Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗೋಳಿಹೊಳೆ: ನಗದು ರಹಿತ ವ್ಯವಹಾರದ ಕುರಿತಾಗಿ ಒಂದು ದಿನದ ಕಾರ್ಯಾಗಾರ
    ಊರ್ಮನೆ ಸಮಾಚಾರ

    ಗೋಳಿಹೊಳೆ: ನಗದು ರಹಿತ ವ್ಯವಹಾರದ ಕುರಿತಾಗಿ ಒಂದು ದಿನದ ಕಾರ್ಯಾಗಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೇಂದ್ರ ಸರಕಾರ ಕೈಗೊಂಡ ಆರ್ಥಿಕ ಸುಧಾರಣೆಯ ಮುಂದಿನ ಭಾಗವಾಗಿ ಬ್ಯಾಂಕ್ ಹಾಗೂ ಇತರ ಹಣಕಾಸು ಕ್ಷೇತ್ರದಲ್ಲಿ ನಗದು ರಹಿತವಾದ ವ್ಯವಹಾರಗಳನ್ನು ದೈನಿಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಉಡುಪಿ ಜಿಲ್ಲಾ ಅಗ್ರಿಣಿ ಬ್ಯಾಂಕಿನ ಮುಖ್ಯಪ್ರಬಂಧಕ ಫ್ರಾನ್ಸಿಸ್ ಬೋರ‍್ಗೆ ಹೇಳಿದರು.

    Click Here

    Call us

    Click Here

    ಗೋಳಿಹೊಳೆ ಗ್ರಾಮ ಪಂಚಾಯತ್, ಸ್ಥಳೀಯ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್, ನಬಾರ್ಡ್ ಮತ್ತು ಜ್ಞಾನಜ್ಯೋತಿ ಆರ್ಥಿಕ ಸಲಹಾ ಕೇಂದ್ರ ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ, ನಗದು ರಹಿತ ವ್ಯವಹಾರದ ಕುರಿತಾಗಿ ನಡೆದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

    ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಪ್ರಾದೇಶಿಕ ಪ್ರಬಂಧಕ ಎಸ್. ಜಿ. ಗಚ್ಚಿನ ಮಠ್ ಇವರು ಬ್ಯಾಂಕಿನ ವ್ಯವಹಾರಗಳ ಬಗ್ಗೆ ಮಾಹಿತಿ ನೀಡಿದರು. ಹಾಗೂ ಪ್ರಧಾನಮಂತ್ರಿ ಜೀವನ ಸುರಕ್ಷಾ ವಿಮಾ ಯೋಜನೆಯ ಫಲಾನುಭವಿಗಳಿಗೆ ತಲಾ ರೂ. ೨ ಲಕ್ಷದ ಪರಿಹಾರ ಧನ ವಿತರಿಸಿದರು. ಶರತ್ ಕುಮಾರ್ ಮತ್ತು ಜಿ. ಜಿ. ಹೆಗ್ಡೆ ನಗದು ರಹಿತ ವ್ಯವಹಾರ ಹಾಗೂ ಆರ್ಥಿಕ ಸಾಕ್ಷರತೆ, ಸಬಲೀಕರಣಗಳ ಬಗ್ಗೆ ತರಗತಿ ನಡೆಸಿದರು. ರುಡ್‌ಸೆಟ್‌ನ ರಾಘವೇಂದ್ರ, ಸಿಂಡ್‌ಆರ್ ಸೆಟ್‌ನ ಸಂತೋಷ್ ತಮ್ಮ ತರಬೇತಿ ಸಂಸ್ಥೆಯ ಕುರಿತಾದ ಮಾಹಿತಿ ನೀಡಿದರು.

    ಅಧ್ಯಕ್ಷತೆ ವಹಿಸಿದ್ದ ಗೋಳಿಹೊಳೆ ಗ್ರಾಪಂ ಅಧ್ಯಕ್ಷ ರಾಜು ಪೂಜಾರಿ ಸರಕಾರದ ಯೋಜನೆಗಳು, ಕಾರ್ಯಕ್ರಮಗಳ ಬಗ್ಗೆ ಸ್ಥೂಲ ಚಿತ್ರಣ ನೀಡಿದರು. ಪಿಡಿಒ ಚಂದ್ರಶೇಖರ್, ಬ್ಯಾಂಕಿನ ಹಿರಿಯ ಅಧಿಕಾರಿ ಟಿ. ಆರ್. ಶೆಟ್ಟಿ ಉಪಸ್ಥಿತರಿದ್ದರು. ವಾದಿರಾಜ ಧನ್ಯ ಪ್ರಾಸ್ತಾವಿಸಿದರು. ಕವಿಗ್ರಾ ಬ್ಯಾಂಕಿನ ಗೋಳಿಹೊಳೆ ಶಾಖಾ ಪ್ರಬಂಧಕ ಸುಬ್ರಹ್ಮಣ್ಯ ರಾವ್ ಸ್ವಾಗತಿಸಿ, ಜ್ಞಾನಜ್ಯೋತಿ ಸಂಸ್ಥೆಯ ಆಶಾಲತಾ ನಿರೂಪಿಸಿದರು. ವಾಸುದೇವ ಗೌಡ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    nineteen − twelve =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.