Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಲ್ಲೂರು: ವಿಜಯನಗರ ಕಾಲದ ಕನ್ನಡ ಶಾಸನ ಪತ್ತೆ
    ಊರ್ಮನೆ ಸಮಾಚಾರ

    ಕೊಲ್ಲೂರು: ವಿಜಯನಗರ ಕಾಲದ ಕನ್ನಡ ಶಾಸನ ಪತ್ತೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೊಲ್ಲೂರು: ಸಮೀಪ ಹರವರಿಯಲ್ಲಿ ವಿಜಯನಗರ ಕಾಲದ ಕನ್ನಡ ಶಾಸನ ಪತ್ತೆಯಾಗಿದ್ದು, ಶಾಸನ ಆರಂಭಿಕ ಬರಹ ಸಂಪೂರ್ಣವಾಗಿ ಅಳಿಸಿ ಹೋಗಿದೆ. ಶಾಸನದ ಕೆಳಗಿನ ೧೨ ಸಾಲುಗಳು ಮಾತ್ರ ಸ್ಪಷ್ಟವಾಗಿದ್ದು, ಶಾಸನ ಬರಹದ ಪ್ರಕಾರ ಹರವರಿಯ ಭೂಮಿ ಶ್ರೀ ತಿಂಮಂಣ ಗುರುರಾಯರಿಗೆ ಆಯುಷ್ಯ ಆರೋಗ್ಯ ಅಭಿವೃದ್ಧಿಯಾಗಲೆಂದು ದೇವರಾಯಪುರದ ಮಹಾಜನಂಗಳಿಗೆ ನೀರನೆರೆದು ದಾನವಾಗಿ ನೀಡಲಾಯಿತೆಂದು ಹೇಳಲಾಗಿದೆ. ಪುರಾತತ್ವ ವಿದ್ವಾಂಸ ಪ್ರೊ.ಟಿ.ಮುರುಗೇಶಿ ಪತ್ತೆಮಾಡಿದ್ದಾರೆ.

    Click Here

    Call us

    Click Here

    ಆಯತಾಕಾರದ ಸುಮಾರು ೧೧೦ ಸೆ.ಮೀ ಉದ್ದದ ಕಲ್ಲು ಚಪ್ಪಡಿ ಮೇಲ್ಭಾಗ ಕುದುರೆ ಲಾಳಾಕೃತಿಯಲ್ಲಿ ವಿನ್ಯಾಸಗೊಳಿಸಲಾಗಿದ್ದು, ಮೇಲಿನ ಪಟ್ಟಿಕಯಲ್ಲಿ ಸೂರ್ಯ-ಚಂದ್ರ, ಶಿವಲಿಂಗ, ದೀಪದ ಕಂಭ ಮತ್ತು ರಾಜ ಶಾಸನ ಎಂಬುದರ ಪ್ರತೀಕವಾಗಿ ಚಿತ್ರಿಸಿರುವ ಖಡ್ಗವಿದೆ.
    ಶಾಸನ ಬರಹದ ಪ್ರಕಾರ ಹರವರಿಯ ಭೂಮಿ ಶ್ರೀ ತಿಂಮಂಣ ಗುರುರಾಯರಿಗೆ ಆಯುಷ್ಯ ಆರೋಗ್ಯ ಅಭಿವೃದ್ಧಿಯಾಗಲೆಂದು ದೇವರಾಯಪುರದ ಮಹಾಜನಂಗಳಿಗೆ ನೀರನೆರೆದು ದಾನವಾಗಿ ನೀಡಲಾಯಿತೆಂದು ಹೇಳಲಾಗಿದೆ. ಈ ದಾನ ಶಾಸನಕ್ಕೆ ಸಾಕ್ಷಿಗಳು ತಿಮ್ಮಂಣಗಳು, ಅವಧಾನಿ ನಾಗಂಣಗಳು ಎಂದು ಹೇಳಲಾಗಿದೆ.

    ಶಾಸನದ ಮೇಲಿನ ಬರಹ ಪೂರ್ತಿಯಾಗಿ ಅಳಿಸಿ ಹೋಗಿರುವದರಿಂದ, ಶಾಸನ ನೀಡಿದ ರಾಜ ಮನೆತನ ಮತ್ತು ರಾಜ ಯಾರು ಎಂದು ತಿಳಿಯುವುದಿಲ್ಲ. ಆದರೆ ಕರಾವಳಿ ಮತ್ತು ಮಲೆನಾಡಿನಲ್ಲಿ ದೊರೆಯುವ ವಿಜಯನಗರದ ಶಾಸನಗಳಲ್ಲಿ ಶಿವಲಿಂಗವನ್ನು ಪ್ರಭಾವಳಿಯಲ್ಲಿ ತೋರಿಸಲಾಗಿರುತ್ತದೆ ಹಾಗೂ ಶಾಸನದ ಬರಹದ ಶೈಲಿ ವಿಜಯನಗರದ ಬರಹದ ಶೈಲಿ ಹೋಲುತ್ತದೆ. ಇವುಗಳ ಆಧಾರದ ಮೇಲೆ ಶಾಸನದ ಕಾಲವನ್ನು ವಿಜಯನಗರದ ಕಾಲದ ಶಾಸನವೆಂದು ಪರಿಗಣಿಸಲಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

    ಶಾಸನೋಕ್ತ ತಿಂಮಂಣ ಗುರುರಾಯರನ್ನು ವಿಜಯನಗರದ ಪ್ರಖ್ಯಾತ ಚಕ್ರವರ್ತಿ ಕೃಷ್ಣದೇವರಾಯನ ಪ್ರಧಾನ ಮಂತ್ರಿಯಾಗಿರಬೇಕೆಂದು ಗುರುತಿಸಲಾಗಿದೆ. ದಾನವನ್ನು ಸ್ವೀಕರಿಸಿದ ದೇವರಾಯಪುರದ ಮಹಾಜನಂಗಳು ಶೃಂಗೇರಿಯ ದೇವರಾಯಪುರದ ಮಹಾಜನಗಳೆಂದು ಗುರುತಿಸಲಾಗಿದೆ. ಈ ಶಾಸನ ಅಧ್ಯಯನಕ್ಕೆ ಹರವರಿ ರವೀಂದ್ರ ಶೆಟ್ಟಿ, ಜಯಕರ ಶೆಟ್ಟಿ, ಕೊಲ್ಲೂರು ಮುರುಳೀಧರ ಹೆಗಡೆ ಮತ್ತು ಸುಭಾಷ್ ಸಹಕರಿಸಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    twenty + nine =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.