Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗೌರವ, ಭಕ್ತಿಯಿಂದಲೇ ಧರ್ಮದ ನೆಲೆಗಟ್ಟು ಗಟ್ಟಿಯಾಗಲಿದೆ: ಕೇಶವಮೂರ್ತಿ
    ಊರ್ಮನೆ ಸಮಾಚಾರ

    ಗೌರವ, ಭಕ್ತಿಯಿಂದಲೇ ಧರ್ಮದ ನೆಲೆಗಟ್ಟು ಗಟ್ಟಿಯಾಗಲಿದೆ: ಕೇಶವಮೂರ್ತಿ

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ: ಕಳೆದ ಹಲವು ವರ್ಷಗಳಿಂದ ಹಿಂದು ಸಮಾಜದ ಮೇಲೆ ನಿರಂತರವಾಗಿ ಅಕ್ರಮಣಗಳು, ಅನ್ಯಾಯ, ಮುಸ್ಲಿಮ್ ದೌರ್ಜನ್ಯ ಹೆಚ್ಚಾಗುತ್ತಿದೆ. ಇದನ್ನು ತಡೆಯಬೇಕಾದರೆ ಹಿಂದುತ್ವದ ಬಗ್ಗೆ ಸ್ಪಷ್ಟವಾಗಿ ತಿಳಿದುಕೊಂಡು ಹಿಂದುತ್ವದ ಶಕ್ತಿ ಮೈಗೂಡಿಸಿಕೊಳ್ಳಬೇಕು. ಭಾರತದ ಶ್ರೇಷ್ಠತೆ, ಹಿಂದುತ್ವದ ಶ್ರೇಷ್ಠತೆಯನ್ನು ಮನಗಾಣಬೇಕು. ಹಿಂದುತ್ವದ ಬಗ್ಗೆ ಗೌರವ, ಭಕ್ತಿ ಬಂದಾಗ ನಮ್ಮನ್ನು ಯಾರಿಂದಲೂ ಅಲುಗಾಡಿಸಲು ಸಾಧ್ಯವಿಲ್ಲ ಎಂದು ಹಿಂದು ಜಾಗರಣ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ ಸಂಪರ್ಕ ಪ್ರಮುಖ್ ದೊ. ಕೇಶವಮೂರ್ತಿ ಹೇಳಿದರು.

    Click Here

    Call us

    Click Here

    ಅವರು ಗಂಗೊಳ್ಳಿಯ ಹಿಂದು ಜಾಗರಣ ವೇದಿಕೆ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ವೀರೇಶ್ವರ ದೇವಸ್ಥಾನದ ವಠಾರದಲ್ಲಿ ಭಾನುವಾರ ಜರಗಿದ ೫೦೫ ಕಲಶಗಳ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ ಧಾರ್ಮಿಕ ಸಭೆಯಲ್ಲಿ ದಿಕ್ಸೂಚಿ ಭಾಷಣ ಮಾಡಿ ಮಾತನಾಡಿದರು.

    ಸ್ವಾತಂತ್ರ್ಯಾನಂತರದ ಹಿಂದುತ್ವವನ್ನು ಅಲುಗಾಡಿಸುವ ಪ್ರಯತ್ನ ನಡೆಯುತ್ತಿದೆ. ಗೋಮಾತೆ ಹಿಂದೂಗಳಿಗೆ ಶ್ರದ್ಧೆ. ಅಕ್ರಮ ಗೋಸಾಗಾಟ, ಗೋಹತ್ಯೆ ವಿರುದ್ಧ ಹಿಂದು ಜಾಗರಣ ವೇದಿಕೆ ಹೋರಾಟ ನಡೆಸಲಿದೆ. ಲವ್ ಜಿಹಾದ್ ಮೂಲಕ ಹಿಂದು ಯುವತಿಯರಿಗೆ ವಿವಿಧ ಆಮಿಷಗಳನ್ನು ತೋರಿಸಿ ಪುಸಲಾಯಿಸಿ ಬೇರೆ ಬೇರೆ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಕಾರ್ಯ ನಡೆಯುತ್ತಿದೆ. ಮತಾಂತರದ ಪಿಡುಗು ಹೆಚ್ಚಾಗುತ್ತಿದ್ದು, ಹಿಂದು ಧರ್ಮದ ಅನೇಕರನ್ನು ಈ ಬಲೆಗೆ ಬೀಳಿಸಲಾಗುತ್ತಿದೆ. ಮತಾಂತರ, ಲವ್ ಜಿಹಾದ್, ಅನ್ಯಾಯ, ಅಕ್ರಮಣದ ವಿರುದ್ಧ ಹಿಂದು ಜಾಗರಣ ವೇದಿಕೆ ಸದಾ ಹೋರಾಟ ನಡೆಸಲಿದೆ ಎಂದು ಅವರು ಹೇಳಿದರು.

