Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗುರುಕುಲ ಪಬ್ಲಿಕ್ ಶಾಲೆಯಲ್ಲಿ ವಕ್ವಾಡಿ ವಿಶ್ವ ಯೋಗ ದಿನಾಚರಣೆ
    ಗುರುಕುಲ ಪಬ್ಲಿಕ್ ಸ್ಕೂಲ್ - ಪಿಯು ಕಾಲೇಜು ವಕ್ವಾಡಿ

    ಗುರುಕುಲ ಪಬ್ಲಿಕ್ ಶಾಲೆಯಲ್ಲಿ ವಕ್ವಾಡಿ ವಿಶ್ವ ಯೋಗ ದಿನಾಚರಣೆ

    Updated:22/06/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಅತಿಯಾದ ಕಾರ್ಯಭಾರ, ಮಾನಸಿಕ ಒತ್ತಡ, ಆಧುನಿಕತೆಯ ಸಂಕೀರ್ಣತೆ ಇವೆ ಮುಂತಾದ ಸಾಮಾನ್ಯ ಸಮಸ್ಯೆಗಳು ಪ್ರತಿಯೊಬ್ಬರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಕಾಡುತ್ತಿದೆ. ಸದಾ ಕ್ರೀಯಾಶೀಲಯಾಗಿ ಸರ್ವಾಂಗೀಣ ವ್ಯಕ್ತಿತ್ವದ ವಿಕಾಸ ನಿರಂತರ ಯೋಗ ಅಭ್ಯಾಸದ ಮೂಲಕ ಸಾಧ್ಯ. ವಿದ್ಯಾರ್ಥಿಗಳಲ್ಲಿ ಹಾಗೂ ಯುವಕರಲ್ಲಿ ಕಾಡುವ ಕ್ರೀಯಾಹೀನತೆ ಪರಿಹಾರವಾಗಿ ಯೋಗಾಭ್ಯಾಸ ಪದ್ಧತಿ ಅನಿವಾರ್ಯವಾಗಿದೆ. ಸನಾತನ ಭಾರತೀಯ ಸಂಸ್ಕ್ರತಿ ಯೋಗದ ಮಹತ್ವದ ಬಗ್ಗೆ ವಿಶೇಷವಾದ ಕಾಳಜಿಯನ್ನು ಹಲವು ಮಹನೀಯರ ಮೂಲಕ ನಮಗೆ ಸಂದೇಶವನ್ನು ನೀಡಿದೆ ಎಂದು ಗುರುಕುಲ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಸಾಯಿಜು.ಕೆ.ಆರ್.ನಾಯರ್ ರವರು ವಿಶ್ವಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

    Click Here

    Call us

    Click Here

    ಈ ಶಾಲೆಯ ಎನ್.ಸಿ.ಸಿ ವಿದ್ಯಾರ್ಥಿಗಳು ಸುಮಾರು ಎರಡು ಗಂಟೆಗಳ ಕಾಲ ವಿಶೇಷ ಯೋಗ ಚಟುವಟಿಕೆಗಳನ್ನು ಮಾಡಿ ತೋರಿಸಿ, ಉಳಿದ ವಿದ್ಯಾರ್ಥಿಗಳಿಗೆ ವಿಶ್ವಯೋಗ ದಿನಾಚರಣೆಯ ಮಹತ್ವತೆಯನ್ನು ಸಾರಿದರು. ಯೋಗಾಸನ, ಕಪಾಲಬಾತಿ, ಪ್ರಾಣಾಯಾಮ ಮತ್ತು ಧ್ಯಾನವನ್ನು ವಿದ್ಯಾರ್ಥಿಗಳು ಕ್ರಮವಾಗಿ ಮಾಡಿ ತೋರಿಸಿದರು. ಅಲ್ಲದೇ ೧೦ನೇ ತರಗತಿಯ ವಿದ್ಯಾರ್ಥಿಗಳು ಸಭಾ ಕಾರ್ಯಕ್ರಮದಲ್ಲಿ ಯೋಗದಿಂದ ಹೇಗೆ ರೋಗಗಳನ್ನು ಮುಕ್ತಿಗೊಳಿಸಲು ಸಾಧ್ಯ? ಹಾಗೂ ಸಧೃಡ ದೇಹದಲ್ಲಿ ಸಧೃಡ ಮನಸ್ಸು ಇರಬೇಕಾದರೆ ಯೋಗಾಭ್ಯಾಸ ಪ್ರಮುಖವಾಗಿರುತ್ತದೆ ಎನ್ನುವುದನ್ನು ತಮ್ಮ ಮಾತಿನ ಮೂಲಕ ಬಣ್ಣಿಸಿದರಲ್ಲದೇ, ೭ ನೇ ತರಗತಿಯ ವಿದ್ಯಾರ್ಥಿಗಳು ಯೋಗದ ಪ್ರಾತಿಕ್ಷ್ಯತೆ ನೀಡಿದರು.

    ಸಮಸ್ತ ಜೀವ ಸಂಕುಲಗಳು ಶಾಂತಿಮಯ ಸುಖಜೀವನವನ್ನು ನಡೆಸಲು ಅನುಕೂಲವಾಗುವಂತೆ ಬದುಕುವ ಸಂಕಲ್ಪದೊಂದಿಗೆ ವಿಶ್ವಯೋಗದಿನಾಚರಣೆಯ ಈ ಕಾರ್ಯಕ್ರಮ ಸಂಪನ್ನಗೊಂಡಿತು. ಶಾಲೆಯ ಪ್ರಾಂಶುಪಾಲರಾದ ಶ್ರೀ.ಸಾಯಿಜು.ಕೆ.ಆರ್.ನಾಯರ್, ಉಪಪ್ರಾಂಶುಪಾಲರಾದ ಶ್ರೀ.ಸುನಂದಾ ಪಾಟೀಲ್, ಶಿಕ್ಷಕವೃಂದ ಹಾಗೂ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಿದ್ಯಾರ್ಥಿಗಳು ಆದರ್ಶ ವ್ಯಕ್ತಿತ್ವವನ್ನು ರೂಪಿಸಿಕೊಂಡು ಉತ್ತಮ ಚಿಂತನೆಗಳತ್ತ ಮುಖ ಮಾಡಿ: ಅನುಪಮಾ ಎಸ್. ಶೆಟ್ಟಿ

    18/03/2026

    ಗುರುಕುಲ ವಿದ್ಯಾಸಂಸ್ಥೆಯಲ್ಲಿ ʼಗುರುಕುಲ ಕಾರ್ನಿವಲ್‌ ಮಕ್ಕಳ ಹಬ್ಬʼ

    28/01/2026

    ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ದೀಪಾವಳಿ ಹಬ್ಬ ಆಚರಣೆ

    23/10/2025
    Leave A Reply Cancel Reply

    14 − 13 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.