Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಾಹಿತಿಗೆ ಜಾತಿ, ಧರ್ಮವಿಲ್ಲ: ಡಾ. ಸೈಯ್ಯದ್ ಝಮೀರುಲ್ಲಾ ಶರೀಫ್
    ಊರ್ಮನೆ ಸಮಾಚಾರ

    ಸಾಹಿತಿಗೆ ಜಾತಿ, ಧರ್ಮವಿಲ್ಲ: ಡಾ. ಸೈಯ್ಯದ್ ಝಮೀರುಲ್ಲಾ ಶರೀಫ್

    Updated:24/02/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ೧೫ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಸಾಹಿತ್ಯ ಚಿಂತನೆ, ಮನೋರಂಜನೆ, ವೈಚಾರಿಕ ಮನೋಭಾವವನ್ನು ಹೆಚ್ಚಿಸುವುದರೊಂದಿಗೆ ಮಾನವನ ಹೃದಯಲ್ಲಿ ಬೇಕಾಗಿರುವ ಕರುಣೆ, ದಯೆಯನ್ನು ತುಂಬುತ್ತದೆ. ಆಮೂಲಕ ಕ್ಷೀಣಿಸುತ್ತಿರುವ ಭಾವನಾತ್ಮಕ ಸಂಬಂಧಗಳನ್ನು ಒಟ್ಟುಗೂಡಿಸಿಕೊಳ್ಳಿ ಎಂಬ ಮಾರ್ಮಿಕ ಧ್ವನಿ ಹೊರ ಹೊಮ್ಮಿಸುತ್ತದೆ. ಕನ್ನಡ ಅಭಿಮಾನ ಕನ್ನಡ ನಾಡಿನ ಸಂಸ್ಕೃತಿಯ ಜೊತೆಗೆ ಒಂದಾಗಬೇಕಿದೆ. ಸಾಹಿತಿ ಸಾಹಿತಿಯೇ ವಿನಃ ಆತನಿಗೆ ಜಾತಿ, ಧರ್ಮವಿಲ್ಲ ಎಂದು ಕರ್ನಾಟಕ ಜನಪದ ವಿವಿ ಸಿಂಡಿಕೇಟ್ ಸದಸ್ಯ ಡಾ. ಸೈಯ್ಯದ್ ಝಮೀರುಲ್ಲಾ ಶರೀಫ್ ಹೇಳಿದರು.

    ಅವರು ಕಿರಿಮಂಜೇಶ್ವರ ಶ್ರೀ ಅಗಸ್ತ್ಯೇಶ್ವರ ದೇವಸ್ಥಾನದ ಆವರಣದ ಉಳ್ಳೂರು ಮೂಕಜ್ಜಿ ವೇದಿಕೆಯಲ್ಲಿ ಜರುಗಿದ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕುಂದಾಪುರ ತಾಲೂಕು ಘಟಕದ ನೇತೃತ್ವದಲ್ಲಿ ಆಯೋಜನೆಗೊಂಡ ೧೫ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿಂಡಿಮ ೨೦೧೭ರ  ಸಮಾರೋಪ ನುಡಿಗಳನ್ನಾಡಿದರು.

    ಸಮ್ಮೇಳನಗಳು ಪ್ರತಿಯೊಬ್ಬರ ಮೇಲೂ ಸಾಂಸ್ಕೃತಿಕ ಜವಾಬ್ದಾರಿಯನ್ನು ಹೊತ್ತು ಕಳುಹಿಸುತ್ತದೆ. ಸಾಹಿತ್ಯ ಸಮ್ಮೇಳನ ಹೊಸ ಸಾಹಿತಿಗಳ ಸೃಷ್ಠಿಗೆ ಕಾರಣವಾಗಬೇಕು. ಪ್ರತಿ ಸಾಹಿತಿಯೂ ಸಾಂಸ್ಕೃತಿಕ ರಾಯಭಾರಿಯಾಗಿ ಕೆಲಸ ಮಾಡುತ್ತಾರೆ. ಆದ್ದರಿಂದ ಹೊಸಬರಿಗೆ ಅವಕಾಶ ನೀಡುವ ವಿಶಾಲ ಮನೋಭಾವ ನಮ್ಮದಾಗಬೇಕು. ಪ್ರಶಸ್ತಿ ಹಿಂದೆ ಬಿದ್ದಿರುವ ಸಾಹಿತಿಗಳು ಹೊಸ ಮೊಗ್ಗುಗಳನ್ನು ಅರಳಿಸುವ ಕೆಲಸ ಮಾಡುತ್ತಿಲ್ಲ ಎಂಬುದು ಖೇದಕರ ಎಂದು ವಿಷಾದ ವ್ಯಕ್ತಪಡಿಸಿದರು.

    ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಕನ್ನಡ ಶಾಲೆ ಉಳಿದರೆ ಮಾತ್ರವೇ ಸಾಧ್ಯವಿಲ್ಲ. ಕನ್ನಡ ಭಾಷೆ ಉಳಿಸಬೇಕಾದರೇ ಮನೆಗಳಲ್ಲಿ, ಮನದಲ್ಲಿ ಕನ್ನಡ ಕಟ್ಟುವ ಕಾರ್ಯವನ್ನು ಮಾಡಬೇಕಿದೆ. ಕವಿ ಗೋಪಾಲಕೃಷ್ಣ ಅಡಿಗ ಜನ್ಮಶತಾಬ್ದಿಯ ನೆನಪಿಗಾಗಿ ಅವರ ಹುಟ್ಟೂರಿನಲ್ಲಿಯೇ ಸಾಕ್ಷಿಕೇಂದ್ರವನ್ನು ಸ್ಥಾಪಿಸಲು ತಾಲೂಕು ಕಸಾಪ ಬದ್ಧವಾಗಿದೆ ಎಂದರು.

