Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ಗ್ರಾಮಸಭೆ: ಅಧಿಕಾರಿಗಳ ಗೈರು, ಪಿಡಿಓ ಧೋರಣೆ ವಿರುದ್ಧ ಗ್ರಾಮಸ್ಥರ ಆಕ್ರೋಶ
    ಊರ್ಮನೆ ಸಮಾಚಾರ

    ಬೈಂದೂರು ಗ್ರಾಮಸಭೆ: ಅಧಿಕಾರಿಗಳ ಗೈರು, ಪಿಡಿಓ ಧೋರಣೆ ವಿರುದ್ಧ ಗ್ರಾಮಸ್ಥರ ಆಕ್ರೋಶ

    Updated:27/06/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಬೈಂದೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ೨೦೧೭-೧೮ನೇ ಸಾಲಿನ ಪ್ರಥಮ ಗ್ರಾಮಸಭೆ ನಡೆಯಿತು.

    Click Here

    Call us

    Click Here

    ಸರಕಾರದ ಆದೇಶದಂತೆ ವರ್ಷಕ್ಕೆ ಎರಡು ಗ್ರಾಮಸಭೆಗಳಾಬೇಕು. ಆದರೆ ಬೈಂದೂರು ಗ್ರಾಪಂ ಮಾತ್ರ ಕಳೆದ ಮೂರು ವರ್ಷದಿಂದ ವರ್ಷಕ್ಕೊಂದು ಗ್ರಾಮಸಭೆ ಮಾಡಿ ಕೈತೊಳೆದುಕೊಳ್ಳುತ್ತಿದೆ ಎಂದು ಗ್ರಾಪಂ ಸದಸ್ಯರಾದ ವೆಂಕಟ ಪೂಜಾರಿ ಮತ್ತು ರಾಘವೇಂದ್ರ ಆರೋಪಿಸಿದರು. ಅದಕ್ಕೆ ಉತ್ತರಿಸಿದ ಪಿಡಿಒ ರೇಣುಕಾ ಹೆಗ್ಡೆ, ಕಳೆದ ಅಕ್ಟೋಬರ್‌ನಲ್ಲಿ ವಿಶೇಷ ಗ್ರಾಮಸಭೆ ನಡೆಸಿದ್ದನ್ನು ನೆನಪಿಸಿ ಪರಿಸ್ಥಿತಿ ತಿಳಿಗೊಳಿಸಿದರು

    ಸಭೆಯಲ್ಲಿ ನೋಡೆಲ್ ಅಧಿಕಾರಿ ಹಾಗೂ ಗ್ರಾಮಮಟ್ಟದ ಕೆಲವು ಅಧಿಕಾರಿಗಳ ಗೈರು ಹಾಜರಿ ಗ್ರಾಮಸ್ಥರನ್ನು ಕೆರಳಿಸಿತು. ಪ್ರತಿಯೊಂದು ಗ್ರಾಮಸಭೆಯಲ್ಲಿ ಅಧಿಕಾರಿಗಳು ಭಾಗವಹಿಸುತ್ತಿಲ್ಲ. ಗ್ರಾಮಸಭೆಯಲ್ಲಿ ಕೈಗೊಂಡ ಯಾವುದೇ ನಿರ್ಣಯಗಳಿಗೆ ಬೆಲೆ ಇಲ್ಲ. ಗ್ರಾಮಸಭೆಯ ನಿರ್ಣಯಗಳ ಅನುಷ್ಠಾನ ಕೂಡ ನಡೆಯುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಇಂದಿನ ಗ್ರಾಮಸಭೆಯಲ್ಲಿ ಪ್ರಮುಖ ಇಲಾಖೆಯ ಅಧಿಕಾರಿಗಳು ಗೈರು ಹಾಜರಾಗಿದ್ದು, ಗ್ರಾಮಸಭೆಯ ಉದ್ದೇಶ ಸಫಲವಾಗುತ್ತಿಲ್ಲ. ಹೀಗಾಗಿ ಇಂದಿನ ಗ್ರಾಮಸಭೆಯನ್ನು ರದ್ದುಪಡಿಸಿ ಗ್ರಾಮಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಸಮ್ಮುಖದಲ್ಲಿ ಮತ್ತೊಮ್ಮೆ ಗ್ರಾಮಸಭೆಯನ್ನು ನಡೆಸುವಂತೆ ಗ್ರಾಮಸ್ಥರು ಮತ್ತು ಗ್ರಾಪಂ ಸದಸ್ಯರು ಪಟ್ಟುಹಿಡಿದರು.

