Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರದ ಉದಯೋನ್ಮುಖ ಕ್ರೀಡಾಪಟು ವಿಶ್ವನಾಥ ಗಾಣಿಗ
    ವ್ಯಕ್ತಿ - ವಿಶೇಷ

    ಕುಂದಾಪುರದ ಉದಯೋನ್ಮುಖ ಕ್ರೀಡಾಪಟು ವಿಶ್ವನಾಥ ಗಾಣಿಗ

    Updated:28/10/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಸುನಿಲ್ ಬೈಂದೂರು | ಕುಂದಾಪ್ರ ಡಾಟ್ ಕಾಂ | ಮೇ. 2012.
    ಸಾಧನೆಯೆಂಬುದು ಯಾರೊಬ್ಬರ ಸೊತ್ತಲ್ಲ. ಏನನ್ನಾದರೂ ಸಾಧಿಸಬೇಕೆಂಬ ಹಂಬಲ, ಆತ್ಮಸ್ಥೈರ್ಯ ಜೊತೆಗೊಂದಿಷ್ಟು ಕಠಿಣ ಪರಿಶ್ರವ ಇವಿಷ್ಟಿದ್ದರೆ ಸಾಕು ವ್ಯಕ್ತಿ ತಾನಾಗಿಯೇ ಬೆಳೆಯುತ್ತಾನೆ. ಸಾಧಿಸಿಯೇ ತೀರುತ್ತಾನೆ. ಬಹುಶಃ ಆತನಿಗೆ ಇದಕ್ಕಿಂತ ಹೆಚ್ಚಿನ ಆತ್ಮತೃಪ್ತಿ ಬೇರಾವುದೂ ನೀಡದು.

    Click Here

    Call us

    Click Here

    ಬದುಕಿನಲ್ಲಿ ಅಡ್ಡಲಾದ ಟೀಕೆಯನ್ನೇ ಮೆಟ್ಟಿಲಾಗಿಸಿಕೊಂಡು, ಪ್ರೋತ್ಸಾಹದ ಮಾತುಗಳಿಂದ ಮಾರ್ಗವೊಂದನ್ನು ಕಂಡುಕೊಂಡು, ಮನಸ್ಸು ಮಾಡಿದರೆ ಏನನ್ನಾದರೂ ಸಾಧಿಸಬಹುದು ಎಂಬುದನ್ನು ತೋರಿಸಿಕೊಟ್ಟವರು ಕುಂದಾಪುರ ತಾಲೂಕು, ದೇವಲ್ಕುಂದ ಗ್ರಾಮದ ಬಾಳೆಕೆರೆಯ ಉದಯೋನ್ಮುಖ ಕ್ರೀಡಾಪಟು ವಿಶ್ವನಾಥ ಬಿ. ಪವರ್ ಲಿಫ್ಟಿಂಗ್, ವೇಯ್ಟ್ ಲಿಫ್ಟಿಂಗ್, ಡೆಡ್ ಲಿಫ್ಟಿಂಗ್, ಬಾಡಿ ಬಿಲ್ಡಿಂಗ್ ಕ್ಷೇತ್ರದಲ್ಲಿ ವಿಶೇಷ ಛಾಪು ಮೂಡಿಸಿರುವ ಇವರು ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದಲ್ಲೊಂದು ದಾಖಲೆಯನ್ನು ಬರೆದು, ರಾಜ್ಯ-ರಾಷ್ಟ್ರಮಟ್ಟದಲ್ಲೂ ಮಿಂಚಿ ಅಪಾರ ಮೆಚ್ಚುಗೆ ಗೆ ಪಾತ್ರರಾದವರು. ಕುಂದಾಪ್ರ ಡಾಟ್ ಕಾಂ ಲೇಖನ.ಕುಂದಾಪ್ರ ಡಾಟ್ ಕಾಂ ಲೇಖನ.

