Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗುಂಡೂರು ಡ್ಯಾಂಗೆ ರೈತ ಸಂಘ ಭೇಟಿ: ಸಾಧಕ – ಬಾಧಕ ಪರಿಶೀಲನೆ
    ಊರ್ಮನೆ ಸಮಾಚಾರ

    ಗುಂಡೂರು ಡ್ಯಾಂಗೆ ರೈತ ಸಂಘ ಭೇಟಿ: ಸಾಧಕ – ಬಾಧಕ ಪರಿಶೀಲನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:  ತಾಲೂಕು ಆಲೂರು ಸಮೀಪದ ಗುಂಡೂರು ಹೊಳೆಗೆ ನಿರ್ಮಿಸಲಾದ ಡ್ಯಾಂನ ಸಾಧಕ – ಬಾಧಕಗಳ ವೀಕ್ಷಣೆಗೆ ಉಡುಪಿ ಜಿಲ್ಲಾ ರೈತ ಸಂಘ ಭೇಟಿ ನೀಡಿ ಪರಿಶೀಲಿಸಿತು.

    Click Here

    Call us

    Click Here

    ಆಲೂರು ಎದ್ರುಬೈಲುವಿನಲ್ಲಿ ಹರಿಯುವ ಹೊಳೆಗೆ ಅಡ್ಡವಾಗಿ ಡ್ಯಾಂ ನಿರ್ಮಿಸಿ, ನೀರನ್ನು ಶೇಖರಿಸಿ ಕೆಳಭಾಗಕ್ಕೆ ಕಿಂಡಿ ಅಣೆಕಟ್ಟುಗಳ ಮೂಲಕ ನೀರು ನೀಡುವ ಯೋಜನೆ ಇದಾಗಿದ್ದು, ಈ ಯೋಜನೆ ರೈತರಿಗೆ ಎಷ್ಟರಮಟ್ಟಿಗೆ ತಲುಪುತ್ತದೆ ಎನ್ನುವುದನ್ನು ರೈತ ಸಂಘ ವೀಕ್ಷಿಸಿತು.

    ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಪ್ರತಾಪಚಂದ್ರ ಶೆಟ್ಟಿ ಅವರ ನೇತೃತ್ವದಲ್ಲಿ ರೈತರ ನಿಯೋಗ ಗುಂಡೂರು ಡ್ಯಾಂ, ಆಲೂರಿನಲ್ಲಿ ಕಿಂಡಿ ಅಣೆಕಟ್ಟು, ನೀರು ಹರಿದು ಹೋಗುವ ಅಚ್ಚುಕಟ್ಟು ಪ್ರದೇಶಗಳ ವೀಕ್ಷಣೆ ನಡೆಸಿತು.

    ಈ ಸಂದರ್ಭದಲ್ಲಿ ಪ್ರತಾಪಚಂದ್ರ ಶೆಟ್ಟಿ ಅವರು ವಾರಾಹಿ ನೀರಾವರಿ ಯೋಜನೆಯ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು. ಸರಕಾರದ ಯೋಜನೆ ವ್ಯರ್ಥವಾಗಬಾರದು. ರೈತರಿಗೆ ನಿರಂತರ ನೀರು ಸಿಗುವಂತಾಗಬೇಕು. ಆ ನಿಟ್ಟಿನಲ್ಲಿ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ಪ್ರಮುಖರಾದ ವಿಕಾಸ ಹೆಗ್ಡೆ, ಉಡುಪಿ ಜಿಲ್ಲಾ ರೈತ ಸಂಘವು ಉಡುಪಿ ಜಿಲ್ಲೆಯ ಎಲ್ಲ ವೆಂಟೆಡ್‌ ಡ್ಯಾಂಗಳ ಕಾರ್ಯವೈಖರಿಯನ್ನು ಪರಿಶೀಲಿಸುತ್ತಿದೆ. ಸರಕಾರದ ಹಣ ಪೋಲಾಗಬಾರದು. ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗಬೇಕು ಎನ್ನುವ ನೆಲೆಯಲ್ಲಿ ಆಡಳಿತವನ್ನು ಎಚ್ಚರಗೊಳಿಸುವ ಕೆಲಸ ಮಾಡುತ್ತಿದ್ದೇವೆ. ಡ್ಯಾಂ ನಿರ್ಮಾಣದ ಅನಂತರ ಅದರ ನಿರ್ವಹಣೆ ಯಾವ ರೀತಿಯಲ್ಲಿ ಆಗುತ್ತಿದೆ ಎನ್ನುವುದು ಮುಖ್ಯ. ಡ್ಯಾಂ ನಿರ್ಮಾಣ ಆದರೆ ಸಾಲದು ನೀರು ರೈತರಿಗೆ ಸಿಗಬೇಕು ಎಂದರು.