    ಗ್ರಾಪಂ ಆಡಳಿತಾಧಿಕಾರಿ ಹಾಗೂ ಬಿಇಒ ಆರ್. ಓ. ಪ್ರಕಾಶ್, ಮಾರ್ಗದರ್ಶಿ ಅಧಿಕಾರಿ ಅನಾರೋಗ್ಯದ ಕಾರಣ ಸಭೆಗೆ ಬರಲಾಗುತ್ತಿಲ್ಲ ಎಂದು ಗ್ರಾಮಸ್ಥರನ್ನು ಸಮಾಧಾನ ಪಡಿಸಲು ಯತ್ನಿಸಿದರೂ ಗದ್ದಲ ಕಡಿಮೆಯಾಗಿಲ್ಲ. ಈ ವಿಷಯ ತಿಳಿದು ಸಭೆಯ ಕೊನೆಯಲ್ಲಿ ಜ್ವರದಿಂದ ಬಳಲುತ್ತಿದ್ದ ಮಾರ್ಗದರ್ಶಿ ಅಧಿಕಾರಿ ಲಕ್ಷ್ಮೀನಾರಾಯಣ ಸಭೆಗೆ ಆಗಮಿಸಿದರು. ತಾಪಂ ಸದಸ್ಯೆ ಮಾಲಿನಿ ವೇದಿಕೆಯಲ್ಲಿದ್ದರು.

    ಮಹಿಳಾ ಮತ್ತು ಶಿಶುಕಲ್ಯಾಣ ಇಲಾಖೆಯ ಅಧಿಕಾರಿಗಳ ಗೈರುಹಾಜರಿಯಿಂದ ಸಭೆಯಲ್ಲಿ ಇನ್ನೊಮ್ಮೆ ಕೋಲಾಹಲ ಸೃಷ್ಠಿಯಾಯಿತು. ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಸುಶೀಲಾ ಇಲಾಖೆಯ ಬಗ್ಗೆ ಮಾಹಿತಿ ನೀಡಿದರು. ಅರಣ್ಯ ಇಲಾಖೆಯ ಸದಾಶಿವ ಫಾರೆಸ್ಟರ್, ಕಂದಾಯ ಇಲಾಖೆಯಿಂದ ಗ್ರಾಮ ಕರಣಿಕ ಮಂಜುನಾಥ ಬಿಲ್ಲವ, ಆರೋಗ್ಯ ಸಹಾಯಕಿ ಶಾಂತಾ, ಪಶು ವೈದ್ಯಕೀಯ ಇಲಾಖೆಯ ಆರ್. ಆರ್. ಕುಲಕರ್ಣಿ, ಸಹಾಯಕ ತೋಟಗಾರಿಕಾ ಅಧಿಕಾರಿ ಅಜಿತ್ ಇವರು ಗ್ರಾಮಸ್ಥರಿಗೆ ತಮ್ಮ ಇಲಾಖಾ ಮಾಹಿತಿ ನೀಡಿದರು.

    Click here

    Click here

    Click here

    Call us

    Call us

    ಬೈಂದೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ವರ್ಗಾವಣೆಗೊಂಡಿದ್ದರೂ ಇನ್ನೂ ಇಲ್ಲಿಯೇ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಕೆಲ ಗ್ರಾಮಸ್ಥರು ಆರೋಪಿಸಿದರು. ಪಿಡಿಒ ಕೆಲವು ವಿಚಾರಗಳಲ್ಲಿ ಏಕಪಕ್ಷೀಯ ನಿರ್ಣಯ ಕೈಗೊಂಡು ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರ ಸಲಹೆಗೆ ಮನ್ನಣೆ ನೀಡುತ್ತಿಲ್ಲ ಎಂದು ನೇರವಾಗಿ ತರಾಟೆಗೆ ತೆಗೆದುಕೊಂಡರು. ಗ್ರಾಮಸ್ಥರ ವಿವಿಧ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ನೀಡದ ಹಿನ್ನೆಲೆಯಲ್ಲಿ ಅವರು ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025

    ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.