Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಬಿಜೆಪಿಗೆ ಸೇರ್ಪಡೆ
    ಕರಾವಳಿ

    ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಬಿಜೆಪಿಗೆ ಸೇರ್ಪಡೆ

    Updated:08/03/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೆಂಗಳೂರು: ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಅವರು ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರಿಂದ ಪಕ್ಷದ ಧ್ವಜವನ್ನು ಸ್ವೀಕರಿಸುವ ಮೂಲಕ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು.

    Click Here

    Call us

    Click Here

    ಇದೇ ವೇಳೆ ಮೂಡಬಿದರೆಯ ಕಾಂಗ್ರೆಸ್ ನಾಯಕ ಮೇಘನಾಥ್ ಶೆಟ್ಟಿ, ಹೊಸಪೇಟೆಯ ಮಾಜಿ ಶಾಸಕ ರತನ್ ಸಿಂಗ್ ಕೂಡ ಬಿಜೆಪಿಗೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಆರ್. ಅಶೋಕ್, ವಿ ಸೋಮಣ್ಣ, ಕಾರ್ಕಳ ಸುನಿಲ್ ಕುಮಾರ್, ಮಾಜಿ ಸಚಿವ ನಾಗರಾಜ್ ಶೆಟ್ಟಿ, ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಹಾಗೂ ಇತರರು ಉಪಸ್ಥಿತರಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಕುಂದಾಪುರ ತಾಲೂಕಿನ ಕೋರ್ಗಿಯವರಾದ ಜಯಪ್ರಕಾಶ್ ಹೆಗ್ಡೆ ಅವರು ವೃತ್ತಿಯಲ್ಲಿ ವಕೀಲರು. ಮೊದಲ ಭಾರಿಗೆ ಬ್ರಹ್ಮಾವರ ಕ್ಷೇತ್ರದಿಂದ ಜನತಾ ಪರಿವಾರದ ಮೂಲಕ ಸ್ವರ್ಧಿಸಿ ಶಾಸಕರಾಗಿ ಆಯ್ಕೆಗೊಂಡು ಬಳಿಕ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಜನತಾ ಪರಿವಾರದ ಒಡಕಿನ ಹಿನ್ನೆಲೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದಿದ್ದರು. ಕ್ಷೇತ್ರ ಮರುವಿಂಗಡಣೆಯ ಬಳಿಕ ಬ್ರಹ್ಮಾವರ ಕ್ಷೇತ್ರ ಉಡುಪಿಯೊಂದಿಗೆ ವಿಲೀ ಗೊಂಡಾಗ ಕಾಂಗ್ರೆಸ್ ಸೇರ್ಪಡೆಯಾದ ಹೆಗ್ಡೆ ಅವರು ಕುಂದಾಪುರ ಕ್ಷೇತ್ರದಲ್ಲಿ ಅಭ್ಯರ್ಥಿಯಾದರು. ಅಲ್ಲಿ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರೆದುರು ಸೋಲು ಅನುಭವಿಸಬೇಕಾಯಿತು. ಸಂಸದರಾಗಿದ್ದ ಡಿ.ವಿ.ಸದಾನಂದಗೌಡ ಮುಖ್ಯಮಂತ್ರಿ ಯಾದ ಬಳಿಕ ನಡೆದ ಉಪ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ಕಾರ್ಕಳ ಅವರ ವಿರುದ್ಧ ಜಯಭೇರಿ ಬಾರಿಸಿ ಸಂಸತ್ ಪ್ರವೇಶಿಸಿದ್ದರು. ೨೦೧೪ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ ಸೋಲು ಅನುಭವಿಸಿದ್ದರು. ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ವಿಧಾನ ಪರಿಷತ್‌ಗೂ ಸ್ವರ್ಧಿಸಿ ಸೋಲು ಅನುಭವಿದ್ದ ಹೆಗ್ಡೆ ಅವರು ಬಹು ದಿನಗಳ ರಾಜಕೀಯ ಅಸ್ಥಿರತೆಯ ಬಳಿಕ ಅಂತಿಮವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

     

     

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    06/12/2025

    ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ

    06/12/2025

    ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌
    • ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d