    Click here

    Click here

    Click here

    Click Here

    Call us

    Call us

    ಈ ಸಂದರ್ಭದಲ್ಲಿ ರೈತ ಸಂಘದ ಪ್ರಮುಖರಾದ ಕೃಷ್ಣದೇವ ಕಾರಂತ ಕೋಣಿ, ಹರಿಪ್ರಸಾದ್‌ ಶೆಟ್ಟಿ, ಕೆದೂರು ಸದಾನಂದ ಶೆಟ್ಟಿ, ವಂಡಬಳ್ಳಿ ಜಯರಾಮ ಶೆಟ್ಟಿ, ವಂಡ್ಸೆ ಗ್ರಾ.ಪಂ. ಅಧ್ಯಕ್ಷ ಉದಯ ಕುಮಾರ್‌ ಶೆಟ್ಟಿ ಅಡಿಕೆಕೊಡ್ಲು, ಸಂತೋಷ ಕುಮಾರ್‌ ಶೆಟ್ಟಿ ಬಲಾಡಿ, ಸಂತೋಷ ಕುಮಾರ್‌ ಶೆಟ್ಟಿ ಹಕ್ಲಾಡಿ, ತಾ.ಪಂ. ಸದಸ್ಯರಾದ ಉದಯ ಜಿ. ಪೂಜಾರಿ, ಸ್ಥಳೀಯ ಮುಖಂಡರಾದ ಡಾ| ಅತುಲ್‌ ಕುಮಾರ್‌ ಶೆಟ್ಟಿ, ವಾಸುದೇವ ಪೈ, ಗ್ರಾ.ಪಂ.ಮಾಜಿ ಅಧ್ಯಕ್ಷ ಪ್ರಸನ್ನ ಕುಮಾರ್‌ ಶೆಟ್ಟಿ, ಸಂಜೀವ ಪೂಜಾರಿ ವಂಡ್ಸೆ, ಇಚ್ಚಿತಾರ್ಥ ಶೆಟ್ಟಿ, ಗೋವರ್ಧನ ಜೋಗಿ, ಹಾ.ಉ. ಸಹಕಾರಿ ಸಂಘದ ಅಧ್ಯಕ್ಷ ತ್ಯಾಂಪಣ್ಣ ಶೆಟ್ಟಿ, ವಾರಾಹಿ ನೀರಾವರಿ ಯೋಜನೆ ಸಿದ್ಧಾಪುರ ಇದರ ಅಧೀಕ್ಷಕ ಅಭಿಯಂತರ ಪದ್ಮನಾಭ, ಎಇಇ ಪ್ರಮೀತ್‌, ನ್ಯಾಯವಾದಿ ಸರ್ವೋತ್ತಮ ಶೆಟ್ಟಿ, ಜಿ.ಪಂ. ಸದಸ್ಯ ಬಾಬು ಶೆಟ್ಟಿ, ತಾ.ಪಂ. ಉಪಾಧ್ಯಕ್ಷ ಪ್ರವೀಣ್‌ ಶೆಟ್ಟಿ, ಎ.ಪಿ.ಎಂ.ಸಿ. ಅಧ್ಯಕ್ಷ ಶರತ್‌ ಶೆಟ್ಟಿ, ಚಿತ್ತೂರು ಪಂಚಾಯತ್‌ ಅಧ್ಯಕ್ಷ ಸಂತೋಷ ಮಡಿವಾಳ, ಆಲೂರು ಪಂ. ಅಧ್ಯಕ್ಷ ಸುಬ್ಬಣ್ಣ ಶೆಟ್ಟಿ, ತಾ.ಪಂ. ಮಾಜಿ ಸದಸ್ಯ ಹಕೂìರು ಮಂಜಯ್ಯ ಶೆಟ್ಟಿ, ತಾ.ಪಂ. ಮಾಜಿ ಅಧ್ಯಕ್ಷ ಬೆಳ್ಳಾಡಿ ಶಂಕರ ಶೆಟ್ಟಿ, ಚಿತ್ತೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಸುರೇಂದ್ರ ಶೆಟ್ಟಿ, ಶಂಕರನಾರಾಯಣ ಗ್ರಾ.ಪಂ. ಅಧ್ಯಕ್ಷ ಸದಾಶಿವ ಶೆಟ್ಟಿ, ವಿ.ಕೆ. ಶಿವರಾಮ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    19 + one =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.