    ಚಿಕ್ಕಂದಿನಿಂದಲೂ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದ ಇವರನ್ನು ಆಕರ್ಷಿಸಿದ್ದು ಪವರ್ ಲಿಫ್ಟಿಂಗ್, ವೇಯ್ಟ್ ಲಿಫ್ಟಿಂಗ್ ನಂತಹ ಗಟ್ಟಿಗರ ಕ್ಷೇತ್ರ. ಯಾವುದೂ ತನಗೆ ಸಾಧ್ಯವಾದುದ್ದಲ್ಲ ಎಂಬುದನ್ನು ತಮ್ಮ ಮೊದಲ ಪ್ರಯತ್ನದಲ್ಲಿಯೇ ತೋರಿಸಿಕೊಟ್ಟ ಇವರ ಹೆಗ್ಗಳಿಕೆ, ಮೊದಲ ಬಾರಿಗೆ ಇವರು ಶ್ರೀ ಶಾರದಾ ಕಾಲೇಜು ಬಸ್ರೂರಿನಲ್ಲಿ ನಡೆದ ವಿಶ್ವವಿದ್ಯಾಲಯ ಮಟ್ಟದ 74 ಕೆ.ಜಿ. ಒಳಗಿನ ಕುಸ್ತಿ ಛಾಂಪಿಯನ್ ಶಿಪ್ನಲ್ಲಿ ತೃತೀಯ ಬಹುಮಾನವನ್ನು ತಮ್ಮದಾಗಿಸಿಕೊಂಡರು. ಬಳಿಕ ಮಂಗಳೂರು ಗೋವಿಂದ ದಾಸ್ ಕಾಲೇಜಿನಲ್ಲಿ ನಡೆದ ವಿಶ್ವವಿದ್ಯಾನಿಲಯ ಮಟ್ಟದ 75 ಕೆ. ಜಿ ಒಳಗಿನವರ ಪವರ್ ಲಿಫ್ಟಿಂಗ್ ಛಾಂಪಿಯನ್ ಶಿಪ್ನಲ್ಲಿ ದ್ವಿತೀಯ ಸ್ಥಾನ ಪಡೆದರು. ಬಳಿಕ ಇಂಡಿಯನ್ ಪವರ್ ಲಿಫ್ಟಿಂಗ್ ಫೆಡರೇಶನ್ ಇಂಟರ್ ನ್ಯಾಶನಲ್, ಏಷ್ಯನ್ ಪವರ್ ಲಿಫ್ಟಿಂಗ್ ಪೆಡರೇಶನ್ ಹಾಗೂ ಇಂಡಿಯನ್ ಒಲಂಪಿಕ್ಸ್ ಅಸೋಸಿಯೇಶನ್ ಸಯುಂಕ್ತಾಶ್ರಯದಲ್ಲಿ ಸೇಲಂನಲ್ಲಿ ಆಯೋಜಿಸಲಾಗಿದ್ದ ಪವರ್ ಲಿಫ್ಟಿಂಗ್ ಛಾಂಪಿಯನ್ಶಿಪ್ ನ ಜೂನಿಯರ್ ವಿಭಾಗದಲ್ಲಿ ತೃತೀಯ ಸ್ಥಾನವನ್ನೂ, ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ನಡೆದ ವಿಶ್ವವಿದ್ಯಾನಿಲಯ ಮಟ್ಟದ ದೇಹದಾಡ್ಯ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದ ಇವರು ಅಲ್ಲಿಯೇ ಜರುಗಿದ ಛಾಂಪಿಯನ್ಶಿಪ್ನ ಡೆಡ್ಲಿಫ್ಟ್ ವಿಭಾಗದಲ್ಲಿ 240 ಕೆ.ಜಿ ಭಾರವನ್ನು ಎತ್ತುವ ಮೂಲಕ ವಿಶ್ವವಿದ್ಯಾನಿಲಯ ಮಟ್ಟದಲ್ರ್ಲೆಂದು ದಾಖಲೆಯನ್ನು ಸೃಷ್ಟಿಸಿದರು. 2012ರಲ್ಲಿ ಅಂತರಾಷ್ಟ್ರೀಯ ಮಟ್ಟದ ಸ್ವರ್ಧೆ ಏಷ್ಯನ್ ಕ್ಲಾಸಿಕ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಷ್ ನಲ್ಲಿ 1 ಬೆಳ್ಳಿ ಹಾಗೂ ಕಂಚಿನ ಪದಕ ಗಳಿಸಿದ್ದರು.

    ಇತರ ಕ್ರೀಡೆಗಳಲ್ಲೂ ಪರಿಣತಿಯನ್ನು ಹೊಂದಿದ್ದ ಇವರು ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಗೆ ಆಯೋಜಿಸಿದ್ದ ದಸರಾ ಕ್ರೀಡಾಕೂಟದಲ್ಲಿ ಗುಂಡೆಸೆತದಲ್ಲಿ ದ್ವಿತೀಯ ಸ್ಥಾನವನ್ನು ಭಂಡಾರ್ಕಾರ್ಸ್ ಕಾಲೇಜು ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸುತ್ತಿದ್ದ ಕ್ರೀಡಾಕೂಟದ ರೀಲೆ, ಹ್ಯಾಮರ್ ತ್ರೋ, ಲಾಂಗ್ಜಂಪ್, ಬಾಡಿಬಿಲ್ಡಿಂಗ್ ಮುಂತಾದವುಗಳಲ್ಲಿ ಪ್ರಥಮ, ದ್ವಿತೀಯ ಸ್ಥಾನವನ್ನು ಪಡೆದುದಲ್ಲದೆ ಬಂಟ್ವಾಳದಲ್ಲಿ ನೆತಾಜಿ ಯುವಕ ಮಂಡಲ ಆಯೋಜಿಸಿದ್ದ ಪವರ್ ಲಿಫ್ಟಿಂಗ್ ಛಾಂಪಿಯನ್ಶಿಪ್ನಲ್ಲಿ ತೃತೀಯ ಸ್ಥಾನವನ್ನು ಪಡೆದಿದ್ದರು.