    ಕುಟುಂಬ ಯೋಜನೆ ಮೂಲಕ ಹಿಂದುಗಳ ಹೊಟ್ಟೆಗೆ ಕತ್ತರಿ ಹಾಕುತ್ತಿರುವ ಸರಕಾರ ಶಾದಿ ಭಾಗ್ಯದ ಮೂಲಕ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡುತ್ತಿದೆ. ದೇವಾಲಯದ ಹುಂಡಿಗಳ ಹಣವನ್ನು ಮಸೀದಿ, ಚರ್ಚ್‌ಗಳಿಗೆ ನೀಡುತ್ತಿದೆ. ಅಲ್ಪಸಂಖ್ಯಾತರ ಹಜ್ ಯಾತ್ರೆಗೆ ಸಾವಿರಾರು ಕೋಟಿ ರೂ. ಖರ್ಚು ಮಾಡುತ್ತಿರುವ ಸರಕಾರ ಹಿಂದುಗಳ ತೀರ್ಥ ಕ್ಷೇತ್ರದ ಯಾತ್ರೆಗೆ ಯಾವುದೇ ಅನುದಾನ ನೀಡುತ್ತಿಲ್ಲ. ದೇವಸ್ಥಾನದ ಹುಂಡಿಗಳ ಹಣ ದೇವಾಲಯದ ಕಾರ್ಯಗಳಿಗೆ ವಿನಿಯೋಗ ಆಗಬೇಕು ಎಂದು ಆಗ್ರಹಿಸಿದ ಅವರು ಮುಂದಿನ ದಿನಗಳಲ್ಲಿ ರಾಮ ಮಂದಿರ ನಿರ್ಮಾಣದ ಹೋರಾಟ ಪ್ರಾರಂಭವಾಗಲಿದೆ ಎಂದು ಅವರು ಹೇಳಿದರು.

    ಆಶೀರ್ವಚನ ನೀಡಿ ಮಾತನಾಡಿದ ಕಾಸರಗೋಡು ಕೊಂಡೆವೂರು ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮ ಮಠದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ, ಧರ್ಮ ಮತ್ತು ದೇಶವನ್ನು ಉಳಿಸಿಕೊಳ್ಳಲು ಹಿಂದು ಸಮಾಜಬಾಂಧವರು ಒಗ್ಗಟ್ಟಿನಿಂದ ಪ್ರಯತ್ನಿಸಬೇಕು. ಹಿಂದುತ್ವದ ಜಾಗೃತಿ ಆಗಬೇಕು. ಹಿಂದುತ್ವವನ್ನು ದುರ್ಬಲಗೊಳಿಸುವುದರ ಬಗ್ಗೆ ಎಚ್ಚರ ವಹಿಸಬೇಕು. ಸಂಸ್ಕೃತಿ, ಸಂಸ್ಕಾರಗಳನ್ನು ರಕ್ಷಣೆ ಮಾಡಬೇಕು. ಲವ್ ಜಿಹಾದ್‌ಗೆ ನಮ್ಮ ಯುವತಿಯರು ಬಲಿಯಾಗದಂತೆ ನೋಡಿಕೊಳ್ಳಬೇಕು. ದೇಶದಲ್ಲಿ ಧಾರ್ಮಿಕ ಚಟುವಟಿಕೆಗಳಿಗೆ ಶಕ್ತಿ ತುಂಬುವ ವಾತಾವರಣ ನಿರ್ಮಾಣವಾಗಬೇಕು. ಭಗವಂತನ ಆರಾಧನೆ, ನಾಮಸ್ಮರಣೆ ಮಾಡಿದರೆ ಸಮಾಜದಲ್ಲಿ ಶಾಂತಿ ಸಮಾಧಾನ ನೆಲೆಸುತ್ತದೆ ಎಂದು ನುಡಿದರು.

    Click here

    Click here

    Click here

    Click Here

    Call us

    Call us

    ಶಿವಮೊಗ್ಗದ ಉದ್ಯಮಿ ರವೀಂದ್ರ ಶೇರುಗಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಟ್ಯಾಕ್ಸಿಮೆನ್ ಅಸೋಸಿಯೇಶನ್‌ನ ಅಧ್ಯಕ್ಷ ಮಹಾಬಲ ಬಿ.ಪೂಜಾರಿ, ಗಂಗೊಳ್ಳಿ ನಿನಾದ ಸಂಸ್ಥೆಯ ಅಧ್ಯಕ್ಷ ಎಂ.ಮುಕುಂದ ಪೈ, ಶ್ರೀ ಇಂದುಧರ ದೇವಸ್ಥಾನದ ಅಧ್ಯಕ್ಷ ಸುಂದರ ಜಿ., ಉದ್ಯಮಿ ನಾಗರಾಜ ಪಂಡಿತ್, ಶ್ರೀ ಗುರುಜ್ಯೋತಿ ಸ್ಪೋಟ್ಸ್ ಕ್ಲಬ್‌ನ ಸ್ಥಾಪಕ ಸದಸ್ಯ ವಿಜಯ ಖಾರ್ವಿ, ಹಿಂದು ಜಾಗರಣ ವೇದಿಕೆ ಜಿಲ್ಲಾ ಸಂಚಾಲಕ ಅರವಿಂದ ಕೋಟೇಶ್ವರ, ಹಿಂದು ಜಾಗರಣ ವೇದಿಕೆ ಬೈಂದೂರು ತಾಲೂಕು ಅಧ್ಯಕ್ಷ ರವೀಶ್ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.

    ಗಂಗೊಳ್ಳಿ ಹಿಂಜಾವೇ ಅಧ್ಯಕ್ಷ ಗೋವಿಂದ್ರಾಯ ಶೇರುಗಾರ್ ಸ್ವಾಗತಿಸಿದರು. ಹಿಂಜಾವೇ ಉಡುಪಿ ಜಿಲ್ಲಾ ಸಹಸಂಚಾಲಕ ಟಿ.ವಾಸುದೇವ ದೇವಾಡಿಗ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಯಶವಂತ ಖಾರ್ವಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮಕ್ಕೂ ಮುನ್ನ ಸ್ವಾಮೀಜಿಯವರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಗಂಗೊಳ್ಳಿಯ ಶ್ರೀ ರಾಮ ಮಂದಿರದ ಬಳಿಯಿಂದ ಪುರಮೆರವಣಿಯಲ್ಲಿ ಬರಮಾಡಿಕೊಳ್ಳಲಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    19 − 4 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.