    Click here

    Click here

    Click here

    Click Here

    Call us

    Call us

    ಸಮ್ಮೇಳನದ ಸರ್ವಾಧ್ಯಕ್ಷ ಸತೀಶ್ ಚಪ್ಪರಿಕೆ ಸಮಾರೋಪ ನುಡಿಗೆ ಪ್ರತಿಕ್ರಿಯಿಸಿ ಇಡಿ ಸಮ್ಮೇಳನ ತನಗೆ ಖುಷಿ ನೀಡಿದ್ದು, ಪ್ರಪಂಚದ ಎಲ್ಲಾ ಪ್ರಶಸ್ತಿಗಿಂತಲೂ ಮಿಗಿಲಾದದ್ದು ಗೌರವ ದೊರೆತ ಸಂತಸ ಸಿಕ್ಕಿದೆ. ಸಮ್ಮೇಳನಾಧ್ಯಕ್ಷನಾದ ಬಳಿಕ ಸಾಹಿತ್ಯದಲ್ಲಿ ಮತ್ತಷ್ಟು ಗಂಭೀರವಾಗಿ ತೊಡಗಿಸಿಕೊಳ್ಳುವ ಜವಾಬ್ದಾರಿ ಬಂದಿದೆ. ಹುಟ್ಟೂರಿನ ನಂಟು ಹೆಚ್ಚಿದೆ. ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ಹಮ್ಮಿಕೊಳ್ಳುವ ಕನ್ನಡದ ಕಾರ್ಯಗಳಿಗೆ ಜೊತೆಯಾಗುವೆ ಎಂದರು.

    ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಎಎಸ್‌ಎನ್ ಹೆಬ್ಬಾರ್ ಸನ್ಮಾನಿಸಿದರು. ೧೫ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಸತೀಶ್ ಚಪ್ಪರಿಕೆ ಹಾಗೂ ತಾಲೂಕು ಕಸಾಪ ಅಧ್ಯಕ್ಷ ಡಾ. ಸುಬ್ರಹ್ಮಣ್ಯ ಭಟ್ ಅವರನ್ನು ಸನ್ಮಾನಿಸಲಾಯಿತು. ಸಮ್ಮೇಳನಕ್ಕಾಗಿ ಶ್ರಮಿಸಿದದವರನ್ನು ಗೌರವಿಸಲಾಯಿತು.

    ತಾಲೂಕು ಪಂಚಾಯತ್ ಸದಸ್ಯೆ ಶ್ಯಾಮಲಾ ಕುಂದರ್, ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ನಿವೃತ್ತ ಶಿಕ್ಷಕ ಸದಾಶಿವ ಶ್ಯಾನುಭೋಗ್, ದ್ರಾವಿಡ ಬ್ಯಾಹ್ಮಣ ಪರಿಷತ್ ಅಧ್ಯಕ್ಷ ಮಂಜುನಾಥ ಉಡುಪಿ, ವಿಶ್ರಾಂತ ಪ್ರಾಧ್ಯಾಪಕ ವಾಸುದೇವ ಕಾರಂತ ಕೊಡೇರಿ, ಕಿರಿಮಂಜೇಶ್ವರ ಜುಮ್ಮಾ ಮಸೀದಿಯ ಕೆ.ಎಂ. ಇರ್ಷಾದ್, ಕಸಪಾ ಜಿಲ್ಲಾ ಕಾರ್ಯದರ್ಶಿ ಸೂರಾಲು ನಾರಾಯಣ ಮಡಿ, ಕಾರ್ಕಳ ತಾಲೂಕು ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ, ಕುಂದಾಪುರ ತಾಲೂಕು ಕಸಾಪ ಕಾರ್ಯದರ್ಶಿ ಡಾ. ಕಿಶೋರ್ ಕುಮಾರ್, ಬೈಂದೂರು ಹೋಬಳಿ ಅಧ್ಯಕ್ಷ ಗಣಪತಿ ಹೋಬಳಿದಾರ್, ವಂಡ್ಸೆ ಹೋಬಳಿ ಅಧ್ಯಕ್ಷ ಚಂದ್ರ ಕೆ. ಹೆಮ್ಮಾಡಿ, ಕೋಟೇಶ್ವರ ಘಟಕ ಅಧ್ಯಕ್ಷ ಅಶೋಕ್ ತೆಕ್ಕಟ್ಟೆ ಮೊದಲಾದವರು ಉಪಸ್ಥಿತರಿದ್ದರು. ನಿವೃತ್ತ ಬ್ಯಾಂಕ್ ಅಧಿಕಾರಿ ಗೋವಿಂದ ಎಂ ಸ್ವಾಗತಿಸಿ, ರತನ್ ಬಿಜೂರು ವಂದಿಸಿದರು. ಉಪನ್ಯಾಸಕ ಪಾಂಡುರಂಗ ಎಂ. ಸನ್ಮಾನ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕ ಸುಬ್ರಮ್ಮಣ್ಯ ಜಿ. ಉಪ್ಪುಂದ ಕಾರ್ಯಕ್ರಮ ನಿರೂಪಿಸಿದರು.

           

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    2 × four =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.