್ದಾರೆ. ವಿದ್ಯಾರ್ಥಿವೃಂದಕ್ಕಾಗಿಯೇ ವಿಶೇಷ ಕಾಳಜಿವಹಿಸಿ 7 ಕಿರುನಾಟಕಗಳ ರಚನೆಮಾಡಿದರು. ಅವನ್ನು ತಮ್ಮ ಮುಂದಾಳತ್ವದಲ್ಲಿ ಮಕ್ಕಳನಾಟಕವನ್ನು ನಿರ್ದೇಶಿಸಿ ಯಶಸ್ಸನ್ನು ತಂದುಕೊಟ್ಟಿದ್ದಾರೆ.
    ಕಂದಾವರ ರಘುರಾಮ ಶೆಟ್ಟಿ ಕುಂದಾಪುರ ತಾಲ್ಲೂಕು “ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ“ ರಾಗಿ 4 ವರ್ಷಗಳ ಕಾಲ ಸಾರ್ಥಕ ಸೇವೆಯನ್ನು ಮಾಡಿದ್ದಾರೆ. ಪುರಾಣ ಪ್ರವಚನಗಳಲ್ಲಿ ಗಮಕಿಯಾಗಿ, ವ್ಯಾಖ್ಯಾನಕಾರರಾಗಿ ಭಾಗವಹಿಸಿದ್ದಾರೆ.

    ಪ್ರಶಸ್ತಿ , ಪುರಸ್ಕಾರಗಳು

    ಮಂಗಳೂರಿನ ಬಂಟರ ಯಾನೆ ನಾಡವರ ಮಾತೃಸಂಘದಿ೦ದ ಬಂಗಾರದ ಪದಕ.
    ಕರ್ನಾಟಕ ಯಕ್ಷಗಾನ ಸಮಿತಿ ಪ್ರಶಸ್ತಿ
    ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನ
    ಡಾ. ವೀರೇಂದ್ರ ಹೆಗ್ಗಡೆ, ಎಡನೀರು ರಾಮಚಂದ್ರಮಠ, ದಾವಣಗೆರೆ ವಿರಕ್ತಮಠದ ಸ್ವಾಮೀಜಿಯವರಿ೦ದ ಸನ್ಮಾನ
    ಪ್ರತಿಶ್ಠಿತ ಸೀತಾನದಿ ಪ್ರಶಸ್ತಿ
    ಯಕ್ಷಸಾಹಿತ್ಯ ಶ್ರೀ ಪ್ರಶಸ್ತಿ
    ಕರ್ನಾಟಕ ನಾಟಕ ಅಕಾಡೆಮಿಯ “ಇಂದಿನ ರಂಗ ಕಲಾವಿದರು“ ಹೊತ್ತಿಗೆಯಲ್ಲಿ ರಘುರಾಮ ಶೆಟ್ಟಿಯವರ ಹೆಸರು ದಾಖಲಾಗಿದೆ
    ಪ್ರತಿಷ್ಠಿತ ಕಣಂಜಾರು ಆನಂದ ಶೆಟ್ಟಿ ಸ್ಮಾರಕ ಪ್ರಶಸ್ತಿ

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    Video ಅಪಘಾತಕ್ಕೀಡಾಗುವ ಅನಾಥ ಗೋವುಗಳ ಆಪತ್ಭಾಂದವ ಬೈಕ್ ಮೆಕ್ಯಾನಿಕ್ ಸಂಜೀವ

    14/10/2023

    ಬಯಲಾಟ ಯು.ಕೆ. ತಂಡದಿಂದ ಯಕ್ಷಗಾನ ಬ್ಯಾಲೆ ‘ಜಟಾಯು ಮೋಕ್ಷ’ ಯಶಸ್ವಿ ಪ್ರದರ್ಶನ

    07/12/2022

    ಕಾಲಮಿತಿ ಯಕ್ಷಗಾನ ಎಲ್ಲಾ ದೃಷ್ಟಿಯಿಂದಲೂ ಉತ್ತಮ ಆಯ್ಕೆ

    22/10/2022

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d