Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಗನ್ನಡ ಅಧ್ಯಯನ ಕೇಂದ್ರ, ಅಡಿಗರ ಸಾಕ್ಷಿಕೇಂದ್ರ ಸ್ಥಾಪನೆಯಾಗಲಿ: ಚಪ್ಪರಿಕೆ
    ಊರ್ಮನೆ ಸಮಾಚಾರ

    ಕುಂದಗನ್ನಡ ಅಧ್ಯಯನ ಕೇಂದ್ರ, ಅಡಿಗರ ಸಾಕ್ಷಿಕೇಂದ್ರ ಸ್ಥಾಪನೆಯಾಗಲಿ: ಚಪ್ಪರಿಕೆ

    Updated:25/02/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಬೈಂದೂರು: ಪ್ರಾಚೀನ ಭಾರತೀಯ ಸಂಸ್ಕೃತಿ ಯಿಂದಾಗಿ ವಿಶ್ವದಲ್ಲಿ ಭಾರತ ಅಗ್ರ ಮಾನ್ಯವಾಗಿ ಗುರುತಿಸಲ್ಪಟ್ಟಿದೆ. ಕವಿಗಳಿಂದ ಸಾಹಿತ್ಯ ಕ್ಷೇತ್ರ ಸಮೃದ್ಧಗೊಂಡಿದೆ. ಕುಂದಗನ್ನಡ ಅಚ್ಚ ಕನ್ನಡ ಹಾಗೂ ಆಡು ಮಾತಿನ ಆತ್ಮೀಯ ಭಾಷೆಯಾಗಿದ್ದು ಇದಕ್ಕೆ ಸರಕಾರದ ವಿಶೇಷ ಮಾನ್ಯತೆ ದೊರಕಿಸಿ ಕೊಡುವುದರ ಜತೆ ಕುಂದಗನ್ನಡ ಸಾಹಿತ್ಯ ಅಕಾಡೆಮಿ ಕೇಂದ್ರ ಸ್ಥಾಪನೆ ಯಾಗಬೇಕು, ಕುಂದಗನ್ನಡ ಶಬ್ದ ಅಳಿವಿ ನಂಚಿನಲ್ಲಿದ್ದು ಇದನ್ನು ಸಂಗ್ರಹಿಸುವ ಜತೆ ಅಧ್ಯಯನ ಕೇಂದ್ರ ಆರಂಭಿಸುವ ಕಾರ್ಯ ಸಾಧ್ಯವಾಗಬೇಕು ಎಂದು ಹಿರಿಯ ಸಾಹಿತಿ ಡಾ| ಎಚ್‌.ವಿ. ನರಸಿಂಹಮೂರ್ತಿ ಹೇಳಿದರು.

    Click Here

    Call us

    Click Here

    ಅವರು ಕಿರಿಮಂಜೇಶ್ವರ ಅಗಸ್ತ್ಯೇಶ್ವರ ದೇವಸ್ಥಾನದಲ್ಲಿ ಉಳ್ಳೂರು ಮೂಕಜ್ಜಿ ವೇದಿಕೆಯಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕುಂದಾಪುರ ತಾಲೂಕು ಘಟಕದ ಆಶ್ರಯದಲ್ಲಿ ನಡೆದ 15ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಡಿಂಡಿಮ 2017 ಉದ್ಘಾಟಿಸಿ ಮಾತನಾಡಿದರು. ಸರಕಾರದ ಇಚ್ಛಾಶಕ್ತಿಯ ಕೊರತೆ ಯಿಂದಾಗಿ ಸಾಹಿತ್ಯ ಭಾಷಾ ಪ್ರತಿಷ್ಠಾನ ಮೈಸೂರಿನಲ್ಲಿ ಇರಬೇಕೊ ಅಥವಾ ಬೆಂಗಳೂರಿನಲ್ಲಿ ಇರಬೇಕೊ ಎಂಬ ಗೊಂದಲ ಉಂಟಾಗಿದ್ದು ಇದರಿಂದ ಕನ್ನಡ ಸಾಹಿತ್ಯ ಇಂದು ಆತಂಕದಲ್ಲಿದೆ ಎಂದರು.

