Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಬೈಂದೂರು ವಿಭಾಗ ಯೋಜನಾ ಕಛೇರಿ ಉದ್ಘಾಟನೆ
    ಊರ್ಮನೆ ಸಮಾಚಾರ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಬೈಂದೂರು ವಿಭಾಗ ಯೋಜನಾ ಕಛೇರಿ ಉದ್ಘಾಟನೆ

    Updated:01/07/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ರೈತರಲ್ಲಿ ಹಾಗೂ ಮಹಿಳೆಯರಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸ ನಡೆದಿದೆ. ಕೃಷಿ ಚಟುವಟಿಕೆಗಳಿಂದ ದೂರ ಸರಿಯುತ್ತಿದ್ದ ರೈತರನ್ನು ಪುನ: ಕೃಷಿ ಚಟುವಟಿಕೆಗಳಲ್ಲಿ ತೊಡಗಿಸುವಲ್ಲಿ ಯೋಜನೆ ಯಶಸ್ವಿಯಾಗಿದೆ. ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣ ಮಾಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಯೋಜನೆಯ ಪಾತ್ರ ಬಹುಮುಖ್ಯ ಎಂದು ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ತ್ರಾಸಿಯ ರಾಷ್ಟ್ರೀಯ ಹೆದ್ದಾರಿ ಸಮೀಪದ ಶ್ರೀ ಅಂಬಾ ಕಾಂಪ್ಲೆಕ್ಸ್‌ನಲ್ಲಿ ಜರಗಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೈಂದೂರು ಇದರ ಕುಂದಾಪುರ ತಾಲೂಕಿನ ಬೈಂದೂರು ವಿಭಾಗದ ನೂತನ ಯೋಜನಾ ಕಛೇರಿಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಸರಕಾರದ ಸಹಭಾಗಿತ್ವದೊಂದಿಗೆ ಸರಕಾರದ ಯೋಜನೆಗಳ ಪ್ರಯೋಜನವನ್ನು ನೇರವಾಗಿ ಫಲಾನುಭವಿಗಳಿಗೆ ತಲುಪಿಸುವ ಉತ್ತಮ ಕೆಲಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿರುವುದು ಶ್ಲಾಘನೀಯ. ಗ್ರಾಮದ ಅಭ್ಯುದಯದ ಜೊತೆಗೆ ದುರ್ಬಲ ವರ್ಗದವರ ಸಬಲೀಕರಣದ ಉದ್ದೇಶ ಹೊಂದಿರುವ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಾಜ್ಯವ್ಯಾಪಿ ತನ್ನ ಕಾರ್ಯಚಟುವಟಿಕೆ ವಿಸ್ತರಿಸಿರುವುದು ಪ್ರಶಂಸನೀಯ ಎಂದರು.

    ನೂತನ ಯೋಜನಾ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್.ಮಂಜುನಾಥ ಅವರು ದುರ್ಬಲರನ್ನು ಹಾಗೂ ಮಹಿಳೆಯರನ್ನು ಸಂಘಟಿಸುವ ಮೂಲಕ ಅವರು ಶಿಸ್ತಿನ ಜಿವನ ನಡೆಸಲು ಯೋಜನೆ ಸಹಕಾರ ನೀಡುತ್ತಿದೆ. ಯೋಜನೆ ಪ್ರಾರಂಭವಾದ ಬಳಿಕ ಸಮಾಜದಲ್ಲಿ ಸಾಕಷ್ಟು ಉತ್ತಮ ಬದಲಾವಣೆಗಳಾಗಿದ್ದು, ಮಹಿಳಾ ಸಬಲೀಕರಣವಾಗಿದೆ. ಯೋಜನೆಯ ಸದಸ್ಯರ ಅನುಕೂಲಕ್ಕಾಗಿ ೧೦೦ ಗ್ರಾಮಗಳಲ್ಲಿ ಗ್ರಾಹಕ ಸೇವಾ ಕೇಂದ್ರಗಳನ್ನು ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ದಿನದ ೨೪ ಗಂಟೆಗಳ ಕಾಲ ಬ್ಯಾಂಕಿಂಗ್ ವ್ಯವಹಾರ ನಡೆಸುವಂತಾಗಲು ಐಡಿಬಿಐ ಬ್ಯಾಂಕಿನ ಸಹಕಾರದೊಂದಿಗೆ ಗ್ರಾಹಕ ಸೇವಾ ಕೇಂದ್ರ ಆರಂಭಿಸುವುದರ ಜೊತೆಗೆ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

    ಕುಂದಾಪುರ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಬಿ.ಅಪ್ಪಣ್ಣ ಹೆಗ್ಡೆ, ತ್ರಾಸಿ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ರಾಜು ದೇವಾಡಿಗ, ತಾಲೂಕು ಪಂಚಾಯತ್ ಸದಸ್ಯ ನಾರಾಯಣ ಕೆ. ಗುಜ್ಜಾಡಿ ಶುಭ ಹಾರೈಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಕುಂದಾಪುರ ಕೇಂದ್ರ ಸಮಿತಿ ಅಧ್ಯಕ್ಷ ಎಚ್.ಎಂ.ಕೃಷ್ಣ ಪೂಜಾರಿ, ನಿಕಟಪೂರ್ವ ಅಧ್ಯಕ್ಷ ಚಂದ್ರಶೇಖರ್, ಕಟ್ಟಡದ ಮಾಲೀಕ ಸುಧಾಕರ ಶೆಟ್ಟಿ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಪುರುಷೋತ್ತಮ ಪಿ.ಕೆ. ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬೈಂದೂರು ವಲಯ ಮೇಲ್ವಿಚಾರಕ ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು. ಬೈಂದೂರು ಯೋಜನಾಧಿಕಾರಿ ಶಶಿರೇಖಾ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    4 × two =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.