    ಯುವ ಪ್ರತಿಭೆಯ ಈ ಸಾಧನೆಯನ್ನು ಮೆಚ್ಚಿ ಬಾರ್ಕೂರಿನ ಸೋಮಕ್ಷತ್ರೀಯ ಸಂಘ, ಬಾಳೆಕೆರೆಯ ನಾಗರೀಕರು, ಗಂಗೊಳ್ಳಿ ಪಂಚಾಗಂಗಾವಳಿ ಬಳಗ, ಅಂಕದಕಟ್ಟೆ ಶ್ರೀ ರಾಮ ಸ್ಫೋರ್ಟ್ಸ್  ಕ್ಲಬ್, ಗಂಗೊಳ್ಳಿಯ ಶ್ರೀ ಗುರುರಾಘವೇಂದ್ರ ಸ್ಫೋಟರ್್ಸಕ್ಲಬ್, ತಾಲೂಕು ಪಂಚಾಯತ್ ಸಮಾಜ ಕಲ್ಯಾಣ ಇಲಾಖೆ, ಭಂಡಾರ್ಕಾರ್ಸ್ ಹಳೆ ವಿದ್ಯಾರ್ಥಿ ಸಂಘ, ಜೆ.ಸಿ.ಐ ಕುಂದಾಪುರ ಮುಂತಾದ ಸಂಘ-ಸಂಸ್ಥೆಗಳು ಗುರುತಿಸಿ ಸನ್ಮಾನಿಸಿವೆ.

    Click here

    Click here

    Click here

    Call us

    Call us

    ಬಾಳೆಕೆರೆಯ ಭಾಸ್ಕರ್ ಗಾಣಿಗ ಮತ್ತು ಪದ್ಮಾವತಿ ದಂಪತಿಗಳ ಪುತ್ರರಾದ ವಿಶ್ವನಾಥ, ಹರ್ಕೂಲಸ್ ಜಿಮ್ನಿಶಿಯಂನ ಪ್ರಶಾಂತ ಶೇರಿಗಾರ್ ಇವರ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಕ್ರೀಡೆಯಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲೂ ಗುರುತಿಸಿಕೊಳ್ಳಬೇಕೆಂಬ ಆಕಾಂಕ್ಷೆ ಹೊಂದಿರುವ ಇವರು, ಸಾಂಸ್ಕ್ರತಿಕ ರಂಗದಲ್ಲೂ ಸೈ ಏನಿಸಿಕೊಂಡವರು. ಬಾಳೆಕೆರೆ, ಕರ್ಕುಂಜೆಯಲ್ಲಿ ಪ್ರಾಥಮಿಕ ಶಿಕ್ಷಣವನ್ನು, ಸ. ಪೂ. ಕಾಲೇಜು ವಂಡ್ಸೆಯಲ್ಲಿ ಪಿ.ಯು ಶಿಕ್ಷಣವನ್ನು ಪಡೆದ ಇವರು ಕಳೆದ ಶೈಕ್ಷಣಿಕ ವರ್ಷದಲ್ಲಿ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಬಿ.ಸಿ.ಎ ಪದವಿಯನ್ನು ಮುಗಿಸಿ ಇದೀಗ ಉನ್ನತ ವ್ಯಾಸಂಗದ ಹಂಬಲದಲ್ಲಿದ್ದಾರೆ. ಕುಂದಾಪ್ರ ಡಾಟ್ ಕಾಂ ಲೇಖನ.

    ಕ್ರೀಡಾಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿ ರಾಷ್ಟ್ರ ಮಟ್ಟದಲ್ಲೂ ಗುರುತಿಸಿಕೊಂಡಿರುವ ಈ ಯುವ ಪ್ರತಿಭೆಗೆ ಮತ್ತಷ್ಟು ಪ್ರೋತ್ಸಾಹ, ಅವಕಾಶಗಳು ದೊರೆಯುವಂತಾಗಲಿ. ಇವರ ಭವಿಷ್ಯದ ಕನಸುಗಳು ನನಸಾಗಲಿ ಎಂದು ಕುಂದಾಪ್ರ ಡಾಟ್ ಕಾಂ ಹಾರೈಸುತ್ತದೆ.

    Vishwanath-Ganiga vishwanath ganiga balekere sports6 Vishwanath-Ganiga-balekere

    Like this:

    Like Loading...

    Related

    B. Vishwanath Ganiga Balekere Kundapur Sports
    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    Video ಅಪಘಾತಕ್ಕೀಡಾಗುವ ಅನಾಥ ಗೋವುಗಳ ಆಪತ್ಭಾಂದವ ಬೈಕ್ ಮೆಕ್ಯಾನಿಕ್ ಸಂಜೀವ

    14/10/2023

    ಕಾಡಿನೊಳಕ್ಕೆ ಎಸೆದಿದ್ದ ಏಳು ದಿನದ ಹಸುಳೆಯ ರಕ್ಷಣೆ

    01/12/2021

    ಸೃಜನಶೀಲ ವ್ಯಕ್ತಿತ್ವಕ್ಕೆ ಕೈಗನ್ನಡಿ ನರೇಂದ್ರ ಕುಮಾರ್ ಕೋಟ

    07/09/2021

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌
    • ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d