    ಉಡುಪಿ ಕ.ಸಾ.ಪ. ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ಮಾತುಗಳ್ನಾಡಿ ಹಿಂಬಾಗಿಲ ಮೂಲಕ ಸರಕಾರಿ ಶಾಲೆಗಳನ್ನು ಆಂಗ್ಲ ಮಾಧ್ಯಮವನ್ನಾಗಿ ಮಾಡುವ ಪಿತೂರಿ ಮಾಡಲಾಗುತ್ತಿದೆ, ಇದರಿಂದ ಕನ್ನಡ ಶಾಲೆಗಳು ನೆಲಕಚ್ಚಿ ಹೋಗುತ್ತವೆ, ತರೆಮರೆಯಲ್ಲಿ ಈಗಾಗಲೇ 20ಕ್ಕೂ ಹೆಚ್ಚು ಆಂಗ್ಲ ಮಾಧ್ಯಮ ಶಾಲೆಗೆ ಅನುಮತಿ ನೀಡುವ ಪ್ರಯತ್ನಗಳಾಗುತ್ತಿವೆ, ಆಂಗ್ಲ ಮಾಧ್ಯಮ ವ್ಯಾಮೋಹದಿಂದ ಕನ್ನಡ ಶಾಲೆಗಳು ಇಂಗ್ಲಿಷ್‌ ಮಯವಾಗಿ ಮಾರ್ಪಾಡುಗೊಳ್ಳುವ ಕೆಲಸವಾಗು ತ್ತಿದ್ದು, ಇದರ ವಿರುದ್ಧ ಹೋರಾಟ ಮಾಡದಿದ್ದರೆ ಕನ್ನಡಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ ಎಂದರು.

    ಸಮ್ಮೇಳನದ ಅಧ್ಯಕ್ಷ ಹಿರಿಯ ಅಂಕಣಕಾರ ಸತೀಶ ಚಪ್ಪರಿಕೆ ಮಾತನಾಡಿ ನಮ್ಮ ಆಡು ಭಾಷೆಯನ್ನು ಮಾತನಾಡಲು ಹಿಂಜರಿಯುತ್ತಿರುವುದು ಸಾಂಸ್ಕೃತಿಕ ದುರಂತವಾಗಿದೆ, ಭಾಷೆ ಒಂದು ಪರಂಪರೆಯ ಸಂಸ್ಕೃತಿಯಾಗಿದ್ದು ಭಾಷೆ ಸಾಯಿತ್ತಿದೆ ಎಂದರೆ ನಮ್ಮ ಪರಂಪರಾ ಗತ ಸಂಸ್ಕೃತಿ ನಶಿಸುತ್ತಿದೆ ಎಂದರ್ಥ ಎಂದರು.

    ಈ ಸಂದರ್ಭದಲ್ಲಿ ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಪ್ರೊ| ಕನರಾಡಿ ವಾದಿರಾಜ ಭಟ್‌, ಜಿ.ಪಂ. ಸದಸ್ಯೆ ಗೌರಿ ದೇವಾಡಿಗ, ಕಿರಿಮಂಜೇಶ್ವರ ಅಗಸ್ತ್ಯೇಶ್ವರ ದೇಗುಲದ ಮಾಜಿ ಆಡಳಿತ ಧರ್ಮ ದರ್ಶಿ ಕೆ. ಉಮೇಶ ಶ್ಯಾನುಭೋಗ್‌, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ತಾ.ಯೋಜನಾಧಿಕಾರಿ ಅಮರಪ್ರಸಾದ್‌ ಶೆಟ್ಟಿ, ಅಗಸ್ತೆÂàಶ‌Ìರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪರುಶುರಾಮ, ಬೈಂದೂರು ಹೋಬಳಿ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಜಿ. ಉಪ್ಪುಂದ, ಜಿಲ್ಲಾ ಕಾರ್ಯದರ್ಶಿ ಸೂರುಲು ನಾರಾಯಣ, ಅಶೋಕ ತೆಕ್ಕಟ್ಟೆ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಕುಂದಾಪುರ ತಾಲೂಕು ಕಸಾಪ ಅಧ್ಯಕ್ಷ ಬೈಂದೂರು ಡಾ| ಸುಬ್ರಹ್ಮಣ್ಯ ಭಟ್‌ ಸ್ವಾಗತಿಸಿದರು, ಗಣಪತಿ ಹೋಬಳಿದಾರ ಮತ್ತು ವಿಶ್ವನಾಥ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು, ನಾರಾಯಣ ಐತಾಳ ನಿರ್ವಹಿಸಿದರು, ರವೀಂದ್ರ ಎಚ್‌ ವಂದಿಸಿದರು. ಬೆಳಗ್ಗೆ ಕುಂದಾಪುರ ತಾ.ಪಂ. ಅಧ್ಯಕ್ಷೆ ಜಯಶ್ರೀ ಎಸ್‌. ಮೊಗವೀರ ರಾಷ್ಟ್ರ ಧ್ವಜಾರೋಹಣ ನಡೆಸಿ ದರು. ಖಂಬದಕೋಣೆ ರೈತ ಸೇ.ಸ. ಸಂಘ ಉಪ್ಪುಂದ ಅಧ್ಯಕ್ಷ ಎಸ್‌.ಪ್ರಕಾಶ್ಚಂದ್ರ ಶೆಟ್ಟಿ ಕನ್ನಡ ತಾಯಿ ಭುವನೇಶ್ವರಿ ದಿಬ್ಬಣದ ಮೆರವಣಿಗೆಯನ್ನು ಉದ್ಘಾಟಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    12 − 3 =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.